ರಾಣೇಬೆನ್ನೂರು : ರಾಜ್ಯಪಾಲರು ಮುಡಾ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡುವ ಮೂಲಕ ಕೇಂದ್ರ ಸರ್ಕಾರದ ಕೈಗೊಂಬೆಯAತೆ ವರ್ತಿಸುತ್ತಿರುವುದು ಸಾಬಿತಾದಂತಾಗಿದೆ ಎಂದು ಕರ್ನಾಟಕ ಪ್ರಾದೇಶಿಕ ಕುರುಬ ಸಂಘದ ಯುವ ಘಟಕದ ನಿರ್ದೇಶಕ ಹಾಗೂ ಕಾಂಗ್ರೇಸ್ ನಗರ ಘಟಕದ ಓಬಿಸಿ ಅಧ್ಯಕ್ಷ ಆನಂದ ಹುಲಬನ್ನಿ ತಿಳಿಸಿದರು.
ಈ ಕುರಿತು ಪತ್ರಿಕೆಗೆ ಅವರು ನೀಡಿರುವ ಹೇಳಿಕೆಯಂತೆ, ರಾಜ್ಯದಲ್ಲಿ ಕುರುಬ ಸಮಾಜದ ಜನಪ್ರಿಯ ನಾಯಕ ಹಾಗೂ ಅಹಿಂದ ವರ್ಗದ ಆಶಾಕಿರಣವಾಗಿರುವ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಕ್ಕೆ ಇಳಿಸುವ ಕುತಂತ್ರ ಇದಾಗಿದೆ. ನಿವೇಶನಗಳ ಹಂಚಿಕೆಯನ್ನು ರೂಪಿಸಿದ್ದು ಹಿಂದಿನ ಬಿಜೆಪಿ ಸರ್ಕಾರವೇ ಆಗಿದೆ. ಸಿದ್ದರಾಮಯ್ಯ ಪತ್ನಿಯ ಸಹೋದರ ತಮ್ಮ ಸಹೋದರಿಗೆ ಅರಿಷಿಣ ಕುಂಕುಮ ರೂಪದಲ್ಲಿ ಆಸ್ತಿ ಕೊಟ್ಟಿದ್ದಾರೆ. ಅದನ್ನು ಸರಿಯಾಗಿ ಅರ್ಥೈಸಿಕೊಳ್ಳದ ರಾಜ್ಯಪಾಲರು ಇದೀಗ ಅವರ ವಿರುದ್ಧ ತನಿಖೆಗೆ ಅನುಮತಿ ನೀಡಿರುವುದು ಸಮಂಜಸವಲ್ಲ ಇದು ಅತ್ಯಂತ ಖಂಡನೀಯವಾಗಿದೆ. ಮುಡಾ ವಿಷಯದಲ್ಲಿ ಅನಗತ್ಯವಾಗಿ ಸಿದ್ದರಾಮಯ್ಯ ಮೇಲೆ ಗೂಬೆ ಕೂರಿಸಲಾಗುತ್ತಿದೆ. ಹಾಗೇ ನೋಡಿದರೆ ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಸಾಕಷ್ಟು ಹಗರಣಗಳಾಗಿವೆ. ಅದನ್ನು ಕೈಬಿಟ್ಟು ಸಿಎಂ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ.
ಸಿದ್ದರಾಮಯ್ಯ ಕರ್ನಾಟಕದ ಜನಪ್ರಿಯ ರಾಜಕಾರಣಿಯಾಗಿದ್ದಾರೆ. ಇದನ್ನು ಸಹಿಸದ ಬಿಜೆಪಿಗರು ದೆಹಲಿ ಸಿಎಂ ಅರವಿಂದ ಕ್ರೇಜಿವಾಲ್, ಜಾಖಂಡ್ ಸಿಎಂ ಹೇಮಂತ್ ಸೋರೆನ್ ರೀತಿ ಜೈಲಿಗೆ ಕಳುಹಿಸಿ ಹಿಂಬಾಗಿಲ ಮೂಲಕ ಅಧಿಕಾರ ಹಿಡಿಯುವ ಹುನ್ನಾರ ನಡೆಸುತ್ತಿದ್ದಾರೆ. ಮುಡಾ ವಿಷಯದಲ್ಲಿ ಅನಗತ್ಯವಾಗಿ ಸಿದ್ದರಾಮಯ್ಯ ಮೇಲೆ ಗೂಬೆ ಕೂರಿಸಲು ಬಲೆ ಹೆಣೆಯುತ್ತಿದ್ದಾರೆ. ಹಾಗೇ ನೋಡಿದರೆ ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಸಾಕಷ್ಟು ಹಗರಣಗಳಾಗಿವೆ. ಅದನ್ನು ಕೈಬಿಟ್ಟು ಸಿಎಂ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಇದನ್ನು ಇದೇ ರೀತಿ ಮುಂದುವರೆಸಿದಲ್ಲಿ ನಮ್ಮ ಸಮಾಜ ಹಾಗೂ ಅಹಿಂದ ವರ್ಗಗಳ ಜತೆಗೂಡಿ ರಾಜ್ಯಾದ್ಯಂತ ತೀವ್ರ ಸ್ವರೂಪದ ಹೋರಾಟ ಕೈಗೆತ್ತಿಕೊಳ್ಳಲಾಗುವುದು ಎಂದರು.
More Stories
ತಾಪಂ ಕೆಡಿಪಿ ಸಭೆಯಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗೆ ತರಾಟೆ..!
ಹೆದ್ದಾರಿಯಲ್ಲಿ ದರೋಡೆ ಮಾಡಲು ಹೊಂಚು ಹಾಕಿದ್ದವರು ಕಂಬಿ ಹಿಂದೆ
ನಗರಸಭೆ ನೀರಿನ ತೆರಿಗೆಯನ್ನು ನಿಮ್ಮ ಮೊಬೈಲನಲ್ಲಿ ಪಾವತಿಸಿ.