ರಾಣೆಬೇನ್ನೂರು: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ತೇಜೋವಧೆಗೆ ಯತ್ನಿಸುತ್ತಿರುವ ರಾಜ್ಯಪಾಲರ ಕ್ರಮ ಖಂಡಿಸಿ, ಸಿದ್ದರಾಮಯ್ಯನವರಿಗೆ ನೈತಿಕ ಬೆಂಬಲ ವ್ಯಕ್ತಪಡಿಸಿ 30ಕ್ಕೂ ಅಧಿಕ ವಿವಿಧ ಸಮಾಜದ ಮುಖಂಡರ ಹಾಗೂ ಅಹಿಂದ ಸಂಘಟನೆಗಳ ಕಾರ್ಯಕರ್ತರಿಂದ ಅ.26 ರಂದು ಬೆಳಗ್ಗೆ 10.3Oಕ್ಕೆ ನಗರದ ಬಸ್ ನಿಲ್ದಾಣದ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಅಹಿಂದ ಮುಖಂಡ ರತ್ನಾಕರ ಕುಂದಾಪುರ ತಿಳಿಸಿದರು.
ನಗರದ ಶ್ರೀ ಗಂಗಾ ವಿವಿಧ ಉದ್ಧೇಶಗಳ ಸಹಕಾರಿ ಬ್ಯಾಂಕ್ ಸಭಾಭವನದಲ್ಲಿ ಶುಕ್ರವಾರ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು, ಅಂದು ಬೆಳಗ್ಗೆ 9.30 ಗಂಟೆಗೆ ಇಲ್ಲಿನ ಪಿಬಿ ರಸ್ತೆಯ ಕೆಇಬಿ ಗಣೇಶ ದೇವಸ್ಥಾನದಿಂದ ಸಾವಿರಾರು ಅಹಿಂದ ಕಾರ್ಯಕರ್ತರೊಂದಿಗೆ ಮೆರವಣಿಗೆಯ ಮೂಲಕ ಸಂಚರಿಸಿ ನಗರದ ಬಸ್ ನಿಲ್ದಾಣದ ಎದುರು ಬೃಹತ್ ಪ್ರತಿಭಟನೆ ನಡೆಸಿ ರಾಜ್ಯಪಾಲರನ್ನು ಕರ್ನಾಟಕದಿಂದ ಕರೆಯಿಸಿಕೊಳ್ಳಬೇಕು ಎಂದು ಒತ್ತಾಯಿಸಿ ತಹಸೀಲ್ದಾರರಿಗೆ ಮನವಿ ಅರ್ಪಿಸಲಾಗುವುದು ಎಂದರು.
ಗಂಗಾಮತಸ್ಥ, ಕೊರವ, ವಾಲ್ಮಿಕಿ, ಬಂಜಾರ, ಸುಣಗಾರ, ಉಪ್ಪಾರ, ಮಾದರ, ಛಲವಾದಿ, ಕೊರಚ, ಭೋವಿ, ಗಂಗಾಮತಸ್ಥ, ಬಲಿಜ ಸೇರಿಂದಂತೆ 30ಕ್ಕೂ ಅಧಿಕ. ಹಿಂದುಳಿದ ಎಲ್ಲ ಸಮಾಜಗಳ ಅಹಿಂದ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಾರೆ ಎಂದರು.
ರಾಜ್ಯದಲ್ಲಿ ಜನಪ್ರಿಯ ನಾಯಕ ಹಾಗೂ ಅಹಿಂದ ವರ್ಗದ ಆಶಾಕಿರಣವಾಗಿರುವ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಕ್ಕೆ ಇಳಿಸುವ ಕುತಂತ್ರ ಮಾಡುತ್ತಿರುವ ರಾಜ್ಯಪಾಲರು ರಾಜ್ಯದಿಂದ ಮೊದಲು ತೊಲಗಬೇಕು. ಬಿಜೆಪಿ ಏಜಂಟರಂತೆ ವರ್ತಿಸುತ್ತಿರುವ ರಾಜ್ಯಪಾಲರನ್ನು ರಾಷ್ಟ್ರಪತಿಗಳು ವಾಪಸ್ ಕರೆಯಿಸಿಕೊಳ್ಳಬೇಕು ಎಂದರು.
ಸುದ್ದಿಗೋಷ್ಠಿಯಲ್ಲಿ ರಾಮಣ್ಣ ನಾಯಕ, ಕೃಷ್ಣಮೂರ್ತಿ ಸುಣಗಾರ, ಷಣ್ಮುಖಪ್ಪ ಕಂಬಳಿ, ಮೃತ್ಯುಂಜಯ ಗುದಿಗೇರ, ಆನಂದ ಹುಲ್ಬನ್ನಿ, ಮಲ್ಲೇಶಪ್ಪ ಮದ್ಲೇರ, ಸುರೇಶ ಜಾಡಮಾಲಿ, ಎಜಾಸಖಾನ್ ಸೌಧಾಗರ, ಶೇರುಖಾನ ಕಾಬೂಲಿ, ಸಿದ್ದಪ್ಪ ಅಂಬಲಿ, ದುರಗಪ್ಪ ಕೊರಚರ, ಟಿ.ಕೆ. ಲಮಾಣಿ, ಅಶೋಕ ಟಿಕಾರೆ, ಬಸವರಾಜ ಉಪ್ಪಾರ, ಹನುಮಂತಪ್ಪ ಕಬ್ಬಾರ, ಗೋಪಿ ಕುಂದಾಪುರ ಸೇರಿದಂತೆ ಮತ್ತಿತರರು ಇದ್ದರು..
More Stories
ತಾಪಂ ಕೆಡಿಪಿ ಸಭೆಯಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗೆ ತರಾಟೆ..!
ಹೆದ್ದಾರಿಯಲ್ಲಿ ದರೋಡೆ ಮಾಡಲು ಹೊಂಚು ಹಾಕಿದ್ದವರು ಕಂಬಿ ಹಿಂದೆ
ನಗರಸಭೆ ನೀರಿನ ತೆರಿಗೆಯನ್ನು ನಿಮ್ಮ ಮೊಬೈಲನಲ್ಲಿ ಪಾವತಿಸಿ.