16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…

ಹಾವೇರಿ ಜಿಲ್ಲಾಸತ್ರ ಕೋರ್ಟ್‌ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.

ಸಿಎಂ ಕುರ್ಚಿ ಗುದ್ದಾಟದ ವಿಚಾರ…! ಮತ್ತೆ ಗರಂ ಆದ ಸಿಎಂ ಸಿದ್ಧರಾಮಯ್ಯ.

ಸಾಯಿ ಆಸ್ಪತ್ರೆ ವೈದ್ಯನ ಮೇಲೆ ಹಲ್ಲೆ: 8 ಜನರ ವಿರುದ್ಧ ಪ್ರಕರಣ ದಾಖಲು.

ಹಾವೇರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ನಿಂಗರಾಜ ಕೋಡಿಹಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ಸಿದ್ದು ಚಿಕ್ಕಬಿದರಿ ನೇಮಕ.

ನ್ಯಾಯಬೆಲೆ ಅಂಗಡಿ ಪ್ರಾಧಿಕಾರವನ್ನು ವರ್ಗಾವಣೆ ಮಾಡಿಕೊಡಲು ಲಂಚ ಸ್ವೀಕಾರ, ರಾಣೆಬೆನ್ನೂರ ತಹಶೀಲ್ದಾರ ಕಛೇರಿಯ ಆಹಾರ ನಿರೀಕ್ಷಕ ಬಂಧನ.

ಉಚಿತ ಚಿಕನ್ ಬಿರಿಯಾನಿ ಬೇಕಾ,‌ ಆಗಾದ್ರೆ ಬಸ್ ನಿಲ್ದಾಣಕ್ಕೆ ಬನ್ನಿ.

ಅಂಬೇಡ್ಕರ್, ಗಾಂಧಿ ಹೆಸರು ಅಳಿಸಲು ಹೊರಟಿರುವ ವಿರುದ್ಧ ನನ್ನ ಹೋರಾಟ; ಸಚಿವ ಸತೀಶ ಜಾರಕಿಹೊಳಿ

ನಗರಸಭೆ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಜಿಲ್ಲಾಧಿಕಾರಿ.

ತವರ ಮನೆಗೆ ಹೆಂಡತಿ ಹೋದಾಗ ಎರಡನೇ ಮದುವೆಯಾದ ಭೂಪ ಜೈಲು ಪಾಲು…!

ದಾರಿ ತಪ್ಪಿ ಬಂದಿದಲ್ಲ, ದಾರಿ ಹುಡಕಿಕೊಂಡು ಬಂದೇನಿ; ಗಜರಾಜನ ಕೂಗಾಟ

ತಾಯಿ ಮೇಲೆ ಹಲ್ಲೆ ಮಾಡಿದ್ರೆ ಹುಷಾರ…! ಪುತ್ರ, ಸೊಸೆಗೆ ಜೈಲು ಪಾಲು

ನಿರ್ಮಾಣ ಹಂತದ ಟ್ಯಾಂಕನಿದ್ದು ಬಿದ್ದು ಕಾರ್ಮಿಕ ಸಾವು.

ಒಂಟಿ ಮನೆಯಲ್ಲಿದ್ದ ಮಹಿಳೆಯ ಕತ್ತು ಕೊಯ್ದು ಕೊಲೆ‌ಮಾಡಿದ ವ್ಯಕ್ತಿ ಬಂಧನ

ರಾಣೆಬೇನ್ನೂರ ನಗರದಲ್ಲಿ ಮಹಿಳೆಯ ಭೀಕರ ಕೊಲೆ, ಕಾರಣ ನಿಗೂಢ…!

ಹೊಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವ ರೈತ ಸಾವು

ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ನಗರದಲ್ಲಿ NDA ವತಿಯಿಂದ ಕಾಂಗ್ರೆಸ್ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ.

ರಾಣೆಬೇನ್ನೂರ: ರೈತರ ಬೆಳೆಗಳಿಗೆ ಬೆಂಬಲ ಬೆಲೆ. ಬೆಳಹಾನಿ ಪರಿಹಾರವನ್ನು ರೈತರಿಗೆ ನೀಡುವಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ಕ್ರಮ ಖಂಡಿಸಿ ಬಿಜೆಪಿ, ಜೆಡಿಎಸ್ ಪಕ್ಷ ಹಾಗೂ ರೈತರು ನಗರದಲ್ಲಿ ಸೋಮವಾರ ಬೃಹತ್ ಪ್ರತಿಭಟನೆ ನಡೆಸಿದರು.

ನಗರದ ಕೆಇಬಿ ಗಣೇಶ ದೇವಸ್ಥಾನದಿಂದ ಎತ್ತಿನ ಚಕ್ಕಡಿ ಮೂಲಕ ಆರಂಭವಾದ ಪ್ರತಿಭಟನೆ ಮೆರವಣಿಗೆ ಬಸ್ ನಿಲ್ದಾಣ, ಹಲಗೇರಿ ವೃತ್ತ, ಕುರಬಗೇರಿ ಕ್ರಾಸ್ ಮೂಲಕ ತಹಶಿಲ್ದಾರ ಕಚೇರಿವರಗೆ ನಡೆಯಿತು.

ಮಾಜಿ ಶಾಸಕ ಅರುಣಕುಮಾರ ಪೂಜಾರ ಮಾತನಾಡಿ, ಕಾಂಗ್ರೆಸ್ ಸರ್ಕಾರ ರಾಜ್ಯದ ರೈತನಿಗೆ ನಮ್ಮದಿ ಇಲ್ಲದಂತೆ ಮಾಡಿದೆ. ರೈತನು ತಾನು ಬೆಳೆದ ಮೆಕ್ಕೆಜೋಳ ಹಾಗೂ ಕಬ್ಬಿಗೆ ಬೆಂಬಲ ಬೆಲೆ ನೀಡಬೇಕಾಗಿದೆ. ರೈತರ ಹೋರಾಟಕ್ಕೆ ಮಣಿದ ಸರ್ಕಾರ ಬೆಳಗಾವಿ ಭಾಗದಲ್ಲಿ ಕಬ್ಬು ಬೆಳಗಾರರಿಗೆ 3300ರೂ. ನೀಡಲಾಗುತ್ತಿದೆ. ಹೀಗಾಗಿ ರಾಜ್ಯದ ಎಲ್ಲಾ ಕಬ್ಬು ಬೆಳೆಗಾರರಿಗೆ 3500ರೂ, ಬೆಂಬಲ ಬೆಲೆ ನೀಡಬೇಕು. ಈ ಭಾಗದಲ್ಲಿ ಭತ್ತ ಬೆಳೆಗಾರರು ಹೆಚ್ಚಾಗಿದ್ದು, ಈಗಾಗಲೇ ಕೇಂದ್ರ ಸರ್ಕಾರ ಬೆಂಬಲ ನೀಡಿದೆ. ಆದ್ದರಿಂದ ರಾಜ್ಯ ಸರ್ಕಾರವು ಭತ್ತಕ್ಕೆ ಹೆಚ್ಚಿನ ಬೆಲೆ ನೀಡಬೇಕು ಎಂದು ಆಗ್ರಹಿಸಿದರು.

ಜೆಡಿಎಸ್ ಮುಖಂಡ ಮಂಜುನಾಥ ಗೌಡಶಿವಣ್ಣನವರ ಮಾತನಾಡಿ, ರಾಜ್ಯದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಸರ್ಕಾರ ಇದ್ದ ಸಮಯದಲ್ಲಿ ರಾಜ್ಯದ ರೈತರ ಸಾಲಮನ್ನಾ ಮಾಡುವ ಮೂಲಕ ರಾಜ್ಯದ ರೈತರ ಜೀವನ ಉಳಿಸಿದವರು. ಆದರೆ ಕಾಂಗ್ರೆಸ್ ಸರ್ಕಾರ ರೈತರನ್ನು ಸಂಪೂರ್ಣವಾಗಿ ಕಡೆಗಣಿಸಿದ್ದು ರಾಜ್ಯದ ರೈತರಿಗೆ ಅನ್ಯಾಯ ಮಾಡುತ್ತಿದೆ ಎಂದು ಹೇಳಿದರು.
ಕೂಡಲೇ ರಾಜ್ಯ ಸರ್ಕಾರ ರೈತರಿಗೆ ಬೆಂಬಲ ಬೆಲೆ ಹಾಗೂ ಪರಿಹಾರ ನೀಡಬೇಕು ಎಂದು ತಿಳಿಸಿದರು.

ನಂತರ ತಹಶಿಲ್ದಾರರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ರಾಜ್ಯ ಘಟಕದ ಉಪಾಧ್ಯಕ್ಷ ಡಾ.ಬಸವರಾಜ ಕೇಲಗಾರ, ನಗರ ಘಟಕದ ಅಧ್ಯಕ್ಷ ಮಂಜುನಾಥ ಕಾಟಿ, ಗ್ರಾಮೀಣ ಘಟಕದ ಅಧ್ಯಕ್ಷ ಸುಭಾಶ ಶಿರಗೇರಿ, ಚೋಳಪ್ಪ ಕಸವಾಳ, ಸಂತೋಷಕುಮಾರ ಪಾಟೀಲ, ಕೆ.ಶಿವಲಿಂಗಪ್ಪ, ಎಸ್.ಎಸ್. ರಾಮಲಿಂಗಣ್ಣನವರ, ಭಾರತಿ ಜಂಬಗಿ, ನಿಂಗರಾಜ ಕೋಡಿಹಳ್ಳಿ, ಪ್ರಕಾಶ ಪೂಜಾರ, ಸಿದ್ದಪ್ಪ ಚಿಕ್ಕಬಿದರಿ, ಮೌನೇಶ ತಳವಾರ, ಮಲ್ಲಿಕಾರ್ಜುನ ಅಂಗಡಿ, ಸೇರಿದಂತೆ ಮತ್ತಿತರರು ಇದ್ದರು. ಎ.ಬಿ.ಪಾಟೀಲ ಮತ್ತಿತರಿದ್ದರು.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!