ರಾಣೆಬೇನ್ನೂರು: ಡೆಂಗ್ಯೂ ಜ್ವರ ಶಂಕೆ ಹಿನ್ನೆಲೆ ಯುವಕನೊರ್ವ ಸಾವನ್ನಪ್ಪಿದ ಘಟನೆ ತಾಲೂಕಿನ ಕರೂರು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಕಿರಣ ಫಕ್ಕಿರಪ್ಪ ಕೋಟೆಪ್ಪನವರ(22) ಎಂಬ ಯುವಕ ತೀವ್ರ ಜ್ವರದಿಂದ ಮೃತಪಟ್ಟಿದ್ದಾನೆ.
ಈತನು ಕಳೆದ ಒಂದು ವಾರದಿಂದ ಜ್ವರದಿಂದ ಬಳಲುತ್ತಿದ್ದ ಎನ್ನಲಾಗಿದೆ. ಆಸ್ಪತ್ರೆಗೆ ಕರೆದುಕೊಂಡು ಹೋದ ಸಮಯದಲ್ಲಿ ಡೆಂಗ್ಯೂ ಜ್ವರ ಎಂಬದು ದೃಢಪಟ್ಟಿದೆ. ನಂತರ ಚಿಕಿತ್ಸೆ ನೀಡಿದರು ಯುವಕ ಮೃತಪಟ್ಟಿದ್ದಾನೆ.
ಕರೂರು ಗ್ರಾಮದಲ್ಲಿ ಸ್ವಚ್ಛತೆ ಮರಿಚಿಕೆ…. ಸುಮಾರು ಐದು ಸಾವಿರ ಜನಸಂಖ್ಯೆ ಹೊಂದಿರುವ ಕರೂರು ಗ್ರಾಮದಲ್ಲಿ ಸ್ವಚ್ಛತೆ ಎಂಬದು ಕನಸಾಗಿ ಉಳಿದಿದೆ. ಕಳೆದ ಎರಡು ತಿಂಗಳಿಂದ ಗಟಾರ ಸ್ವಚ್ಛತೆ ಮಾಡದೆ ಇರುವ ಕಾರಣ ಸೊಳ್ಳೆಗಳು ಜಾಸ್ತಿಯಾಗಿವೆ. ಇದರಿಂದ ರೋಗರುಜಿನಗಳು ಜಾಸ್ತಿಯಾಗಿವೆ ಎಂದು ಗ್ರಾಮಸ್ಥರು ಆರೋಪಿಸಿದರು.
More Stories
ಕೈ-ಕಮಲ ನಡುವೆ ರಾಜಕೀಯ ಪ್ರತಿಷ್ಠೆ; ನಗರಸಭೆ ಸಾಮಾನ್ಯ ಸಭೆ ಮುಂದೂಡಿಕೆ.
ಹಾನಗಲ್ ತಹಸೀಲ್ದಾರ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ.
ಬಿಗರ ಊಟ ಮಾಡಿ ಬರುತ್ತಿದ್ದವರು ಮಸಣಕ್ಕೆ *ನಿಂತಿದ್ದ ಟ್ರ್ಯಾಕ್ಟರ್ ಟ್ರೈಲರ್ ಗೆ ಟಾಟಾ ಸುಪ್ರೋ ಡಿಕ್ಕಿ* *ಸ್ಥಳದಲ್ಲಿಯೆ ಮೂವರ ದುರ್ಮರಣ, 20ಕ್ಕೂ ಅಧಿಕರಿಗೆ ಗಂಭೀರ ಗಾಯ*