ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ಬಿಜೆಪಿ, ಜೆಡಿಎಸ್ ಹಾಗೂ ರೈತ ನಾಯಕ ರವಿಂದ್ರಗೌಡ ಪಾಟೀಲ ನೇತೃತ್ವದಲ್ಲಿ ಬೃಹತ್ ರೈತರ ಹೋರಾಟ.

ನಗರದಲ್ಲಿ NDA ವತಿಯಿಂದ ಕಾಂಗ್ರೆಸ್ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ.

ಬೆಂಬಲ ಬೆಲೆ ನೀಡಲು ಆಗ್ರಹಿಸಿ ಸರ್ಕಾರದ ವಿರುದ್ಧ ನಾಳೆ ಬಿಜೆಪಿ-ಜೆಡಿಎಸ್ ಜಂಟಿ ಪ್ರತಿಭಟನೆ

ಹೆಂಡತಿ ಹೊಡೆದು ಕೊಲೆ ಮಾಡಿದ ಪತಿರಾಯ..

ನಾವು ಯಾರನ್ನು ಟಾರ್ಗೆಟ್ ಮಾಡಲ್ಲ, ಮಾಡಿದ್ರೆ ಬೀಡಲ್ಲ ಎಸ್ಪಿ ಯಶೋಧ ವಂಟಗೋಡಿ.

ದೈಹಿಕ ಸಂಪರ್ಕ ಮಾಡಿ ಯುವತಿಗೆ ಕೈಕೊಟ್ಟ ಯುವಕ. ಯುವತಿ ಆತ್ಮಹತ್ಯೆ ಹುಡಗನ‌ ಮನೆ ಮುಂದೆ ಶವವಿಟ್ಟು ಪ್ರತಿಭಟನೆ..

ತಮ್ಮನ ಸಾವಿನಿಂದ ಮನನೊಂದ ಅಕ್ಕನು ನೇಣಿಗೆ ಶರಣು…!

ಸಚಿವ ಶಿವಾನಂದ ಪಾಟೀರನ್ನ BJP ಎಂದ ರೊಬೋಟ್

ರಾಣೆಬೇನ್ನೂರ ನಗರದಲ್ಲಿ ಭವ್ಯವಾಗಿ ನಡೆದ ಆರ್ ಎಸ್ ಎಸ್ ಪಥ ಸಂಚಲನ, ಒಂದು ಸಾವಿರ ಗಣವೇಷಧಾರಿಗಳು ಭಾಗಿ

ಎರಡು ವರ್ಷದಲ್ಲಿ ಎಷ್ಟು ಬಾರಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಗೆ ಹಾಜರಾಗದ ದಲಿತ ವಿರೋಧಿ ಶಾಸಕ; ಮಾಜಿ ಶಾಸಕ ಅರುಣಕುಮಾರ ಪೂಜಾರ.

ಕುದರಿಹಾಳ ಗ್ರಾಮದಲ್ಲಿ ಸಿಡಿಲು ಬಡಿದು ಯುವ ಕೃಷಿಕ ಸಾವು

ಕೈ-ಕಮಲ ನಡುವೆ ರಾಜಕೀಯ ಪ್ರತಿಷ್ಠೆ; ನಗರಸಭೆ ಸಾಮಾನ್ಯ ಸಭೆ ಮುಂದೂಡಿಕೆ.

ಹಾನಗಲ್ ತಹಸೀಲ್ದಾರ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ.

ಬಿಗರ ಊಟ ಮಾಡಿ ಬರುತ್ತಿದ್ದವರು ಮಸಣಕ್ಕೆ *ನಿಂತಿದ್ದ ಟ್ರ್ಯಾಕ್ಟರ್ ಟ್ರೈಲರ್ ಗೆ ಟಾಟಾ ಸುಪ್ರೋ ಡಿಕ್ಕಿ* *ಸ್ಥಳದಲ್ಲಿಯೆ ಮೂವರ ದುರ್ಮರಣ, 20ಕ್ಕೂ ಅಧಿಕರಿಗೆ ಗಂಭೀರ ಗಾಯ*

ತಾಪಂ ಪ್ರಭಾರ ಇಓ ಬಸವರಾಜ ಶಿಡೇನೂರ ಬಳಿ ಒಂದೂವರೆ ಕೋಟಿ ಆಸ್ತಿ..

ಕಂದಾಯ ನಿರೀಕ್ಷ ಅಶೋಕ‌ ಅರಳೇಶ್ವರ ಬಳಿ ಕೋಟ್ಯಾಂತರ ಆಸ್ತಿ ಪತ್ತೆ.

ನಾಟಕ ಅಕಾಡಮಿಗೆ ಹೆಸರು ತನ್ನಿ, ಈ ಭಾಗಕ್ಕೆ ಅವಕಾಶ ನೀಡಿ – ಜ್ಯೋತಿ ಮನವಿ

 

ಕೊಪ್ಪಳ : ಕಾಂಗ್ರೆಸ್ ಸರಕಾರದಲ್ಲಿ ಉತ್ತರ ಕರ್ನಾಟಕದ ಬಹುತೇಕ ಕವಿ, ಕಲಾವಿದ, ಸಾಹಿತಿ, ಚಿಂತಕರಿಗೆ ವಿವಿಧ ಅಕಾಡಮಿಗಳಲ್ಲಿ ಅವಕಾಶ ನೀಡುವ ಮೂಲಕ ಉತ್ತರ ಕರ್ನಾಟಕದ ಬಹುದಿನಗಳ ಆಸೆಗೆ ನೀರೆರೆದಿದ್ದಾರೆ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಗ್ಯಾರಂಟಿ ಪ್ರಾಧಿಕಾರ ಸದಸ್ಯೆ ಜ್ಯೋತಿ ಎಂ. ಗೊಂಡಬಾಳ ಸಂತಸ ವ್ಯಕ್ತಪಡಿಸಿದ್ದಾರೆ.

ಅವರು ನಗರದಲ್ಲಿ ನಾಟಕ ಅಕಾಡಮಿಗೆ ಸದಸ್ಯರಾಗಿ ನೇಮಕಗೊಂಡ ಸಮೀಪದ ಬಹೂದ್ದರಬಂಡಿ ಗ್ರಾಮದ ಹಿರಿಯ ರಂಗಕರ್ಮಿ, ಸಂಘಟಕ ಚಾಂದಪಾಶಾ ಕಿಲ್ಲೇದಾರ್ ಅವರನ್ನು ಸನ್ಮಾನಿಸಿ ಅಭಿನಂದಿಸಿ ಮಾತನಾಡಿದರು.

ಚಾಂದಪಾಶಾ ಕಿಲ್ಲೆದಾರ್ ಅವರು ೧೮ನೇ ವರ್ಷದಲ್ಲಿಯೇ ಗುರಿ ಸಾಧಿಸಿದ ಗಂಡು ನಾಟಕದಲ್ಲಿ ಮೊದಲ ಬಾರಿಗೆ ರಂಗಪ್ರವೇಶ ಮಾಡಿದರು, ನಂತರ ೧೯೮೨ ರಲ್ಲಿ ಆಶಾ ಲತಾ ನಾಟಕದಲ್ಲಿ ಕಥಾ ನಾಯಾಕನ ಪಾತ್ರ ಮಾಡಿದ್ದು ಅದು ಸುಮಾರು ೪೭ ಪ್ರಯೋಗಗಳನ್ನು ಕಂಡಿದೆ, ಕೆಟ್ಟ ಮೇಲೆ ಬುದ್ಧಿ ಬಂತು ನಾಟಕದಲ್ಲಿ ಅಮರೇಶನ ಪಾತ್ರ ಮಾಡಿದ್ದರು, ಬಾಳು ಬೆಳಗಿದ ಜ್ಯೋತಿ ಇನ್ನೂ ಅನೇಕ ನಾಟಕಗಳಲ್ಲಿ ಪಾತ್ರ ಮಾಡಿದ್ದರು. ಹುಚ್ಚ ಹಚ್ಚಿದ ಕಿಚ್ಚು, ಕುರುಬ ಹಚ್ಚಿದ ಕುಂಕುಮ ಸೇರಿ ಅನೇಕ ನಾಟಕಗಳಿಗೆ ನಿರ್ದೇಶನ ಮಾಡಿದ್ದು ಅಲ್ಲದೇ ಯಾರದೋ ತಪ್ಪು ಯಾರಿಗೋ ಶಿಕ್ಷೆ ನಾಟಕವನ್ನು ರಚಿಸಿ ನಿರ್ದೇಶನ ಮಾಡಿದ್ದು ಹೆಮ್ಮೆಯ ಸಂಗತಿ ಅವರು ಇಂದು ನಾಟಕ ಅಕಾಡಮಿಗೆ ಸದಸ್ಯರಾಗಿದ್ದಾರೆ.

ಚಾಂದಪಾಶಾ ಕಿಲ್ಲೆದಾರ್ ಅವರು ಸಂಘಟನೆಯಲ್ಲಿ ಇದ್ದು, ರಾಜಕೀಯದಲ್ಲೂ ಚಾಣಾಕ್ಷರಾಗಿದ್ದಾರೆ, ಉತ್ತಮ ಸ್ನೇಹ ಜೀವಿಯಾಗಿರುವ ಚಾಂದಪಾಶಾ ಅವರು ನಾಟಕ ಅಕಾಡಮಿಗೆ ಕೀರ್ತಿ ತರಲಿ ಈ ಭಾಗಕ್ಕೆ ಒತ್ತು ಕೊಟ್ಟು ನಿಜವಾದ ರಂಗಭೂಮಿಗೆ ಕೆಲಸ ಮಾಡುವವರನ್ನು ಗುರುತಿಸಿ ಎಂದು ಮನವಿ ಮಾಡಿದರು.

ಸನ್ಮಾನ ಸ್ವೀಕರಿಸಿದ ಚಾಂದಪಾಶಾ ಅವರು, ಕೈಲಾದ ಸೇವೆಯನ್ನು ಪ್ರಾಮಾಣಿಕವಾಗಿ ಮಾಡುವ ಮತ್ತು ಅವಕಾಶ ಕೊಟ್ಟ ಸರಕಾರಕ್ಕೆ ಗೌರವ ತರುವ ನಿಟ್ಟಿನಲ್ಲಿ ಕೆಲಸ ಮಾಡುವದಾಗಿ ಹೇಳಿದರು.

ಈ ಸಂದರ್ಭದಲ್ಲಿ ಸ್ವರಭಾರತಿ ಗ್ರಾಮೀಣಾಭಿವೃದ್ಧಿ ಮತ್ತು ಸಾಂಸ್ಕೃತಿಕ ಸಂಸ್ಥೆಯ ಅಧ್ಯಕ್ಷ ಮಂಜುನಾಥ ಜಿ. ಗೊಂಡಬಾಳ, ಶ್ರೀನಿವಾಸ ಪಂಡಿತ್, ಮಾನವಿ ಪಾಶಾ, ಸುಮಂಗಲಾ ಗಿಣಗೇರಿ ಇತರರು ಇದ್ದರು.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!