ರಾಣೆಬೇನ್ನೂರು: ಉತ್ತರ ಕರ್ನಾಟಕ ಹೆಬ್ಬಾಗಿಲು ಎಂದು ಗುರುತಿಸಿಕೊಂಡಿರುವ ಕುಮಾರಪಟ್ಟಣಂ ಗ್ರಾಮದಲ್ಲಿರುವ ಗ್ರಾಸಿಂ ಕಂಪನಿಯ ಹಿರಿಯ ಸಿಬ್ಬಂದಿ ಅವರು ಅನುಮಾನಸ್ಪದವಾಗಿ ತುಂಗಭದ್ರಾ ನದಿಯಲ್ಲಿ ಸಾವನ್ನಪ್ಪಿದ ಘಟನೆ ಬೆಳಕಿಗೆ ಬಂದಿದ್ದು, ಹಲವು ಅನುಮಾನಕ್ಕೆ ಕಾರಣವಾಗಿದೆ.
ಗ್ರಾಸಿಂ ಕಂಪನಿಯ ಪವರ್ ಪ್ಲಾಂಟ್ ವಿಭಾಗದಲ್ಲಿ ಸೂಪರವೈಸರ್ ಆಗಿ ಕೆಲಸ ಮಾಡುತ್ತಿದ್ದ ಬಿಹಾರ ಮೂಲದ ವಿಕಾಸ ಚಂದ್ರದೇವ ವಿಶ್ರಾ( 46) ಎಂಬ ಉದ್ಯೋಗಿ ಇದೀಗ ತುಂಗಭದ್ರಾ ನದಿಯಲ್ಲಿ ಅನುಮಾನಸ್ಪದವಾಗಿ ಶವ ಸಿಕ್ಕಿದೆ.
ಇವರು ಕಳೆದ ನಾಲ್ಕು ದಿನಗಳ ಹಿಂದೆ ವಾಕಿಂಗ್ ಹೋಗಿ ಬರುತ್ತೇನೆ ಎಂದು ಹೇಳಿ ಹೋದವರು ಮನೆಗೆ ವಾಪಸು ಬಂದಿರಲಿಲ್ಲ. ಈ ಹಿನ್ನೆಲೆ ಅವರ ಪತ್ನಿ ಕುಮಾರಪಟ್ಟಣಂ ಪೋಲಿಸ್ ಠಾಣೆಯಲ್ಲಿ ಪತಿಯನ್ನು ಹುಡುಕಿ ಕೊಡುವಂತೆ ಪ್ರಕರಣ ದಾಖಲಿಸಿದ್ದರು. ಆದರೆ ಇಂದು ಅವರ ಶವ ತುಂಗಭದ್ರಾ ನದಿಯಲ್ಲಿ ಸಿಕ್ಕಿದ್ದು ಹಲವು ಅನುಮಾನಕ್ಕೆ ಕಾರಣವಾಗಿದೆ ಎಂದು ಕಂಪನಿಯ ಸಿಬ್ಬಂದಿಯವರು ಮಾಹಿತಿ ನೀಡಿದ್ದಾರೆ. ಒಳ್ಳೆಯ ಸಿಬ್ಬಂದಿಯಾಗಿ ಕೆಲಸ ನಿರ್ವಹಣೆ ಮಾಡುತ್ತಿದ್ದರು ಆದರೆ ಯಾಕೆ ಅವರು ಸಾವನ್ನಪ್ಪಿದ್ದು ಎಂಬುದು ಪೊಲೀಸರು ಸರಿಯಾದ ತನಿಖೆ ಮೂಲಕ ತಿಳಿಯಲಿ ಎಂದು ಸಿಬ್ಬಂದಿ ಮಾತುಗಳಾಗಿದೆ.
More Stories
ತಾಪಂ ಕೆಡಿಪಿ ಸಭೆಯಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗೆ ತರಾಟೆ..!
ಹೆದ್ದಾರಿಯಲ್ಲಿ ದರೋಡೆ ಮಾಡಲು ಹೊಂಚು ಹಾಕಿದ್ದವರು ಕಂಬಿ ಹಿಂದೆ
ನಗರಸಭೆ ನೀರಿನ ತೆರಿಗೆಯನ್ನು ನಿಮ್ಮ ಮೊಬೈಲನಲ್ಲಿ ಪಾವತಿಸಿ.