ರಾಣೆಬೆನ್ನೂರ: ಕ್ಷುಲ್ಲಕ ಕಾರಣಕ್ಕೆ ಮಗ ತಾಯಿಯೊಂದಿಗೆ ಜಗಳವಾಡಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಇದನ್ನು ನೋಡಿದ ತಾಯಿ ಸಹ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಮನ:ಕಲಕುವ ಘಟನೆ ರಾಣೆಬೆನ್ನೂರ ತಾಲೂಕಿನ ಕರೂರ ಗ್ರಾಮದಲ್ಲಿ ಶನಿವಾರ ನಡೆದಿದೆ.
ಧನರಾಜ ಸುರೇಶ ಹಾದಿಮನಿ (18) ಹಾಗೂ ಈತನ ತಾಯಿ ಬಾಗ್ಯಮ್ಮ ಹಾದಿಮನಿ (43) ಆತ್ಮಹತ್ಯೆಗೆ ಶರಣಾದವರು.
ಸ್ಥಳಕ್ಕೆ ಕುಮಾರಪಟ್ಟಣ ಪಿಎಸ್ಐ ಪ್ರವೀಣ ವಾಲೀಕಾರ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಎರಡು ವರ್ಷದ ಹಿಂದೆ ಸುರೇಶ ಅವರ 14 ವರ್ಷದ ಇನ್ನೋರ್ವ ಪುತ್ರಿ ಅನಾರೋಗ್ಯದಿಂದ ಮೃತಪಟ್ಟಿದ್ದರು. ಇದೀಗ ಪತ್ನಿ, ಪುತ್ರನನ್ನು ಕಳೆದುಕೊಂಡು ದುಖಃದ ಮಡುವಿನಲ್ಲಿ ಮುಳುಗಿದ್ದಾರೆ.
ಏನಿದು ಘಟನೆ ?
ಬೈಕ್ ಕೊಡಿಸುವ ವಿಚಾರದಲ್ಲಿ ತಾಯಿ ಹಾಗೂ ಮಗನ ನಡುವೆ ಗಲಾಟೆ ನಡೆದಿದೆ. ಈ ಸಮಯದಲ್ಲಿ ತಾಯಿ ನಾನು ಸಾಯುತ್ತೆನೆ ಎಂದು ಮಗನಿಗೆ ಹೆದರಿಸಿ ಪಕ್ಕದ ಮನೆಗೆ ಹೋಗಿದ್ದ ವೇಳೆ ಮಧ್ಯಾಹ್ನ ಧನರಾಜ ಅಡುಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತಾಯಿ ಮನೆಗೆ ಬರುತ್ತಿದ್ದಂತೆ ಮಗನ ಸ್ಥಿತಿ ಕಂಡು ದಂಗಾಗಿದ್ದಾರೆ. ಇದರಿಂದ ದುಃಖಿತರಾಗಿ ಕರೂರ ರೈಲು ನಿಲ್ದಾಣದ ಬಳಿ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
More Stories
ಇಸ್ವತ್ತು ಉತಾರ ನೀಡಲು ಲಂಚ ಪಡೆಯುತ್ತಿದ್ದ ಪಿಡಿಓ, ಉಪಾಧ್ಯಕ್ಷ ಸೇರಿ ಮೂರ ಜನ ಗ್ರಾಪಂ ಸದಸ್ಯರ ಬಂಧನ.
ಸ್ಥಾಯಿ ಸಮಿತಿ ರಚನೆ ನಗರಸಭೆಯಲ್ಲಿ ಕೋಲಾಹಲ ವಿರೋಧ ಪಕ್ಷದ ಸದಸ್ಯರಿಂದ ನ್ಯಾಯಾಲಯದ ಮೋರೆ ಸಾಧ್ಯತೆ
ಮೈಕ್ರೋ ಫೈನಾನ್ಸ್ ನವರ ಕಿರುಕುಳ ಕೊಟ್ರೆ ಕೇಸ್ ಹಾಕ್ತೇವಿ ಶಾಸಕ ಪ್ರಕಾಶ ಕೋಳಿವಾಡ.