ಬಹಳಷ್ಟು ಲಾಭ ಕೊಡುವುದಾಗಿ ನಂಬಿಸಿ 75.42 ಲಕ್ಷ ರೂ. ವಂಚನೆ

ಕಾಕೋಳ ಗ್ರಾಮದಲ್ಲಿ ಸೊಸೈಟಿಗೆ ಕನ್ನ ಹಾಕಿದ ಕಳ್ಳರು.

ಅಧಿಕಾರ ಶಾಶ್ವತವಲ್ಲ, ಜನರ ಸೇವೆ ನಿಜಾವಾದ ಶಾಶ್ವತ ಮಾಜಿ ಶಾಸಕ ಅರುಣಕುಮಾರ ಪೂಜಾರ

ಅರುಣಕುಮಾರ ಪೂಜಾರ ಜನ್ಮದಿನದ ನಿಮಿತ್ತ ನಾಳೆ ವಿವಿಧ ಕಾರ್ಯಕ್ರಮ

ನಂದಿಹಳ್ಳಿ ಗ್ರಾಮದಲ್ಲಿ ಸಾವಿನಲ್ಲಿ ಒಂದಾದ ದಂಪತಿಗಳು.!

ಶಾಸಕರ ಆಪ್ತಸಹಾಯಕ ಮನೆಯಲ್ಲಿ 21.30 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

ಹೆಂಡತಿ ಕತ್ತು ಕೊಯ್ದು ಕೊಲೆಗೆ ಯತ್ನಿಸಿದ ಪತಿರಾಯ..

ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಯುದ್ಧ ಟ್ಯಾಂಕರ್ ಸ್ಥಾಪನೆ ರಾಣೆಬೇನ್ನೂರು ಹೆಮ್ಮೆ; ಸಭಾಧ್ಯಕ್ಷ ಯು.ಟಿ.ಖಾದರ

ಸದನದಲ್ಲಿ ಆಡಿದ ಮಾತಿಗೆ ಕ್ಷಮೆಯಾಚಿಸುವೆ, ಪಕ್ಷಾತೀತ ಕಾರ್ಯಕ್ರಮಕ್ಕೆ ಸಾಥ್ ನೀಡಿ; ಶಾಸಕ ಪ್ರಕಾಶ ಕೋಳಿವಾಡ.

ಯುದ್ಧ ಟ್ಯಾಂಕರ್ ಕಟ್ಟೆಗೆ ಹಾಕಿರುವ ಶಾಸಕರ ಪೋಟೋ ಹಾಗೂ ಪಿಕೆಕೆ ಹೆಸರಿಗೆ ಬಿಜೆಪಿ ಆಕ್ಷೇಪ. ಸರ್ಕಾರದ ಅನುದಾನದಲ್ಲಿ ಶಾಸಕರು ಶಿಷ್ಟಾಚಾರ ಪಾಲಿಸಲಿ.

ನಿಂತಿದ್ದ ಟಿಪ್ಪರಗೆ ಬೈಕ್ ಡಿಕ್ಕಿ ಜೋಯಿಸರಹರಳಹಳ್ಳಿ ಗ್ರಾಮದ ಎಂಟೆಕ್ ಪದವಿಧರ ಸಾವು

ಕುರುಬ ಸಮುದಾಯ ಹಾಗೂ ಸಿಎಂ ವಿರುದ್ಧ ಅವಾಚ್ಯವಾಗಿ ನಿಂದನೆ ಮಾಡಿದವರು ಮೇಲೆ‌ ಕಾನೂನು ಕ್ರಮಕ್ಕೆ ಒತ್ತಾಯ..

ಡೆಂಗ್ಯೂ ಜ್ವರ ಶಂಕೆ ಹಿನ್ನೆಲೆ ಯುವಕ ಸಾವು, ಕರೂರು ಗ್ರಾಮದಲ್ಲಿ ಘಟನೆ.

ಸತತ ಆರು ಗಂಟೆಗಳ ಕಾರ್ಯಚರಣೆ ನಂತರ ಸಿಕ್ಕ ಚಿರತೆ

ನಾಡಿಗೇರ ಓಣಿಯ ಕಾಕಿಯರ ಮನೆಯಲ್ಲಿ ಅವಿತಕೊಂಡ ಕುಂತ ಚಿರತೆ…!!

ಹೆಂಡತಿ ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡ ಗಂಡ ತಡಸ ಗ್ರಾಮದಲ್ಲಿ ಘಟನೆ

ನದಿ ಹಾರಿದ ಮಹಿಳೆ 2ಕೋಟಿ ಸಾಲ ಮಾಡಿದ್ದಳು ಡಿಸಿ ಮಹಾಂತೇಶ ವಿಜಯದಾನಮ್ಮನವರ ಮಾಹಿತಿ.

ಆತ್ಮಹತ್ಯೆ ಮಾಡಿಕೊಳ್ಳಲು ಹೋದ ಮಹಿಳೆ ತುಂಗಭದ್ರಾ ನದಿಯಲ್ಲಿ ಈಜಿ ಜೀವ ಉಳಿಸಿಕೊಂಡ ಗಟ್ಟಿಗಿತ್ತಿ…!

ದೇವರಗುಡ್ಡ ಮಾಲತೇಶ ಸ್ವಾಮಿಯ ಆಡಳಿತ ತಹಸೀಲ್ದಾರ್ ಸುಪರ್ದಿಗೆ…

ರುದ್ರಪ್ಪ ಲಮಾಣಿ ಮೇಲೆ ಚಿರತೆ ದಾಳಿ, ಆಸ್ಪತ್ರೆಗೆ ದಾಖಲು..!

ಸಿಎಂ ಬೆಂಬಲಿಸಿ ಅ.26 ರಂದು ನಗರದಲ್ಲಿ ಅಹಿಂದ, ದಲಿತ ಮುಖಂಡರ ಪ್ರತಿಭಟನೆ,

ರಾಣೆಬೇನ್ನೂರು:  ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ತೇಜೋವಧೆಗೆ ಯತ್ನಿಸುತ್ತಿರುವ ರಾಜ್ಯಪಾಲರ ಕ್ರಮ ಖಂಡಿಸಿ, ಸಿದ್ದರಾಮಯ್ಯನವರಿಗೆ ನೈತಿಕ ಬೆಂಬಲ ವ್ಯಕ್ತಪಡಿಸಿ 30ಕ್ಕೂ ಅಧಿಕ ವಿವಿಧ ಸಮಾಜದ ಮುಖಂಡರ ಹಾಗೂ ಅಹಿಂದ ಸಂಘಟನೆಗಳ ಕಾರ್ಯಕರ್ತರಿಂದ ಅ.26 ರಂದು ಬೆಳಗ್ಗೆ 10.3Oಕ್ಕೆ  ನಗರದ  ಬಸ್ ನಿಲ್ದಾಣದ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಅಹಿಂದ ಮುಖಂಡ ರತ್ನಾಕರ ಕುಂದಾಪುರ ತಿಳಿಸಿದರು.

ನಗರದ ಶ್ರೀ ಗಂಗಾ ವಿವಿಧ ಉದ್ಧೇಶಗಳ ಸಹಕಾರಿ ಬ್ಯಾಂಕ್ ಸಭಾಭವನದಲ್ಲಿ ಶುಕ್ರವಾರ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು, ಅಂದು ಬೆಳಗ್ಗೆ 9.30 ಗಂಟೆಗೆ ಇಲ್ಲಿನ ಪಿಬಿ ರಸ್ತೆಯ ಕೆಇಬಿ ಗಣೇಶ ದೇವಸ್ಥಾನದಿಂದ ಸಾವಿರಾರು ಅಹಿಂದ ಕಾರ್ಯಕರ್ತರೊಂದಿಗೆ ಮೆರವಣಿಗೆಯ ಮೂಲಕ ಸಂಚರಿಸಿ ನಗರದ  ಬಸ್ ನಿಲ್ದಾಣದ ಎದುರು ಬೃಹತ್ ಪ್ರತಿಭಟನೆ ನಡೆಸಿ ರಾಜ್ಯಪಾಲರನ್ನು ಕರ್ನಾಟಕದಿಂದ ಕರೆಯಿಸಿಕೊಳ್ಳಬೇಕು ಎಂದು ಒತ್ತಾಯಿಸಿ ತಹಸೀಲ್ದಾರರಿಗೆ ಮನವಿ ಅರ್ಪಿಸಲಾಗುವುದು ಎಂದರು.

 

ಗಂಗಾಮತಸ್ಥ, ಕೊರವ, ವಾಲ್ಮಿಕಿ, ಬಂಜಾರ, ಸುಣಗಾರ, ಉಪ್ಪಾರ, ಮಾದರ, ಛಲವಾದಿ, ಕೊರಚ, ಭೋವಿ, ಗಂಗಾಮತಸ್ಥ, ಬಲಿಜ   ಸೇರಿಂದಂತೆ 30ಕ್ಕೂ ಅಧಿಕ. ಹಿಂದುಳಿದ  ಎಲ್ಲ ಸಮಾಜಗಳ ಅಹಿಂದ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಾರೆ ಎಂದರು.

 

ರಾಜ್ಯದಲ್ಲಿ ಜನಪ್ರಿಯ ನಾಯಕ ಹಾಗೂ ಅಹಿಂದ ವರ್ಗದ ಆಶಾಕಿರಣವಾಗಿರುವ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಕ್ಕೆ ಇಳಿಸುವ ಕುತಂತ್ರ ಮಾಡುತ್ತಿರುವ ರಾಜ್ಯಪಾಲರು ರಾಜ್ಯದಿಂದ ಮೊದಲು ತೊಲಗಬೇಕು. ಬಿಜೆಪಿ ಏಜಂಟರಂತೆ ವರ್ತಿಸುತ್ತಿರುವ ರಾಜ್ಯಪಾಲರನ್ನು  ರಾಷ್ಟ್ರಪತಿಗಳು ವಾಪಸ್ ಕರೆಯಿಸಿಕೊಳ್ಳಬೇಕು ಎಂದರು.

ಸುದ್ದಿಗೋಷ್ಠಿಯಲ್ಲಿ ರಾಮಣ್ಣ ನಾಯಕ, ಕೃಷ್ಣಮೂರ್ತಿ ಸುಣಗಾರ, ಷಣ್ಮುಖಪ್ಪ ಕಂಬಳಿ, ಮೃತ್ಯುಂಜಯ ಗುದಿಗೇರ,  ಆನಂದ ಹುಲ್ಬನ್ನಿ, ಮಲ್ಲೇಶಪ್ಪ ಮದ್ಲೇರ, ಸುರೇಶ ಜಾಡಮಾಲಿ, ಎಜಾಸಖಾನ್ ಸೌಧಾಗರ, ಶೇರುಖಾನ  ಕಾಬೂಲಿ, ಸಿದ್ದಪ್ಪ ಅಂಬಲಿ, ದುರಗಪ್ಪ ಕೊರಚರ, ಟಿ.ಕೆ. ಲಮಾಣಿ, ಅಶೋಕ ಟಿಕಾರೆ, ಬಸವರಾಜ ಉಪ್ಪಾರ, ಹನುಮಂತಪ್ಪ ಕಬ್ಬಾರ, ಗೋಪಿ ಕುಂದಾಪುರ ಸೇರಿದಂತೆ ಮತ್ತಿತರರು ಇದ್ದರು..

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!