ಬಹಳಷ್ಟು ಲಾಭ ಕೊಡುವುದಾಗಿ ನಂಬಿಸಿ 75.42 ಲಕ್ಷ ರೂ. ವಂಚನೆ

ಕಾಕೋಳ ಗ್ರಾಮದಲ್ಲಿ ಸೊಸೈಟಿಗೆ ಕನ್ನ ಹಾಕಿದ ಕಳ್ಳರು.

ಅಧಿಕಾರ ಶಾಶ್ವತವಲ್ಲ, ಜನರ ಸೇವೆ ನಿಜಾವಾದ ಶಾಶ್ವತ ಮಾಜಿ ಶಾಸಕ ಅರುಣಕುಮಾರ ಪೂಜಾರ

ಅರುಣಕುಮಾರ ಪೂಜಾರ ಜನ್ಮದಿನದ ನಿಮಿತ್ತ ನಾಳೆ ವಿವಿಧ ಕಾರ್ಯಕ್ರಮ

ನಂದಿಹಳ್ಳಿ ಗ್ರಾಮದಲ್ಲಿ ಸಾವಿನಲ್ಲಿ ಒಂದಾದ ದಂಪತಿಗಳು.!

ಶಾಸಕರ ಆಪ್ತಸಹಾಯಕ ಮನೆಯಲ್ಲಿ 21.30 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

ಹೆಂಡತಿ ಕತ್ತು ಕೊಯ್ದು ಕೊಲೆಗೆ ಯತ್ನಿಸಿದ ಪತಿರಾಯ..

ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಯುದ್ಧ ಟ್ಯಾಂಕರ್ ಸ್ಥಾಪನೆ ರಾಣೆಬೇನ್ನೂರು ಹೆಮ್ಮೆ; ಸಭಾಧ್ಯಕ್ಷ ಯು.ಟಿ.ಖಾದರ

ಸದನದಲ್ಲಿ ಆಡಿದ ಮಾತಿಗೆ ಕ್ಷಮೆಯಾಚಿಸುವೆ, ಪಕ್ಷಾತೀತ ಕಾರ್ಯಕ್ರಮಕ್ಕೆ ಸಾಥ್ ನೀಡಿ; ಶಾಸಕ ಪ್ರಕಾಶ ಕೋಳಿವಾಡ.

ಯುದ್ಧ ಟ್ಯಾಂಕರ್ ಕಟ್ಟೆಗೆ ಹಾಕಿರುವ ಶಾಸಕರ ಪೋಟೋ ಹಾಗೂ ಪಿಕೆಕೆ ಹೆಸರಿಗೆ ಬಿಜೆಪಿ ಆಕ್ಷೇಪ. ಸರ್ಕಾರದ ಅನುದಾನದಲ್ಲಿ ಶಾಸಕರು ಶಿಷ್ಟಾಚಾರ ಪಾಲಿಸಲಿ.

ನಿಂತಿದ್ದ ಟಿಪ್ಪರಗೆ ಬೈಕ್ ಡಿಕ್ಕಿ ಜೋಯಿಸರಹರಳಹಳ್ಳಿ ಗ್ರಾಮದ ಎಂಟೆಕ್ ಪದವಿಧರ ಸಾವು

ಕುರುಬ ಸಮುದಾಯ ಹಾಗೂ ಸಿಎಂ ವಿರುದ್ಧ ಅವಾಚ್ಯವಾಗಿ ನಿಂದನೆ ಮಾಡಿದವರು ಮೇಲೆ‌ ಕಾನೂನು ಕ್ರಮಕ್ಕೆ ಒತ್ತಾಯ..

ಡೆಂಗ್ಯೂ ಜ್ವರ ಶಂಕೆ ಹಿನ್ನೆಲೆ ಯುವಕ ಸಾವು, ಕರೂರು ಗ್ರಾಮದಲ್ಲಿ ಘಟನೆ.

ಸತತ ಆರು ಗಂಟೆಗಳ ಕಾರ್ಯಚರಣೆ ನಂತರ ಸಿಕ್ಕ ಚಿರತೆ

ನಾಡಿಗೇರ ಓಣಿಯ ಕಾಕಿಯರ ಮನೆಯಲ್ಲಿ ಅವಿತಕೊಂಡ ಕುಂತ ಚಿರತೆ…!!

ಹೆಂಡತಿ ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡ ಗಂಡ ತಡಸ ಗ್ರಾಮದಲ್ಲಿ ಘಟನೆ

ನದಿ ಹಾರಿದ ಮಹಿಳೆ 2ಕೋಟಿ ಸಾಲ ಮಾಡಿದ್ದಳು ಡಿಸಿ ಮಹಾಂತೇಶ ವಿಜಯದಾನಮ್ಮನವರ ಮಾಹಿತಿ.

ಆತ್ಮಹತ್ಯೆ ಮಾಡಿಕೊಳ್ಳಲು ಹೋದ ಮಹಿಳೆ ತುಂಗಭದ್ರಾ ನದಿಯಲ್ಲಿ ಈಜಿ ಜೀವ ಉಳಿಸಿಕೊಂಡ ಗಟ್ಟಿಗಿತ್ತಿ…!

ದೇವರಗುಡ್ಡ ಮಾಲತೇಶ ಸ್ವಾಮಿಯ ಆಡಳಿತ ತಹಸೀಲ್ದಾರ್ ಸುಪರ್ದಿಗೆ…

ರುದ್ರಪ್ಪ ಲಮಾಣಿ ಮೇಲೆ ಚಿರತೆ ದಾಳಿ, ಆಸ್ಪತ್ರೆಗೆ ದಾಖಲು..!

ಕುರುಬ ಸಮಾಜವನ್ನು ಬಿಜೆಪಿ ಯಾಕೆ ವಿರೋಧ ಮಾಡುತ್ತದೆ, ಸಿದ್ದರಾಮಯ್ಯ ಜಾತ್ಯಾತೀತ; ನಾಯಕ ಮಾಜಿ ಸಚಿವ ಆರ್.ಶಂಕರ್

 

ರಾಣೆಬೇನ್ನೂರು: ರಾಜ್ಯದಲ್ಲಿ ಕುರುಬ ಸಮಾಜವನ್ನು ಹಾಗೂ ಹಿಂದುಳಿದ ಮುಖ್ಯಮಂತ್ರಿಯಾಗಿ ರಾಜ್ಯದ ಜಾತ್ಯಾತೀತ ನಾಯಕರಾಗಿ ಬೆಳೆದಿರುವ ಸಿಎಂ ಸಿದ್ದರಾಮಯ್ಯ ಅವರನ್ನು ಕುತಂತ್ರದಿಂದ ಕೆಳಗಿಳಿಸಲು ಬಿಜೆಪಿ ಮುಖಂಡರು ಹಾಗೂ ಜೆಡಿಎಸ್ ಷಡ್ಯಂತರದ ವಿರುದ್ಧ ರಾಜ್ಯಾದ್ಯಂತ ಕುರುಬ ಸಮಾಜ ಸೇರಿ ಇತರ ವರ್ಗದವರೊಂದಿಗೆ ಉಗ್ರ ಹೋರಾಟ ಕೈಗೊಳ್ಳಲಾಗುವುದೆಂದು ಮಾಜಿ ಸಚಿವ ಆರ್ ಶಂಕರ್ ಎಚ್ಚರಿಸಿದರು.

ಗುರುವಾರದಂದು ಸ್ಥಳೀಯ ಕುರಿ ಉಣ್ಣೆ ಸೊಸೈಟಿಯಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇರವಾಗಿ ಭಾಗಿಯಾಗಿಲ್ಲ. ಅವರ ಪತ್ನಿ ಪಾರ್ವತಿ ಹೆಸರಿನಲ್ಲಿ ಕಾನೂನು ರೀತಿಯ ನೋಟಿಫಿಕೇಶನ್ ಮೂಲಕ ಬದಲಿ ನಿವೇಶನಕ್ಕೆ ಸೈಟ್ ವಿತರಣೆಯಾಗಿದೆ. ಅದು ಬಿಜೆಪಿ ಸರ್ಕಾರದ 50 : 50 ಅನುಪಾತದಂತೆಯೇ ಆಗಿದೆ.

ಇದನ್ನೇ ತಿರುಚಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಪಕ್ಷಗಳು ಸಿದ್ದರಾಮಯ್ಯ ವಿರುದ್ಧ ಅಪಪ್ರಚಾರ ಮಾಡುತ್ತಾ ಸರ್ಕಾರದ ಮೇಲೆ ಗೂಭೆ ಕೂರಿಸಲು ಮುಂದಾಗಿರುವುದು ವಿಷಾದನೀಯ ಎಂದರು.

ಮುಖ್ಯಮಂತ್ರಿ ಆಗಿ ಪ್ರಾಮಾಣಿಕವಾಗಿ ಉತ್ತಮ ಕೆಲಸ ಮಾಡುತ್ತಿದ್ದು ,ಇದನ್ನು ಸಹಿಸದೆ ಅವರ ಮೇಲೆ ಹುನ್ನಾರ ಮಾಡುವ ದೃಷ್ಟಿಯಿಂದ ಬೇರೆಯವರ ಹಗರಣಗಳನ್ನು ಅವರ ಮೇಲೆ ಗೂಭೆ  ಕೂರಿಸುವ ಷಡ್ಯಂತರ ನಡೆಯುತ್ತಿದೆ ಎಂದು ಆಪಾದಿಸಿದರು.

 

ಆಡಳಿತ ಮತ್ತು ವಿರೋಧ ಪಕ್ಷದ ಬಗ್ಗೆ ಜನರೇ ಮಾತನಾಡಿಕೊಳ್ಳುತ್ತಿದ್ದಾರೆ. ಬಿಜೆಪಿ ಜೆಡಿಎಸ್ ವಿರುದ್ಧ ಜನರು ಆಕ್ರೋಶಗೊಂಡಿದ್ದು , ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಮಾಡುತ್ತಿರುವ ವ್ಯವಸ್ಥಿತ ಹುನ್ನಾರ ಇದಾಗಿದೆ . ಇಂತಹ ಷಡ್ಯಂತ್ರಕ್ಕೆ ತಿರುಗೇಟು ನೀಡಲು ಸರ್ವ ಸಮಾಜದವರೊಂದಿಗೆ ರಾಜ್ಯದ್ಯಂತ ಉಗ್ರ ಹೋರಾಟ ಮಾಡುವುದು ಅನಿವಾರ್ಯವಾಗಿದೆ  ಎಂದು ಶಂಕರ್ ಹೇಳಿದರು.

 

ಕುರುಬ ಸಮಾಜದ ರಾಜ್ಯ ಸದಸ್ಯ ಹಾಗೂ ಯುವ ನ್ಯಾಯವಾದಿ ಮೃತ್ಯುಂಜಯ ಗುದಗೇರ ಮಾತನಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಮೇಲಿನ ಆಪಾದನೆಗಳ ಬಗ್ಗೆ ಈಗಾಗಲೇ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಮೂಡಾ ಪ್ರಕರಣ ಕುರಿತು ತನಿಖೆ ನಡೆಸುತ್ತಿರುವುದು ಇಡೀ ದೇಶದಲ್ಲಿ ಪ್ರಥಮವಾಗಿದೆ.

 

ಬಿಜೆಪಿ ಮತ್ತು ಜೆಡಿಎಸ್ ನವರು ಉದ್ದೇಶಪೂರ್ವಕವಾಗಿ ಅವರ ಮೇಲೆ ಇಲ್ಲಸಲ್ಲದ ಆರೋಪಹರಿಸುತ್ತಿದ್ದು, ಮೈತ್ರಿ ಪಕ್ಷಗಳಿಗೆ ತಪ್ಪಾಗಿ ಕಂಡು ಬಂದರೆ ಕಾನೂನು ಹೋರಾಟ ಮಾಡಲಿ ಅದಕ್ಕೆ ತಮ್ಮ ಅಭ್ಯಂತರವಿಲ್ಲ . ಅನಾವಶ್ಯಕವಾಗಿ ಈ ರೀತಿ ಮಾಡಿದರೆ, ಇದು ಹೀಗೆಯೇ ಮುಂದುವರೆದರೆ ರಾಜ್ಯಾದ್ಯಂತ ಕುರುಬ ಸಮಾಜದಿಂದ ಪ್ರತಿಭಟನೆ ಮಾಡಲಾಗುವುದೆಂದು ಎಚ್ಚರಿಸಿದರು.

ಕುರುಬ ಸಮಾಜದ ತಾಲೂಕ ಅಧ್ಯಕ್ಷ ಷಣ್ಮುಖಪ್ಪ ಕಂಬಳಿ, ಶಿವಪ್ಪ ಮಣೇಗಾರ್ , ಆನಂದ ಹುಲಬನ್ನಿ, ಮೂರ್ತೆಪ್ಪ ಕಂಬಳಿ ,  ಸಿದ್ದಪ್ಪ ದೇವರಗುಡ್ಡ, ರವಿರಾಜ್ ಹುಲಗಮ್ಮನವರ್, ಪರ್ಸಪ್ಪ ಹುಲ್ಲತ್ತಿ, ಸಿದ್ದಪ್ಪ ಭಾಗಲವರ್  ಸೇರಿದಂತೆ ಮತ್ತಿತರರು ಇದ್ದರು

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!