ರಾಣೆಬೇನ್ನೂರು: ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯಡಿಯಲ್ಲಿ ನಡೆಯುತ್ತಿರುವ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ ರಾಣೀಬೆನ್ನೂರು ಮತ್ತು ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ ನೂಕಾಪೂರ , 1 ರಿಂದ 5 ನೇ ತರಗತಿಗಳಲ್ಲಿ ಖಾಲಿ ಇರುವ ಹಾಗೂ ಪರಿಶಿಷ್ಟ ಪಂಗಡದ ಮಹರ್ಷಿ ವಾಲ್ಮೀಕಿ ಆಶ್ರಮ ಶಾಲೆ ಮಾಕನೂರು 2024-25 ನೇ ಸಾಲಿನಲ್ಲಿ 1 ರಿಂದ 7 ತರಗತಿಗಳಲ್ಲಿ ಖಾಲಿ ಇರುವ ಸ್ಥಳಗಳಿಗೆ ಅರ್ಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಇತರೇ ಹಿಂದುಳಿದ ವರ್ಗಗಳ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಂದ ವಸತಿ ಶಾಲೆಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಪ್ರವೇಶ ಬಯಸುವ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಕಛೇರಿ ಸಮಯದಲ್ಲಿ ಕಾರ್ಯಾಲಯದಿಂದ, ವಸತಿ ಶಾಲೆಗಳಿಗೆಂದ ಅರ್ಜಿ ಪಡೆದುಕೊಂಡು ಅಗತ್ಯ ದಾಖಲೆ ಲಗತ್ತಿಸಿ ಸಂಬಂಧಿಸಿದ ಮುಖ್ಯೋಪಾಧ್ಯಾಯರು, ಪ್ರಾಂಶುಪಾಲರಿಂದ ದೃಢೀಕರಿಸಿ ಕಾರ್ಯಾಲಯಕ್ಕೆ ಸಲ್ಲಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳನ್ನು ಸೀಟುಗಳನ್ನು ಲಭ್ಯತೆಯನುಸಾರ ಪ್ರವೇಶ ಒದಗಿಸಲಾಗುವುದು. ಅರ್ಜಿ ಸಲ್ಲಿಸಲು ಮೇ 31 ಕೊನೆಯ ದಿನವಾಗಿದ್ದು. ಹೆಚ್ಚಿನ ಮಾಹಿತಿಗಾಗಿ ಶ್ರೀ.ಗಿರೀಶ ಡಿ ಮುಡಿಯಮ್ಮನವರ ಸಹಾಯಕ ನಿರ್ದೇಶಕರು (ಗ್ರೇಡ್-1) ಸಮಾಜ ಕಲ್ಯಾಣ ಇಲಾಖೆ ರಾಣೀಬೆನ್ನೂರು ಇವರನ್ನು ಸಂಪರ್ಕಿಸಲು ಸೂಚಿಸಿದೆ. ಹಾಗೂ ದೂರವಾಣಿ ಸಂಖ್ಯೆ 08373-297436 ಇಲ್ಲಿಗೆ ಸಂಪರ್ಕಿಸಲು ಕೋರಿದೆ.
More Stories
ಇಸ್ವತ್ತು ಉತಾರ ನೀಡಲು ಲಂಚ ಪಡೆಯುತ್ತಿದ್ದ ಪಿಡಿಓ, ಉಪಾಧ್ಯಕ್ಷ ಸೇರಿ ಮೂರ ಜನ ಗ್ರಾಪಂ ಸದಸ್ಯರ ಬಂಧನ.
ಸ್ಥಾಯಿ ಸಮಿತಿ ರಚನೆ ನಗರಸಭೆಯಲ್ಲಿ ಕೋಲಾಹಲ ವಿರೋಧ ಪಕ್ಷದ ಸದಸ್ಯರಿಂದ ನ್ಯಾಯಾಲಯದ ಮೋರೆ ಸಾಧ್ಯತೆ
ಮೈಕ್ರೋ ಫೈನಾನ್ಸ್ ನವರ ಕಿರುಕುಳ ಕೊಟ್ರೆ ಕೇಸ್ ಹಾಕ್ತೇವಿ ಶಾಸಕ ಪ್ರಕಾಶ ಕೋಳಿವಾಡ.