ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ಬಿಜೆಪಿ, ಜೆಡಿಎಸ್ ಹಾಗೂ ರೈತ ನಾಯಕ ರವಿಂದ್ರಗೌಡ ಪಾಟೀಲ ನೇತೃತ್ವದಲ್ಲಿ ಬೃಹತ್ ರೈತರ ಹೋರಾಟ.

ನಗರದಲ್ಲಿ NDA ವತಿಯಿಂದ ಕಾಂಗ್ರೆಸ್ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ.

ಬೆಂಬಲ ಬೆಲೆ ನೀಡಲು ಆಗ್ರಹಿಸಿ ಸರ್ಕಾರದ ವಿರುದ್ಧ ನಾಳೆ ಬಿಜೆಪಿ-ಜೆಡಿಎಸ್ ಜಂಟಿ ಪ್ರತಿಭಟನೆ

ಹೆಂಡತಿ ಹೊಡೆದು ಕೊಲೆ ಮಾಡಿದ ಪತಿರಾಯ..

ನಾವು ಯಾರನ್ನು ಟಾರ್ಗೆಟ್ ಮಾಡಲ್ಲ, ಮಾಡಿದ್ರೆ ಬೀಡಲ್ಲ ಎಸ್ಪಿ ಯಶೋಧ ವಂಟಗೋಡಿ.

ದೈಹಿಕ ಸಂಪರ್ಕ ಮಾಡಿ ಯುವತಿಗೆ ಕೈಕೊಟ್ಟ ಯುವಕ. ಯುವತಿ ಆತ್ಮಹತ್ಯೆ ಹುಡಗನ‌ ಮನೆ ಮುಂದೆ ಶವವಿಟ್ಟು ಪ್ರತಿಭಟನೆ..

ತಮ್ಮನ ಸಾವಿನಿಂದ ಮನನೊಂದ ಅಕ್ಕನು ನೇಣಿಗೆ ಶರಣು…!

ಸಚಿವ ಶಿವಾನಂದ ಪಾಟೀರನ್ನ BJP ಎಂದ ರೊಬೋಟ್

ರಾಣೆಬೇನ್ನೂರ ನಗರದಲ್ಲಿ ಭವ್ಯವಾಗಿ ನಡೆದ ಆರ್ ಎಸ್ ಎಸ್ ಪಥ ಸಂಚಲನ, ಒಂದು ಸಾವಿರ ಗಣವೇಷಧಾರಿಗಳು ಭಾಗಿ

ಎರಡು ವರ್ಷದಲ್ಲಿ ಎಷ್ಟು ಬಾರಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಗೆ ಹಾಜರಾಗದ ದಲಿತ ವಿರೋಧಿ ಶಾಸಕ; ಮಾಜಿ ಶಾಸಕ ಅರುಣಕುಮಾರ ಪೂಜಾರ.

ಕುದರಿಹಾಳ ಗ್ರಾಮದಲ್ಲಿ ಸಿಡಿಲು ಬಡಿದು ಯುವ ಕೃಷಿಕ ಸಾವು

ಕೈ-ಕಮಲ ನಡುವೆ ರಾಜಕೀಯ ಪ್ರತಿಷ್ಠೆ; ನಗರಸಭೆ ಸಾಮಾನ್ಯ ಸಭೆ ಮುಂದೂಡಿಕೆ.

ಹಾನಗಲ್ ತಹಸೀಲ್ದಾರ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ.

ಬಿಗರ ಊಟ ಮಾಡಿ ಬರುತ್ತಿದ್ದವರು ಮಸಣಕ್ಕೆ *ನಿಂತಿದ್ದ ಟ್ರ್ಯಾಕ್ಟರ್ ಟ್ರೈಲರ್ ಗೆ ಟಾಟಾ ಸುಪ್ರೋ ಡಿಕ್ಕಿ* *ಸ್ಥಳದಲ್ಲಿಯೆ ಮೂವರ ದುರ್ಮರಣ, 20ಕ್ಕೂ ಅಧಿಕರಿಗೆ ಗಂಭೀರ ಗಾಯ*

ತಾಪಂ ಪ್ರಭಾರ ಇಓ ಬಸವರಾಜ ಶಿಡೇನೂರ ಬಳಿ ಒಂದೂವರೆ ಕೋಟಿ ಆಸ್ತಿ..

ಕಂದಾಯ ನಿರೀಕ್ಷ ಅಶೋಕ‌ ಅರಳೇಶ್ವರ ಬಳಿ ಕೋಟ್ಯಾಂತರ ಆಸ್ತಿ ಪತ್ತೆ.

ಕುರುಬ ಸಮಾಜವನ್ನು ಬಿಜೆಪಿ ಯಾಕೆ ವಿರೋಧ ಮಾಡುತ್ತದೆ, ಸಿದ್ದರಾಮಯ್ಯ ಜಾತ್ಯಾತೀತ; ನಾಯಕ ಮಾಜಿ ಸಚಿವ ಆರ್.ಶಂಕರ್

 

ರಾಣೆಬೇನ್ನೂರು: ರಾಜ್ಯದಲ್ಲಿ ಕುರುಬ ಸಮಾಜವನ್ನು ಹಾಗೂ ಹಿಂದುಳಿದ ಮುಖ್ಯಮಂತ್ರಿಯಾಗಿ ರಾಜ್ಯದ ಜಾತ್ಯಾತೀತ ನಾಯಕರಾಗಿ ಬೆಳೆದಿರುವ ಸಿಎಂ ಸಿದ್ದರಾಮಯ್ಯ ಅವರನ್ನು ಕುತಂತ್ರದಿಂದ ಕೆಳಗಿಳಿಸಲು ಬಿಜೆಪಿ ಮುಖಂಡರು ಹಾಗೂ ಜೆಡಿಎಸ್ ಷಡ್ಯಂತರದ ವಿರುದ್ಧ ರಾಜ್ಯಾದ್ಯಂತ ಕುರುಬ ಸಮಾಜ ಸೇರಿ ಇತರ ವರ್ಗದವರೊಂದಿಗೆ ಉಗ್ರ ಹೋರಾಟ ಕೈಗೊಳ್ಳಲಾಗುವುದೆಂದು ಮಾಜಿ ಸಚಿವ ಆರ್ ಶಂಕರ್ ಎಚ್ಚರಿಸಿದರು.

ಗುರುವಾರದಂದು ಸ್ಥಳೀಯ ಕುರಿ ಉಣ್ಣೆ ಸೊಸೈಟಿಯಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇರವಾಗಿ ಭಾಗಿಯಾಗಿಲ್ಲ. ಅವರ ಪತ್ನಿ ಪಾರ್ವತಿ ಹೆಸರಿನಲ್ಲಿ ಕಾನೂನು ರೀತಿಯ ನೋಟಿಫಿಕೇಶನ್ ಮೂಲಕ ಬದಲಿ ನಿವೇಶನಕ್ಕೆ ಸೈಟ್ ವಿತರಣೆಯಾಗಿದೆ. ಅದು ಬಿಜೆಪಿ ಸರ್ಕಾರದ 50 : 50 ಅನುಪಾತದಂತೆಯೇ ಆಗಿದೆ.

ಇದನ್ನೇ ತಿರುಚಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಪಕ್ಷಗಳು ಸಿದ್ದರಾಮಯ್ಯ ವಿರುದ್ಧ ಅಪಪ್ರಚಾರ ಮಾಡುತ್ತಾ ಸರ್ಕಾರದ ಮೇಲೆ ಗೂಭೆ ಕೂರಿಸಲು ಮುಂದಾಗಿರುವುದು ವಿಷಾದನೀಯ ಎಂದರು.

ಮುಖ್ಯಮಂತ್ರಿ ಆಗಿ ಪ್ರಾಮಾಣಿಕವಾಗಿ ಉತ್ತಮ ಕೆಲಸ ಮಾಡುತ್ತಿದ್ದು ,ಇದನ್ನು ಸಹಿಸದೆ ಅವರ ಮೇಲೆ ಹುನ್ನಾರ ಮಾಡುವ ದೃಷ್ಟಿಯಿಂದ ಬೇರೆಯವರ ಹಗರಣಗಳನ್ನು ಅವರ ಮೇಲೆ ಗೂಭೆ  ಕೂರಿಸುವ ಷಡ್ಯಂತರ ನಡೆಯುತ್ತಿದೆ ಎಂದು ಆಪಾದಿಸಿದರು.

 

ಆಡಳಿತ ಮತ್ತು ವಿರೋಧ ಪಕ್ಷದ ಬಗ್ಗೆ ಜನರೇ ಮಾತನಾಡಿಕೊಳ್ಳುತ್ತಿದ್ದಾರೆ. ಬಿಜೆಪಿ ಜೆಡಿಎಸ್ ವಿರುದ್ಧ ಜನರು ಆಕ್ರೋಶಗೊಂಡಿದ್ದು , ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಮಾಡುತ್ತಿರುವ ವ್ಯವಸ್ಥಿತ ಹುನ್ನಾರ ಇದಾಗಿದೆ . ಇಂತಹ ಷಡ್ಯಂತ್ರಕ್ಕೆ ತಿರುಗೇಟು ನೀಡಲು ಸರ್ವ ಸಮಾಜದವರೊಂದಿಗೆ ರಾಜ್ಯದ್ಯಂತ ಉಗ್ರ ಹೋರಾಟ ಮಾಡುವುದು ಅನಿವಾರ್ಯವಾಗಿದೆ  ಎಂದು ಶಂಕರ್ ಹೇಳಿದರು.

 

ಕುರುಬ ಸಮಾಜದ ರಾಜ್ಯ ಸದಸ್ಯ ಹಾಗೂ ಯುವ ನ್ಯಾಯವಾದಿ ಮೃತ್ಯುಂಜಯ ಗುದಗೇರ ಮಾತನಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಮೇಲಿನ ಆಪಾದನೆಗಳ ಬಗ್ಗೆ ಈಗಾಗಲೇ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಮೂಡಾ ಪ್ರಕರಣ ಕುರಿತು ತನಿಖೆ ನಡೆಸುತ್ತಿರುವುದು ಇಡೀ ದೇಶದಲ್ಲಿ ಪ್ರಥಮವಾಗಿದೆ.

 

ಬಿಜೆಪಿ ಮತ್ತು ಜೆಡಿಎಸ್ ನವರು ಉದ್ದೇಶಪೂರ್ವಕವಾಗಿ ಅವರ ಮೇಲೆ ಇಲ್ಲಸಲ್ಲದ ಆರೋಪಹರಿಸುತ್ತಿದ್ದು, ಮೈತ್ರಿ ಪಕ್ಷಗಳಿಗೆ ತಪ್ಪಾಗಿ ಕಂಡು ಬಂದರೆ ಕಾನೂನು ಹೋರಾಟ ಮಾಡಲಿ ಅದಕ್ಕೆ ತಮ್ಮ ಅಭ್ಯಂತರವಿಲ್ಲ . ಅನಾವಶ್ಯಕವಾಗಿ ಈ ರೀತಿ ಮಾಡಿದರೆ, ಇದು ಹೀಗೆಯೇ ಮುಂದುವರೆದರೆ ರಾಜ್ಯಾದ್ಯಂತ ಕುರುಬ ಸಮಾಜದಿಂದ ಪ್ರತಿಭಟನೆ ಮಾಡಲಾಗುವುದೆಂದು ಎಚ್ಚರಿಸಿದರು.

ಕುರುಬ ಸಮಾಜದ ತಾಲೂಕ ಅಧ್ಯಕ್ಷ ಷಣ್ಮುಖಪ್ಪ ಕಂಬಳಿ, ಶಿವಪ್ಪ ಮಣೇಗಾರ್ , ಆನಂದ ಹುಲಬನ್ನಿ, ಮೂರ್ತೆಪ್ಪ ಕಂಬಳಿ ,  ಸಿದ್ದಪ್ಪ ದೇವರಗುಡ್ಡ, ರವಿರಾಜ್ ಹುಲಗಮ್ಮನವರ್, ಪರ್ಸಪ್ಪ ಹುಲ್ಲತ್ತಿ, ಸಿದ್ದಪ್ಪ ಭಾಗಲವರ್  ಸೇರಿದಂತೆ ಮತ್ತಿತರರು ಇದ್ದರು

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!