ತಾಪಂ ಕೆಡಿಪಿ ಸಭೆಯಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗೆ ತರಾಟೆ..!

ಹೆದ್ದಾರಿಯಲ್ಲಿ ದರೋಡೆ ಮಾಡಲು ಹೊಂಚು ಹಾಕಿದ್ದವರು ಕಂಬಿ ಹಿಂದೆ

ನಗರಸಭೆ ನೀರಿನ ತೆರಿಗೆಯನ್ನು ನಿಮ್ಮ ಮೊಬೈಲನಲ್ಲಿ ಪಾವತಿಸಿ.

ಕೋಡಿಯಾಲ ಹೊಸಪೇಟೆ ಗ್ರಾಮದಲ್ಲಿ ವಾಲ್ಮೀಕಿ ಪುತ್ಥಳಿ ಅನಾವರಣ ಮತ್ತು‌ ವೃತ್ತ ಲೋಕಾರ್ಪಣೆ ನಾಡಿದ್ದು

ರಾಣೆಬೇನ್ನೂರ ತಾಲೂಕ ಹಸಿರಿಕರಣಕ್ಕೆ “ಟ್ರೀ ಪಾರ್ಕ್” ಶಾಸಕ ಪ್ರಕಾಶ ಕೋಳಿವಾಡ

ನಗರಸಭೆ ನೂತನ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ರಮೇಶ ಕರಡೆಣ್ಣನವರ ಆಯ್ಕೆ.

ಅಗಡಿ ತೋಟಕ್ಕೆ ಹೊರಟ್ಟವರು ಕೈಲಾಸಕ್ಕೆ ಹೋದರು, ಮೃತಪಟ್ಟವರ ವಿವರ ಇಲ್ಲಿದೆ.

ಮೋಟೆಬೆನ್ನೂರು ಬಳಿ ಭೀಕರ ಅಪಘಾತ, ರಾಣೆಬೇನ್ನೂರು ನಗರದ ಆರು ಜನ ಸಾವು.

ಪರಮ ಭ್ರಷ್ಟ ಲಂಚಾವತಾರಿ ಸಂವಿಧಾನ ವಿರೋಧಿ ವೈದ್ಯ ಡಾ” ಪರಮೇಶ್ವರಪ್ಪ ಅಮಾನತಗೆ ಆಗ್ರಹ

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಹಾವೇರಿಯಲ್ಲಿ ಕಾಂಗ್ರೆಸ್ ಗೆದ್ದೇ ಗೆಲ್ಲತ್ತೆ: ಸಿ.ಎಂ ಭರವಸೆ

ರಾಹುತನಕಟ್ಟಿ ಗ್ರಾಪಂ ಮತ್ತೆ ಬಿಜೆಪಿ ಬೆಂಬಲಿತರ ತೆಕ್ಕೆಗೆ.

ಸ್ಮಶಾನ ಜಾಗಕ್ಕಾಗಿ ತಾಲೂಕಿನ ಕೃಷ್ಣಾಪುರ ಗ್ರಾಮಸ್ಥರಿಂದ ಸಿಎಂಗೆ ಕಪ್ಪು ಪಟ್ಟಿ‌ ಪ್ರದರ್ಶನಕ್ಕೆ ಸಜ್ಜು.

ತಂದೆ ಶವ ಮನೆಯಲ್ಲಿಟ್ಟು ಕಣ್ಣೀರಿಡುತ್ತ ಪರೀಕ್ಷೆ ಬರೆದ ಅಣ್ಣ-ತಂಗಿಗೆ ಉತ್ತಮ ಅಂಕ; ತಂಗಿಗೆ ಶೇ. 83 ಅಣ್ಣನಿಗೆ ಶೇ. 85ರಷ್ಟು ಅಂಕ

ಶಿವಾನಂದ ಪಾಟೀಲ ರಾಜೀನಾಮೆ ಪತ್ರದಲ್ಲಿ ಏನು ಹೇಳಿದ್ದಾರೆ.

ಮೆಡ್ಲೇರಿ ರಸ್ತೆಯಿಂದ ಹುಣಸಿಕಟ್ಟಿ ತನಕ ಇಂದು ರಾತ್ರಿ ವಿದ್ಯುತ್ ಸರಬರಾಜು ಡೌಟು..

ಕಿತ್ತಾಟ, ಕಿರಚಾಟ ನಡುವೆ ನಗರಸಭೆ ಸ್ಥಾಯಿ ಸಮಿತಿಗೆ ಅನುಮೋದನೆ.

ಇಸ್ವತ್ತು ಉತಾರ ನೀಡಲು ಲಂಚ ಪಡೆಯುತ್ತಿದ್ದ ಪಿಡಿಓ, ಉಪಾಧ್ಯಕ್ಷ ಸೇರಿ ಮೂರ ಜನ ಗ್ರಾಪಂ ಸದಸ್ಯರ ಬಂಧನ.

ರಷ್ಯಾದಲ್ಲಿ ಡಾ.ನಾಗರಾಜ ಎಸ್.ಕೆ ಅವರಿಗೆ ಗ್ಲೋಬಲ್ ಅಚಿವರ್ಸ್ ಪ್ರಶಸ್ತಿ.

ಐಎಎಸ್‌ ಪಾಸ್ ಮಾಡಿದ ಸಚಿನ ಗುತ್ತೂರುಗೆ ಕೋಡಿಯಾಲ ಹೊಸಪೇಟೆ ಗ್ರಾಮದಲ್ಲಿ ಅದ್ದೂರಿ ಸ್ವಾಗತ..

ಟ್ರ್ಯಾ ಕ್ಟರ್‌ನಿಂದ ಬಿದ್ದು ಅಣ್ಣಾ-ತಮ್ಮಾ ಸಾವು, ನಾಲ್ವರಿಗೆ ಗಂಭೀರ ಗಾಯ

NTA ರದ್ದು ಹಾಗೂ NEET ವಿರುದ್ಧ ರಸ್ತೆಗಿಳಿದ NSUI, ಶಾಸಕ ಪ್ರಕಾಶ ಕೋಳಿವಾಡ ಸಾಥ್.

ರಾಣೆಬೇನ್ನೂರು: NEET  ಪರೀಕ್ಷೆಯ ಅವ್ಯವಹಾರ ಹಾಗೂ ಅದರ ಪಾರದರ್ಶಕತೆ ಬಗ್ಗೆ ನಿಷ್ಪಕ್ಷಪಾತದಿಂದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರ ಮೇಲ್ವಿಚಾರಣೆಯ ತನಿಖೆ ನಡೆಸಬೇಕೆಂದು ಆಗ್ರಹಿಸಿ ನಗರದಲ್ಲಿ NSUI ಪ್ರತಿಭಟನೆ ನಡೆಸಿತು.

ನಗರದ ಬಸ್ ನಿಲ್ದಾಣದಲ್ಲಿ  ನೂರಾರು ವಿದ್ಯಾರ್ಥಿಗಳು ಹಾಗೂ NSUI ಮುಖಂಡರು ಸೇರಿದಂತೆ ಶಾಸಕ ಪ್ರಕಾಶ ಕೋಳಿವಾಡ ಅವರು ಕೇಂದ್ರ ಸರ್ಕಾರದ ಆಕ್ರೋಶ ವ್ಯಕ್ತಪಡಿಸಿದರು.

ಶಾಸಕ ಪ್ರಕಾಶ ಕೋಳಿವಾಡ ಮಾತನಾಡಿ,  ಜೂ. 4 ರಂದು NEET-UG ಪರೀಕ್ಷೆಯ ಫಲಿತಾಂಶಗಳು ಪ್ರಕಟವಾದ ನಂತರ NTA ಪರೀಕ್ಷೆಯ ಫಲಿತಾಂಶದಲ್ಲಿನ ನಡವಳಿಕೆಯ ಬಗ್ಗೆ ಹಾಗೂ ಪರೀಕ್ಷೆಗಳನ್ನು ನಡೆಸುವ ಬಗೆ, ಪಾರದರ್ಶಕತೆಯನ್ನು ಪ್ರಶ್ನಿಸುವ ಹಲವಾರು ದೂರುಗಳು ದೇಶಾದ್ಯಂತ ಬರುತ್ತಿವೆ ಎನ್‌ಟಿಎ ಜಾರಿಗೆ ಬಂದಾಗಿನಿಂದ ಪ್ರಮುಖ ಗಂಭೀರ ಆರೋಪಗಳು ಕೇಳಿ ಬರುತ್ತಿವೆ. ಅಂತಹ ಎನ್‌ಟಿಎ ಸಂಸ್ಥೆಯು ಪ್ರವೇಶವನ್ನು ನಡೆಸಲು ಅಸಮರ್ಥ ಮತ್ತು ಅನರ್ಹವಾಗಿದೆ ಎಂದರು.

MBBS5 ಪದವಿ ಹಂತದ ಪ್ರವೇಶ ಪರೀಕ್ಷೆಯಲ್ಲಿ ಒಟ್ಟು ಅಂಕಗಳು 120. ಪ್ರತಿ ಸರಿಯಾದ ಉತ್ತರಕ್ಕೆ, 4 ಅಂಕಗಳನ್ನು ನೀಡಲಾಗುತ್ತದೆ. ಆದರೆ ಪ್ರತಿ ತಪ್ಪು ಉತ್ತರಕ್ಕೆ 1 ಅಂಕವನ್ನು ಕಡಿತಗೊಳಿಸಲಾಗುತ್ತದೆ, ಆದರೆ ಉತ್ತರಿಸದ ಪ್ರಶ್ನೆಗಳನ್ನು ಗುರುತಿಸಿಲ್ಲ ಆ ಸಂದರ್ಭದಲ್ಲಿ ಗಣಿತದ ಪ್ರಕಾರ 719 ಮತ್ತು 718 ನಂತಹ ಅಂಕಗಳನ್ನು ಪಡೆಯಲು ಸಾಧ್ಯವಿಲ್ಲ ಆದರೆ ಅಂತಹ ಪ್ರಕರಣಗಳು ಬಂದಿರುವ ಫಲಿತಾಂಶಗಳಲ್ಲಿ ಕಂಡುಬರುತ್ತಿದೆ. ಈ ವರ್ಷದ ಫಲಿತಾಂಶವು ಗ್ರೇಸ್ ಮಾರ್ಕಿಂಗ್‌ಗಾಗಿ ಎಂದು ಎನ್‌ಟಿಎ ಪ್ರಾಸಂಗಿಕವಾಗಿ ಹೇಳಿಕೆಯಲ್ಲಿ ತಿಳಿಸಿದೆ. ಆದರೆ ಈ ವರ್ಷ ಪರೀಕ್ಷೆಗೆ ಮುನ್ನ ಎನ್‌ಟಿಎ ಪ್ರಕಟಿಸಿದ ಮಾರ್ಗಸೂಚಿಗಳಲ್ಲಿ ಎಲ್ಲಿಯೂ ಈ ಗ್ರೇಸ್ ಮಾರ್ಕಿಂಗ್ ಯೋಜನೆಯ ಬಗ್ಗೆ ಉಲ್ಲೇಖಿಸಿಲ್ಲ. ಇದಲ್ಲದೆ, ಒಂದೇ ಕೇಂದ್ರದ ಸತತ ರೋಲ್ ಸಂಖ್ಯೆ ಹೊಂದಿರುವ ಹಲವು ವಿದ್ಯಾರ್ಥಿಗಳು 720 ಕ್ಕೆ, 720 ಅಂಕಗಳನ್ನು ಪಡೆದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದು ಆರೋಪಿಸಿದರು. ಕೂಡಲೇ ರಾಷ್ಟ್ರಪತಿಗಳು ಇದರ ಬಗ್ಗೆ ಕೂಲಂಕಷವಾಗಿ ತನಿಖೆ ಮಾಡಿ ನೀಟ್ ರದ್ದು ಮಾಡಬೇಕು ಎಂದು ತಹಸೀಲ್ದಾರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಎನ್.ಎಸ್.ಯು.ಐ. ತಾಲೂಕ ಅಧ್ಯಕ್ಷ ಅರುಣಕುಮಾರ ಎಚ್, ರಾಘವೇಂದ್ರ ಎಸ್.ಎಲ್, ಬೀರಪ್ಪ ಲಮಾಣಿ, ರಾಜು ಮಾದಮ್ಮನವರ, ಬೀರೇಶ ಬುಳ್ಳಪ್ಪನವರ ಸೇರಿದಂತೆ ಇತರರು ಹಾಜರಿದ್ದರು.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!