16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…

ಹಾವೇರಿ ಜಿಲ್ಲಾಸತ್ರ ಕೋರ್ಟ್‌ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.

ಸಿಎಂ ಕುರ್ಚಿ ಗುದ್ದಾಟದ ವಿಚಾರ…! ಮತ್ತೆ ಗರಂ ಆದ ಸಿಎಂ ಸಿದ್ಧರಾಮಯ್ಯ.

ಸಾಯಿ ಆಸ್ಪತ್ರೆ ವೈದ್ಯನ ಮೇಲೆ ಹಲ್ಲೆ: 8 ಜನರ ವಿರುದ್ಧ ಪ್ರಕರಣ ದಾಖಲು.

ಹಾವೇರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ನಿಂಗರಾಜ ಕೋಡಿಹಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ಸಿದ್ದು ಚಿಕ್ಕಬಿದರಿ ನೇಮಕ.

ನ್ಯಾಯಬೆಲೆ ಅಂಗಡಿ ಪ್ರಾಧಿಕಾರವನ್ನು ವರ್ಗಾವಣೆ ಮಾಡಿಕೊಡಲು ಲಂಚ ಸ್ವೀಕಾರ, ರಾಣೆಬೆನ್ನೂರ ತಹಶೀಲ್ದಾರ ಕಛೇರಿಯ ಆಹಾರ ನಿರೀಕ್ಷಕ ಬಂಧನ.

ಉಚಿತ ಚಿಕನ್ ಬಿರಿಯಾನಿ ಬೇಕಾ,‌ ಆಗಾದ್ರೆ ಬಸ್ ನಿಲ್ದಾಣಕ್ಕೆ ಬನ್ನಿ.

ಅಂಬೇಡ್ಕರ್, ಗಾಂಧಿ ಹೆಸರು ಅಳಿಸಲು ಹೊರಟಿರುವ ವಿರುದ್ಧ ನನ್ನ ಹೋರಾಟ; ಸಚಿವ ಸತೀಶ ಜಾರಕಿಹೊಳಿ

ನಗರಸಭೆ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಜಿಲ್ಲಾಧಿಕಾರಿ.

ತವರ ಮನೆಗೆ ಹೆಂಡತಿ ಹೋದಾಗ ಎರಡನೇ ಮದುವೆಯಾದ ಭೂಪ ಜೈಲು ಪಾಲು…!

ದಾರಿ ತಪ್ಪಿ ಬಂದಿದಲ್ಲ, ದಾರಿ ಹುಡಕಿಕೊಂಡು ಬಂದೇನಿ; ಗಜರಾಜನ ಕೂಗಾಟ

ತಾಯಿ ಮೇಲೆ ಹಲ್ಲೆ ಮಾಡಿದ್ರೆ ಹುಷಾರ…! ಪುತ್ರ, ಸೊಸೆಗೆ ಜೈಲು ಪಾಲು

ನಿರ್ಮಾಣ ಹಂತದ ಟ್ಯಾಂಕನಿದ್ದು ಬಿದ್ದು ಕಾರ್ಮಿಕ ಸಾವು.

ಒಂಟಿ ಮನೆಯಲ್ಲಿದ್ದ ಮಹಿಳೆಯ ಕತ್ತು ಕೊಯ್ದು ಕೊಲೆ‌ಮಾಡಿದ ವ್ಯಕ್ತಿ ಬಂಧನ

ರಾಣೆಬೇನ್ನೂರ ನಗರದಲ್ಲಿ ಮಹಿಳೆಯ ಭೀಕರ ಕೊಲೆ, ಕಾರಣ ನಿಗೂಢ…!

ಹೊಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವ ರೈತ ಸಾವು

ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ಅಧಿಕಾರ ಶಾಶ್ವತವಲ್ಲ, ಜನರ ಸೇವೆ ನಿಜಾವಾದ ಶಾಶ್ವತ ಮಾಜಿ ಶಾಸಕ ಅರುಣಕುಮಾರ ಪೂಜಾರ

ರಾಣೆಬೆನ್ನೂರ: ವಿಧಾನಸಭೆ ಕ್ಷೇತ್ರದ ಅಭಿವೃದ್ಧಿ ಮತ್ತು ಕ್ಷೇತ್ರದ ಜನರ ಹಿತಕಾಯುವುದೆ ನಮ್ಮ ಮುಖ್ಯ ಉದ್ದೇಶವಾಗಿದೆ. ಅಧಿಕಾರ ಶಾಶ್ವತವಲ್ಲ, ಜನರ ಸೇವೆ ಎಂದೆಂದಿಗೂ ಶಾಶ್ವತವಾಗಿ ಬೆಳೆಸುತ್ತದೆ ಎಂಬುದನ್ನು ಮನದಲ್ಲಿಟ್ಟುಕೊಂಡು ನಾನು ರಾಜಕೀಯಕ್ಕೆ ಬಂದವನು ಎಂದು ಮಾಜಿ ಶಾಸಕ ಅರುಣಕುಮಾರ ಪೂಜಾರ ಹೇಳಿದರು.
ಬಿಜೆಪಿ ನಗರ ಹಾಗೂ ಗ್ರಾಮೀಣ ಘಟಕದ ವತಿಯಿಂದ ನಗರದ ಬಿಜೆಪಿ ಕಾರ್ಯಾಲಯದಲ್ಲಿ ಸೋಮವಾರ ಏರ್ಪಡಿಸಿದ್ದ ಅವರ ಜನ್ಮದಿನೋತ್ಸವ ಸಮಾರಂಭದಲ್ಲಿ ಅಭಿಮಾನಿಗಳಿಂದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
ಕ್ಷೇತ್ರದ ಜನತೆ ಬಹಳಷ್ಟು ವಿಶ್ವಾಸವಿಟ್ಟುಕೊಂಡು ಉಪ ಚುನಾವಣೆಯಲ್ಲಿ ನನ್ನನ್ನು ಗೆಲ್ಲಿಸಿದ್ದರು. ಅದಕ್ಕೆ ಚಿರಋಣಿಯಾಗಿ ಕುಡಿಯುವ ನೀರು, ರಸ್ತೆ ಅಭಿವೃದ್ದಿ, ಕೆರೆಗಳನ್ನು ತುಂಬಿಸುವ ಯೋಜನೆ, ಮೇಗಾ ಮಾರುಕಟ್ಟೆ ಅಭಿವೃದ್ಧಿ, ಕ್ಷೇತ್ರದ ದೇವಸ್ಥಾನಗಳ ಜೀಣೋದ್ಧಾರ ಸೇರಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆ.
ಅಧಿಕಾರ ಯಾವತ್ತೂ ಒಬ್ಬರ ಬಳಿಯೆ ಉಳಿಯುವುದಲ್ಲ. ಆದರೆ, ನಾವು ಮಾಡುವ ಕಾರ್ಯಗಳು ಮಾತ್ರ ಜನರ ಮನಸ್ಸಿನಲ್ಲಿ ಸದಾ ಉಳಿಯುತ್ತವೆ. ಆ ಕಾರಣಕ್ಕಾಗಿಯೆ ಇಂದಿಗೂ ಕ್ಷೇತ್ರದ ಯಾವ ಮೂಲೆಗೆ ಹೋದರೂ ಜನತೆ ನನ್ನನ್ನು ವಿಶ್ವಾಸ, ಗೌರವದಿಂದ ಕಾಣುತ್ತಾರೆ ಎಂಬುದಕ್ಕೆ ಸಾಯಾಗಿದೆ. ಮುಂದೆಯೂ ಅಧಿಕಾರದಲ್ಲಿ ಇರಲಿ, ಇರದೆ ಇರಲಿ ಜನರ ಸೇವೆ ಮಾತ್ರ ಸದಾ ಮುಂದುವರಿಯಲಿದೆ. ಆದ್ದರಿಂದ ಎಲ್ಲರ ಆಶೀರ್ವಾದ ನಮಗೆ ಬೇಕು ಎಂದರು.
ಕೋಡಿಯಾಲ ಹೊಸಪೇಟೆ ಪುಣ್ಯಕೋಟಿ ಮಠದ ಬಾಲಯೋಗಿ ಜಗದೀಶ್ವರ ಸ್ವಾಮೀಜಿ ಸಮಾರಂಭ ಉದ್ಘಾಟಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ವಿರುಪಾಕ್ಷಪ್ಪ ಬಳ್ಳಾರಿ, ಪ್ರಮುಖರಾದ ವಿ.ಪಿ. ಲಿಂಗನಗೌಡ್ರ, ಕೆ. ಶಿವಲಿಂಗಪ್ಪ, ಎಸ್.ಎಸ್. ರಾಮಲಿಂಗಣ್ಣನವರ, ಶ್ರೀನಿವಾಸ ಕಾಕಿ, ಸಂತೋಷಕುಮಾರ ಪಾಟೀಲ, ಭಾರತಿ ಜಂಬಗಿ, ನಿಂಗರಾಜ ಕೋಡಿಹಳ್ಳಿ, ಮಂಜುನಾಥ ಓಲೇಕಾರ, ಶಿವಕುಮಾರ ನರಸಗೊಂಡರ, ಚೋಳಪ್ಪ ಕಸವಾಳ, ಮಂಜುನಾಥ ಕಾಟಿ, ಸುಭಾಸ ಶಿರಗೇರ, ಕೆಎಂಪಿ ಮಣಿ, ಮಲ್ಲಣ್ಣ ಅಂಗಡಿ, ಪ್ರಕಾಶ ಪೂಜಾರ, ಚೋಳಪ್ಪ ಕಸವಾಳ, ರಮೇಶ ಕರಡೆಣ್ಣನವರ, ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!