ಅಕ್ರಮ ಸಂಬಂಧಕ್ಕೆ ಮುಗ್ಧ ಕಂದಮ್ಮನ್ನು ಕೊಂದ ದುರುಳ ಹೆತ್ತ ತಾಯಿ..

ನಕಲಿ ಬೀಜದಂಗಡಿಯವರ ಜತೆ “ಡೀಲ್ ಮಾಡಿಕೊಂಡಿಲ್ಲ” ಶಾಸಕ ಪ್ರಕಾಶ ಕೋಳಿವಾಡ ಆಕ್ರೋಶ.

ಅನುಭವ ಮಂಟಪ ಮಾದರಿ ಗಣಪತಿ ಸಮಿತಿ ವತಿಯಿಂದ ರಕ್ತದಾನ ಶಿಬಿರ

ಬಹಳಷ್ಟು ಲಾಭ ಕೊಡುವುದಾಗಿ ನಂಬಿಸಿ 75.42 ಲಕ್ಷ ರೂ. ವಂಚನೆ

ಕಾಕೋಳ ಗ್ರಾಮದಲ್ಲಿ ಸೊಸೈಟಿಗೆ ಕನ್ನ ಹಾಕಿದ ಕಳ್ಳರು.

ಅಧಿಕಾರ ಶಾಶ್ವತವಲ್ಲ, ಜನರ ಸೇವೆ ನಿಜಾವಾದ ಶಾಶ್ವತ ಮಾಜಿ ಶಾಸಕ ಅರುಣಕುಮಾರ ಪೂಜಾರ

ಅರುಣಕುಮಾರ ಪೂಜಾರ ಜನ್ಮದಿನದ ನಿಮಿತ್ತ ನಾಳೆ ವಿವಿಧ ಕಾರ್ಯಕ್ರಮ

ನಂದಿಹಳ್ಳಿ ಗ್ರಾಮದಲ್ಲಿ ಸಾವಿನಲ್ಲಿ ಒಂದಾದ ದಂಪತಿಗಳು.!

ಶಾಸಕರ ಆಪ್ತಸಹಾಯಕ ಮನೆಯಲ್ಲಿ 21.30 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

ಹೆಂಡತಿ ಕತ್ತು ಕೊಯ್ದು ಕೊಲೆಗೆ ಯತ್ನಿಸಿದ ಪತಿರಾಯ..

ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಯುದ್ಧ ಟ್ಯಾಂಕರ್ ಸ್ಥಾಪನೆ ರಾಣೆಬೇನ್ನೂರು ಹೆಮ್ಮೆ; ಸಭಾಧ್ಯಕ್ಷ ಯು.ಟಿ.ಖಾದರ

ಸದನದಲ್ಲಿ ಆಡಿದ ಮಾತಿಗೆ ಕ್ಷಮೆಯಾಚಿಸುವೆ, ಪಕ್ಷಾತೀತ ಕಾರ್ಯಕ್ರಮಕ್ಕೆ ಸಾಥ್ ನೀಡಿ; ಶಾಸಕ ಪ್ರಕಾಶ ಕೋಳಿವಾಡ.

ಯುದ್ಧ ಟ್ಯಾಂಕರ್ ಕಟ್ಟೆಗೆ ಹಾಕಿರುವ ಶಾಸಕರ ಪೋಟೋ ಹಾಗೂ ಪಿಕೆಕೆ ಹೆಸರಿಗೆ ಬಿಜೆಪಿ ಆಕ್ಷೇಪ. ಸರ್ಕಾರದ ಅನುದಾನದಲ್ಲಿ ಶಾಸಕರು ಶಿಷ್ಟಾಚಾರ ಪಾಲಿಸಲಿ.

ನಿಂತಿದ್ದ ಟಿಪ್ಪರಗೆ ಬೈಕ್ ಡಿಕ್ಕಿ ಜೋಯಿಸರಹರಳಹಳ್ಳಿ ಗ್ರಾಮದ ಎಂಟೆಕ್ ಪದವಿಧರ ಸಾವು

ಕುರುಬ ಸಮುದಾಯ ಹಾಗೂ ಸಿಎಂ ವಿರುದ್ಧ ಅವಾಚ್ಯವಾಗಿ ನಿಂದನೆ ಮಾಡಿದವರು ಮೇಲೆ‌ ಕಾನೂನು ಕ್ರಮಕ್ಕೆ ಒತ್ತಾಯ..

ಡೆಂಗ್ಯೂ ಜ್ವರ ಶಂಕೆ ಹಿನ್ನೆಲೆ ಯುವಕ ಸಾವು, ಕರೂರು ಗ್ರಾಮದಲ್ಲಿ ಘಟನೆ.

ಸತತ ಆರು ಗಂಟೆಗಳ ಕಾರ್ಯಚರಣೆ ನಂತರ ಸಿಕ್ಕ ಚಿರತೆ

ನಾಡಿಗೇರ ಓಣಿಯ ಕಾಕಿಯರ ಮನೆಯಲ್ಲಿ ಅವಿತಕೊಂಡ ಕುಂತ ಚಿರತೆ…!!

ಹೆಂಡತಿ ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡ ಗಂಡ ತಡಸ ಗ್ರಾಮದಲ್ಲಿ ಘಟನೆ

ನದಿ ಹಾರಿದ ಮಹಿಳೆ 2ಕೋಟಿ ಸಾಲ ಮಾಡಿದ್ದಳು ಡಿಸಿ ಮಹಾಂತೇಶ ವಿಜಯದಾನಮ್ಮನವರ ಮಾಹಿತಿ.

ನಕಲಿ ಬೀಜದಂಗಡಿಯವರ ಜತೆ “ಡೀಲ್ ಮಾಡಿಕೊಂಡಿಲ್ಲ” ಶಾಸಕ ಪ್ರಕಾಶ ಕೋಳಿವಾಡ ಆಕ್ರೋಶ.

ಹಾವೇರಿ: ರಾಣೆಬೆನ್ನೂರಿನಲ್ಲಿ ಕಳಪೆ ಬೀಜ ಮಾರಾಟ ಮಾಡಿದವರ ವಿರುದ್ಧ ಇನ್ನೂ ಏಕೆ ಚಾರ್ಜ್ ಶೀಟ್ ಹಾಕಿಲ್ಲ. 90ದಿನದೊಳಗೆ ಚಾರ್ಜ್ ಶೀಟ್ ಹಾಕಬೇಕು ಎಂಬ ನಿಯಮ ಇದ್ದರೂ ಇನ್ನೂ ಹಾಕಿಲ್ಲ, ನಿಮ್ಮ ಮೇಲೆ ಏಕೆ ಕ್ರಮ ಕೈಗೊಳ್ಳಬಾರದು ಎಂದು ಎಸ್ಪಿ ಹಾಗೂ ಜಂಟಿ ಕೃಷಿ ನಿರ್ದೇಶಕರನ್ನು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಪ್ರಶ್ನಿಸಿದರು.

ಇಲ್ಲಿಯ ಜಿಪಂ ಸಭಾಂಗಣದಲ್ಲಿ ಮಂಗಳವಾರ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತೆಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಭೆಯಲ್ಲಿ ಸಚಿವರು ವಿಷಯ ಪ್ರಸ್ತಾಪಿಸಿದ ವೇಳೆ ಎಸ್ಪಿ ಹಾಗೂ ಜಂಟಿ ಕೃಷಿ ನಿರ್ದೇಶಕರು ಇಬ್ಬರೂ ಇನ್ನೂ ದಾಖಲಾತಿ ಪರಿಶೀಲನೆ ಹಂತದಲ್ಲಿದೆ ಎಂದಾಗ ಸಚಿವರು ಗರಂ ಆಗಿ ಕಿಡಿಕಾರಿದರು. ಬಳಿಕ ಕೆಲಕಾಲ ಸಮಯ ಪಡೆದು ಪ್ರತಿಕ್ರಿಯಿಸಿದ ಎಸ್ಪಿ ಯಶೋಧಾ, ರಾಣೆಬೆನ್ನೂರಿನಲ್ಲಿ ಮಾರಾಟ ಮಾಡಿದ ನಿಸರ್ಗ ಕಂಪನಿಯ ಬೀಜಗಳನ್ನು ಧಾರವಾಡ ಲ್ಯಾಬ್ಗೆ ಕಳುಹಿಸಲಾಗಿತ್ತು. ಅಲ್ಲಿಂದ ಬೀಜಗಳು ಕಳಪೆ ಎಂಬ ದೃಢಪಟ್ಟಿದೆ. ಅವರ ವಿರುದ್ಧ ಎರಡು ದಿನದಲ್ಲಿ ಚಾರ್ಜ್ಶೀಟ್ ಸಲ್ಲಿಕೆಯಾಗಲಿದೆ ಎಂದರು.
*ಆಗ ಪ್ರತಿಕ್ರಿಯಿಸಿದ ಶಾಸಕ ಪ್ರಕಾಶ ಕೋಳಿವಾಡ, ನಕಲಿ ಬೀಜ ಮಾರಾಟ ಮಾಡಿದ್ದಾರೆ ಎಂದು ದೃಢಪಟ್ಟ ಬಳಿಕವೂ ಏಕೆ ಆ ಅಂಗಡಿಗಳ ಬಾಗಿಲು ತೆರೆಯಲು ಅವಕಾಶ ಕೊಟ್ಟಿದ್ದೀರಿ. “ಶಾಸಕರು ಡೀಲ್ ಮಾಡಿಕೊಂಡು ಅಂಗಡಿಗಳ ಬಾಗಿಲು ತೆಗೆಸಿದ್ದಾರೆಂದು’ ರಾಣೆಬೆನ್ನೂರಿನಲ್ಲಿ ಸುದ್ದಿ ಹರದಾಡುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.*

ಆಗ ಕೃಷಿ ಜೆಡಿ ಅವರು ಬಾಗಿಲು ತೆರೆಯಲು ಡಿಸಿ ಅವರು ಆದೇಶ ಮಾಡಿದ್ದಾರೆ ಎಂದರು. ಆಗ ಡಿಸಿಯವರು ನಾನು ಬಾಗಿಲು ತೆರೆಯಿರಿ ಎಂದು ಆದೇಶಿಸಿಲ್ಲ ಎಂದರು. ಆಗ ಪ್ರತಿಕ್ರಿಯಿಸಿದ ಸಚಿವರು, ಕಳಪೆ ಬೀಜ ಮಾರಾಟ ಮಾಡಿದ್ದಾರೆ ಎಂದು ದೃಢಪಟ್ಟಿರುವ ಅಂಗಡಿಗಳನ್ನು ಇವತ್ತೇ ಬಂದ್ ಮಾಡಿಸಿ, ರಾಜ್ಯಮಟ್ಟದ ಜಾಗೃತ ದಳದ ಅಧಿಕಾರಿಗಳನ್ನು ಕರೆಸಿ ಚಚಿರ್ಸಿ, ಕಳಪೆ ಬೀಜ ಮಾರಾಟ ಮಾಡಿದವರಿಗೆ ಶಿಕ್ಷೆ ಆಗುವಂತೆ ನೋಡಿಕೊಳ್ಳಿ ಎಂದು ತಾಕೀತು ಮಾಡಿದರು.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!