16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…

ಹಾವೇರಿ ಜಿಲ್ಲಾಸತ್ರ ಕೋರ್ಟ್‌ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.

ಸಿಎಂ ಕುರ್ಚಿ ಗುದ್ದಾಟದ ವಿಚಾರ…! ಮತ್ತೆ ಗರಂ ಆದ ಸಿಎಂ ಸಿದ್ಧರಾಮಯ್ಯ.

ಸಾಯಿ ಆಸ್ಪತ್ರೆ ವೈದ್ಯನ ಮೇಲೆ ಹಲ್ಲೆ: 8 ಜನರ ವಿರುದ್ಧ ಪ್ರಕರಣ ದಾಖಲು.

ಹಾವೇರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ನಿಂಗರಾಜ ಕೋಡಿಹಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ಸಿದ್ದು ಚಿಕ್ಕಬಿದರಿ ನೇಮಕ.

ನ್ಯಾಯಬೆಲೆ ಅಂಗಡಿ ಪ್ರಾಧಿಕಾರವನ್ನು ವರ್ಗಾವಣೆ ಮಾಡಿಕೊಡಲು ಲಂಚ ಸ್ವೀಕಾರ, ರಾಣೆಬೆನ್ನೂರ ತಹಶೀಲ್ದಾರ ಕಛೇರಿಯ ಆಹಾರ ನಿರೀಕ್ಷಕ ಬಂಧನ.

ಉಚಿತ ಚಿಕನ್ ಬಿರಿಯಾನಿ ಬೇಕಾ,‌ ಆಗಾದ್ರೆ ಬಸ್ ನಿಲ್ದಾಣಕ್ಕೆ ಬನ್ನಿ.

ಅಂಬೇಡ್ಕರ್, ಗಾಂಧಿ ಹೆಸರು ಅಳಿಸಲು ಹೊರಟಿರುವ ವಿರುದ್ಧ ನನ್ನ ಹೋರಾಟ; ಸಚಿವ ಸತೀಶ ಜಾರಕಿಹೊಳಿ

ನಗರಸಭೆ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಜಿಲ್ಲಾಧಿಕಾರಿ.

ತವರ ಮನೆಗೆ ಹೆಂಡತಿ ಹೋದಾಗ ಎರಡನೇ ಮದುವೆಯಾದ ಭೂಪ ಜೈಲು ಪಾಲು…!

ದಾರಿ ತಪ್ಪಿ ಬಂದಿದಲ್ಲ, ದಾರಿ ಹುಡಕಿಕೊಂಡು ಬಂದೇನಿ; ಗಜರಾಜನ ಕೂಗಾಟ

ತಾಯಿ ಮೇಲೆ ಹಲ್ಲೆ ಮಾಡಿದ್ರೆ ಹುಷಾರ…! ಪುತ್ರ, ಸೊಸೆಗೆ ಜೈಲು ಪಾಲು

ನಿರ್ಮಾಣ ಹಂತದ ಟ್ಯಾಂಕನಿದ್ದು ಬಿದ್ದು ಕಾರ್ಮಿಕ ಸಾವು.

ಒಂಟಿ ಮನೆಯಲ್ಲಿದ್ದ ಮಹಿಳೆಯ ಕತ್ತು ಕೊಯ್ದು ಕೊಲೆ‌ಮಾಡಿದ ವ್ಯಕ್ತಿ ಬಂಧನ

ರಾಣೆಬೇನ್ನೂರ ನಗರದಲ್ಲಿ ಮಹಿಳೆಯ ಭೀಕರ ಕೊಲೆ, ಕಾರಣ ನಿಗೂಢ…!

ಹೊಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವ ರೈತ ಸಾವು

ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ಕವಲೇತ್ತು ಗ್ರಾಪಂನಲ್ಲಿ ಲಕ್ಷಾಂತರ ರೂ ಅವ್ಯವಹಾರ ಮಾಡಿದ ಪಿಡಿಓ.

ರಾಣೆಬೇನ್ನೂರು: ತಾಲೂಕಿನ ಕವಲೆತ್ತು ಗ್ರಾಪಂನಲ್ಲಿ ಹೊಲಿಗೆ ಯಂತ್ರ ಖರೀದಿ, ಲ್ಯಾಪ್‌ಟಾಪ್ ಹಾಗೂ ಮೋಟರ್ ಯಂತ್ರ ಖರೀದಿ ಸೇರಿದಂತೆ ಇತರ ವ್ಯವಹಾರಗಳಲ್ಲಿ ಕೋಟ್ಯಾಂತರ ರೂ. ಅವ್ಯವಹಾರ ನಡೆದಿದೆ ಎನ್ನುವ ಆರೋಪ ಕೇಳಿ ಬಂದಿದೆ. ಈ ಕುರಿತು ಸ್ವತಃ ಗ್ರಾಪಂ ಸದಸ್ಯರೇ ಲೋಕಾಯುಕ್ತರಿಗೆ ದೂರು ನೀಡಿದ್ದಾರೆ.

ಗ್ರಾಪಂ ವತಿಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಅಂಗವಿಕಲರ ಜೀವನೋಪಾಯಕ್ಕಾಗಿ ವಿಜಾರ 20 ಹೊಲಿಗೆ ಯಂತ್ರ ಫಲಾನುಭವಿಗಳಿಗೆ ನೀಡಿದ್ದಾರೆ. ಒಂದು ಹೊಲಿಗೆ ಯಂತ್ರಕ್ಕೆ 13,364 ರೂ.ನಂತೆ ಒಟ್ಟು 20 ಯಂತ್ರಗಳಿಗೆ 2,99,354 ರೂ. ನೀಡಲಾಗಿದೆ. ಆದರೆ, ಗ್ರಾಪಂ ಸದಸ್ಯರು ಅದೇ ಹೊಲಿಗೆ ಯಂತ್ರಗಳನ್ನು ಗ್ರಾಪಂ ಪಿಡಿಒ ಖರೀದಿಸಿದ ಅಂಗಡಿಗೆ ತೆರಳಿ 20 ಹೊಲಿಗೆ ಯಂತ್ರಗಳ ಕೋಟೇಷನ್ ತಂದಿದ್ದಾರೆ. ಅದರಲ್ಲಿ ಪ್ರತಿ ಯಂತ್ರಕ್ಕೆ 6800 ರೂ.ನಂತೆ ಒಟ್ಟು 20ಕ್ಕೆ 1,90,400 ನೀಡಲಾಗಿದೆ. ಹೀಗಾಗಿ ಹೊಲಿಗೆ ಯಂತ್ರ ಖರೀದಿಯಲ್ಲಿ ಗ್ರಾಪಂ ಪಿಡಿಒ ಅವ್ಯವಹಾರ ಮಾಡಿದ್ದಾರೆ ಎಂಬುದು ಗ್ರಾಪಂ ಸದಸ್ಯರ ಆರೋಪವಾಗಿದೆ.

ಲ್ಯಾಪ್‌ಟಾಪ್ ಖರೀದಿ ಗೋಲ್‌ಮಾಲ್:
ಗ್ರಾಪಂ ವತಿಯಿಂದ 2025-26ನೇ ಸಾಲಿನ ಪರಿಶಿಷ್ಟ ವರ್ಗದ ವಿದ್ಯಾರ್ಥಿಯೊಬ್ಬರಿಗೆ ಲೆನೋವೊ ಕಂಪನಿಯ ಲ್ಯಾಪ್‌ಟಾಪ್
ಕೊಡಲಾಗಿದೆ. ಅದರ ಮಾರುಕಟ್ಟೆ ಬೆಲೆ 25,600 ರೂ. ಇದೆ. ಆದರೆ, ಗ್ರಾಪಂನಿಂದ 60 ಸಾವಿರ ರೂ. ಕೊಟ್ಟು ಖರೀದಿ ಮಾಡಲಾಗಿದೆ. ಅದರ ಜತೆಗೆ ಗ್ರಾಪಂ ಕಚೇರಿ ಉಪಯೋಗಕ್ಕಾಗಿ ಏಸಸ್ ಕಂಪನಿಯ ಲ್ಯಾಪ್‌ಟಾಪ್ ಖರೀದಿ ಮಾಡಲಾಗಿದೆ. ಅದರ ಮಾರುಕಟ್ಟೆ ಬೆಲೆ 22 ಸಾವಿರ ರೂ. ಇದೆ. ಗ್ರಾಪಂನಿಂದ 40990 ರೂ. ಕೊಟ್ಟು ಖರೀದಿ ಮಾಡಲಾಗಿದೆ.

ಗ್ರಾಪಂನಲ್ಲಿ ಸ್ವೀಪರ್ ಕೆಲಸ ಮಾಡುತ್ತಿದ್ದ ಮಹದೇವಪ್ಪ ಪೆದ್ದಪ್ಪನವರ ಎಂಬುವರು ಅವರ ಶಾಲೆಯ ದಾಖಲಾತಿಯಲ್ಲಿರುವ ಜನ್ಮದಿನಾಂಕದ ಪ್ರಕಾರ 2024 ನವೆಂಬರ್ 13ರಂದು ನಿವೃತ್ತಿ ಹೊಂದಿದ್ದಾರೆ. ಆದರೆ, ಗ್ರಾಪಂ ವತಿಯಿಂದ ಅವರಿಗೆ ಪ್ರತಿ ತಿಂಗಳು 18,243 ರೂ.ನಂತೆ ಒಟ್ಟು ಪ್ರಸಕ್ತ ವರ್ಷದ ಆಗಸ್ಟ್ ಸೇರಿ ತಿಂಗಳು 9 ತಿಂಗಳು ಸಂಬಳ ಪಾವತಿಸಲಾಗಿದೆ. ಈ ಬಗ್ಗೆ ಗ್ರಾಪಂ ಪಿಡಿಒ ಶಾಂತಿನಾಥ ನ್ಯಾಮಗೌಡ್ರ ಅವರನ್ನು ವಿಚಾರಿಸಿದಾಗ ‘ಆತನ ಆಧಾರ್ ಕಾಡ್ ೯ನಲ್ಲಿ ಜನ್ಮದಿನಾಂಕ ಎರಡು ರೀತಿಯಲ್ಲಿದೆ. ಆದ್ದರಿಂದ ಆತನಿಗೆ ನಿವೃತ್ತಿಯಾಗಿಲ್ಲ. ಈ ಬಗ್ಗೆ ಆತ ನ್ಯಾಯಾಲಯದ ಮೋರೆ ಹೋಗಿದ್ದಾನೆ’ ಎಂದು ಪ್ರತಿಕ್ರಿಯಿಸಿದರು.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!