ರಾಣೆಬೇನ್ನೂರು: ಹಾವೇರಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಆಗಮಿಸಿರುವ ವಿಜಯಮಹಂತೇಶ ದಾನಮ್ಮನವರ ರಾಣೆಬೇನ್ನೂರು ನಗರಕ್ಕೆ ಆಗಮಿಸಿ ತಹಸೀಲ್ದಾರ ಕಚೇರಿ, ನಗರಸಭೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪ್ರಥಮವಾಗಿ ತಹಸೀಲ್ದಾರ ಕಚೇರಿಗೆ ಭೇಟಿ ನೀಡಿದ ಅವರು ವಿವಿಧ ವಿಭಾಗಕ್ಕೆ ಭೇಟಿ ನೀಡಿ ಆಡಳಿತ ನಿರ್ವಹಣೆ ಬಗ್ಗೆ ಸಿಬ್ಬಂದಿ ಬಳಿ ಮಾಹಿತಿ ಪಡೆದುಕೊಂಡರು. ನಂತರ ಆಹಾರ ಇಲಾಖೆಗೆ ತೆರಳಿದಾಗ ಪಡಿತರ ಚೀಟಿ ವಿತರಣೆ ಮಾಹಿತಿ ಕೇಳಿದಾಗ ಸಿಬ್ಬಂದಿ ಬಳಿ ಸರಿಯಾದ ಮಾಹಿತಿ ಇರಲಿಲ್ಲ. ಇದರಿಂದ ಗರಂ ಆದ ಡಿಸಿ ತಹಸೀಲ್ದಾರ ಅವರಿಗೆ ಇವರ ಮೇಲೆ ಕ್ರಮ ಕೈಗೊಳ್ಳಿ ಎಂದು ಸೂಚನೆ ನೀಡಿದರು. ಅಲ್ಲದೆ ಪಡಿತರ ಚೀಟಿ ವಿತರಣೆ ಮಾಡುವಂತೆ ಸರ್ಕಾರ ಈಗಾಗಲೇ ಸೂಚನೆ ನೀಡಿದೆ ಈವರೆಗೆ ಎಷ್ಟು ನೀಡಿದ್ದಿರಾ ಎಂದು ಕೇಳಿದಾಗ ಕೇವಲ 650 ನೀಡಿದ್ದೇವಿ ಎಂದು ಸಿಬ್ಬಂದಿ ಹೇಳಿದರು.
ಇದರಿಂದ ಕೆಂಡಾಮಂಡಲವಾದ ಡಿಸಿ ಇವರು ಮಾಡುವ ಕೆಲಸದಲ್ಲಿ ಕರ್ತವ್ಯ ಲೋಪ ಕಂಡ ಬಂದ ಕಾರಣ ಆಹಾರ ಇಲಾಖೆಯ ಆಹಾರ ನಿರೀಕ್ಷಕರಾದ ಪಾಟೀಲ ಅವರಿಗೆ ನೋಟಿಸ್ ನೀಡುವಂತೆ ಡಿಸಿ ತಹಸೀಲ್ದಾರ ಆರ್.ಎಚ್.ಭಾಗವಾನ ಅವರಿಗೆ ತಿಳಿಸಿದರು.
ನಂತರ ನಗರಸಭೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಅಲ್ಲಿ ಸಹ ಸಿಬ್ಬಂದಿ ಬಳಿ ಮಾಹಿತಿ ಹಾಗುಹ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದರು. ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಕೆಲಸ ಮಾಡಿಕೊಡಲು ಹಾಗೂ ಮಧ್ಯವರ್ತಿಗಳ ಮೂಲಕ ಕೆಲಸ ಮಾಡಿಸಲು ಬಂದವರಿಗೆ ಯಾವುದೇ ಆದ್ಯತೆ ನೀಡಬಾರದು ಎಂದು ಪೌರಾಯುಕ್ತರಾದ ಎಫ್.ಐ.ಇಂಗಳಗಿ ಅವರಿಗೆ ತಿಳಿಸಿದರು.
ನಗರಸಭೆಯ ಕಂದಾಯ ಇಲಾಖೆ, ಕುಡಿಯುವ ನೀರು ವಿಭಾಗ, ಕಟ್ಟಡ ಪರವಾನಗಿ ವಿಭಾಗಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸದಸ್ಯರ ಸಮಸ್ಯೆ ಆಲಿಸಿದ ಜಿಲ್ಲಾಧಿಕಾರಿಗಳು…
ರಾಣೆಬೇನ್ನೂರು ನಗರಸಭೆಯ ಸದಸ್ಯರ ಜತೆ ಜಿಲ್ಲಾಧಿಕಾರಿಗಳು ಚರ್ಚೆ ನಡೆಸಿದರು. ನಗರದಲ್ಲಿ ಸಂಚಾರ ದಟ್ಟಣೆ, ಸ್ವಚ್ಚತೆ ಹಾಗೂ ಪರಿಸರ ಕಾಳಜಿ ಬಗ್ಗೆ ಅಧಿಕಾರಿಗಳ ಗಮನ ವಹಿಸಬೇಕು ಎಂದು ಜಿಲ್ಲಾಧಿಕಾರಿಗೆ ಮನವಿ ಮಾಡಿದರು. ಅಲ್ಲದೆ ನಗರ ಅಭಿವೃದ್ಧಿಗೆ ಸಹಕಾರ ನೀಡುವಂತೆ ಜಿಲ್ಲಾಧಿಕಾರಿಗಳು ಸಹ ಸದಸ್ಯರಿಗೆ ಮನವಿ ಮಾಡಿದರು.
ಭೇಟಿ ಸಮಯದಲ್ಲಿ ತಹಸೀಲ್ದಾರ ಆರ್.ಎಚ್.ಭಾಗವಾನ, ಪೌರಾಯುಕ್ತರಾದ ಎಫ್.ಐ.ಇಂಗಳಗಿ, ಅಶೋಕ ಅರಳಿ, ಹರೀಶ ಸೇರಿದಂತೆ ವಿವಿಧ ಅಧಿಕಾರಿಗಳು ಹಾಜರಿದ್ದರು
More Stories
ತಾಪಂ ಕೆಡಿಪಿ ಸಭೆಯಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗೆ ತರಾಟೆ..!
ಹೆದ್ದಾರಿಯಲ್ಲಿ ದರೋಡೆ ಮಾಡಲು ಹೊಂಚು ಹಾಕಿದ್ದವರು ಕಂಬಿ ಹಿಂದೆ
ನಗರಸಭೆ ನೀರಿನ ತೆರಿಗೆಯನ್ನು ನಿಮ್ಮ ಮೊಬೈಲನಲ್ಲಿ ಪಾವತಿಸಿ.