16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…

ಹಾವೇರಿ ಜಿಲ್ಲಾಸತ್ರ ಕೋರ್ಟ್‌ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.

ಸಿಎಂ ಕುರ್ಚಿ ಗುದ್ದಾಟದ ವಿಚಾರ…! ಮತ್ತೆ ಗರಂ ಆದ ಸಿಎಂ ಸಿದ್ಧರಾಮಯ್ಯ.

ಸಾಯಿ ಆಸ್ಪತ್ರೆ ವೈದ್ಯನ ಮೇಲೆ ಹಲ್ಲೆ: 8 ಜನರ ವಿರುದ್ಧ ಪ್ರಕರಣ ದಾಖಲು.

ಹಾವೇರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ನಿಂಗರಾಜ ಕೋಡಿಹಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ಸಿದ್ದು ಚಿಕ್ಕಬಿದರಿ ನೇಮಕ.

ನ್ಯಾಯಬೆಲೆ ಅಂಗಡಿ ಪ್ರಾಧಿಕಾರವನ್ನು ವರ್ಗಾವಣೆ ಮಾಡಿಕೊಡಲು ಲಂಚ ಸ್ವೀಕಾರ, ರಾಣೆಬೆನ್ನೂರ ತಹಶೀಲ್ದಾರ ಕಛೇರಿಯ ಆಹಾರ ನಿರೀಕ್ಷಕ ಬಂಧನ.

ಉಚಿತ ಚಿಕನ್ ಬಿರಿಯಾನಿ ಬೇಕಾ,‌ ಆಗಾದ್ರೆ ಬಸ್ ನಿಲ್ದಾಣಕ್ಕೆ ಬನ್ನಿ.

ಅಂಬೇಡ್ಕರ್, ಗಾಂಧಿ ಹೆಸರು ಅಳಿಸಲು ಹೊರಟಿರುವ ವಿರುದ್ಧ ನನ್ನ ಹೋರಾಟ; ಸಚಿವ ಸತೀಶ ಜಾರಕಿಹೊಳಿ

ನಗರಸಭೆ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಜಿಲ್ಲಾಧಿಕಾರಿ.

ತವರ ಮನೆಗೆ ಹೆಂಡತಿ ಹೋದಾಗ ಎರಡನೇ ಮದುವೆಯಾದ ಭೂಪ ಜೈಲು ಪಾಲು…!

ದಾರಿ ತಪ್ಪಿ ಬಂದಿದಲ್ಲ, ದಾರಿ ಹುಡಕಿಕೊಂಡು ಬಂದೇನಿ; ಗಜರಾಜನ ಕೂಗಾಟ

ತಾಯಿ ಮೇಲೆ ಹಲ್ಲೆ ಮಾಡಿದ್ರೆ ಹುಷಾರ…! ಪುತ್ರ, ಸೊಸೆಗೆ ಜೈಲು ಪಾಲು

ನಿರ್ಮಾಣ ಹಂತದ ಟ್ಯಾಂಕನಿದ್ದು ಬಿದ್ದು ಕಾರ್ಮಿಕ ಸಾವು.

ಒಂಟಿ ಮನೆಯಲ್ಲಿದ್ದ ಮಹಿಳೆಯ ಕತ್ತು ಕೊಯ್ದು ಕೊಲೆ‌ಮಾಡಿದ ವ್ಯಕ್ತಿ ಬಂಧನ

ರಾಣೆಬೇನ್ನೂರ ನಗರದಲ್ಲಿ ಮಹಿಳೆಯ ಭೀಕರ ಕೊಲೆ, ಕಾರಣ ನಿಗೂಢ…!

ಹೊಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವ ರೈತ ಸಾವು

ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ಪೌರಕಾರ್ಮಿಕರ ಸಮಾಜದ ಸ್ವಚ್ಛ ಮುಖಿಗಳು, ಅಮೂಲ್ಯ ರತ್ನಗಳು ಪೌರಾಯುಕ್ತ ಎಫ್.ಐ.ಇಂಗಳಗಿ

ರಾಣೆಬೆನ್ನೂರ: ಪೌರಕಾರ್ಮಿಕರು ಸರಾಯಿ ಗುಟ್ಕಾ ಸೇರಿದಂತೆ ಇತರ ದುಶ್ಚಟಗಳಿಂದ ದೂರವಿರಬೇಕು. ಇದರಿಂದ ನಿಮಗೂ ಹಾಗೂ ನಿಮ್ಮನ್ನು ನಂಬಿದ ಗಂಡ, ಹೆಂಡತಿ ಮಕ್ಕಳಿಗೂ ಕ್ಷೇಮ ಎಂದು ಪೌರಾಯುಕ್ತರಾದ ಎಫ್.ಐ.ಇಂಗಳಗಿ ಹೇಳಿದರು.

ಶನಿವಾರ ನಗರದ ಆಂಗ್ಲೋ ಉರ್ದು ಮೈದಾನದಲ್ಲಿ ಪೌರ ಕಾರ್ಮಿಕರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸಂಪ್ರದಾಯದಂತೆ ಶಿಕ್ಷಕರ, ಪೋಷಕರ, ಮಕ್ಕಳ, ಸಾಕ್ಷರತಾ ಸೇರಿದಂತೆ ಇತರ ದಿನಾಚರಣೆಯನ್ನು ಹೇಗೆ ಮಾಡುತ್ತೇವೆಯೋ ಹಾಗೆಯೇ ಪೌರಕಾರ್ಮಿಕರ ಮಹತ್ವ ಅರಿಯಲು ಪ್ರತಿ ವರ್ಷ ಈ ದಿನಾಚರಣೆ ಮಾಡಲಾಗುತ್ತಿದ್ದು, ಅಂದು ಅವರಿಗಾಗಿ ಮನರಂಜನೆ, ಕ್ರೀಡೆ, ಸನ್ಮಾನ ಸೇರಿದಂತೆ ಇತರ ಕಾರ್ಯಕ್ರಮ ಗಳನ್ನು ಕಲ್ಪಿಸಲಾಗುವುದು ಎಂದರು.

ಶಾಸಕ ಪ್ರಕಾಶ ಕೋಳಿವಾಡ ಮಾತನಾಡಿ
ಶ್ರಮಿಕ ಜೀವಿಗಳಾಗಿರುವ ಪೌರಕಾರ್ಮಿಕರು ನಗರದ ಸ್ವಚ್ಛತೆಯ ಹರಿಕಾರರಾಗಿದ್ದಾರೆ ಹಾಗೂ ನಗರದ ಸೌಂದರ್ಯಿಕರಣಕ್ಕೆ ಕಾರಣೀಭೂತರಾಗಿದ್ದಾರೆಂದು ಅಭಿಪ್ರಾಯಪಟ್ಟರು. ಪೌರಕಾರ್ಮಿಕರಿಲ್ಲದೆ ನಗರದ ಸ್ವಚ್ಛತೆ ಹಾಗೂ ಸೌಂಧರ್ಯಿಕರಣ ಅಸಾಧ್ಯ , ಅಂತಹ ಜವಾಬ್ದಾರಿಯಲ್ಲಿರುವ ಪೌರಕಾರ್ಮಿಕರು ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ ನಗರಸಭೆಗೆ ಕೀರ್ತಿ ತರಲು ಮುಂದಾಗಬೇಕು ಎಂದರು.

ಪೌರಕಾರ್ಮಿಕರು ಕ್ರಿಕೆಟ್, ವಾಲಿಬಾಲ್, ಗುಂಡು ಎಸೆತ್, ಶಟಲ್ ಕಾಕ್, ಮ್ಯುಸಿಕಲ್ ಚೆರ್ ಹಾಗೂ ವೈಯಕ್ತಿಕ ಕ್ರೀಡೆ ಆಟ ಆಡುವ ಮೂಲಕ ಗಮನ ಸೆಳೆದರು.

ನಗರಸಭೆ ಅಧ್ಯಕ್ಷೆ ಚಂಪಕಾ ಬೀಸಲಹಳ್ಳಿ, ಸ್ಥಾಯಿ ಸಮಿತಿ ಅಧ್ಯಕ್ಷ ರಮೇಶ ಕರೆಡೇಣ್ಣನವರ, ಸದಸ್ಯರುಗಳಾದ ಪುಟ್ಟಪ್ಪ ಮರಿಯಮ್ಮನವರ, ಪ್ರಕಾಶ ಪೂಜಾರ, ಶೇಖಪ್ಪ ಹೊಸಗೌಡ್ರ ಸೇರಿದಂತೆ ಪರಿಸರ ಇಂಜಿನಿಯರ ಮಹೇಶ ಕೋಡಬಾಳ, ಎಇಇ ಎಸ್ ಬಿ ಹಾದಿಮನಿ, ಎಸ್ ಬಿ ಮರಿಗೌಡ್ರ, ಆರೋಗ್ಯ ನಿರೀಕ್ಷಕರಾದ ಮಧುರಾಜ್ ಕಂಬಳಿ, ರಾಜು ಭೋವಿ, ಶೃತಿ ಎಂ, ರಾಘವೇಂದ್ರ ಗಾವಡೆ, ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ಏಳುಕೋಟೆಪ್ಪ ಗೋಣಿಬಸಮ್ಮನವರ, ಕಂದಾಯ ನಿರೀಕ್ಷಕ ವಸಂತ, ಮಾರುತಿ ಪಾಟೀಲ ಹಾಜರಿದ್ದರು

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!