ರಾಣೆಬೇನ್ನೂರು: ನಗರದ ತಹಸೀಲ್ದಾರ ಕಚೇರಿಯ ಸಭಾಂಗಣದಲ್ಲಿ ಸೋಮವಾರ ಕರ್ನಾಟಕ ಲೋಕಾಯುಕ್ತ ಘಟಕ ಹಾವೇರಿ ವತಿಯಿಂದ ನಡೆದ ಸಾರ್ವಜನಿಕ ಕುಂದು ಕೊರತೆ, ಅಹವಾಲು ಸ್ವೀಕಾರ ಹಾಗೂ ಜನ ಸಂಪರ್ಕ ಸಭೆಗೆ ತಾಲೂಕಿನ ಅಧಿಕಾರಿಗಳ ಹೊರತು ಪಡಿಸಿದರೆ ಬೆರಳೆಣಿಕೆಯಷ್ಟು ಜನರು ಮಾತ್ರ ಆಗಮಿಸಿ ತಮ್ಮ ಸಮಸ್ಯೆ ಹೇಳಿಕೊಂಡರು.
ಹಾವೇರಿ ಲೋಕಾಯುಕ್ತ ಡಿವೈಎಸ್ಪಿ ಚಂದ್ರಶೇಖರ ನೇತೃತ್ವದಲ್ಲಿ ನಡೆದಂತಹ ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳ ಬಗ್ಗೆ ತಮ್ಮ ಸಾಧನೆ ಹಾಗೂ ಸಮಸ್ಯೆ ಬಗ್ಗೆ ಸುಧೀರ್ಘ ಮಾಹಿತಿ ಪಡೆದರು.
ಈ ಸಮಯದಲ್ಲಿ ರಾಣೆಬೇನ್ನೂರು ನಗರದ ನಗರಸಭೆ ಅವ್ಯವಸ್ಥೆ ಹಾಗೂ ಅಧಿಕಾರಿಗಳ ಗೈರು ಹಾಜರಿ ಕಳ್ಳಾಟದ ಬಗ್ಗೆ ಪೌರಾಯುಕ್ತರಿಗೆ ಎಚ್ಚರಿಕೆ ನೀಡಿದರು. ಲೋಕಾಯುಕ್ತ ಅಧಿಕಾರಿಗಳು ದೂರ ಬಂದ ಸಮಯದಲ್ಲಿ ನಗರಸಭೆ ಕಚೇರಿಗೆ ಭೇಟಿ ನೀಡಿದ ಸಮಯದಲ್ಲಿ ಸುಮಾರು 33 ಸಿಬ್ಬಂದಿಗಳು ಗೈರು ಹಾಜರಾತಿ ಅಲ್ಲಿನ ವ್ಯವಸ್ಥೆ ಬಗ್ಗೆ ತೋರಿಸಿದೆ. ಕೂಡಲೇ ಗೈರು ಅಧಿಕಾರಿಗಳ ಬಗ್ಗೆ ಸರ್ಕಾರಕ್ಕೆ ಈಗಾಗಲೇ ಅವರ ಕ್ರಮ ಜರುಗಿಸಲು ಸೂಚನೆ ನೀಡಲಾಗಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದರು.
ನಗರಸಭೆ ಪರಿಸರ ಇಂಜಿನೀಯರಗಳು ಸರಿಯಾದ ರೀತಿಯಲ್ಲಿ ನಗರ ಸ್ವಚ್ಛ ಮಾಡುವುದಿಲ್ಲ ಎಂಬ ದೂರು ದಾಖಲಾಗಿದೆ. ಅಲ್ಲದೆ ಕಸ ವಿಲೇವಾರಿ ಮಾಡುವುದು ತಡವಾಗುತ್ತದೆ ಎಂಬದು ನಮಗೆ ಮಾಹಿತಿ ಬಂದಿದ್ದು, ತಾವುಗಳು ಸರಿಯಾದ ರೀತಿಯಲ್ಲಿ ಕೆಲಸ ಮಾಡಬೇಕು ಎಂದು ತಾಕೀತು ಮಾಡಿದರು.
ಸಭೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು ಹಾಜರಿದ್ದರು.
More Stories
ತಾಪಂ ಕೆಡಿಪಿ ಸಭೆಯಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗೆ ತರಾಟೆ..!
ಹೆದ್ದಾರಿಯಲ್ಲಿ ದರೋಡೆ ಮಾಡಲು ಹೊಂಚು ಹಾಕಿದ್ದವರು ಕಂಬಿ ಹಿಂದೆ
ನಗರಸಭೆ ನೀರಿನ ತೆರಿಗೆಯನ್ನು ನಿಮ್ಮ ಮೊಬೈಲನಲ್ಲಿ ಪಾವತಿಸಿ.