ತಾಪಂ ಸಾಮಾನ್ಯ ಸಭೆಗೆ ತಹಸೀಲ್ದಾರ ಗೈರು, ನೋಟಿಸ್ ನೀಡುವಂತೆ ಉಪಕಾರ್ಯದರ್ಶಿ ಸೂಚನೆ

ತುಂಗಭದ್ರಾ ನದಿಯಲ್ಲಿ 15 ಕಿ.ಮೀ. ಈಜಿ ಪ್ರಾಣ ಉಳಿಸಿಕೊಂಡ ಮೈಸೂರಿನ ವೃದ್ಧ…!

ಮೂರು ಬೈಕಗಳ ನಡುವೆ ಭೀಕರ ಅಪಘಾತ ಒರ್ವ ಯುವಕ ಸಾವು, ಮೂವರು ಗಂಭೀರ.

ಆಟೋ ಚಾಲಕರಿಗೆ ಸನ್ಮಾನ ಸಮಾರಂಭ ಮಾಡಲಿರುವ “ಪರಮೇಶಣ್ಣ ಗೂಳಣ್ಣನವರ”

ಯಾವ ಸಮಾಜಕ್ಕೂ, ಜಾತಿಗೂ ತಾರತಮ್ಯ ಮಾಡಲ್ಲ ಶಾಸಕ‌ ಪ್ರಕಾಶ ಕೋಳಿವಾಡ,

ನಗರದ ಬಳ್ಳಾರಿ ಕಲ್ಯಾಣ ಮಂಟಪದಲ್ಲಿ ಐದು ದಿನಗಳ ಕಾಲ ಹಲಸು-ಮಾವು‌‌ ಮೇಳ.

ಹಾವೇರಿ ನೂತನ ಎಸ್ಪಿಯಾಗಿ ಮಹಿಳಾ ಅಧಿಕಾರಿ, ಯಾರು ಅವರು!

ರಾಣೆಬೆನ್ನೂರ ನಗರದಲ್ಲಿ ನಕಲಿ ರಸಗೊಬ್ಬರ ಪತ್ತೆ, ವಶಪಡಿಸಿಕೊಂಡ ಕೃಷಿ ಅಧಿಕಾರಿಗಳು.

ಯಕಲಾಸಪುರ ಗ್ರಾಮ ಚಿರತೆಗಳ ತಾಣ, ಹೆಣ್ಣು ಚಿರತೆ ಮರಿಗಳಿಗೆ ಜನ್ಮ ನೀಡಿರುವ ಹಾಕಿರುವ ಶಂಕೆ…

ಬಿರ್ಲಾ ಕಂಪನಿಯಲ್ಲಿ ಕೆಲಸ ಮಾಡುವಾಗ ಹೃದಯಾಘಾತದಿಂದ ನೌಕರ ಸಾವು.

ಸಂತೋಷಕುಮಾರ ಪಾಟೀಲಗೆ Z ಕನ್ನಡ ನ್ಯೂಸ್ ವತಿಯಿಂದ ಯುವರತ್ನ ಪ್ರಶಸ್ತಿ.

ಸ್ವಚ್ಛ ಕೈಯಿಂದ ಕೆಲಸ ಮಾಡಿ‌ ಇಲ್ಲ ರಾಜೀನಾಮೆ ಕೊಟ್ಟು ಹೊರಗೆ ಹೋಗಿ; ಲೋಕಾಯುಕ್ತ ಅಧಿಕಾರಿಗಳು.

ನಾಳೆ ನಗರದಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಅಹವಾಲು ಸ್ವೀಕಾರ..

ಇಸ್ಪೀಟು ಅಡ್ಡೆ ಮೇಲೆ ಹಲಗೇರಿ ಪೋಲಿಸರ ದಾಳಿ, ಹತ್ತು ಜನರು ಮೇಲೆ ಪ್ರಕರಣ

ಬೆಟ್ಟ ಮಲ್ಲಪ್ಪನ ಗುಡ್ಡ ಇನ್ನೂ ಪ್ರವಾಸಿ ತಾಣ ಸಚಿವ ಹೆಚ್.ಕೆ.ಪಾಟೀಲ.

ರಾಹುಲ್ ಗಾಂಧಿ ಖಾಲಿ ಸಂವಿಧಾನ‌ ಬುಕ್ ಇಟ್ಟಕೊಂಡು ಓಡಾಡುತ್ತಿದ್ದಾರೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ನನ್ನ ವಿರುದ್ಧ ಆರೋಪ‌ ಮಾಡಿರುವರ ಮೇಲೆ ಮಾನನಷ್ಟ ಮೊಕದ್ದಮೆ ಹಾಕುವೆ ಸಿದ್ಧಾರೂಢ‌ ಮಠದ ಧರ್ಮದರ್ಶಿ ಸಿದ್ದನಗೌಡ ಪಾಟೀಲ..

ಕಳಪೆ ಬೀಜ ಮಾರಾಟ ಮಾಡಿದ್ದ ಐದು ಅಂಗಡಿಗೆ ಬೀಗ ಮುದ್ರೆ…!

ಗುಡಗೂರು ಗ್ರಾಮದಲ್ಲಿ ವೃದ್ಧನ ಮೇಲೆ ಹರಿದ ಖಾಸಗಿ ಶಾಲೆಯ ಬಸ್.

ತಾಲೂಕಿನ ಒಂದೇ ದಿನ ಮೂರು ಸಾವಿನ ಪ್ರಕರಣಗಳು ದಾಖಲು..! ಘಟನೆಗಳು ಎಲ್ಲೇಲಿ?

ತಹಸೀಲ್ದಾರ ಕಚೇರಿ, ನಗರಸಭೆಗೆ ದಿಢೀರ್ ಭೇಟಿ ನೀಡಿದ ಜಿಲ್ಲಾಧಿಕಾರಿ ವಿಜಯಮಹಂತೇಶ, ಸಿಬ್ಬಂದಿ ವಿರುದ್ಧ ಗರಂ…

ರಾಣೆಬೇನ್ನೂರು: ಹಾವೇರಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಆಗಮಿಸಿರುವ ವಿಜಯಮಹಂತೇಶ ದಾನಮ್ಮನವರ ರಾಣೆಬೇನ್ನೂರು ನಗರಕ್ಕೆ ಆಗಮಿಸಿ ತಹಸೀಲ್ದಾರ ಕಚೇರಿ, ನಗರಸಭೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

 

ಪ್ರಥಮವಾಗಿ ತಹಸೀಲ್ದಾರ ಕಚೇರಿಗೆ ಭೇಟಿ ನೀಡಿದ ಅವರು ವಿವಿಧ ವಿಭಾಗಕ್ಕೆ ಭೇಟಿ‌ ನೀಡಿ ಆಡಳಿತ ನಿರ್ವಹಣೆ ಬಗ್ಗೆ ಸಿಬ್ಬಂದಿ ಬಳಿ ಮಾಹಿತಿ ಪಡೆದುಕೊಂಡರು. ನಂತರ ಆಹಾರ ಇಲಾಖೆಗೆ ತೆರಳಿದಾಗ ಪಡಿತರ ಚೀಟಿ ವಿತರಣೆ ಮಾಹಿತಿ ಕೇಳಿದಾಗ ಸಿಬ್ಬಂದಿ ಬಳಿ ಸರಿಯಾದ ಮಾಹಿತಿ ಇರಲಿಲ್ಲ. ಇದರಿಂದ ಗರಂ ಆದ ಡಿಸಿ ತಹಸೀಲ್ದಾರ ಅವರಿಗೆ ಇವರ ಮೇಲೆ ಕ್ರಮ ಕೈಗೊಳ್ಳಿ ಎಂದು ಸೂಚನೆ ನೀಡಿದರು. ಅಲ್ಲದೆ ಪಡಿತರ ಚೀಟಿ ವಿತರಣೆ ಮಾಡುವಂತೆ ಸರ್ಕಾರ ಈಗಾಗಲೇ ಸೂಚನೆ ನೀಡಿದೆ ಈವರೆಗೆ ಎಷ್ಟು ನೀಡಿದ್ದಿರಾ ಎಂದು ಕೇಳಿದಾಗ ಕೇವಲ 650 ನೀಡಿದ್ದೇವಿ ಎಂದು ಸಿಬ್ಬಂದಿ ಹೇಳಿದರು.

 

ಇದರಿಂದ ಕೆಂಡಾಮಂಡಲವಾದ ಡಿಸಿ ಇವರು ಮಾಡುವ ಕೆಲಸದಲ್ಲಿ ಕರ್ತವ್ಯ ಲೋಪ ಕಂಡ ಬಂದ ಕಾರಣ ಆಹಾರ ಇಲಾಖೆಯ ಆಹಾರ ನಿರೀಕ್ಷಕರಾದ ಪಾಟೀಲ ಅವರಿಗೆ ನೋಟಿಸ್ ನೀಡುವಂತೆ ಡಿಸಿ ತಹಸೀಲ್ದಾರ ಆರ್.ಎಚ್.ಭಾಗವಾನ ಅವರಿಗೆ ತಿಳಿಸಿದರು.

ನಂತರ ನಗರಸಭೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಅಲ್ಲಿ ಸಹ ಸಿಬ್ಬಂದಿ ಬಳಿ ಮಾಹಿತಿ ಹಾಗುಹ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದರು. ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಕೆಲಸ ಮಾಡಿಕೊಡಲು ಹಾಗೂ ಮಧ್ಯವರ್ತಿಗಳ ಮೂಲಕ ‌ಕೆಲಸ ಮಾಡಿಸಲು ಬಂದವರಿಗೆ ಯಾವುದೇ ಆದ್ಯತೆ ನೀಡಬಾರದು ಎಂದು ಪೌರಾಯುಕ್ತರಾದ ಎಫ್.ಐ.ಇಂಗಳಗಿ ಅವರಿಗೆ ತಿಳಿಸಿದರು.

ನಗರಸಭೆಯ ಕಂದಾಯ ಇಲಾಖೆ, ಕುಡಿಯುವ ನೀರು ವಿಭಾಗ, ಕಟ್ಟಡ ಪರವಾನಗಿ ವಿಭಾಗಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

 

ಸದಸ್ಯರ ಸಮಸ್ಯೆ ಆಲಿಸಿದ ಜಿಲ್ಲಾಧಿಕಾರಿಗಳು…

ರಾಣೆಬೇನ್ನೂರು ನಗರಸಭೆಯ ಸದಸ್ಯರ ಜತೆ ಜಿಲ್ಲಾಧಿಕಾರಿಗಳು ಚರ್ಚೆ ನಡೆಸಿದರು. ನಗರದಲ್ಲಿ ಸಂಚಾರ ದಟ್ಟಣೆ, ಸ್ವಚ್ಚತೆ ಹಾಗೂ ಪರಿಸರ ಕಾಳಜಿ ಬಗ್ಗೆ ಅಧಿಕಾರಿಗಳ ಗಮನ ವಹಿಸಬೇಕು ಎಂದು ಜಿಲ್ಲಾಧಿಕಾರಿಗೆ ಮನವಿ ಮಾಡಿದರು. ಅಲ್ಲದೆ ನಗರ ಅಭಿವೃದ್ಧಿಗೆ ಸಹಕಾರ ನೀಡುವಂತೆ ಜಿಲ್ಲಾಧಿಕಾರಿಗಳು ಸಹ ಸದಸ್ಯರಿಗೆ ಮನವಿ ಮಾಡಿದರು.

 

ಭೇಟಿ ಸಮಯದಲ್ಲಿ ತಹಸೀಲ್ದಾರ ಆರ್.ಎಚ್.ಭಾಗವಾನ, ಪೌರಾಯುಕ್ತರಾದ ಎಫ್.ಐ.ಇಂಗಳಗಿ, ಅಶೋಕ ಅರಳಿ, ಹರೀಶ ಸೇರಿದಂತೆ ವಿವಿಧ ಅಧಿಕಾರಿಗಳು ಹಾಜರಿದ್ದರು

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!