ಹಾವೇರಿ: ಮಾಜಿ ಸಚಿವ ಬಿ.ಸಿ.ಪಾಟೀಲ ಅಳಿಯ ಕೆ.ಜಿ.ಪ್ರತಾಪ್ ಕುಮಾರ್ (43) ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ
ಮೂಲತಃ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲ್ಲೂಕಿನ ಕತ್ತಲಗೆರೆ ಗ್ರಾಮದವರಾದ ಪ್ರತಾಪ್ ಕುಮಾರ, ಬಿ.ಸಿ.ಪಾಟೀಲ ಪುತ್ರಿ ಸೌಮ್ಯಾ ಪಾಟೀಲ ಅವರ ಪತಿ ಎಂದು ತಿಳಿದುಬಂದಿದೆ.
ಹೊನ್ನಾಳಿ ತಾಲ್ಲೂಕಿನ ಅರಕೆರೆಯ ಅರಣ್ಯ ಪ್ರದೇಶದಲ್ಲಿ ಪ್ರತಾಪ್ ಕುಮಾರ ವಿಷ ಸೇವನೆಯ ಸ್ಥಿತಿಯಲ್ಲಿ ಕಾರಿನಲ್ಲಿ ಪ್ರಜ್ಞಾಹೀನವಾಗಿ ಪತ್ತೆಯಾಗಿದ್ದು, ಅವರನ್ನು ಗಮನಿಸಿದ ಸಾರ್ವಜನಿಕರು ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಗೆ ಕರೆತಂದಿದ್ದು, ದಾರಿ ಮಧ್ಯದಲ್ಲಿಯೇ ಸಾವಿಗೀಡಾಗಿದ್ದಾರೆ. ವಿಷಯ ತಿಳಿದು ಬಿ.ಸಿ.ಪಾಟೀಲ ಶಿವಮೊಗ್ಗಕ್ಕೆ ಬಂದಿದ್ದಾರೆ. ದೇಹವನ್ನು ಮರಣೋತ್ತರ ಪರೀಕ್ಷೆಗೆ ಮೆಗ್ಗಾನ್ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.
ಪ್ರತಾಪಕುಮಾರ್ ಅವರು ಮಾವ ಬಿ.ಸಿ.ಪಾಟೀಲ ಅವರ ಊರು ಹಿರೇಕೆರೂರಿನಲ್ಲಿ ಗುತ್ತಿಗೆದಾರ ಆಗಿ ಕೆಲಸ ಮಾಡುತ್ತಿದ್ದರು. ಅಲ್ಲಿಯೇ ವಾಸವಿದ್ದರು. ಪ್ರತಾಪಕುಮಾರ್ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

More Stories
16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…
ಹಾವೇರಿ ಜಿಲ್ಲಾಸತ್ರ ಕೋರ್ಟ್ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.
ಸಿಎಂ ಕುರ್ಚಿ ಗುದ್ದಾಟದ ವಿಚಾರ…! ಮತ್ತೆ ಗರಂ ಆದ ಸಿಎಂ ಸಿದ್ಧರಾಮಯ್ಯ.