ತಾಪಂ ಸಾಮಾನ್ಯ ಸಭೆಗೆ ತಹಸೀಲ್ದಾರ ಗೈರು, ನೋಟಿಸ್ ನೀಡುವಂತೆ ಉಪಕಾರ್ಯದರ್ಶಿ ಸೂಚನೆ

ತುಂಗಭದ್ರಾ ನದಿಯಲ್ಲಿ 15 ಕಿ.ಮೀ. ಈಜಿ ಪ್ರಾಣ ಉಳಿಸಿಕೊಂಡ ಮೈಸೂರಿನ ವೃದ್ಧ…!

ಮೂರು ಬೈಕಗಳ ನಡುವೆ ಭೀಕರ ಅಪಘಾತ ಒರ್ವ ಯುವಕ ಸಾವು, ಮೂವರು ಗಂಭೀರ.

ಆಟೋ ಚಾಲಕರಿಗೆ ಸನ್ಮಾನ ಸಮಾರಂಭ ಮಾಡಲಿರುವ “ಪರಮೇಶಣ್ಣ ಗೂಳಣ್ಣನವರ”

ಯಾವ ಸಮಾಜಕ್ಕೂ, ಜಾತಿಗೂ ತಾರತಮ್ಯ ಮಾಡಲ್ಲ ಶಾಸಕ‌ ಪ್ರಕಾಶ ಕೋಳಿವಾಡ,

ನಗರದ ಬಳ್ಳಾರಿ ಕಲ್ಯಾಣ ಮಂಟಪದಲ್ಲಿ ಐದು ದಿನಗಳ ಕಾಲ ಹಲಸು-ಮಾವು‌‌ ಮೇಳ.

ಹಾವೇರಿ ನೂತನ ಎಸ್ಪಿಯಾಗಿ ಮಹಿಳಾ ಅಧಿಕಾರಿ, ಯಾರು ಅವರು!

ರಾಣೆಬೆನ್ನೂರ ನಗರದಲ್ಲಿ ನಕಲಿ ರಸಗೊಬ್ಬರ ಪತ್ತೆ, ವಶಪಡಿಸಿಕೊಂಡ ಕೃಷಿ ಅಧಿಕಾರಿಗಳು.

ಯಕಲಾಸಪುರ ಗ್ರಾಮ ಚಿರತೆಗಳ ತಾಣ, ಹೆಣ್ಣು ಚಿರತೆ ಮರಿಗಳಿಗೆ ಜನ್ಮ ನೀಡಿರುವ ಹಾಕಿರುವ ಶಂಕೆ…

ಬಿರ್ಲಾ ಕಂಪನಿಯಲ್ಲಿ ಕೆಲಸ ಮಾಡುವಾಗ ಹೃದಯಾಘಾತದಿಂದ ನೌಕರ ಸಾವು.

ಸಂತೋಷಕುಮಾರ ಪಾಟೀಲಗೆ Z ಕನ್ನಡ ನ್ಯೂಸ್ ವತಿಯಿಂದ ಯುವರತ್ನ ಪ್ರಶಸ್ತಿ.

ಸ್ವಚ್ಛ ಕೈಯಿಂದ ಕೆಲಸ ಮಾಡಿ‌ ಇಲ್ಲ ರಾಜೀನಾಮೆ ಕೊಟ್ಟು ಹೊರಗೆ ಹೋಗಿ; ಲೋಕಾಯುಕ್ತ ಅಧಿಕಾರಿಗಳು.

ನಾಳೆ ನಗರದಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಅಹವಾಲು ಸ್ವೀಕಾರ..

ಇಸ್ಪೀಟು ಅಡ್ಡೆ ಮೇಲೆ ಹಲಗೇರಿ ಪೋಲಿಸರ ದಾಳಿ, ಹತ್ತು ಜನರು ಮೇಲೆ ಪ್ರಕರಣ

ಬೆಟ್ಟ ಮಲ್ಲಪ್ಪನ ಗುಡ್ಡ ಇನ್ನೂ ಪ್ರವಾಸಿ ತಾಣ ಸಚಿವ ಹೆಚ್.ಕೆ.ಪಾಟೀಲ.

ರಾಹುಲ್ ಗಾಂಧಿ ಖಾಲಿ ಸಂವಿಧಾನ‌ ಬುಕ್ ಇಟ್ಟಕೊಂಡು ಓಡಾಡುತ್ತಿದ್ದಾರೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ನನ್ನ ವಿರುದ್ಧ ಆರೋಪ‌ ಮಾಡಿರುವರ ಮೇಲೆ ಮಾನನಷ್ಟ ಮೊಕದ್ದಮೆ ಹಾಕುವೆ ಸಿದ್ಧಾರೂಢ‌ ಮಠದ ಧರ್ಮದರ್ಶಿ ಸಿದ್ದನಗೌಡ ಪಾಟೀಲ..

ಕಳಪೆ ಬೀಜ ಮಾರಾಟ ಮಾಡಿದ್ದ ಐದು ಅಂಗಡಿಗೆ ಬೀಗ ಮುದ್ರೆ…!

ಗುಡಗೂರು ಗ್ರಾಮದಲ್ಲಿ ವೃದ್ಧನ ಮೇಲೆ ಹರಿದ ಖಾಸಗಿ ಶಾಲೆಯ ಬಸ್.

ತಾಲೂಕಿನ ಒಂದೇ ದಿನ ಮೂರು ಸಾವಿನ ಪ್ರಕರಣಗಳು ದಾಖಲು..! ಘಟನೆಗಳು ಎಲ್ಲೇಲಿ?

ಸಿಎಂ ಬೆಂಬಲಿಸಿ ಅ.26 ರಂದು ನಗರದಲ್ಲಿ ಅಹಿಂದ, ದಲಿತ ಮುಖಂಡರ ಪ್ರತಿಭಟನೆ,

ರಾಣೆಬೇನ್ನೂರು:  ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ತೇಜೋವಧೆಗೆ ಯತ್ನಿಸುತ್ತಿರುವ ರಾಜ್ಯಪಾಲರ ಕ್ರಮ ಖಂಡಿಸಿ, ಸಿದ್ದರಾಮಯ್ಯನವರಿಗೆ ನೈತಿಕ ಬೆಂಬಲ ವ್ಯಕ್ತಪಡಿಸಿ 30ಕ್ಕೂ ಅಧಿಕ ವಿವಿಧ ಸಮಾಜದ ಮುಖಂಡರ ಹಾಗೂ ಅಹಿಂದ ಸಂಘಟನೆಗಳ ಕಾರ್ಯಕರ್ತರಿಂದ ಅ.26 ರಂದು ಬೆಳಗ್ಗೆ 10.3Oಕ್ಕೆ  ನಗರದ  ಬಸ್ ನಿಲ್ದಾಣದ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಅಹಿಂದ ಮುಖಂಡ ರತ್ನಾಕರ ಕುಂದಾಪುರ ತಿಳಿಸಿದರು.

ನಗರದ ಶ್ರೀ ಗಂಗಾ ವಿವಿಧ ಉದ್ಧೇಶಗಳ ಸಹಕಾರಿ ಬ್ಯಾಂಕ್ ಸಭಾಭವನದಲ್ಲಿ ಶುಕ್ರವಾರ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು, ಅಂದು ಬೆಳಗ್ಗೆ 9.30 ಗಂಟೆಗೆ ಇಲ್ಲಿನ ಪಿಬಿ ರಸ್ತೆಯ ಕೆಇಬಿ ಗಣೇಶ ದೇವಸ್ಥಾನದಿಂದ ಸಾವಿರಾರು ಅಹಿಂದ ಕಾರ್ಯಕರ್ತರೊಂದಿಗೆ ಮೆರವಣಿಗೆಯ ಮೂಲಕ ಸಂಚರಿಸಿ ನಗರದ  ಬಸ್ ನಿಲ್ದಾಣದ ಎದುರು ಬೃಹತ್ ಪ್ರತಿಭಟನೆ ನಡೆಸಿ ರಾಜ್ಯಪಾಲರನ್ನು ಕರ್ನಾಟಕದಿಂದ ಕರೆಯಿಸಿಕೊಳ್ಳಬೇಕು ಎಂದು ಒತ್ತಾಯಿಸಿ ತಹಸೀಲ್ದಾರರಿಗೆ ಮನವಿ ಅರ್ಪಿಸಲಾಗುವುದು ಎಂದರು.

 

ಗಂಗಾಮತಸ್ಥ, ಕೊರವ, ವಾಲ್ಮಿಕಿ, ಬಂಜಾರ, ಸುಣಗಾರ, ಉಪ್ಪಾರ, ಮಾದರ, ಛಲವಾದಿ, ಕೊರಚ, ಭೋವಿ, ಗಂಗಾಮತಸ್ಥ, ಬಲಿಜ   ಸೇರಿಂದಂತೆ 30ಕ್ಕೂ ಅಧಿಕ. ಹಿಂದುಳಿದ  ಎಲ್ಲ ಸಮಾಜಗಳ ಅಹಿಂದ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಾರೆ ಎಂದರು.

 

ರಾಜ್ಯದಲ್ಲಿ ಜನಪ್ರಿಯ ನಾಯಕ ಹಾಗೂ ಅಹಿಂದ ವರ್ಗದ ಆಶಾಕಿರಣವಾಗಿರುವ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಕ್ಕೆ ಇಳಿಸುವ ಕುತಂತ್ರ ಮಾಡುತ್ತಿರುವ ರಾಜ್ಯಪಾಲರು ರಾಜ್ಯದಿಂದ ಮೊದಲು ತೊಲಗಬೇಕು. ಬಿಜೆಪಿ ಏಜಂಟರಂತೆ ವರ್ತಿಸುತ್ತಿರುವ ರಾಜ್ಯಪಾಲರನ್ನು  ರಾಷ್ಟ್ರಪತಿಗಳು ವಾಪಸ್ ಕರೆಯಿಸಿಕೊಳ್ಳಬೇಕು ಎಂದರು.

ಸುದ್ದಿಗೋಷ್ಠಿಯಲ್ಲಿ ರಾಮಣ್ಣ ನಾಯಕ, ಕೃಷ್ಣಮೂರ್ತಿ ಸುಣಗಾರ, ಷಣ್ಮುಖಪ್ಪ ಕಂಬಳಿ, ಮೃತ್ಯುಂಜಯ ಗುದಿಗೇರ,  ಆನಂದ ಹುಲ್ಬನ್ನಿ, ಮಲ್ಲೇಶಪ್ಪ ಮದ್ಲೇರ, ಸುರೇಶ ಜಾಡಮಾಲಿ, ಎಜಾಸಖಾನ್ ಸೌಧಾಗರ, ಶೇರುಖಾನ  ಕಾಬೂಲಿ, ಸಿದ್ದಪ್ಪ ಅಂಬಲಿ, ದುರಗಪ್ಪ ಕೊರಚರ, ಟಿ.ಕೆ. ಲಮಾಣಿ, ಅಶೋಕ ಟಿಕಾರೆ, ಬಸವರಾಜ ಉಪ್ಪಾರ, ಹನುಮಂತಪ್ಪ ಕಬ್ಬಾರ, ಗೋಪಿ ಕುಂದಾಪುರ ಸೇರಿದಂತೆ ಮತ್ತಿತರರು ಇದ್ದರು..

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!