16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…

ಹಾವೇರಿ ಜಿಲ್ಲಾಸತ್ರ ಕೋರ್ಟ್‌ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.

ಸಿಎಂ ಕುರ್ಚಿ ಗುದ್ದಾಟದ ವಿಚಾರ…! ಮತ್ತೆ ಗರಂ ಆದ ಸಿಎಂ ಸಿದ್ಧರಾಮಯ್ಯ.

ಸಾಯಿ ಆಸ್ಪತ್ರೆ ವೈದ್ಯನ ಮೇಲೆ ಹಲ್ಲೆ: 8 ಜನರ ವಿರುದ್ಧ ಪ್ರಕರಣ ದಾಖಲು.

ಹಾವೇರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ನಿಂಗರಾಜ ಕೋಡಿಹಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ಸಿದ್ದು ಚಿಕ್ಕಬಿದರಿ ನೇಮಕ.

ನ್ಯಾಯಬೆಲೆ ಅಂಗಡಿ ಪ್ರಾಧಿಕಾರವನ್ನು ವರ್ಗಾವಣೆ ಮಾಡಿಕೊಡಲು ಲಂಚ ಸ್ವೀಕಾರ, ರಾಣೆಬೆನ್ನೂರ ತಹಶೀಲ್ದಾರ ಕಛೇರಿಯ ಆಹಾರ ನಿರೀಕ್ಷಕ ಬಂಧನ.

ಉಚಿತ ಚಿಕನ್ ಬಿರಿಯಾನಿ ಬೇಕಾ,‌ ಆಗಾದ್ರೆ ಬಸ್ ನಿಲ್ದಾಣಕ್ಕೆ ಬನ್ನಿ.

ಅಂಬೇಡ್ಕರ್, ಗಾಂಧಿ ಹೆಸರು ಅಳಿಸಲು ಹೊರಟಿರುವ ವಿರುದ್ಧ ನನ್ನ ಹೋರಾಟ; ಸಚಿವ ಸತೀಶ ಜಾರಕಿಹೊಳಿ

ನಗರಸಭೆ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಜಿಲ್ಲಾಧಿಕಾರಿ.

ತವರ ಮನೆಗೆ ಹೆಂಡತಿ ಹೋದಾಗ ಎರಡನೇ ಮದುವೆಯಾದ ಭೂಪ ಜೈಲು ಪಾಲು…!

ದಾರಿ ತಪ್ಪಿ ಬಂದಿದಲ್ಲ, ದಾರಿ ಹುಡಕಿಕೊಂಡು ಬಂದೇನಿ; ಗಜರಾಜನ ಕೂಗಾಟ

ತಾಯಿ ಮೇಲೆ ಹಲ್ಲೆ ಮಾಡಿದ್ರೆ ಹುಷಾರ…! ಪುತ್ರ, ಸೊಸೆಗೆ ಜೈಲು ಪಾಲು

ನಿರ್ಮಾಣ ಹಂತದ ಟ್ಯಾಂಕನಿದ್ದು ಬಿದ್ದು ಕಾರ್ಮಿಕ ಸಾವು.

ಒಂಟಿ ಮನೆಯಲ್ಲಿದ್ದ ಮಹಿಳೆಯ ಕತ್ತು ಕೊಯ್ದು ಕೊಲೆ‌ಮಾಡಿದ ವ್ಯಕ್ತಿ ಬಂಧನ

ರಾಣೆಬೇನ್ನೂರ ನಗರದಲ್ಲಿ ಮಹಿಳೆಯ ಭೀಕರ ಕೊಲೆ, ಕಾರಣ ನಿಗೂಢ…!

ಹೊಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವ ರೈತ ಸಾವು

ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ಸದನದಲ್ಲಿ ಆಡಿದ ಮಾತಿಗೆ ಕ್ಷಮೆಯಾಚಿಸುವೆ, ಪಕ್ಷಾತೀತ ಕಾರ್ಯಕ್ರಮಕ್ಕೆ ಸಾಥ್ ನೀಡಿ; ಶಾಸಕ ಪ್ರಕಾಶ ಕೋಳಿವಾಡ.

ರಾಣೆಬೇನ್ನೂರು: ಸದನದಲ್ಲಿ ಸಂವಹನ ಕೊರತೆಯಿಂದ ಬಿಜೆಪಿ ಮುಖಂಡರು ಯುದ್ದ ಟ್ಯಾಂಕರ್ ಪ್ರತಿಷ್ಠಾಪನೆಗೆ ಬಿಜೆಪಿಯರು ವಿರೋಧ ಮಾಡುತ್ತಿದ್ದಾರೆ ಎಂದು ಹೇಳಿದ ಮಾತಿಗೆ ಕ್ಷಮೆಯಾಚಿಸುವೆ, ಪಕ್ಷಾತೀತವಾಗಿ ನಾಳೆಯ ಕಾರ್ಯಕ್ರಮಕ್ಕೆ ಸಾಥ್ ನೀಡಿ ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.

 

ನಗರದ ತಹಸೀಲ್ದಾರ ಕಚೇರಿಯಲ್ಲಿ ಕರೆದಿದ್ದ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ನಾನು ಎರಡು ವರ್ಷಗಳಿಂದ ರಾಣೆಬೇನ್ನೂರು ನಗರದಲ್ಲಿ ಯುದ್ಧ ಟ್ಯಾಂಕರ್ ತರಬೇಕು ಎಂಬ ಆಸೆಯಿತ್ತು. ಅದರಂತೆ ನಮ್ಮ ಸ್ನೇಹಿತ ಸೈನ್ಯದಲ್ಲಿ ಇರುವ ಹಿನ್ನೆಲೆ ಜಿಲ್ಲಾಧಿಕಾರಿ ಹಾಗೂ ಹಿರಿಯ ಅಧಿಕಾರಿಗಳ ಸಹಾಯದಿಂದ ಈ ಒಂದು ಯುದ್ಧ ಟ್ಯಾಂಕರ್ ತರಲಾಗಿದೆ. ಆದರೆ ಇದರಲ್ಲಿ ವೈಯಕ್ತಿಕ ರಾಜಕೀಯ ಮಾಡಿಲ್ಲ ಎಂದರು.

ಬೆಳಗ್ಗೆ 7.30ಕ್ಕೆ ನಗರದ ಎಪಿಎಂಸಿ ಗಣಪತಿ ದೇವಸ್ಥಾನದ ಬಳಿ ಯುದ್ಧ ಟ್ಯಾಂಕರ್ಗೆ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಪೂಜೆ ನೆರವೇರಿಸುವ ಮೂಲಕ ಉದ್ಘಾಟಿಸುವರು. ಅಲ್ಲಿಂದ ಮೆರವಣಿಗೆಯೊಂದಿಗೆ ಯುದ್ಧ ಟ್ಯಾಂಕರ್ ಮುನ್ಸಿಪಲ್ ಮೈದಾನಕ್ಕೆ ಬರಲಿದೆ. ಅಲ್ಲಿ ಧ್ವಜಾರೋಹಣ ಮುಗಿದ ಬಳಿಕ ಮಿನಿ ವಿಧಾನಸೌಧಕ್ಕೆ ತಂದು ಸ್ಥಾಪಿಸಲಾಗುವುದು. ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಯುದ್ಧ ಟ್ಯಾಂಕರ್ ಸಾರ್ವಜನಿಕರ ಪ್ರದರ್ಶನಕ್ಕೆ ಅನಾವರಣಗೊಳಿಸುವರು. ಇದಾದ ಬಳಿಕ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಯ ಎಲ್ಲ ಶಾಸಕರು ಸೇರಿ ಬೆಟ್ಟ ಮಲ್ಲಪ್ಪನ ಗುಡ್ಡಕ್ಕೆ ಜೀಪ್ ಚಾಲನೆ, ದೊಡ್ಡಕೆರೆಯಲ್ಲಿ ಬೋಟಿಂಗ್ ವ್ಯವಸ್ಥೆ ಉದ್ಘಾಟಿಸಲಾಗುವುದು ಎಂದು ತಿಳಿಸಿದರು.

ಯುದ್ಧ ಟ್ಯಾಂಕರ್ ಉದ್ಘಾಟನೆ ಸಮಯದಲ್ಲಿ ಎಲ್ಲ ಪಕ್ಷದವರನ್ನು ಆಹ್ವಾನ ಮಾಡಿದ್ದೇನೆ. ಇದು ದೇಶಾಭಿಮಾನದ ಸಂಕೇತವಾಗಿದ್ದು ಎಲ್ಲ ಮಾಜಿ ಶಾಸಕರು, ಮಾಜಿ ಸೈನಿಕರನ್ನು ಸೇರಿ ಎಲ್ಲರಿಗೂ ಕರೆಯಲಾಗಿದೆ. ಪಾತೀತವಾಗಿ ಈ ಕಾರ್ಯಕ್ರಮ ಜರುಗಲಿದೆ ಎಂದು ತಿಳಿಸಿದರು.

ಯುದ್ಧ ಟ್ಯಾಂಕರ್ ಇಡಲು ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಡಿ ಕಟ್ಟೆ ನಿಮಿರ್ಸಲಾಗಿದೆ. ಆದ್ದರಿಂದ ಅದರ ಮೇಲೆ ನನ್ನ ಹೆಸರು, ಭಾವಚಿತ್ರ ಹಾಕಿಸಿದ್ದೇನೆ. ಇದರ ಜತೆಗೆ ಯುದ್ಧ ಟ್ಯಾಂಕರ್ ಪರಾಕ್ರಮ ಕುರಿತು ಹಿತ್ತಾಳೆ ಪ್ಲೇಟ್ನಲ್ಲಿ ಸಮಗ್ರ ಮಾಹಿತಿ ಒಳಗೊಂಡ ನಾಮಲಕ ಸಿದ್ಧಪಡಿಸಿದ್ದು ಅದನ್ನು ಅಳವಡಿಸಲಾಗುವುದು ಎಂದರು.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!