ತುಂಗಭದ್ರಾ ನದಿಯಲ್ಲಿ 15 ಕಿ.ಮೀ. ಈಜಿ ಪ್ರಾಣ ಉಳಿಸಿಕೊಂಡ ಮೈಸೂರಿನ ವೃದ್ಧ…!

ಮೂರು ಬೈಕಗಳ ನಡುವೆ ಭೀಕರ ಅಪಘಾತ ಒರ್ವ ಯುವಕ ಸಾವು, ಮೂವರು ಗಂಭೀರ.

ಆಟೋ ಚಾಲಕರಿಗೆ ಸನ್ಮಾನ ಸಮಾರಂಭ ಮಾಡಲಿರುವ “ಪರಮೇಶಣ್ಣ ಗೂಳಣ್ಣನವರ”

ಯಾವ ಸಮಾಜಕ್ಕೂ, ಜಾತಿಗೂ ತಾರತಮ್ಯ ಮಾಡಲ್ಲ ಶಾಸಕ‌ ಪ್ರಕಾಶ ಕೋಳಿವಾಡ,

ನಗರದ ಬಳ್ಳಾರಿ ಕಲ್ಯಾಣ ಮಂಟಪದಲ್ಲಿ ಐದು ದಿನಗಳ ಕಾಲ ಹಲಸು-ಮಾವು‌‌ ಮೇಳ.

ಹಾವೇರಿ ನೂತನ ಎಸ್ಪಿಯಾಗಿ ಮಹಿಳಾ ಅಧಿಕಾರಿ, ಯಾರು ಅವರು!

ರಾಣೆಬೆನ್ನೂರ ನಗರದಲ್ಲಿ ನಕಲಿ ರಸಗೊಬ್ಬರ ಪತ್ತೆ, ವಶಪಡಿಸಿಕೊಂಡ ಕೃಷಿ ಅಧಿಕಾರಿಗಳು.

ಯಕಲಾಸಪುರ ಗ್ರಾಮ ಚಿರತೆಗಳ ತಾಣ, ಹೆಣ್ಣು ಚಿರತೆ ಮರಿಗಳಿಗೆ ಜನ್ಮ ನೀಡಿರುವ ಹಾಕಿರುವ ಶಂಕೆ…

ಬಿರ್ಲಾ ಕಂಪನಿಯಲ್ಲಿ ಕೆಲಸ ಮಾಡುವಾಗ ಹೃದಯಾಘಾತದಿಂದ ನೌಕರ ಸಾವು.

ಸಂತೋಷಕುಮಾರ ಪಾಟೀಲಗೆ Z ಕನ್ನಡ ನ್ಯೂಸ್ ವತಿಯಿಂದ ಯುವರತ್ನ ಪ್ರಶಸ್ತಿ.

ಸ್ವಚ್ಛ ಕೈಯಿಂದ ಕೆಲಸ ಮಾಡಿ‌ ಇಲ್ಲ ರಾಜೀನಾಮೆ ಕೊಟ್ಟು ಹೊರಗೆ ಹೋಗಿ; ಲೋಕಾಯುಕ್ತ ಅಧಿಕಾರಿಗಳು.

ನಾಳೆ ನಗರದಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಅಹವಾಲು ಸ್ವೀಕಾರ..

ಇಸ್ಪೀಟು ಅಡ್ಡೆ ಮೇಲೆ ಹಲಗೇರಿ ಪೋಲಿಸರ ದಾಳಿ, ಹತ್ತು ಜನರು ಮೇಲೆ ಪ್ರಕರಣ

ಬೆಟ್ಟ ಮಲ್ಲಪ್ಪನ ಗುಡ್ಡ ಇನ್ನೂ ಪ್ರವಾಸಿ ತಾಣ ಸಚಿವ ಹೆಚ್.ಕೆ.ಪಾಟೀಲ.

ರಾಹುಲ್ ಗಾಂಧಿ ಖಾಲಿ ಸಂವಿಧಾನ‌ ಬುಕ್ ಇಟ್ಟಕೊಂಡು ಓಡಾಡುತ್ತಿದ್ದಾರೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ನನ್ನ ವಿರುದ್ಧ ಆರೋಪ‌ ಮಾಡಿರುವರ ಮೇಲೆ ಮಾನನಷ್ಟ ಮೊಕದ್ದಮೆ ಹಾಕುವೆ ಸಿದ್ಧಾರೂಢ‌ ಮಠದ ಧರ್ಮದರ್ಶಿ ಸಿದ್ದನಗೌಡ ಪಾಟೀಲ..

ಕಳಪೆ ಬೀಜ ಮಾರಾಟ ಮಾಡಿದ್ದ ಐದು ಅಂಗಡಿಗೆ ಬೀಗ ಮುದ್ರೆ…!

ಗುಡಗೂರು ಗ್ರಾಮದಲ್ಲಿ ವೃದ್ಧನ ಮೇಲೆ ಹರಿದ ಖಾಸಗಿ ಶಾಲೆಯ ಬಸ್.

ತಾಲೂಕಿನ ಒಂದೇ ದಿನ ಮೂರು ಸಾವಿನ ಪ್ರಕರಣಗಳು ದಾಖಲು..! ಘಟನೆಗಳು ಎಲ್ಲೇಲಿ?

ರಾಣೆಬೇನ್ನೂರು ನಕಲಿ ಬೀಜ ಮಾರಾಟ ಕೇಂದ್ರವಾಗಬಾರದು ಕೃಷಿ ಅಧಿಕಾರಿಗಳಿಗೆ ಶಿವಾನಂದ ಪಾಟೀಲ ಎಚ್ಚರಿಕೆ.

ಡಿಸಿ ಸಾಹೇಬ್ರೆ, ಶಾಸಕರೆ ನಮಗೆ ಕಾಡುಹಂದಿಗಳ ಕಾಟ ಸಾಕಾಗಿದೆ, ಪರಿಹಾರ ಕೋಡ್ರಿ ಜನಸ್ಪಂದನ ಕಾರ್ಯಕ್ರಮದಲ್ಲಿ ರೈತನ ಅಳಲು..!

oplus_0

ರಾಣೆಬೇನ್ನೂರು: ಮಳೆಯಿಲ್ಲದ ಸಮಯದಲ್ಲಿ  ಸುಮಾರು ಐವತ್ತು ಸಾವಿರ ಖರ್ಚು ಮಾಡಿ ಮೆಕ್ಕೆಜೋಳ ಬಿತ್ತನೆ ಮಾಡಿದ್ದೇನಿ ಆದರೆ ಅರಣ್ಯ ಇಲಾಖೆಯ ಕಾಡು ಮೃಗಗಳ ಹೊಲ ನಾಶ ಮಾಡಿ ಮೆಕ್ಕೆಜೋಳ ತಿಂದು ನನಗೆ ನಷ್ಟ ಉಂಟು ಮಾಡಿದ್ದು,  ಪರಿಹಾರ ನೀಡಬೇಕು ಎಂದು ಚಳಗೇರಿ ಗ್ರಾಮದ ರೈತನೊರ್ವ ಡಿಸಿ‌ ಹಾಗೂ ಶಾಸಕರ ಮುಂದೆ ಅಳಲು ತೋಡಿಕೊಂಡರು.

ರಾಣೆಬೇನ್ನೂರು ನಗರದ ತಾಪಂ ಸಭಾಭವನದಲ್ಲಿ ಸರ್ಕಾರದ ವತಿಯಿಂದ ಜಿಲ್ಲಾಧಿಕಾರಿ ಹಾಗೂ ಶಾಸಕ ಪ್ರಕಾಶ ಕೋಳಿವಾಡ ನೇತೃತ್ವದಲ್ಲಿ ವಿವಿಧ ಇಲಾಖೆಗಳ ವತಿಯಿಂದ ಆಯೋಜಿಸಿದ ಜನ ಸ್ಪಂದನ ಕಾರ್ಯಕ್ರಮದಲ್ಲಿ ಈ ದೃಶ್ಯ ಕಂಡು ಬಂದಿತು.

ಮುಂಗಾರು ಸಮಯದಲ್ಲಿ ಕಾಡಂಚಿನ ಹತ್ತಿರ ಇರುವ ಜಮೀನಿನಲ್ಲಿ ರೈತರು ಸಾಲ ಮಾಡಿ ಬಿತ್ತನೆ ಮಾಡಿರುತ್ತಾರೆ. ಆದರೆ ಕಾಡು ಹಂದಿಗಳು, ಕೃಷ್ಣಮೃಗಗಳು ಬೆಳೆ ನಾಶ ಮಾಡುತ್ತವೆ. ಇದರಿಂದ ರೈತರಿಗೆ ತುಂಬಾ ನಷ್ಟವಾಗುತ್ತಿದ್ದು ನನಗೆ ಅರಣ್ಯ ಇಲಾಖೆಯ ವತಿಯಿಂದ ಪರಿಹಾರ ನೀಡಿಸಿ ಎಂದು ಅಂಗಲಾಚಿದರು. ಇದಕ್ಕೆ ಡಿಸಿ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಕರಿಸಿ ಕೂಡಲೇ ಪರಿಹಾರ ನೀಡಬೇಕು ಜತೆಗೆ ಪ್ರಾಣಿಗಳ ನಿಯಂತ್ರಣಕ್ಕೆ ಮುಂದಾಗಬೇಕು ಎಂದು ಸೂಚಿಸಿದರು.

ಇನ್ನೂ ರಾಣೆಬೇನ್ನೂರು ನಗರದಲ್ಲಿ ನಗರಸಭೆ ಲೆಔಟ್ ನಿರ್ಮಾಣದಲ್ಲಿ ಬಾರಿ ಅಕ್ರಮ ನಡೆಯುತ್ತದೆ. ಇದನ್ನು ಸರಿಪಡಿಸಲು ಅಧಿಕಾರಿಗಳು ಮುಂದಾಗಬೇಕು ಎಂದು ರೈತ ಮುಖಂಡ ಹನುಮಂತಪ್ಪ ಕಬ್ಬಾರ ಮನವಿ ಸಲ್ಲಿಸಿದರು. ತಾಲೂಕಿನ ರಾಹುತನಕಟ್ಟಿ ಗ್ರಾಮದ ರೈತನಿಗೆ ಕೇವಲ ಮೂರು ಎಕರೆ ಇದ್ದರೂ ತಹಸೀಲ್ದಾರ ಕಚೇರಿಯ ಅಧಿಕಾರಿಗಳು ಸಣ್ಣ ಹಿಡುವಳಿದಾರರ ಖಾತೆ ಬದಲಾವಣೆ ಮಾಡಲು ಹಿಂದೇಟು ಹಾಕುತ್ತಿದ್ದಾರೆ ಎಂದು ರೈತ ಶಾಸಕ ಪ್ರಕಾಶ ಕೋಳಿವಾಡ ಅವರಿಗೆ ಮನವಿ ಮಾಡಿದರು. ಕೂಡಲೇ ಶಾಸಕರ ತಹಸೀಲ್ದಾರ ಇಲಾಖೆಯ ಅಧಿಕಾರಿಗಳಿಗೆ ರೈತನ ಸಮಸ್ಯೆ ಬಗೆಹರಿಸಲು ಸೂಚಿಸಿದರು.

ಕಳೆದ ಇಪ್ಪತ್ತು ವರ್ಷಗಳಿಂದ ಪದ್ಮಾವತಿಪುರ ತಾಂಡಾ ಕಂದಾಯ ಗ್ರಾಮವಾಗಿರಲಿಲ್ಲ ಆದರೆ ಇದೀಗ ಕಂದಾಯ ಗ್ರಾಮವಾಗಿದ್ದು, ಕೂಡಲೇ ಹಕ್ಕುಪತ್ರ ನೀಡಬೇಕು ಎಂದು ಗ್ರಾಮಸ್ಥರು ಮನವಿ ಸಲ್ಲಿಸದರು. ನಗರಸಭೆಯ ವ್ಯಾಪ್ತಿಯಲ್ಲಿ ಬರುವ ಲೆಔಟ್ ಗಳಿಗೆ ಸರಿಯಾದ ಸೌಲಭ್ಯಗಳಿಲ್ಲ. ತಾಲೂಕಿನ ಕೆಲವೊಂದು ಬಾರ್ ಗಳಲ್ಲಿ ಸೌಲಭ್ಯಗಳಿಲ್ಲ ಅದನ್ನು ಸರಿಪಡಿಸಬೇಕು ಎಂದು ನಾಗರೀಕರು ಜಿಲ್ಲಾಧಿಕಾರಿಗೆ ಒತ್ತಾಯ ಮಾಡಿದರು.

ಮೇಡ್ಲೆರಿ ಗ್ರಾಮದಲ್ಲಿ ಹತ್ತಾರು ವರ್ಷಗಳಿಂದ ಗುಡಿಸಲು ಹಾಕಿಕೊಂಡಿರುವ ಮನೆಗಳ ತೆರವುಗೊಳಿಸಲಾಗಿದ್ದು, ಕುಟುಂಬಗಳು ಬೀದಿಗೆ ಬಿದ್ದಿದ್ದು ನಮಗೆ ವಾಸಿಸಲು ಜಾಗ ನೀಡಬೇಕು ಎಂದು ಹತ್ತಾರು ಮಹಿಳೆಯರು ಅಳಲು ತೊಡಿಕೊಂಡರು. ಮೆಡ್ಲೇರಿ ಗ್ರಾಮದಲ್ಲಿ ಜಲ್ ಜೀವನ ಮಷಿನ್ ಅಡಿ ಕೆಲಸ ಕಳಪೆಯಾಗಿದ್ದು, ಅದನ್ನು ಸರಿಪಡಿಸಲು ಡಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜನಸ್ಪಂದನ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ರಘುನಂದನ ಮೂರ್ತಿ, ಉಪವಿಭಾಗಧಿಕಾರಿ ಚನ್ನಬಸಪ್ಪ, ಸಿಇಒ ಅಕ್ಷಯ ಶ್ರೀಧರ, ತಹಸೀಲ್ದಾರ ಗುರುಬಸವರಾಜ, ಇಓ ಸುಮಲತಾ, ಬಿಇಓ ಎಂ.ಎಚ್.ಪಾಟೀಲ, ಡಿಎಸ್ಪಿ ಡಾ.ಗಿರೀಶ್ ಬೋಜಣ್ಣನವರ ಸೇರಿದಂತೆ ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು ಹಾಜರಿದ್ದರು.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!