ರಾಣೆಬೇನ್ನೂರು: ಡೆಂಗ್ಯೂ ಜ್ವರ ಶಂಕೆ ಹಿನ್ನೆಲೆ ಯುವಕನೊರ್ವ ಸಾವನ್ನಪ್ಪಿದ ಘಟನೆ ತಾಲೂಕಿನ ಕರೂರು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಕಿರಣ ಫಕ್ಕಿರಪ್ಪ ಕೋಟೆಪ್ಪನವರ(22) ಎಂಬ ಯುವಕ ತೀವ್ರ ಜ್ವರದಿಂದ ಮೃತಪಟ್ಟಿದ್ದಾನೆ.
ಈತನು ಕಳೆದ ಒಂದು ವಾರದಿಂದ ಜ್ವರದಿಂದ ಬಳಲುತ್ತಿದ್ದ ಎನ್ನಲಾಗಿದೆ. ಆಸ್ಪತ್ರೆಗೆ ಕರೆದುಕೊಂಡು ಹೋದ ಸಮಯದಲ್ಲಿ ಡೆಂಗ್ಯೂ ಜ್ವರ ಎಂಬದು ದೃಢಪಟ್ಟಿದೆ. ನಂತರ ಚಿಕಿತ್ಸೆ ನೀಡಿದರು ಯುವಕ ಮೃತಪಟ್ಟಿದ್ದಾನೆ.
ಕರೂರು ಗ್ರಾಮದಲ್ಲಿ ಸ್ವಚ್ಛತೆ ಮರಿಚಿಕೆ…. ಸುಮಾರು ಐದು ಸಾವಿರ ಜನಸಂಖ್ಯೆ ಹೊಂದಿರುವ ಕರೂರು ಗ್ರಾಮದಲ್ಲಿ ಸ್ವಚ್ಛತೆ ಎಂಬದು ಕನಸಾಗಿ ಉಳಿದಿದೆ. ಕಳೆದ ಎರಡು ತಿಂಗಳಿಂದ ಗಟಾರ ಸ್ವಚ್ಛತೆ ಮಾಡದೆ ಇರುವ ಕಾರಣ ಸೊಳ್ಳೆಗಳು ಜಾಸ್ತಿಯಾಗಿವೆ. ಇದರಿಂದ ರೋಗರುಜಿನಗಳು ಜಾಸ್ತಿಯಾಗಿವೆ ಎಂದು ಗ್ರಾಮಸ್ಥರು ಆರೋಪಿಸಿದರು.

More Stories
16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…
ಹಾವೇರಿ ಜಿಲ್ಲಾಸತ್ರ ಕೋರ್ಟ್ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.
ಸಾಯಿ ಆಸ್ಪತ್ರೆ ವೈದ್ಯನ ಮೇಲೆ ಹಲ್ಲೆ: 8 ಜನರ ವಿರುದ್ಧ ಪ್ರಕರಣ ದಾಖಲು.