ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ಬಿಜೆಪಿ, ಜೆಡಿಎಸ್ ಹಾಗೂ ರೈತ ನಾಯಕ ರವಿಂದ್ರಗೌಡ ಪಾಟೀಲ ನೇತೃತ್ವದಲ್ಲಿ ಬೃಹತ್ ರೈತರ ಹೋರಾಟ.

ನಗರದಲ್ಲಿ NDA ವತಿಯಿಂದ ಕಾಂಗ್ರೆಸ್ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ.

ಬೆಂಬಲ ಬೆಲೆ ನೀಡಲು ಆಗ್ರಹಿಸಿ ಸರ್ಕಾರದ ವಿರುದ್ಧ ನಾಳೆ ಬಿಜೆಪಿ-ಜೆಡಿಎಸ್ ಜಂಟಿ ಪ್ರತಿಭಟನೆ

ಹೆಂಡತಿ ಹೊಡೆದು ಕೊಲೆ ಮಾಡಿದ ಪತಿರಾಯ..

ನಾವು ಯಾರನ್ನು ಟಾರ್ಗೆಟ್ ಮಾಡಲ್ಲ, ಮಾಡಿದ್ರೆ ಬೀಡಲ್ಲ ಎಸ್ಪಿ ಯಶೋಧ ವಂಟಗೋಡಿ.

ದೈಹಿಕ ಸಂಪರ್ಕ ಮಾಡಿ ಯುವತಿಗೆ ಕೈಕೊಟ್ಟ ಯುವಕ. ಯುವತಿ ಆತ್ಮಹತ್ಯೆ ಹುಡಗನ‌ ಮನೆ ಮುಂದೆ ಶವವಿಟ್ಟು ಪ್ರತಿಭಟನೆ..

ತಮ್ಮನ ಸಾವಿನಿಂದ ಮನನೊಂದ ಅಕ್ಕನು ನೇಣಿಗೆ ಶರಣು…!

ಸಚಿವ ಶಿವಾನಂದ ಪಾಟೀರನ್ನ BJP ಎಂದ ರೊಬೋಟ್

ರಾಣೆಬೇನ್ನೂರ ನಗರದಲ್ಲಿ ಭವ್ಯವಾಗಿ ನಡೆದ ಆರ್ ಎಸ್ ಎಸ್ ಪಥ ಸಂಚಲನ, ಒಂದು ಸಾವಿರ ಗಣವೇಷಧಾರಿಗಳು ಭಾಗಿ

ಎರಡು ವರ್ಷದಲ್ಲಿ ಎಷ್ಟು ಬಾರಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಗೆ ಹಾಜರಾಗದ ದಲಿತ ವಿರೋಧಿ ಶಾಸಕ; ಮಾಜಿ ಶಾಸಕ ಅರುಣಕುಮಾರ ಪೂಜಾರ.

ಕುದರಿಹಾಳ ಗ್ರಾಮದಲ್ಲಿ ಸಿಡಿಲು ಬಡಿದು ಯುವ ಕೃಷಿಕ ಸಾವು

ಕೈ-ಕಮಲ ನಡುವೆ ರಾಜಕೀಯ ಪ್ರತಿಷ್ಠೆ; ನಗರಸಭೆ ಸಾಮಾನ್ಯ ಸಭೆ ಮುಂದೂಡಿಕೆ.

ಹಾನಗಲ್ ತಹಸೀಲ್ದಾರ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ.

ಬಿಗರ ಊಟ ಮಾಡಿ ಬರುತ್ತಿದ್ದವರು ಮಸಣಕ್ಕೆ *ನಿಂತಿದ್ದ ಟ್ರ್ಯಾಕ್ಟರ್ ಟ್ರೈಲರ್ ಗೆ ಟಾಟಾ ಸುಪ್ರೋ ಡಿಕ್ಕಿ* *ಸ್ಥಳದಲ್ಲಿಯೆ ಮೂವರ ದುರ್ಮರಣ, 20ಕ್ಕೂ ಅಧಿಕರಿಗೆ ಗಂಭೀರ ಗಾಯ*

ತಾಪಂ ಪ್ರಭಾರ ಇಓ ಬಸವರಾಜ ಶಿಡೇನೂರ ಬಳಿ ಒಂದೂವರೆ ಕೋಟಿ ಆಸ್ತಿ..

ಕಂದಾಯ ನಿರೀಕ್ಷ ಅಶೋಕ‌ ಅರಳೇಶ್ವರ ಬಳಿ ಕೋಟ್ಯಾಂತರ ಆಸ್ತಿ ಪತ್ತೆ.

ಮುದ್ರಣ ಹಾಗೂ ದೃಶ್ಯ ಮಾಧ್ಯಮ ಜನರಿಗೆ ಜ್ಞಾನ ನೀಡುತ್ತವೆ: ಹಿರಿಯ ಪತ್ರಕರ್ತ ಅರುಣಕುಮಾರ ಹಬ್ಬು

ರಾಣೇಬೆನ್ನೂರು :- ಮುದ್ರಣ ಹಾಗೂ ದೃಶ್ಯ ಮಾಧ್ಯಮ ಜನರಿಗೆ ಜ್ಞಾನ ನೀಡುತ್ತವೆ ಎಂದು ಹುಬ್ಬಳ್ಳಿಯ ಹಿರಿಯ ಪತ್ರಕರ್ತ ಅರುಣಕುಮಾರ ಹಬ್ಬು ಹೇಳಿದರು.
ನಗರದ ಚರ್ಚ್ ರಸ್ತೆಯ ಎಸ್‌ಜೆಎಂವಿ ಪದವಿ ಮಹಿಳಾ ಮಹಾವಿದ್ಯಾಲಯದ ಡಾ.ಶಿ.ಮು.ಶ ಸಭಾಭವನದಲ್ಲಿ ಶುಕ್ರವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕ ಘಟಕದ ವತಿಯಿಂದ ಏರ್ಪಡಿಸಲಾಗಿದ್ದ ಪತ್ರಿಕಾ ದಿನಾಚರಣೆಯಲ್ಲಿ ಮಾತನಾಡಿದರು.
     ಪತ್ರಿಕೆಗಳು ಸಮಾಜವನ್ನು ಬಡಿದೆಬ್ಬಿಸುವ ಕೆಲಸ ಮಾಡುತ್ತವೆ. ನಮ್ಮ ದೇಶದ ಸ್ವಾತಂತ್ರ‍್ಯ ಹೋರಾಟದಲ್ಲಿ ಪತ್ರಿಕೆಗಳು ಬಹುಮುಖ್ಯ ಪಾತ್ರ ವಹಿಸಿದ್ದವು. ಪತ್ರಿಕೆಗಳು ಜ್ಞಾನ ಹಂಚಿಕೆ ಮತ್ತು ನೀತಿಯನ್ನು ಕಲಿಸುತ್ತವೆ. ಪತ್ರಕರ್ತರು ಸಮಾಜದ ಒಂದು ಅಂಗವಾಗಿದ್ದು ಪ್ರಜೆಗಳ ರಕ್ಷಣೆ ಕಾರ್ಯ ನಿರ್ವಹಿಸುತ್ತಾರೆ. ಯುವ ಜನಾಂಗ ಕೇವಲ ಮನರಂಜನೆಗೆ ಒತ್ತು ನೀಡದೇ ಜೀವನ ರೂಪಿಸುವ ಪತ್ರಿಕೆ ಓದುವ ಹವ್ಯಾಸ ರೂಢಿಸಿಕೊಳ್ಳಬೇಕು ಎಂದರು.
ಉದ್ಘಾಟನೆ ನೆರವೇರಿಸಿದ ಡಿವೈಎಸ್‌ಪಿ ಡಾ.ಗಿರೀಶ ಭೋಜಣ್ಣನವರ ಮಾತನಾಡಿ, ಪ್ರಸ್ತುತ ಕಾಲಘಟ್ಟದಲ್ಲಿ ಸಮಾಜಕ್ಕೆ ಮುದ್ರಣ ಮಾಧ್ಯಮದ ಕೊಡುಗೆ ಅಪಾರವಾಗಿದೆ. ಇತ್ತೀಚಿನ ದಿನಗಳಲ್ಲಿ ದೃಶ್ಯ ಮಾಧ್ಯಮಗಳಿಂದಾಗಿ ಪತ್ರಿಕೆಗಳನ್ನು ಓದುಗರ ಸಂಖ್ಯೆ ಕಡಿಮೆಯಾಗಿದೆ ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಮಾಜಿ ಶಾಸಕ ಅರುಣಕುಮಾರ ಪೂಜಾರ ಮಾತನಾಡಿ, ನಾಡಿನ ಅಭ್ಯುದಯದಲ್ಲಿ ಪತ್ರಿಕೆಗಳ ಪಾತ್ರ ಬಹು ಮುಖ್ಯ. ಯುವ ಜನಾಂಗ ಸಾಮಾಜಿಕ ಜಾಲತಾಣಗಳನ್ನು ದುರ್ಬಳಕೆ ಮಾಡಿಕೊಳ್ಳದೇ ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಬೇಕು. ವಿದ್ಯಾರ್ಥಿಗಳು ಪತ್ರಿಕೆ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದರು.
ಜಿಪಂ ಮಾಜಿ ಸದಸ್ಯ ಸಂತೋಷ ಕುಮಾರ ಪಾಟೀಲ ಮಾತನಾಡಿ, ಪತ್ರಿಕೋದ್ಯಮ ಕ್ಷೇತ್ರದಲ್ಲಿ ಬದಲಾವಣೆ ಪರ್ವ ಪ್ರಾರಂಭವಾಗಿದ್ದು ಸಾಮಾಜಿಕ ಚಿಂತನೆ ದೂರವಾಗಿದೆ. ಇದರಿಂದ ಪತ್ರಕರ್ತರ ಕಾರ್ಯಶೈಲಿ ಮೇಲೆ ಪರಿಣಾಮ ಉಂಟಾಗುತ್ತಿದೆ. ಇಂತಹ ಸಂದರ್ಭಗಳಲ್ಲಿ ನಿಷ್ಠೆ ಮತ್ತು ಪ್ರಾಮಾಣಿಕತೆ ಹೊಂದಿದ ಪತ್ರಕರ್ತರು ಸಂಕಷ್ಟ ಎದುರಿಸಬೇಕಾಗಿದೆ. ಮುಂದಿನ ದಿನಗಳಲ್ಲಿ ಪತ್ರಕರ್ತರು ಆರ್ಥಿಕ ಬಲಿಷ್ಠರಾಗುವಂತಾಗಬೇಕು ಎಂದರು.
ಶಹರ ಸಿಪಿಐ ಡಾ.ಶಂಕರ್ ಸೈಬರ್ ಅಪರಾಧಗಳು ಹಾಗೂ ಸಾಮಾಜಿಕ ಜಾಲತಾಣಗಳ ಕುರಿತು ಮಾತನಾಡಿದರು.
ಬಿಜೆಪಿ ರಾಜ್ಯ ಉಪಾಧ್ಯಕ್ಷ ಡಾ.ಬಸವರಾಜ ಕೇಲಗಾರ, ಜೆಡಿಎಸ್ ಜಿಲ್ಲಾಧ್ಯಕ್ಷ ಮಂಜುನಾಥ ಗೌಡಶಿವಣ್ಣನವರ, ಡಿವೈಎಸ್‌ಪಿ ಡಾ.ಗಿರೀಶ ಭೋಜಣ್ಣನವರ, ಎಸ್.ಜೆ.ಎಂ.ವಿ ಮಹಿಳಾ ಪದವಿ ಕಾಲೇಜಿನ ಪ್ರಾ. ಡಾ.ಆರ್.ವ್ಹಿ. ಹೆಗಡಾಳ, ಕಾನಿಪ ರಾಜ್ಯ ಕಾರ್ಯದರ್ಶಿ ನಿಂಗಪ್ಪ ಚಾವಡಿ, ಜಿಲ್ಲಾಧ್ಯಕ್ಷ ನಾಗರಾಜ ಕುರುವತ್ತೇರ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಪರಸಪ್ಪ ಸತ್ಯಪ್ಪನವರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೀರೇಶ ಮಡ್ಲೂರ, ಜಿಲ್ಲಾ ಕಾರ್ಯದರ್ಶಿ ಸಂತೋಷಕುಮಾರ ಮಹಾಂತಶೆಟ್ಟರ, ಜಿಲ್ಲಾ ಉಪಾಧ್ಯಕ್ಷ ಎಸ್.ಜಿ.ಮಹಾನುಭಾವಿಮಠ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.
ನಗರದ ಎಸ್‌ಟಿಜೆಐಟಿ ತಾಂತ್ರಿಕ ಮಹಾವಿದ್ಯಾಲಯದ ಪ್ರಾಧ್ಯಾಪಕ ಹಾಗೂ ಬರಹಗಾರ ಡಾ.ಎಮ್.ಈ. ಶಿವಕುಮಾರ ಹೊನ್ನಾಳಿ ವಿಶೇಷ ಆಹ್ವಾನಿತರಾಗಿ ಆಗಮಿಸಿದ್ದರು.
ತಾಲೂಕ ಕಾನಿಪ ಸಂಘದ ಅಧ್ಯಕ್ಷ ಎಸ್.ಟಿ.ವೇದಮೂರ್ತಿ ಅಧ್ಯಕ್ಷತೆ ವಹಿಸಿದ್ದರು.
ಸಮಾರಂಭದಲ್ಲಿ ಪಿ.ರಾಮಯ್ಯ ಪ್ರಶಸ್ತಿ ಪುರಸ್ಕೃತ ಸ್ಥಳೀಯ ಪತ್ರಕರ್ತ ಮನೋಹರ ಮಲ್ಲಾಡದ ಅವರನ್ನು ಸನ್ಮಾನಿಸಲಾಯಿತು.
ತಾಲೂಕ ಸಂಘದ ಪ್ರಧಾನ ಕಾರ್ಯದರ್ಶಿ ಮಂಜುನಾಥ ಹೊಸಪೇಟಿ, ಉಪಾಧ್ಯಕ್ಷ ಕರಿಯಪ್ಪ ಅರಳಿಕಟ್ಟಿ, ಖಜಾಂಚಿ ಗುರುರಾಜ ನಾಡಿಗೇರ, ಕೆ.ಎಸ್.ನಾಗರಾಜ, ಎಂ.ಚಿರAಜೀವಿ, ಮಂಜುನಾಥ ಕುಂಬಳೂರ, ಶಿವಕುಮಾರ ಓಲೇಕಾರ, ಮಲ್ಲಿಕಾರ್ಜುನ ಕೆಂಚರೆಡ್ಡಿ, ಬಸವರಾಜ ಒಡೇರಹಳ್ಳಿ, ಗದಿಗೆಪ್ಪ ನೇಶ್ವಿ, ಮುರುಗೇಶ ಮಹಾನುಭಾವಿಮಠ, ಮುಕ್ತೇಶ ಕೂರಗುಂದಮಠ, ವಿಶ್ವನಾಥ ಕುಂಬಳೂರ, ಮಾಣಿಕಲಾಲ್ ಮೆಹರವಾಡೆ, ಬಸವರಾಜ ಸರೂರ, ಸುಮಿತ್ ಮಳಿಯೆ, ಗಿರೀಶ ಅಮ್ಮನವರ ಮತ್ತಿತರರಿದ್ದರು.
ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!