ತಾಪಂ ಸಾಮಾನ್ಯ ಸಭೆಗೆ ತಹಸೀಲ್ದಾರ ಗೈರು, ನೋಟಿಸ್ ನೀಡುವಂತೆ ಉಪಕಾರ್ಯದರ್ಶಿ ಸೂಚನೆ

ತುಂಗಭದ್ರಾ ನದಿಯಲ್ಲಿ 15 ಕಿ.ಮೀ. ಈಜಿ ಪ್ರಾಣ ಉಳಿಸಿಕೊಂಡ ಮೈಸೂರಿನ ವೃದ್ಧ…!

ಮೂರು ಬೈಕಗಳ ನಡುವೆ ಭೀಕರ ಅಪಘಾತ ಒರ್ವ ಯುವಕ ಸಾವು, ಮೂವರು ಗಂಭೀರ.

ಆಟೋ ಚಾಲಕರಿಗೆ ಸನ್ಮಾನ ಸಮಾರಂಭ ಮಾಡಲಿರುವ “ಪರಮೇಶಣ್ಣ ಗೂಳಣ್ಣನವರ”

ಯಾವ ಸಮಾಜಕ್ಕೂ, ಜಾತಿಗೂ ತಾರತಮ್ಯ ಮಾಡಲ್ಲ ಶಾಸಕ‌ ಪ್ರಕಾಶ ಕೋಳಿವಾಡ,

ನಗರದ ಬಳ್ಳಾರಿ ಕಲ್ಯಾಣ ಮಂಟಪದಲ್ಲಿ ಐದು ದಿನಗಳ ಕಾಲ ಹಲಸು-ಮಾವು‌‌ ಮೇಳ.

ಹಾವೇರಿ ನೂತನ ಎಸ್ಪಿಯಾಗಿ ಮಹಿಳಾ ಅಧಿಕಾರಿ, ಯಾರು ಅವರು!

ರಾಣೆಬೆನ್ನೂರ ನಗರದಲ್ಲಿ ನಕಲಿ ರಸಗೊಬ್ಬರ ಪತ್ತೆ, ವಶಪಡಿಸಿಕೊಂಡ ಕೃಷಿ ಅಧಿಕಾರಿಗಳು.

ಯಕಲಾಸಪುರ ಗ್ರಾಮ ಚಿರತೆಗಳ ತಾಣ, ಹೆಣ್ಣು ಚಿರತೆ ಮರಿಗಳಿಗೆ ಜನ್ಮ ನೀಡಿರುವ ಹಾಕಿರುವ ಶಂಕೆ…

ಬಿರ್ಲಾ ಕಂಪನಿಯಲ್ಲಿ ಕೆಲಸ ಮಾಡುವಾಗ ಹೃದಯಾಘಾತದಿಂದ ನೌಕರ ಸಾವು.

ಸಂತೋಷಕುಮಾರ ಪಾಟೀಲಗೆ Z ಕನ್ನಡ ನ್ಯೂಸ್ ವತಿಯಿಂದ ಯುವರತ್ನ ಪ್ರಶಸ್ತಿ.

ಸ್ವಚ್ಛ ಕೈಯಿಂದ ಕೆಲಸ ಮಾಡಿ‌ ಇಲ್ಲ ರಾಜೀನಾಮೆ ಕೊಟ್ಟು ಹೊರಗೆ ಹೋಗಿ; ಲೋಕಾಯುಕ್ತ ಅಧಿಕಾರಿಗಳು.

ನಾಳೆ ನಗರದಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಅಹವಾಲು ಸ್ವೀಕಾರ..

ಇಸ್ಪೀಟು ಅಡ್ಡೆ ಮೇಲೆ ಹಲಗೇರಿ ಪೋಲಿಸರ ದಾಳಿ, ಹತ್ತು ಜನರು ಮೇಲೆ ಪ್ರಕರಣ

ಬೆಟ್ಟ ಮಲ್ಲಪ್ಪನ ಗುಡ್ಡ ಇನ್ನೂ ಪ್ರವಾಸಿ ತಾಣ ಸಚಿವ ಹೆಚ್.ಕೆ.ಪಾಟೀಲ.

ರಾಹುಲ್ ಗಾಂಧಿ ಖಾಲಿ ಸಂವಿಧಾನ‌ ಬುಕ್ ಇಟ್ಟಕೊಂಡು ಓಡಾಡುತ್ತಿದ್ದಾರೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ನನ್ನ ವಿರುದ್ಧ ಆರೋಪ‌ ಮಾಡಿರುವರ ಮೇಲೆ ಮಾನನಷ್ಟ ಮೊಕದ್ದಮೆ ಹಾಕುವೆ ಸಿದ್ಧಾರೂಢ‌ ಮಠದ ಧರ್ಮದರ್ಶಿ ಸಿದ್ದನಗೌಡ ಪಾಟೀಲ..

ಕಳಪೆ ಬೀಜ ಮಾರಾಟ ಮಾಡಿದ್ದ ಐದು ಅಂಗಡಿಗೆ ಬೀಗ ಮುದ್ರೆ…!

ಗುಡಗೂರು ಗ್ರಾಮದಲ್ಲಿ ವೃದ್ಧನ ಮೇಲೆ ಹರಿದ ಖಾಸಗಿ ಶಾಲೆಯ ಬಸ್.

ತಾಲೂಕಿನ ಒಂದೇ ದಿನ ಮೂರು ಸಾವಿನ ಪ್ರಕರಣಗಳು ದಾಖಲು..! ಘಟನೆಗಳು ಎಲ್ಲೇಲಿ?

ಮಾನವ ಬಂಧುತ್ವ ವೇದಿಕೆ ವತಿಯಿಂದ ಬಸವ ಪಂಚಮಿ‌ ಆಚರಣೆ, ಕಿವುಡು ಮತ್ತು ಮೂಕ‌ ಮಕ್ಕಳಿಗೆ ಹಾಲು, ಹಣ್ಣು ವಿತರಣೆ

ರಾಣೇಬೆನ್ನೂರು: ಧಾರ್ಮಿಕ ಹೆಸರಿನಲ್ಲಿ ಇತ್ತಿಚೆಗೆ ದಿನಗಳಲ್ಲಿ ಮೂಢನಂಬಿಕೆ ಮೂಲಕ ಸಮಾಜದ ದಿಕ್ಕು ತಪ್ಪಿಸುವ ಕೆಲದ ಮಾಡುತ್ತಿದ್ದು, ಅವುಗಳನ್ನು ಸರಿದೂಗಿಸಲು ಮಾನವ ಬಂಧುತ್ವ ವೇದಿಕೆ ಸದಾ ಸಿದ್ದವಿದೆ ಎಂದು ಮಾನವ ಬಂಧುತ್ವ ವೇದಿಕೆ ತಾಲೂಕ ಸಂಚಾಲಕ ರಮೇಶ ಗೋಣಿಗೆರಿ ಹೇಳಿದರು.

ನಗರದ ರೇಣುಕಾ ಎಲ್ಲಮ್ಮ ಕಿವುಡು ಮತ್ತು ಮಕ್ಕಳ ಶಾಲೆಯಲ್ಲಿ ಮಾನವ ಬಂಧುತ್ವ ಹಾಗೂ ವಿವಿಧ ದಲಿತಪರ ಸಂಘಟನೆಗಳ ಆಶ್ರಯದಲ್ಲಿ ನಾಗರ ಪಂಚಮಿಯ ದಿನ ಬಸವ ಪಂಚಮಿ ಅಂಗವಾಗಿ ಹಾಲು,ಹಣ್ಣು ವಿತರಣೆ ಮಾಡಿ ಮಾತನಾಡಿದರು.

 

ನಾಗರಪಂಚಮಿ ದಿನ  ನಾಗರಹಾವು ಹಾಗೂ ಹುತ್ತಕ್ಕೆ ಹಾಲು ಎರೆದು ಹಬ್ಬ ಆಚರಣೆ ಮಾಡಲಾಗುತ್ತದೆ. ಆದರೆ ಹಾವು ಎಂದಿಗೂ ಸಸ್ಯಹಾರಿ ಪ್ರಾಣಿಯಲ್ಲ, ಅದು ಮಾಂಸಹಾರಿ ಪ್ರಾಣಿಯಾಗಿದೆ. ಇಂತಹ  ಪೌಷ್ಠಿಕ ಆಹಾರವನ್ನು ಹುತ್ತಕ್ಕೆ ಹಾಕುವ ಮೂಲಕ ನಮ್ಮಲ್ಲಿ ಮೌಡ್ಯ ತುಂಬುತ್ತಿದ್ದಾರೆ. ಇಂತಹ ಮೂಢನಂಬಿಕೆಗಳನ್ನು ಪೂರೋಹಿತಶಾಯಿಗಳು ನಮ್ಮಲ್ಲಿ ತುಂಬಿದ್ದಾರೆ. ಈ ನಿಟ್ಟಿನಲ್ಲಿ ಈ ವೇದಿಕೆ ಜನರಲ್ಲಿ ಜಾಗೃತಿ ಮೂಡಿಸಿ ಅದೇ ಹಾಲನ್ನು ಅನಾಥ ಮಕ್ಕಳಿಗೆ ಹಾಗೂ ಬಡ ಮಕ್ಕಳಿಗೆ ವಿತರಣೆ ಮಾಡಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಮುಖಂಡರಾದ ರವೀಂದ್ರಗೌಡ ಪಾಟೀಲ, ಚಂದ್ರಪ್ಪ ಬೇಡರ, ಕರಬಸಪ್ಪ‌ಕೂಲೇರ, ರಾಜು ಮಾದಮ್ಮಾನವರ, ಬೀರಪ್ಪ ಲಮಾಣಿ, ಬಸವರಾಜ ಬೋವಿ, ಅಶೋಕ ನಾಯ್ಕ, ಭರಮಪ್ಪ ಕೊರಕಲಿ,‌ ಸದ್ಮಮ್ ಹುಸೇನ, ಸಂಜೀವ ಶಿಡಗನಾಳ ಸೇರಿದಂತೆ ಇತರರು ಹಾಜರಿದ್ದರು.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!