16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…

ಹಾವೇರಿ ಜಿಲ್ಲಾಸತ್ರ ಕೋರ್ಟ್‌ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.

ಸಿಎಂ ಕುರ್ಚಿ ಗುದ್ದಾಟದ ವಿಚಾರ…! ಮತ್ತೆ ಗರಂ ಆದ ಸಿಎಂ ಸಿದ್ಧರಾಮಯ್ಯ.

ಸಾಯಿ ಆಸ್ಪತ್ರೆ ವೈದ್ಯನ ಮೇಲೆ ಹಲ್ಲೆ: 8 ಜನರ ವಿರುದ್ಧ ಪ್ರಕರಣ ದಾಖಲು.

ಹಾವೇರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ನಿಂಗರಾಜ ಕೋಡಿಹಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ಸಿದ್ದು ಚಿಕ್ಕಬಿದರಿ ನೇಮಕ.

ನ್ಯಾಯಬೆಲೆ ಅಂಗಡಿ ಪ್ರಾಧಿಕಾರವನ್ನು ವರ್ಗಾವಣೆ ಮಾಡಿಕೊಡಲು ಲಂಚ ಸ್ವೀಕಾರ, ರಾಣೆಬೆನ್ನೂರ ತಹಶೀಲ್ದಾರ ಕಛೇರಿಯ ಆಹಾರ ನಿರೀಕ್ಷಕ ಬಂಧನ.

ಉಚಿತ ಚಿಕನ್ ಬಿರಿಯಾನಿ ಬೇಕಾ,‌ ಆಗಾದ್ರೆ ಬಸ್ ನಿಲ್ದಾಣಕ್ಕೆ ಬನ್ನಿ.

ಅಂಬೇಡ್ಕರ್, ಗಾಂಧಿ ಹೆಸರು ಅಳಿಸಲು ಹೊರಟಿರುವ ವಿರುದ್ಧ ನನ್ನ ಹೋರಾಟ; ಸಚಿವ ಸತೀಶ ಜಾರಕಿಹೊಳಿ

ನಗರಸಭೆ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಜಿಲ್ಲಾಧಿಕಾರಿ.

ತವರ ಮನೆಗೆ ಹೆಂಡತಿ ಹೋದಾಗ ಎರಡನೇ ಮದುವೆಯಾದ ಭೂಪ ಜೈಲು ಪಾಲು…!

ದಾರಿ ತಪ್ಪಿ ಬಂದಿದಲ್ಲ, ದಾರಿ ಹುಡಕಿಕೊಂಡು ಬಂದೇನಿ; ಗಜರಾಜನ ಕೂಗಾಟ

ತಾಯಿ ಮೇಲೆ ಹಲ್ಲೆ ಮಾಡಿದ್ರೆ ಹುಷಾರ…! ಪುತ್ರ, ಸೊಸೆಗೆ ಜೈಲು ಪಾಲು

ನಿರ್ಮಾಣ ಹಂತದ ಟ್ಯಾಂಕನಿದ್ದು ಬಿದ್ದು ಕಾರ್ಮಿಕ ಸಾವು.

ಒಂಟಿ ಮನೆಯಲ್ಲಿದ್ದ ಮಹಿಳೆಯ ಕತ್ತು ಕೊಯ್ದು ಕೊಲೆ‌ಮಾಡಿದ ವ್ಯಕ್ತಿ ಬಂಧನ

ರಾಣೆಬೇನ್ನೂರ ನಗರದಲ್ಲಿ ಮಹಿಳೆಯ ಭೀಕರ ಕೊಲೆ, ಕಾರಣ ನಿಗೂಢ…!

ಹೊಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವ ರೈತ ಸಾವು

ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ಎರಡು ವರ್ಷದಲ್ಲಿ ಎಷ್ಟು ಬಾರಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಗೆ ಹಾಜರಾಗದ ದಲಿತ ವಿರೋಧಿ ಶಾಸಕ; ಮಾಜಿ ಶಾಸಕ ಅರುಣಕುಮಾರ ಪೂಜಾರ.

ರಾಣೆಬೇನ್ನೂರು: ಶಾಸಕರಾಗಿ ಎರಡು ವರ್ಷದಲ್ಲಿ ಎಷ್ಟು ಬಾರಿ ರಾಣೆಬೇನ್ನೂರು ನಗರದಲ್ಲಿ ನಡೆದ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿಗೆ ಹಾಗೂ ಅಹಿಂದ ನಾಯಕರ ಜಯಂತಿಗೆ ಹಾಜರಾಗಿಪಾ ಎಂದು ಮಾಜಿ‌ ಶಾಸಕ ಅರುಣಕುಮಾರ ಪೂಜಾರ ಅವರು ಶಾಸಕ ಪ್ರಕಾಶ ಕೋಳಿವಾಡರವರಿಗೆ ಪ್ರಶ್ನೆ ಮಾಡಿದರು.

ನಗರದ ಭಾಜಪ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಕಳೆದ ಎರಡು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಶಾಸಕನ ಆದೇಶ ಮೇರೆಗೆ ದಲಿತ ಹಾಗೂ ಅಹಿಂದ ಸಮುದಾಯದ ವಿರೋಧಿ ಮಾಜಿಶಾಸಕ ಎಂದು ಪೋಸ್ಟ್ ಹಾಕುತ್ತಿದ್ದಾರೆ. ಆದರೆ ಅವರಿಗೆ ನಿಜವಾದ ದಲಿತ ವಿರೋಧಿ ಯಾರು ಎಂಬುದನ್ನು ಸ್ವಲ್ಪ ಅವರ ಮಾಡಿರುವು ಕೆಲಸದ ಬಗ್ಗೆ ಗಮನಹರಿಸಿ ನೋಡಲಿ. ತಾಲೂಕಿನಲ್ಲಿ ಎರಡು ಬಾರಿ ಅಂಬೇಡ್ಕರ್ ಜಯಂತಿ ನಡೆದಿದೆ ಆದರೆ ನೀವು ಎಷ್ಟು ಬಾರಿ ಹಾಜರಾಗಿದ್ದಿರಿ ಎಂಬುದನ್ನು ಇಲ್ಲಿ ನೋಡಿ ಎಂದು ಅಂಬೇಡ್ಕರ್ ಜಯಂತಿಯ ಭಾವಚಿತ್ರ ತೋರಿಸಿ ಆಕ್ರೋಶ ವ್ಯಕ್ತಪಡಿಸಿದರು.

ಇನ್ನೂ ತಾಲೂಕಿನಲ್ಲಿ ಅಹಿಂದ ಸಮುದಾಯಕ್ಕೆ ನಾನು ಏನು ಮಾಡಿದ್ದೇನೆ ಎಂಬುದನ್ನು ಚರ್ಚೆ ಮಾಡಬೇಕಾರೆ ನೀವು ನೇರಾನೇರ ವೇದಿಕೆ ಸಿದ್ದತೆ ಮಾಡಿಕೊಂಡು ಚರ್ಚೆ ಮಾಡೋಣ ಬನ್ನಿ. ಅದನ್ನು ಬಿಟ್ಟು ಎಲ್ಲೊ ದೂರು ಕೂತು ಚಿಲ್ಲರ ರಾಜಕಾರಣ ಮಾಡೋಕೆ ನಮಗೆ ಬರಲ್ಲ ಎಂದು ಶಾಸಕರಿಗೆ ಮಾತಿನಲ್ಲಿ ತಿವಿದರು.

ನಗರಸಭೆ ಸಾಮಾನ್ಯ ಸಭೆಗೆ ಬಿಜೆಪಿ ಸದಸ್ಯರು ಗೈರಾಗಿದ್ದರ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಸುಮಾರು ಐವತ್ತು ವರ್ಷದಿಂದ ಬಿಜೆಪಿ ಕಾರ್ಯಾಲಯ ಎಂದು ಗುರುತಿಸಿಕೊಂಡು ಬಂದಿದೆ. ಆದರೆ ದ್ವೇಷದ ರಾಜಕಾರಣದಿಂದ ಕಾಂಗ್ರೆಸ್ ಅಧ್ಯಕ್ಷರದಿಂದ ನಮ್ಮ ಕಚೇರಿಯ ಮೇಲೆ ನ್ಯಾಯಲಯದಲ್ಲಿ ದಾವೆ ಹೂಡಿದ್ದಾರೆ. ಈ ಹಿನ್ನೆಲೆ ನಮ್ಮ ಎಲ್ಲಾ ಮುಖಂಡರ ಹಾಗೂ ಸದಸ್ಯರ ಒಮ್ಮತದ ಮೇರೆಗೆ ಅಂದು ನಾವು ಸಾಮಾನ್ಯ ಸಭೆಗೆ ಗೈರಾಗಿದ್ದೆವೆ ಹೊರತು ಅಭಿವೃದ್ಧಿಗೆ ಹಿನ್ನಡೆ ಮಾಡಬೇಕು ಎಂಬ ಉದ್ದೇಶ ಇರಲಿಲ್ಲ. ಅದನ್ನೆ ಇವರು ಬಂಡವಾಳ ಮಾಡಿಕೊಂಡು ದಲಿತ ವಿರೋಧಿ, ಅಹಿಂದ ವಿರೋಧಿ ಎಂದು ಜಾಲತಾಣದಲ್ಲಿ ಹಾಕುತ್ತಿದ್ದಾರೆ.
ಅದನ್ನು ಬಿಟ್ಟು ಬೇರೆ ವಿಷಯ ಬಗ್ಗೆ ಚರ್ಚೆ ಮಾಡಲಿ ಎಂದು ಹೇಳಿದರು.

ಇನ್ನೂ ತಾಲೂಕಿನ ತುಂಬ ಅಕ್ರಮ ಚಟುವಟಿಕೆಗಳನ್ನು ನಡೆಸುತ್ತಿದ್ದು, ಅವರಿಂದ ಮಾಮೂಲಿ ಪಡೆದು ಅದನ್ನು ಬೆಂಗಳೂರಿಗೆ ಸಾಗಿಸುತ್ತಿರುವುದು ಈಡಿ ರಾಣೆಬೇನ್ನೂರು ತಾಲೂಕಿನ ಜನತೆಗೆ ತಿಳಿದಿರುವ ವಿಚಾರ. ಅಂತಹ ಅಕ್ರಮ ಚಟುವಟಿಕೆಗಳ ಬಂದ್ ಮಾಡಿಸುವ ರಾಜಕಾರಣ ಮಾಡಲಿ ಅದನ್ನು ಬಿಟ್ಟು ಇಂತಹ ದ್ವೇಷದ ರಾಜಕಾರಣ ಮಾಡಬೇಡಿ. ನಿಮ್ಮ ತಂದೆಯವರ ಕಾಲದ ರಾಜಕಾರಣ ನೋಡಿ ರಾಜಕೀಯ ಮಾಡಿ ಅದನ್ನು ಬಿಟ್ಟು ಹೇಳಿಕೆ ರಾಜಕಾರಣ ಮಾಡಬೇಡಿ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ನಗರ ಘಟಕ ಅಧ್ಯಕ್ಷ ಮಂಜಣ್ಣ ಕಾಟಿ, ನಗರಸಭಾ ಸದಸ್ಯರಾದ ಮಲ್ಲಿಕಾರ್ಜುನ ಅಂಗಡಿ, ಪ್ರಕಾಶ ಪೂಜಾರ, ನಿಂಗರಾಜ ಕೋಡಿಹಳ್ಳಿ, ರೂಪಾ ಚಿನ್ನಿಕಟ್ಟಿ, ಪ್ರಭಾವತಿ ತಿಳವಳ್ಳಿ, ಮಂಜುಳಾ ಹತ್ತಿ, ಪ್ರಕಾಶ ಪೂಜಾರ, ಮುಖಂಡರಾದ ಡಾ.ಬಸವರಾಜ ಕೇಲಗಾರ, ಕೆ.ಶಿವಲಿಂಗಪ್ಪ, ಸಿದ್ದಣ್ಣ ಚಿಕ್ಕಬಿದರಿ, ಚೋಳಪ್ಪ ಕಸವಾಳ ಸೇರಿದಂತೆ ಮತ್ತಿತರರ ಹಾಜರಿದ್ದರು.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!