ರಾಣೆಬೇನ್ನೂರು ಸುದ್ದಿ: ಹೆಣ್ಣು ಮಕ್ಕಳ ಬಗ್ಗೆ ಅಶ್ಲೀಲ ಪದಗಳನ್ನು ಹಾಗೂ ಅವಹೇಳನ ಮಾಡಿದ್ದ ನಟಿ, ಬಿಜೆಪಿ ಮುಖಂಡೆ ಶೃತಿ ಹಾಗೂ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ರಾಣೆಬೇನ್ನೂರು ನಗರದಲ್ಲಿ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದ ತಹಸೀಲ್ದಾರ ಕಚೇರಿ ಮುಂಭಾಗ ಸೇರಿದ ನೂರಾರು ಕಾಂಗ್ರೆಸ್ ಮಹಿಳಾ ಕಾರ್ಯಕರ್ತರು ಶೃತಿ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.
ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳನ್ನು ಟೀಕಿಸುವ ಭರದಲ್ಲಿ ಹೆಣ್ಣು ಮಕ್ಕಳಿಗೆ ಅಶ್ಲೀಲ ಹಾಗೂ ಅವಹೇಳನ ಮಾತುಗಳನ್ನು ಆಡಿದ್ದ ಶೃತಿ ಅವರಿಗೆ ಎಷ್ಟು ಜನ ಗಂಡಂದಿರು ಎಂದು ಮಹಿಳಾ ಕಾಂಗ್ರೆಸ್ ಕಾರ್ಯಕರ್ತರ ಪ್ರಶ್ನಿಸಿದರು.
ಇನ್ನೂ ಮಾಜಿ ಸಿಎಂ ಕುಮಾರಸ್ವಾಮಿ ಅವರು ಈಗಾಗಲೇ ಎರಡು ಮದುವೆಯಾಗಿದ್ದಾರೆ ಆದರೂ ಹೆಣ್ಣು ಮಕ್ಕಳ ಬಗ್ಗೆ ಮಾತನಾಡುವುದು ಕಡಿಮೆ ಮಾಡಿಲ್ಲ. ಅವರಿಗೆ ಹೆಣ್ಣು ಮಕ್ಕಳು ಈ ಚುನಾವಣೆಯಲ್ಲಿ ಸರಿಯಾದ ಬುದ್ದಿ ಕಲಿಸಬೇಕು ಎಂದು ಪೂರ್ಣಿಮಾ ಕೋಳಿವಾಡ ಹೇಳಿದರು.
ನಂತರ ಇವರ ಮೇಲೆ ಚುನಾವಣೆ ಆಯೋಗ ಕ್ರಮ ಕೈಗೊಳ್ಳಬೇಕು ಎಂದು ತಹಸೀಲ್ದಾರ ಮೂಲಕ ಮನವಿ ಸಲ್ಲಿಸಿದರು.

More Stories
16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…
ಹಾವೇರಿ ಜಿಲ್ಲಾಸತ್ರ ಕೋರ್ಟ್ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.
ಸಾಯಿ ಆಸ್ಪತ್ರೆ ವೈದ್ಯನ ಮೇಲೆ ಹಲ್ಲೆ: 8 ಜನರ ವಿರುದ್ಧ ಪ್ರಕರಣ ದಾಖಲು.