ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ಬಿಜೆಪಿ, ಜೆಡಿಎಸ್ ಹಾಗೂ ರೈತ ನಾಯಕ ರವಿಂದ್ರಗೌಡ ಪಾಟೀಲ ನೇತೃತ್ವದಲ್ಲಿ ಬೃಹತ್ ರೈತರ ಹೋರಾಟ.

ನಗರದಲ್ಲಿ NDA ವತಿಯಿಂದ ಕಾಂಗ್ರೆಸ್ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ.

ಬೆಂಬಲ ಬೆಲೆ ನೀಡಲು ಆಗ್ರಹಿಸಿ ಸರ್ಕಾರದ ವಿರುದ್ಧ ನಾಳೆ ಬಿಜೆಪಿ-ಜೆಡಿಎಸ್ ಜಂಟಿ ಪ್ರತಿಭಟನೆ

ಹೆಂಡತಿ ಹೊಡೆದು ಕೊಲೆ ಮಾಡಿದ ಪತಿರಾಯ..

ನಾವು ಯಾರನ್ನು ಟಾರ್ಗೆಟ್ ಮಾಡಲ್ಲ, ಮಾಡಿದ್ರೆ ಬೀಡಲ್ಲ ಎಸ್ಪಿ ಯಶೋಧ ವಂಟಗೋಡಿ.

ದೈಹಿಕ ಸಂಪರ್ಕ ಮಾಡಿ ಯುವತಿಗೆ ಕೈಕೊಟ್ಟ ಯುವಕ. ಯುವತಿ ಆತ್ಮಹತ್ಯೆ ಹುಡಗನ‌ ಮನೆ ಮುಂದೆ ಶವವಿಟ್ಟು ಪ್ರತಿಭಟನೆ..

ತಮ್ಮನ ಸಾವಿನಿಂದ ಮನನೊಂದ ಅಕ್ಕನು ನೇಣಿಗೆ ಶರಣು…!

ಸಚಿವ ಶಿವಾನಂದ ಪಾಟೀರನ್ನ BJP ಎಂದ ರೊಬೋಟ್

ರಾಣೆಬೇನ್ನೂರ ನಗರದಲ್ಲಿ ಭವ್ಯವಾಗಿ ನಡೆದ ಆರ್ ಎಸ್ ಎಸ್ ಪಥ ಸಂಚಲನ, ಒಂದು ಸಾವಿರ ಗಣವೇಷಧಾರಿಗಳು ಭಾಗಿ

ಎರಡು ವರ್ಷದಲ್ಲಿ ಎಷ್ಟು ಬಾರಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಗೆ ಹಾಜರಾಗದ ದಲಿತ ವಿರೋಧಿ ಶಾಸಕ; ಮಾಜಿ ಶಾಸಕ ಅರುಣಕುಮಾರ ಪೂಜಾರ.

ಕುದರಿಹಾಳ ಗ್ರಾಮದಲ್ಲಿ ಸಿಡಿಲು ಬಡಿದು ಯುವ ಕೃಷಿಕ ಸಾವು

ಕೈ-ಕಮಲ ನಡುವೆ ರಾಜಕೀಯ ಪ್ರತಿಷ್ಠೆ; ನಗರಸಭೆ ಸಾಮಾನ್ಯ ಸಭೆ ಮುಂದೂಡಿಕೆ.

ಹಾನಗಲ್ ತಹಸೀಲ್ದಾರ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ.

ಬಿಗರ ಊಟ ಮಾಡಿ ಬರುತ್ತಿದ್ದವರು ಮಸಣಕ್ಕೆ *ನಿಂತಿದ್ದ ಟ್ರ್ಯಾಕ್ಟರ್ ಟ್ರೈಲರ್ ಗೆ ಟಾಟಾ ಸುಪ್ರೋ ಡಿಕ್ಕಿ* *ಸ್ಥಳದಲ್ಲಿಯೆ ಮೂವರ ದುರ್ಮರಣ, 20ಕ್ಕೂ ಅಧಿಕರಿಗೆ ಗಂಭೀರ ಗಾಯ*

ತಾಪಂ ಪ್ರಭಾರ ಇಓ ಬಸವರಾಜ ಶಿಡೇನೂರ ಬಳಿ ಒಂದೂವರೆ ಕೋಟಿ ಆಸ್ತಿ..

ಕಂದಾಯ ನಿರೀಕ್ಷ ಅಶೋಕ‌ ಅರಳೇಶ್ವರ ಬಳಿ ಕೋಟ್ಯಾಂತರ ಆಸ್ತಿ ಪತ್ತೆ.

ಪ್ರಾಸಿಕ್ಯೂಷನ್‌ಗೆ ಅನುಮತಿ ಖಂಡಿಸಿ: ಅಹಿಂದ ಸಮುದಾಯಗಳ ಒಕ್ಕೂಟದ ಪ್ರತಿಭಟನೆ , ಟಗರು ಹಿಡ್ಕೊಂಡು ಬಂದ ಶಾಸಕ ಪ್ರಕಾಶ ಕೋಳಿವಾಡ, ಮಾಜಿ ಸಚಿವ ಆರ್.ಶಂಕರ

oplus_0

ರಾಣೇಬೆನ್ನೂರು : ಮುಡಾ ನಿವೇಶನ ಹಂಚಿಕೆ ಪ್ರಕರಣ ನೆಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಹಾಗೂ ಆ ಮೂಲಕ ರಾಜ್ಯ ಸರ್ಕಾರ ಅಸ್ಥಿರಗೊಳಿಸುತ್ತಿರುವ ಕೇಂದ್ರ ಸರ್ಕಾರದ ನಡೆ ಖಂಡಿಸಿ ಸ್ಥಳೀಯ ಅಹಿಂದ ಸಮುದಾಯಗಳ ಒಕ್ಕೂಟದ ವತಿಯಿಂದ ಸೋಮವಾರ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ತಹಸೀಲ್ದಾರ ಮೂಲಕ ರಾಷ್ಟçಪತಿ ದ್ರೌಪದಿ ಮುರ್ಮು ಅವರಿಗೆ ಮನವಿ ಸಲ್ಲಿಸಿದರು.
oplus_0
ಇಲ್ಲಿನ ಕೆಇಬಿ ವಿನಾಯಕ ದೇವಸ್ಥಾನದ ಬಳಿಯಿಂದ ಕುರಿ ಹಿಂಡಿನ ಸಮೇತ ಮೆರವಣಿಗೆ ಹೊರಟ ಪ್ರತಿಭಟನಾಕರರು ಬಸ್‌ನಿಲ್ದಾಣದವರೆಗೆ ಸಾಗಿಬಂದರು.
ಈ ಸಮಯದಲ್ಲಿ ಮಾಜಿ ಸಚಿವ ಆರ್. ಶಂಕರ್ ಮಾತನಾಡಿ, ನಿಷ್ಕಳಂಕ ವ್ಯಕ್ತಿತ್ವದ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರಿಗೆ ಯಾವುದೇ ವಿವೇಚನೆಯಿಲ್ಲವಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಸಿದ್ದರಾಮಯ್ಯ ಪತ್ನಿಗೆ ನಿವೇಶನ ಕೊಡಲಾಗಿದೆ. ಇದರಲ್ಲಿ ಮುಖ್ಯಮಂತ್ರಿಗಳು ಯಾವುದೇ ತಪ್ಪು ಮಾಡಿಲ್ಲ. ಹೀಗಾಗಿ ಇಡೀ ಅಹಿಂದ ವರ್ಗ, ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ಅವರಿಗೆ ಬೆಂಬಲವಾಗಿ ನಿಂತಿದೆ. ಇದು ಅವರ ರಾಜಕಾರಣಕ್ಕೆ ಮಾದರಿಯಾಗಿದೆ. ಸಿದ್ದರಾಮಯ್ಯ ಆಡಳಿತ ವೈಖರಿ ಸಹಿಸದೆ ಈ ರೀತಿ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಅ.೨೯ರಂದು ಸಿದ್ದರಾಮಯ್ಯ ಪರವಾಗಿ ತೀರ್ಪು ಬರುವ ವಿಶ್ವಾಸವಿದೆ. ಈ ಹಿಂದೆ ಇದೇ ರೀತಿ ಹಿಂದುಳಿದ ವರ್ಗಗಳ ನಾಯಕರಾದ ದೇವರಾಜ ಅರಸು, ಎಸ್.ಬಂಗಾರಪ್ಪ, ವೀರಪ್ಪ ಮೊಯ್ಲಿ, ಧರ್ಮಸಿಂಗ್ ವಿರುದ್ಧ ಷಡ್ಯಂತ್ರ ರೂಪಿಸಲಾಗಿತ್ತು. ಆದರೆ ಈಗ ಶೋಷಿತ ಸಮುದಾಯಗಳು ಜಾಗೃತವಾಗಿದ್ದು ಸಮಾಜವಾದದ ಹಿನ್ನೆಲೆಯಿಂದ ಬಂದಿರುವ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಸರ್ಕಾರದ ಪರ ಬಂಡೆಯAತೆ ನಿಂತಿವೆ. ಸಿದ್ದರಾಮಯ್ಯ ವಿರುದ್ಧ ಷಡ್ಯಂತ್ರ ರೂಪಿಸುತ್ತಿರುವ ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೆ ತಕ್ಕ ಪಾಠವನ್ನು ಕಲಿಸಲು ಅಹಿಂದ ಸಮುದಾಯಗಳು ನಿರ್ಧರಿಸಿವೆ. ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರ ಅಸ್ಥಿರಗೊಳಿಸಲು ಅವಕಾಶ ನೀಡುವುದಿಲ್ಲ ಎಂದರು.
ಶಾಸಕ ಪ್ರಕಾಶ ಕೋಳಿವಾಡ ಮಾತನಾಡಿ, ಮಹಿಳೆಯರಿಗೆ ಅಗೌರವ ತೋರಿಸಿದ ಕುಟುಂಬದವರು ಬಂದು ಸಿದ್ದರಾಮಯ್ಯ ಕುರಿತು ನೀತಿ ಪಾಠ ಹೇಳುತ್ತಿದ್ದಾರೆ. ಇದು ಭೂತದ ಬಾಯಲ್ಲಿ ಭಗÀವದ್ಗೀತೆ, ಶಕುನಿ ಬಾಯಲ್ಲಿ ಮಹಾಭಾರತ, ರಾವಣನ ಬಾಯಲ್ಲಿ ರಾಮಾಯಣ ಕೇಳುವಂತಾಗಿದೆ. ಇನ್ನು ಬಿಜೆಪಿಗರು ಭ್ರಷ್ಟಾಚಾರ ಮಾಡಿ ನಮ್ಮ ರೀತಿ ಜಗತ್ತು ಇದೆ ಅಂತ ಅಂದುಕೊAಡಿದ್ದಾರೆ. ಅವರಿಂದ ಸಿದ್ದರಾಮಯ್ಯ ಕೂದಲು ಅಲುಗಾಡಿಸಲು ಆಗುವುದಿಲ್ಲ. ನಮಗೆ ನ್ಯಾಯ ಸಿಗುತ್ತದೆ. ಒಂದು ವೇಳಿ ನ್ಯಾಯ ಸಿಗದೇ ಹೋದಲ್ಲಿ ನಾನು ಶಂಕರಣ್ಣ ಜತೆಗೂಡಿ ರಾಣೇಬೆನ್ನೂರಿನಿಂದ ಬೆಂಗಳೂರುವರೆಗೆ ಪಾದಯಾತ್ರೆ ಹೋಗುತ್ತೇವೆ. ಲೋಕಸಭಾ ಚುನಾವಣೆಯಲ್ಲಿ ನಾವು ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರಬೇಕಿತ್ತು. ಅಹಿಂದ ವರ್ಗದವರಿಗೆ ಜಗಳ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ನಾವು ಒಗ್ಗಟ್ಟಾಗಿ ಅಹಿಂದ ವರ್ಗ ಕಾಪಾಡಬೇಕಾಗಿದೆ ಎಂದರು.
ರತ್ನಾಕರ ಕುಂದಾಪುರ, ಕೃಷ್ಣಮೂರ್ತಿ ಸುಣಗಾರ, ಪುಟ್ಟಪ್ಪ ಮರಿಯಮ್ಮನವರ, ಸಿದ್ದಣ್ಣ ಅಂಬಲಿ, ಮರಿಯಪ್ಪ ಪೂಜಾರ, ರವಿ ಹುಲಿಗೆಮ್ಮನವರ, ಆನಂದ ದೊಡ್ಡಮನಿ, ಜುಮ್ಮಣ್ಣಿ, ಬಿ.ಬಿ.ನಂದ್ಯಾಲ, ಮೃತ್ಯುಂಜಯ ಗುದಿದೇರ, ರೇಣುಕಾ ಲಮಾಣಿ, ಶೇರುಖಾನ ಕಾಬೂಲಿ, ರವೀಂದ್ರಗೌಡ ಪಾಟೀಲ, ಆನಂದ ಹುಲಬನ್ನಿ, ಷಣ್ಮುಖ ಕಂಬಳಿ, ಕಿರಣ ಗುಳೇದ, ಸುರೇಶ ಜಡಮಲಿ, ಡಾಕಪ್ಪ ಲಮಾಣಿ, ದೇವೇಂದ್ರಪ್ಪ ಕಾಟಿ, ಕೃಷ್ಣಪ್ಪ ಕಂಬಳಿ, ಹನುಮಂತಪ್ಪ ಕಬ್ಬಾರ ಸೇರಿದಂತೆ ಮತ್ತಿತರರಿದ್ದರು.
ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!