ತಾಪಂ ಸಾಮಾನ್ಯ ಸಭೆಗೆ ತಹಸೀಲ್ದಾರ ಗೈರು, ನೋಟಿಸ್ ನೀಡುವಂತೆ ಉಪಕಾರ್ಯದರ್ಶಿ ಸೂಚನೆ

ತುಂಗಭದ್ರಾ ನದಿಯಲ್ಲಿ 15 ಕಿ.ಮೀ. ಈಜಿ ಪ್ರಾಣ ಉಳಿಸಿಕೊಂಡ ಮೈಸೂರಿನ ವೃದ್ಧ…!

ಮೂರು ಬೈಕಗಳ ನಡುವೆ ಭೀಕರ ಅಪಘಾತ ಒರ್ವ ಯುವಕ ಸಾವು, ಮೂವರು ಗಂಭೀರ.

ಆಟೋ ಚಾಲಕರಿಗೆ ಸನ್ಮಾನ ಸಮಾರಂಭ ಮಾಡಲಿರುವ “ಪರಮೇಶಣ್ಣ ಗೂಳಣ್ಣನವರ”

ಯಾವ ಸಮಾಜಕ್ಕೂ, ಜಾತಿಗೂ ತಾರತಮ್ಯ ಮಾಡಲ್ಲ ಶಾಸಕ‌ ಪ್ರಕಾಶ ಕೋಳಿವಾಡ,

ನಗರದ ಬಳ್ಳಾರಿ ಕಲ್ಯಾಣ ಮಂಟಪದಲ್ಲಿ ಐದು ದಿನಗಳ ಕಾಲ ಹಲಸು-ಮಾವು‌‌ ಮೇಳ.

ಹಾವೇರಿ ನೂತನ ಎಸ್ಪಿಯಾಗಿ ಮಹಿಳಾ ಅಧಿಕಾರಿ, ಯಾರು ಅವರು!

ರಾಣೆಬೆನ್ನೂರ ನಗರದಲ್ಲಿ ನಕಲಿ ರಸಗೊಬ್ಬರ ಪತ್ತೆ, ವಶಪಡಿಸಿಕೊಂಡ ಕೃಷಿ ಅಧಿಕಾರಿಗಳು.

ಯಕಲಾಸಪುರ ಗ್ರಾಮ ಚಿರತೆಗಳ ತಾಣ, ಹೆಣ್ಣು ಚಿರತೆ ಮರಿಗಳಿಗೆ ಜನ್ಮ ನೀಡಿರುವ ಹಾಕಿರುವ ಶಂಕೆ…

ಬಿರ್ಲಾ ಕಂಪನಿಯಲ್ಲಿ ಕೆಲಸ ಮಾಡುವಾಗ ಹೃದಯಾಘಾತದಿಂದ ನೌಕರ ಸಾವು.

ಸಂತೋಷಕುಮಾರ ಪಾಟೀಲಗೆ Z ಕನ್ನಡ ನ್ಯೂಸ್ ವತಿಯಿಂದ ಯುವರತ್ನ ಪ್ರಶಸ್ತಿ.

ಸ್ವಚ್ಛ ಕೈಯಿಂದ ಕೆಲಸ ಮಾಡಿ‌ ಇಲ್ಲ ರಾಜೀನಾಮೆ ಕೊಟ್ಟು ಹೊರಗೆ ಹೋಗಿ; ಲೋಕಾಯುಕ್ತ ಅಧಿಕಾರಿಗಳು.

ನಾಳೆ ನಗರದಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಅಹವಾಲು ಸ್ವೀಕಾರ..

ಇಸ್ಪೀಟು ಅಡ್ಡೆ ಮೇಲೆ ಹಲಗೇರಿ ಪೋಲಿಸರ ದಾಳಿ, ಹತ್ತು ಜನರು ಮೇಲೆ ಪ್ರಕರಣ

ಬೆಟ್ಟ ಮಲ್ಲಪ್ಪನ ಗುಡ್ಡ ಇನ್ನೂ ಪ್ರವಾಸಿ ತಾಣ ಸಚಿವ ಹೆಚ್.ಕೆ.ಪಾಟೀಲ.

ರಾಹುಲ್ ಗಾಂಧಿ ಖಾಲಿ ಸಂವಿಧಾನ‌ ಬುಕ್ ಇಟ್ಟಕೊಂಡು ಓಡಾಡುತ್ತಿದ್ದಾರೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ನನ್ನ ವಿರುದ್ಧ ಆರೋಪ‌ ಮಾಡಿರುವರ ಮೇಲೆ ಮಾನನಷ್ಟ ಮೊಕದ್ದಮೆ ಹಾಕುವೆ ಸಿದ್ಧಾರೂಢ‌ ಮಠದ ಧರ್ಮದರ್ಶಿ ಸಿದ್ದನಗೌಡ ಪಾಟೀಲ..

ಕಳಪೆ ಬೀಜ ಮಾರಾಟ ಮಾಡಿದ್ದ ಐದು ಅಂಗಡಿಗೆ ಬೀಗ ಮುದ್ರೆ…!

ಗುಡಗೂರು ಗ್ರಾಮದಲ್ಲಿ ವೃದ್ಧನ ಮೇಲೆ ಹರಿದ ಖಾಸಗಿ ಶಾಲೆಯ ಬಸ್.

ತಾಲೂಕಿನ ಒಂದೇ ದಿನ ಮೂರು ಸಾವಿನ ಪ್ರಕರಣಗಳು ದಾಖಲು..! ಘಟನೆಗಳು ಎಲ್ಲೇಲಿ?

ನಾಟಕ ಅಕಾಡಮಿಗೆ ಹೆಸರು ತನ್ನಿ, ಈ ಭಾಗಕ್ಕೆ ಅವಕಾಶ ನೀಡಿ – ಜ್ಯೋತಿ ಮನವಿ

 

ಕೊಪ್ಪಳ : ಕಾಂಗ್ರೆಸ್ ಸರಕಾರದಲ್ಲಿ ಉತ್ತರ ಕರ್ನಾಟಕದ ಬಹುತೇಕ ಕವಿ, ಕಲಾವಿದ, ಸಾಹಿತಿ, ಚಿಂತಕರಿಗೆ ವಿವಿಧ ಅಕಾಡಮಿಗಳಲ್ಲಿ ಅವಕಾಶ ನೀಡುವ ಮೂಲಕ ಉತ್ತರ ಕರ್ನಾಟಕದ ಬಹುದಿನಗಳ ಆಸೆಗೆ ನೀರೆರೆದಿದ್ದಾರೆ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಗ್ಯಾರಂಟಿ ಪ್ರಾಧಿಕಾರ ಸದಸ್ಯೆ ಜ್ಯೋತಿ ಎಂ. ಗೊಂಡಬಾಳ ಸಂತಸ ವ್ಯಕ್ತಪಡಿಸಿದ್ದಾರೆ.

ಅವರು ನಗರದಲ್ಲಿ ನಾಟಕ ಅಕಾಡಮಿಗೆ ಸದಸ್ಯರಾಗಿ ನೇಮಕಗೊಂಡ ಸಮೀಪದ ಬಹೂದ್ದರಬಂಡಿ ಗ್ರಾಮದ ಹಿರಿಯ ರಂಗಕರ್ಮಿ, ಸಂಘಟಕ ಚಾಂದಪಾಶಾ ಕಿಲ್ಲೇದಾರ್ ಅವರನ್ನು ಸನ್ಮಾನಿಸಿ ಅಭಿನಂದಿಸಿ ಮಾತನಾಡಿದರು.

ಚಾಂದಪಾಶಾ ಕಿಲ್ಲೆದಾರ್ ಅವರು ೧೮ನೇ ವರ್ಷದಲ್ಲಿಯೇ ಗುರಿ ಸಾಧಿಸಿದ ಗಂಡು ನಾಟಕದಲ್ಲಿ ಮೊದಲ ಬಾರಿಗೆ ರಂಗಪ್ರವೇಶ ಮಾಡಿದರು, ನಂತರ ೧೯೮೨ ರಲ್ಲಿ ಆಶಾ ಲತಾ ನಾಟಕದಲ್ಲಿ ಕಥಾ ನಾಯಾಕನ ಪಾತ್ರ ಮಾಡಿದ್ದು ಅದು ಸುಮಾರು ೪೭ ಪ್ರಯೋಗಗಳನ್ನು ಕಂಡಿದೆ, ಕೆಟ್ಟ ಮೇಲೆ ಬುದ್ಧಿ ಬಂತು ನಾಟಕದಲ್ಲಿ ಅಮರೇಶನ ಪಾತ್ರ ಮಾಡಿದ್ದರು, ಬಾಳು ಬೆಳಗಿದ ಜ್ಯೋತಿ ಇನ್ನೂ ಅನೇಕ ನಾಟಕಗಳಲ್ಲಿ ಪಾತ್ರ ಮಾಡಿದ್ದರು. ಹುಚ್ಚ ಹಚ್ಚಿದ ಕಿಚ್ಚು, ಕುರುಬ ಹಚ್ಚಿದ ಕುಂಕುಮ ಸೇರಿ ಅನೇಕ ನಾಟಕಗಳಿಗೆ ನಿರ್ದೇಶನ ಮಾಡಿದ್ದು ಅಲ್ಲದೇ ಯಾರದೋ ತಪ್ಪು ಯಾರಿಗೋ ಶಿಕ್ಷೆ ನಾಟಕವನ್ನು ರಚಿಸಿ ನಿರ್ದೇಶನ ಮಾಡಿದ್ದು ಹೆಮ್ಮೆಯ ಸಂಗತಿ ಅವರು ಇಂದು ನಾಟಕ ಅಕಾಡಮಿಗೆ ಸದಸ್ಯರಾಗಿದ್ದಾರೆ.

ಚಾಂದಪಾಶಾ ಕಿಲ್ಲೆದಾರ್ ಅವರು ಸಂಘಟನೆಯಲ್ಲಿ ಇದ್ದು, ರಾಜಕೀಯದಲ್ಲೂ ಚಾಣಾಕ್ಷರಾಗಿದ್ದಾರೆ, ಉತ್ತಮ ಸ್ನೇಹ ಜೀವಿಯಾಗಿರುವ ಚಾಂದಪಾಶಾ ಅವರು ನಾಟಕ ಅಕಾಡಮಿಗೆ ಕೀರ್ತಿ ತರಲಿ ಈ ಭಾಗಕ್ಕೆ ಒತ್ತು ಕೊಟ್ಟು ನಿಜವಾದ ರಂಗಭೂಮಿಗೆ ಕೆಲಸ ಮಾಡುವವರನ್ನು ಗುರುತಿಸಿ ಎಂದು ಮನವಿ ಮಾಡಿದರು.

ಸನ್ಮಾನ ಸ್ವೀಕರಿಸಿದ ಚಾಂದಪಾಶಾ ಅವರು, ಕೈಲಾದ ಸೇವೆಯನ್ನು ಪ್ರಾಮಾಣಿಕವಾಗಿ ಮಾಡುವ ಮತ್ತು ಅವಕಾಶ ಕೊಟ್ಟ ಸರಕಾರಕ್ಕೆ ಗೌರವ ತರುವ ನಿಟ್ಟಿನಲ್ಲಿ ಕೆಲಸ ಮಾಡುವದಾಗಿ ಹೇಳಿದರು.

ಈ ಸಂದರ್ಭದಲ್ಲಿ ಸ್ವರಭಾರತಿ ಗ್ರಾಮೀಣಾಭಿವೃದ್ಧಿ ಮತ್ತು ಸಾಂಸ್ಕೃತಿಕ ಸಂಸ್ಥೆಯ ಅಧ್ಯಕ್ಷ ಮಂಜುನಾಥ ಜಿ. ಗೊಂಡಬಾಳ, ಶ್ರೀನಿವಾಸ ಪಂಡಿತ್, ಮಾನವಿ ಪಾಶಾ, ಸುಮಂಗಲಾ ಗಿಣಗೇರಿ ಇತರರು ಇದ್ದರು.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!