ರಾಣೆಬೇನ್ನೂರು: ತಿರುಪತಿಗೆ ಹೋಗುತ್ತಿದ್ದ ಕಾರು ಏಕಾಏಕಿ ನಸುಕಿನಜಾವ ಪಲ್ಟಿಯಾಗಿ ನಾಲ್ವರು ಸ್ಥಳದಲ್ಲಿ ಸಾವನ್ನಪ್ಪಿದ್ದು ,ಆರು ಜನರಿಗೆ ಗಂಭೀರವಾಗಿ ಗಾಯಗೊಂಡ ಘಟನೆ ರಾಣೇಬೆನ್ನೂರು ತಾಲೂಕಿನ ಹಲಗೇರಿ ಬೈಪಾಸ್ ಬಳಿ ನಡೆದಿದೆ.

ದೇವರ ದರ್ಶನಕ್ಕೆಂದು ತಿರುಪತಿಗೆ ತೆರಳುತ್ತಿದ್ದ ಹಾವೇರಿ ನಗರದ ಸಮಗಂಡಿ ಮತ್ತು ಬಾರ್ಕಿ ಎಂಬ ಕುಟುಂಬಗಳು ಹೋಗುತ್ತಿದ್ದರು ಎನ್ನಲಾಗಿದೆ.
1)ಸುರೇಶ ವೀರಪ್ಪ ಜಾಡಿ
2)ಐಶ್ವರ್ಯ ಈರಪ್ಪ ಬಾರ್ಕಿ
3)ಚೇತನಾ ಪ್ರಭುರಾಜ ಸಮಗಂಡಿ
4) ಪವಿತ್ರಾ ಪ್ರಭುರಾಜ ಸಮಗಂಡಿ,ಮೃತ ದುರ್ದೈವಿಗಳಾಗಿದ್ದಾರೆ
1) ಚನ್ನವೀರಪ್ಪ ಜಾಡಿ, 2) ಸಾವಿತ್ರಾ ಜಾಡಿ, 3)ವಿಕಾಶ ಹೊನ್ನಪ್ಪ ಬಾರ್ಕಿ, 4)ಹೊನ್ನಪ್ಪ ನೀಲಪ್ಪ ಬಾರ್ಕಿ, 5) ಪ್ರಭುರಾಜ ಈರಪ್ಪ ಸಮಗಂಡಿ, 6) ಗೀತಾ ಹೊನ್ನಪ್ಪ ಬಾರ್ಕಿ ಇವರು ಗಂಭೀರವಾಗಿ ಗಾಯಗೊಂಡಿದ್ಧಾರೆ.
ಗಾಯಗೊಂಡ ಗಾಯಾಳುಗಳನ್ನು ದಾವಣಗೆರೆ ಆಸ್ಪತ್ರೆಗೆ ದಾಖಲು ಮಾಡು ಚಿಕಿತ್ಸೆ ನೀಡಲಾಗುತ್ತಿದೆ.
ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು FSL ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ರಾಣೆಬೇನ್ನೂರು ಸಂಚಾರಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

More Stories
ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.
ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.
ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.