16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…

ಹಾವೇರಿ ಜಿಲ್ಲಾಸತ್ರ ಕೋರ್ಟ್‌ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.

ಸಿಎಂ ಕುರ್ಚಿ ಗುದ್ದಾಟದ ವಿಚಾರ…! ಮತ್ತೆ ಗರಂ ಆದ ಸಿಎಂ ಸಿದ್ಧರಾಮಯ್ಯ.

ಸಾಯಿ ಆಸ್ಪತ್ರೆ ವೈದ್ಯನ ಮೇಲೆ ಹಲ್ಲೆ: 8 ಜನರ ವಿರುದ್ಧ ಪ್ರಕರಣ ದಾಖಲು.

ಹಾವೇರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ನಿಂಗರಾಜ ಕೋಡಿಹಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ಸಿದ್ದು ಚಿಕ್ಕಬಿದರಿ ನೇಮಕ.

ನ್ಯಾಯಬೆಲೆ ಅಂಗಡಿ ಪ್ರಾಧಿಕಾರವನ್ನು ವರ್ಗಾವಣೆ ಮಾಡಿಕೊಡಲು ಲಂಚ ಸ್ವೀಕಾರ, ರಾಣೆಬೆನ್ನೂರ ತಹಶೀಲ್ದಾರ ಕಛೇರಿಯ ಆಹಾರ ನಿರೀಕ್ಷಕ ಬಂಧನ.

ಉಚಿತ ಚಿಕನ್ ಬಿರಿಯಾನಿ ಬೇಕಾ,‌ ಆಗಾದ್ರೆ ಬಸ್ ನಿಲ್ದಾಣಕ್ಕೆ ಬನ್ನಿ.

ಅಂಬೇಡ್ಕರ್, ಗಾಂಧಿ ಹೆಸರು ಅಳಿಸಲು ಹೊರಟಿರುವ ವಿರುದ್ಧ ನನ್ನ ಹೋರಾಟ; ಸಚಿವ ಸತೀಶ ಜಾರಕಿಹೊಳಿ

ನಗರಸಭೆ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಜಿಲ್ಲಾಧಿಕಾರಿ.

ತವರ ಮನೆಗೆ ಹೆಂಡತಿ ಹೋದಾಗ ಎರಡನೇ ಮದುವೆಯಾದ ಭೂಪ ಜೈಲು ಪಾಲು…!

ದಾರಿ ತಪ್ಪಿ ಬಂದಿದಲ್ಲ, ದಾರಿ ಹುಡಕಿಕೊಂಡು ಬಂದೇನಿ; ಗಜರಾಜನ ಕೂಗಾಟ

ತಾಯಿ ಮೇಲೆ ಹಲ್ಲೆ ಮಾಡಿದ್ರೆ ಹುಷಾರ…! ಪುತ್ರ, ಸೊಸೆಗೆ ಜೈಲು ಪಾಲು

ನಿರ್ಮಾಣ ಹಂತದ ಟ್ಯಾಂಕನಿದ್ದು ಬಿದ್ದು ಕಾರ್ಮಿಕ ಸಾವು.

ಒಂಟಿ ಮನೆಯಲ್ಲಿದ್ದ ಮಹಿಳೆಯ ಕತ್ತು ಕೊಯ್ದು ಕೊಲೆ‌ಮಾಡಿದ ವ್ಯಕ್ತಿ ಬಂಧನ

ರಾಣೆಬೇನ್ನೂರ ನಗರದಲ್ಲಿ ಮಹಿಳೆಯ ಭೀಕರ ಕೊಲೆ, ಕಾರಣ ನಿಗೂಢ…!

ಹೊಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವ ರೈತ ಸಾವು

ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ನಕಲಿ ಬೀಜದಂಗಡಿಯವರ ಜತೆ “ಡೀಲ್ ಮಾಡಿಕೊಂಡಿಲ್ಲ” ಶಾಸಕ ಪ್ರಕಾಶ ಕೋಳಿವಾಡ ಆಕ್ರೋಶ.

ಹಾವೇರಿ: ರಾಣೆಬೆನ್ನೂರಿನಲ್ಲಿ ಕಳಪೆ ಬೀಜ ಮಾರಾಟ ಮಾಡಿದವರ ವಿರುದ್ಧ ಇನ್ನೂ ಏಕೆ ಚಾರ್ಜ್ ಶೀಟ್ ಹಾಕಿಲ್ಲ. 90ದಿನದೊಳಗೆ ಚಾರ್ಜ್ ಶೀಟ್ ಹಾಕಬೇಕು ಎಂಬ ನಿಯಮ ಇದ್ದರೂ ಇನ್ನೂ ಹಾಕಿಲ್ಲ, ನಿಮ್ಮ ಮೇಲೆ ಏಕೆ ಕ್ರಮ ಕೈಗೊಳ್ಳಬಾರದು ಎಂದು ಎಸ್ಪಿ ಹಾಗೂ ಜಂಟಿ ಕೃಷಿ ನಿರ್ದೇಶಕರನ್ನು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಪ್ರಶ್ನಿಸಿದರು.

ಇಲ್ಲಿಯ ಜಿಪಂ ಸಭಾಂಗಣದಲ್ಲಿ ಮಂಗಳವಾರ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತೆಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಭೆಯಲ್ಲಿ ಸಚಿವರು ವಿಷಯ ಪ್ರಸ್ತಾಪಿಸಿದ ವೇಳೆ ಎಸ್ಪಿ ಹಾಗೂ ಜಂಟಿ ಕೃಷಿ ನಿರ್ದೇಶಕರು ಇಬ್ಬರೂ ಇನ್ನೂ ದಾಖಲಾತಿ ಪರಿಶೀಲನೆ ಹಂತದಲ್ಲಿದೆ ಎಂದಾಗ ಸಚಿವರು ಗರಂ ಆಗಿ ಕಿಡಿಕಾರಿದರು. ಬಳಿಕ ಕೆಲಕಾಲ ಸಮಯ ಪಡೆದು ಪ್ರತಿಕ್ರಿಯಿಸಿದ ಎಸ್ಪಿ ಯಶೋಧಾ, ರಾಣೆಬೆನ್ನೂರಿನಲ್ಲಿ ಮಾರಾಟ ಮಾಡಿದ ನಿಸರ್ಗ ಕಂಪನಿಯ ಬೀಜಗಳನ್ನು ಧಾರವಾಡ ಲ್ಯಾಬ್ಗೆ ಕಳುಹಿಸಲಾಗಿತ್ತು. ಅಲ್ಲಿಂದ ಬೀಜಗಳು ಕಳಪೆ ಎಂಬ ದೃಢಪಟ್ಟಿದೆ. ಅವರ ವಿರುದ್ಧ ಎರಡು ದಿನದಲ್ಲಿ ಚಾರ್ಜ್ಶೀಟ್ ಸಲ್ಲಿಕೆಯಾಗಲಿದೆ ಎಂದರು.
*ಆಗ ಪ್ರತಿಕ್ರಿಯಿಸಿದ ಶಾಸಕ ಪ್ರಕಾಶ ಕೋಳಿವಾಡ, ನಕಲಿ ಬೀಜ ಮಾರಾಟ ಮಾಡಿದ್ದಾರೆ ಎಂದು ದೃಢಪಟ್ಟ ಬಳಿಕವೂ ಏಕೆ ಆ ಅಂಗಡಿಗಳ ಬಾಗಿಲು ತೆರೆಯಲು ಅವಕಾಶ ಕೊಟ್ಟಿದ್ದೀರಿ. “ಶಾಸಕರು ಡೀಲ್ ಮಾಡಿಕೊಂಡು ಅಂಗಡಿಗಳ ಬಾಗಿಲು ತೆಗೆಸಿದ್ದಾರೆಂದು’ ರಾಣೆಬೆನ್ನೂರಿನಲ್ಲಿ ಸುದ್ದಿ ಹರದಾಡುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.*

ಆಗ ಕೃಷಿ ಜೆಡಿ ಅವರು ಬಾಗಿಲು ತೆರೆಯಲು ಡಿಸಿ ಅವರು ಆದೇಶ ಮಾಡಿದ್ದಾರೆ ಎಂದರು. ಆಗ ಡಿಸಿಯವರು ನಾನು ಬಾಗಿಲು ತೆರೆಯಿರಿ ಎಂದು ಆದೇಶಿಸಿಲ್ಲ ಎಂದರು. ಆಗ ಪ್ರತಿಕ್ರಿಯಿಸಿದ ಸಚಿವರು, ಕಳಪೆ ಬೀಜ ಮಾರಾಟ ಮಾಡಿದ್ದಾರೆ ಎಂದು ದೃಢಪಟ್ಟಿರುವ ಅಂಗಡಿಗಳನ್ನು ಇವತ್ತೇ ಬಂದ್ ಮಾಡಿಸಿ, ರಾಜ್ಯಮಟ್ಟದ ಜಾಗೃತ ದಳದ ಅಧಿಕಾರಿಗಳನ್ನು ಕರೆಸಿ ಚಚಿರ್ಸಿ, ಕಳಪೆ ಬೀಜ ಮಾರಾಟ ಮಾಡಿದವರಿಗೆ ಶಿಕ್ಷೆ ಆಗುವಂತೆ ನೋಡಿಕೊಳ್ಳಿ ಎಂದು ತಾಕೀತು ಮಾಡಿದರು.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!