16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…

ಹಾವೇರಿ ಜಿಲ್ಲಾಸತ್ರ ಕೋರ್ಟ್‌ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.

ಸಿಎಂ ಕುರ್ಚಿ ಗುದ್ದಾಟದ ವಿಚಾರ…! ಮತ್ತೆ ಗರಂ ಆದ ಸಿಎಂ ಸಿದ್ಧರಾಮಯ್ಯ.

ಸಾಯಿ ಆಸ್ಪತ್ರೆ ವೈದ್ಯನ ಮೇಲೆ ಹಲ್ಲೆ: 8 ಜನರ ವಿರುದ್ಧ ಪ್ರಕರಣ ದಾಖಲು.

ಹಾವೇರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ನಿಂಗರಾಜ ಕೋಡಿಹಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ಸಿದ್ದು ಚಿಕ್ಕಬಿದರಿ ನೇಮಕ.

ನ್ಯಾಯಬೆಲೆ ಅಂಗಡಿ ಪ್ರಾಧಿಕಾರವನ್ನು ವರ್ಗಾವಣೆ ಮಾಡಿಕೊಡಲು ಲಂಚ ಸ್ವೀಕಾರ, ರಾಣೆಬೆನ್ನೂರ ತಹಶೀಲ್ದಾರ ಕಛೇರಿಯ ಆಹಾರ ನಿರೀಕ್ಷಕ ಬಂಧನ.

ಉಚಿತ ಚಿಕನ್ ಬಿರಿಯಾನಿ ಬೇಕಾ,‌ ಆಗಾದ್ರೆ ಬಸ್ ನಿಲ್ದಾಣಕ್ಕೆ ಬನ್ನಿ.

ಅಂಬೇಡ್ಕರ್, ಗಾಂಧಿ ಹೆಸರು ಅಳಿಸಲು ಹೊರಟಿರುವ ವಿರುದ್ಧ ನನ್ನ ಹೋರಾಟ; ಸಚಿವ ಸತೀಶ ಜಾರಕಿಹೊಳಿ

ನಗರಸಭೆ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಜಿಲ್ಲಾಧಿಕಾರಿ.

ತವರ ಮನೆಗೆ ಹೆಂಡತಿ ಹೋದಾಗ ಎರಡನೇ ಮದುವೆಯಾದ ಭೂಪ ಜೈಲು ಪಾಲು…!

ದಾರಿ ತಪ್ಪಿ ಬಂದಿದಲ್ಲ, ದಾರಿ ಹುಡಕಿಕೊಂಡು ಬಂದೇನಿ; ಗಜರಾಜನ ಕೂಗಾಟ

ತಾಯಿ ಮೇಲೆ ಹಲ್ಲೆ ಮಾಡಿದ್ರೆ ಹುಷಾರ…! ಪುತ್ರ, ಸೊಸೆಗೆ ಜೈಲು ಪಾಲು

ನಿರ್ಮಾಣ ಹಂತದ ಟ್ಯಾಂಕನಿದ್ದು ಬಿದ್ದು ಕಾರ್ಮಿಕ ಸಾವು.

ಒಂಟಿ ಮನೆಯಲ್ಲಿದ್ದ ಮಹಿಳೆಯ ಕತ್ತು ಕೊಯ್ದು ಕೊಲೆ‌ಮಾಡಿದ ವ್ಯಕ್ತಿ ಬಂಧನ

ರಾಣೆಬೇನ್ನೂರ ನಗರದಲ್ಲಿ ಮಹಿಳೆಯ ಭೀಕರ ಕೊಲೆ, ಕಾರಣ ನಿಗೂಢ…!

ಹೊಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವ ರೈತ ಸಾವು

ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ಕೈ-ಕಮಲ ನಡುವೆ ರಾಜಕೀಯ ಪ್ರತಿಷ್ಠೆ; ನಗರಸಭೆ ಸಾಮಾನ್ಯ ಸಭೆ ಮುಂದೂಡಿಕೆ.

ರಾಣೆಬೇನ್ನೂರು: ನಗರಸಭೆ ಶನಿವಾರ ಕರೆದಿದ್ದ ನಗರಸಭೆ ಸಾಮಾನ್ಯ ಸಭೆಯು ಕೋರಂ ಅಭಾವದಿಂದ ನಗರಸಭೆ ಅಧ್ಯಕ್ಷೆ ಚಂಪಕ ಬಿಸಲಹಳ್ಳಿ ಸಾಮಾನ್ಯ ಸಭೆಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಯಿತು.

ನಗರಸಭೆಯ ಸರ್.ಎಂ.ವಿಶ್ವೇಶ್ವರಯ್ಯ ಸಭಾಂಗಣದಲ್ಲಿ
ಬೆಳಗ್ಗೆ 11ಕ್ಕೆ ಸಭೆ ಕರೆಯಲಾಗಿತ್ತು. ಸದಸ್ಯರ ಬರುವಿಕೆಯ ನಿರೀಕ್ಷೆಯಲ್ಲಿ 11.30ಕ್ಕೆ ಸಭೆಯನ್ನು ಅಧ್ಯಕ್ಷೆ ಚಂಪಕಾ ಪ್ರಾರಂಭಿಸಿದರು. ಆಗ ಆಡಳಿತ ಕಾಂಗ್ರೆಸ್ ಪಕ್ಷದ 9 ಸದಸ್ಯರ ಪೈಕಿ 8 ಸದಸ್ಯರು (ಅಧ್ಯಕ್ಷೆ ಸೇರಿದಂತೆ) ಹಾಗೂ 4 ನಾಮಕರಣ ಸದಸ್ಯರು ಹಾಜರಿದ್ದರು. ನಗರಸಭೆಯಲ್ಲಿ ಒಟ್ಟು 35 ಸದಸ್ಯರಿದ್ದು ಕೋರಂ ಭರ್ತಿಗೆ 13 ಸದಸ್ಯರ ಹಾಜರಾತಿ ಅಗತ್ಯವಿತ್ತು. ಆದರೆ ಸಭೆಯಲ್ಲಿ ಕೇವಲ 8 ಸದಸ್ಯರು ಮಾತ್ರ ಹಾಜರಿದ್ದರು. (ನಾಮಕರಣ ಸದಸ್ಯರನ್ನು ಕೋರಂಗೆ ಪರಿಗಣಿಸುವುದಿಲ್ಲ). 11.50ರ ವರೆಗೂ ಕಾಯ್ದರೂ ಕೋರಂ ಭರ್ತಿಯಾಗದ ಕಾರಣ ಅಧ್ಯಕ್ಷೆ ಚಂಪಕ ಬಿಸಲಹಳ್ಳಿ ಸಭೆಯನ್ನು ಒಂದು ಗಂಟೆ ಮುಂದೂಡಿದರು.

ಕೋರಂ ಅಭಾವದ ಕಾರಣ ಮುಂದೂಡಲಾಗಿದ್ದ ಸಭೆಯನ್ನು ಎರಡನೇ ಬಾರಿಗೆ ಮಧ್ಯಾಹ್ನ 1.20ಕ್ಕೆ ಪ್ರಾರಂಭಿಸಲಾಯಿತು. ಆಗಲೂ ಕೂಡ ಕೋರಂ ಭರ್ತಿಯಾಗಲಿಲ್ಲ. ವಿಪರ್ಯಾಸವೆಂದರೆ ಬೆಳಗಿನ ಅವಧಿಯಲ್ಲಿ ಹಾಜರಿದ್ದ ಆಡಳಿತ ಪಕ್ಷದ ಸದಸ್ಯೆ ಜಯಶ್ರೀ ಪಿಸೆ ಈ ಬಾರಿ ಗೈರಾಗಿದ್ದರು. ಇದಲ್ಲದೆ ಕಾಂಗ್ರೆಸ್ ಪಕ್ಷದ ಮತ್ತೊಬ್ಬ ಸದಸ್ಯೆ ನೀಲಮ್ಮ ಮಾಕನೂರ ಮೊದಲಿನ ಹಾಗೂ ಮುಂದೂಡಿದ ಸಭೆಗೆ ಆಗಮಿಸಲಿಲ್ಲ. ಉಪಾಧ್ಯಕ್ಷ, ಸ್ಥಾಯಿ ಸಮಿತಿ ಅಧ್ಯಕ್ಷ ಸೇರಿದಂತೆ 27 ಚುನಾಯಿತ ಸದಸ್ಯರು ಸಭೆಗೆ ಗೈರು ಹಾಜರಾಗಿದ್ದರು. ಹೀಗಾಗಿ ಅನಿವಾರ್ಯವಾಗಿ ಅಧ್ಯಕ್ಷರು ಸಭೆಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದರು.
ಸಭೆ ಮುಂದೂಡಿಕೆಯಾದ ನಂತರ ಆಡಳಿತ ಪಕ್ಷದ ಸದಸ್ಯ ಪುಟ್ಟಪ್ಪ ಮರಿಯಮ್ಮನವರ ಸುದ್ದಿಗಾರರೊಂದಿಗೆ ಮಾತನಾಡಿ, ಇಂದಿನ ಸಭೆಯಲ್ಲಿ ನಗರದ ಅಭಿವೃದ್ಧಿ ಹಾಗೂ ಕೆಲವು ಪ್ರಮುಖ ವೃತ್ತಗಳಿಗೆ ಮಹಾನ್ ನಾಯಕರುಗಳ ಹೆಸರಿಡುವ ಕುರಿತು ನಿರ್ಣಯ ಕೈಗೊಳ್ಳುವ ಕುರಿತು ಅಜೆಂಡಾ ರೂಪಿಸಲಾಗಿತ್ತು. ಆದರೆ ನಮಗೆ ಇದುವರೆಗೂ ಸಹಕಾರ ನೀಡಿದ್ದ ಬಿಜೆಪಿ ಸದಸ್ಯರು ಇಂದಿನ ಸಭೆಗೆ ಗೈರು ಹಾಜರಾಗಿದ್ದು ಅದಕ್ಕೆ ಅವಕಾಶವಿಲ್ಲದಂತಾಗಿದೆ. ಇದನ್ನು ಗಮನಿಸಿದರೆ ಬಿಜೆಪಿ ಸದಸ್ಯರಿಗೆ ನಗರದ ಅಭಿವೃದ್ಧಿಗೆ ಇಷ್ಟವಿಲ್ಲದಂತೆ ಕಾಣುತ್ತದೆ ಎಂದರು.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!