ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ಬಿಜೆಪಿ, ಜೆಡಿಎಸ್ ಹಾಗೂ ರೈತ ನಾಯಕ ರವಿಂದ್ರಗೌಡ ಪಾಟೀಲ ನೇತೃತ್ವದಲ್ಲಿ ಬೃಹತ್ ರೈತರ ಹೋರಾಟ.

ನಗರದಲ್ಲಿ NDA ವತಿಯಿಂದ ಕಾಂಗ್ರೆಸ್ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ.

ಬೆಂಬಲ ಬೆಲೆ ನೀಡಲು ಆಗ್ರಹಿಸಿ ಸರ್ಕಾರದ ವಿರುದ್ಧ ನಾಳೆ ಬಿಜೆಪಿ-ಜೆಡಿಎಸ್ ಜಂಟಿ ಪ್ರತಿಭಟನೆ

ಹೆಂಡತಿ ಹೊಡೆದು ಕೊಲೆ ಮಾಡಿದ ಪತಿರಾಯ..

ನಾವು ಯಾರನ್ನು ಟಾರ್ಗೆಟ್ ಮಾಡಲ್ಲ, ಮಾಡಿದ್ರೆ ಬೀಡಲ್ಲ ಎಸ್ಪಿ ಯಶೋಧ ವಂಟಗೋಡಿ.

ದೈಹಿಕ ಸಂಪರ್ಕ ಮಾಡಿ ಯುವತಿಗೆ ಕೈಕೊಟ್ಟ ಯುವಕ. ಯುವತಿ ಆತ್ಮಹತ್ಯೆ ಹುಡಗನ‌ ಮನೆ ಮುಂದೆ ಶವವಿಟ್ಟು ಪ್ರತಿಭಟನೆ..

ತಮ್ಮನ ಸಾವಿನಿಂದ ಮನನೊಂದ ಅಕ್ಕನು ನೇಣಿಗೆ ಶರಣು…!

ಸಚಿವ ಶಿವಾನಂದ ಪಾಟೀರನ್ನ BJP ಎಂದ ರೊಬೋಟ್

ರಾಣೆಬೇನ್ನೂರ ನಗರದಲ್ಲಿ ಭವ್ಯವಾಗಿ ನಡೆದ ಆರ್ ಎಸ್ ಎಸ್ ಪಥ ಸಂಚಲನ, ಒಂದು ಸಾವಿರ ಗಣವೇಷಧಾರಿಗಳು ಭಾಗಿ

ಎರಡು ವರ್ಷದಲ್ಲಿ ಎಷ್ಟು ಬಾರಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಗೆ ಹಾಜರಾಗದ ದಲಿತ ವಿರೋಧಿ ಶಾಸಕ; ಮಾಜಿ ಶಾಸಕ ಅರುಣಕುಮಾರ ಪೂಜಾರ.

ಕುದರಿಹಾಳ ಗ್ರಾಮದಲ್ಲಿ ಸಿಡಿಲು ಬಡಿದು ಯುವ ಕೃಷಿಕ ಸಾವು

ಕೈ-ಕಮಲ ನಡುವೆ ರಾಜಕೀಯ ಪ್ರತಿಷ್ಠೆ; ನಗರಸಭೆ ಸಾಮಾನ್ಯ ಸಭೆ ಮುಂದೂಡಿಕೆ.

ಹಾನಗಲ್ ತಹಸೀಲ್ದಾರ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ.

ಬಿಗರ ಊಟ ಮಾಡಿ ಬರುತ್ತಿದ್ದವರು ಮಸಣಕ್ಕೆ *ನಿಂತಿದ್ದ ಟ್ರ್ಯಾಕ್ಟರ್ ಟ್ರೈಲರ್ ಗೆ ಟಾಟಾ ಸುಪ್ರೋ ಡಿಕ್ಕಿ* *ಸ್ಥಳದಲ್ಲಿಯೆ ಮೂವರ ದುರ್ಮರಣ, 20ಕ್ಕೂ ಅಧಿಕರಿಗೆ ಗಂಭೀರ ಗಾಯ*

ತಾಪಂ ಪ್ರಭಾರ ಇಓ ಬಸವರಾಜ ಶಿಡೇನೂರ ಬಳಿ ಒಂದೂವರೆ ಕೋಟಿ ಆಸ್ತಿ..

ಕಂದಾಯ ನಿರೀಕ್ಷ ಅಶೋಕ‌ ಅರಳೇಶ್ವರ ಬಳಿ ಕೋಟ್ಯಾಂತರ ಆಸ್ತಿ ಪತ್ತೆ.

ಸದನದಲ್ಲಿ ಆಡಿದ ಮಾತಿಗೆ ಕ್ಷಮೆಯಾಚಿಸುವೆ, ಪಕ್ಷಾತೀತ ಕಾರ್ಯಕ್ರಮಕ್ಕೆ ಸಾಥ್ ನೀಡಿ; ಶಾಸಕ ಪ್ರಕಾಶ ಕೋಳಿವಾಡ.

ರಾಣೆಬೇನ್ನೂರು: ಸದನದಲ್ಲಿ ಸಂವಹನ ಕೊರತೆಯಿಂದ ಬಿಜೆಪಿ ಮುಖಂಡರು ಯುದ್ದ ಟ್ಯಾಂಕರ್ ಪ್ರತಿಷ್ಠಾಪನೆಗೆ ಬಿಜೆಪಿಯರು ವಿರೋಧ ಮಾಡುತ್ತಿದ್ದಾರೆ ಎಂದು ಹೇಳಿದ ಮಾತಿಗೆ ಕ್ಷಮೆಯಾಚಿಸುವೆ, ಪಕ್ಷಾತೀತವಾಗಿ ನಾಳೆಯ ಕಾರ್ಯಕ್ರಮಕ್ಕೆ ಸಾಥ್ ನೀಡಿ ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.

 

ನಗರದ ತಹಸೀಲ್ದಾರ ಕಚೇರಿಯಲ್ಲಿ ಕರೆದಿದ್ದ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ನಾನು ಎರಡು ವರ್ಷಗಳಿಂದ ರಾಣೆಬೇನ್ನೂರು ನಗರದಲ್ಲಿ ಯುದ್ಧ ಟ್ಯಾಂಕರ್ ತರಬೇಕು ಎಂಬ ಆಸೆಯಿತ್ತು. ಅದರಂತೆ ನಮ್ಮ ಸ್ನೇಹಿತ ಸೈನ್ಯದಲ್ಲಿ ಇರುವ ಹಿನ್ನೆಲೆ ಜಿಲ್ಲಾಧಿಕಾರಿ ಹಾಗೂ ಹಿರಿಯ ಅಧಿಕಾರಿಗಳ ಸಹಾಯದಿಂದ ಈ ಒಂದು ಯುದ್ಧ ಟ್ಯಾಂಕರ್ ತರಲಾಗಿದೆ. ಆದರೆ ಇದರಲ್ಲಿ ವೈಯಕ್ತಿಕ ರಾಜಕೀಯ ಮಾಡಿಲ್ಲ ಎಂದರು.

ಬೆಳಗ್ಗೆ 7.30ಕ್ಕೆ ನಗರದ ಎಪಿಎಂಸಿ ಗಣಪತಿ ದೇವಸ್ಥಾನದ ಬಳಿ ಯುದ್ಧ ಟ್ಯಾಂಕರ್ಗೆ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಪೂಜೆ ನೆರವೇರಿಸುವ ಮೂಲಕ ಉದ್ಘಾಟಿಸುವರು. ಅಲ್ಲಿಂದ ಮೆರವಣಿಗೆಯೊಂದಿಗೆ ಯುದ್ಧ ಟ್ಯಾಂಕರ್ ಮುನ್ಸಿಪಲ್ ಮೈದಾನಕ್ಕೆ ಬರಲಿದೆ. ಅಲ್ಲಿ ಧ್ವಜಾರೋಹಣ ಮುಗಿದ ಬಳಿಕ ಮಿನಿ ವಿಧಾನಸೌಧಕ್ಕೆ ತಂದು ಸ್ಥಾಪಿಸಲಾಗುವುದು. ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಯುದ್ಧ ಟ್ಯಾಂಕರ್ ಸಾರ್ವಜನಿಕರ ಪ್ರದರ್ಶನಕ್ಕೆ ಅನಾವರಣಗೊಳಿಸುವರು. ಇದಾದ ಬಳಿಕ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಯ ಎಲ್ಲ ಶಾಸಕರು ಸೇರಿ ಬೆಟ್ಟ ಮಲ್ಲಪ್ಪನ ಗುಡ್ಡಕ್ಕೆ ಜೀಪ್ ಚಾಲನೆ, ದೊಡ್ಡಕೆರೆಯಲ್ಲಿ ಬೋಟಿಂಗ್ ವ್ಯವಸ್ಥೆ ಉದ್ಘಾಟಿಸಲಾಗುವುದು ಎಂದು ತಿಳಿಸಿದರು.

ಯುದ್ಧ ಟ್ಯಾಂಕರ್ ಉದ್ಘಾಟನೆ ಸಮಯದಲ್ಲಿ ಎಲ್ಲ ಪಕ್ಷದವರನ್ನು ಆಹ್ವಾನ ಮಾಡಿದ್ದೇನೆ. ಇದು ದೇಶಾಭಿಮಾನದ ಸಂಕೇತವಾಗಿದ್ದು ಎಲ್ಲ ಮಾಜಿ ಶಾಸಕರು, ಮಾಜಿ ಸೈನಿಕರನ್ನು ಸೇರಿ ಎಲ್ಲರಿಗೂ ಕರೆಯಲಾಗಿದೆ. ಪಾತೀತವಾಗಿ ಈ ಕಾರ್ಯಕ್ರಮ ಜರುಗಲಿದೆ ಎಂದು ತಿಳಿಸಿದರು.

ಯುದ್ಧ ಟ್ಯಾಂಕರ್ ಇಡಲು ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಡಿ ಕಟ್ಟೆ ನಿಮಿರ್ಸಲಾಗಿದೆ. ಆದ್ದರಿಂದ ಅದರ ಮೇಲೆ ನನ್ನ ಹೆಸರು, ಭಾವಚಿತ್ರ ಹಾಕಿಸಿದ್ದೇನೆ. ಇದರ ಜತೆಗೆ ಯುದ್ಧ ಟ್ಯಾಂಕರ್ ಪರಾಕ್ರಮ ಕುರಿತು ಹಿತ್ತಾಳೆ ಪ್ಲೇಟ್ನಲ್ಲಿ ಸಮಗ್ರ ಮಾಹಿತಿ ಒಳಗೊಂಡ ನಾಮಲಕ ಸಿದ್ಧಪಡಿಸಿದ್ದು ಅದನ್ನು ಅಳವಡಿಸಲಾಗುವುದು ಎಂದರು.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!