ರಾಣೇಬೆನ್ನೂರು : ಮುಡಾ ನಿವೇಶನ ಹಂಚಿಕೆ ಪ್ರಕರಣ ನೆಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಹಾಗೂ ಆ ಮೂಲಕ ರಾಜ್ಯ ಸರ್ಕಾರ ಅಸ್ಥಿರಗೊಳಿಸುತ್ತಿರುವ ಕೇಂದ್ರ ಸರ್ಕಾರದ ನಡೆ ಖಂಡಿಸಿ ಸ್ಥಳೀಯ ಅಹಿಂದ ಸಮುದಾಯಗಳ ಒಕ್ಕೂಟದ ವತಿಯಿಂದ ಸೋಮವಾರ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ತಹಸೀಲ್ದಾರ ಮೂಲಕ ರಾಷ್ಟçಪತಿ ದ್ರೌಪದಿ ಮುರ್ಮು ಅವರಿಗೆ ಮನವಿ ಸಲ್ಲಿಸಿದರು.

ಇಲ್ಲಿನ ಕೆಇಬಿ ವಿನಾಯಕ ದೇವಸ್ಥಾನದ ಬಳಿಯಿಂದ ಕುರಿ ಹಿಂಡಿನ ಸಮೇತ ಮೆರವಣಿಗೆ ಹೊರಟ ಪ್ರತಿಭಟನಾಕರರು ಬಸ್ನಿಲ್ದಾಣದವರೆಗೆ ಸಾಗಿಬಂದರು.
ಈ ಸಮಯದಲ್ಲಿ ಮಾಜಿ ಸಚಿವ ಆರ್. ಶಂಕರ್ ಮಾತನಾಡಿ, ನಿಷ್ಕಳಂಕ ವ್ಯಕ್ತಿತ್ವದ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ರಾಜ್ಯಪಾಲರಿಗೆ ಯಾವುದೇ ವಿವೇಚನೆಯಿಲ್ಲವಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಸಿದ್ದರಾಮಯ್ಯ ಪತ್ನಿಗೆ ನಿವೇಶನ ಕೊಡಲಾಗಿದೆ. ಇದರಲ್ಲಿ ಮುಖ್ಯಮಂತ್ರಿಗಳು ಯಾವುದೇ ತಪ್ಪು ಮಾಡಿಲ್ಲ. ಹೀಗಾಗಿ ಇಡೀ ಅಹಿಂದ ವರ್ಗ, ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ಅವರಿಗೆ ಬೆಂಬಲವಾಗಿ ನಿಂತಿದೆ. ಇದು ಅವರ ರಾಜಕಾರಣಕ್ಕೆ ಮಾದರಿಯಾಗಿದೆ. ಸಿದ್ದರಾಮಯ್ಯ ಆಡಳಿತ ವೈಖರಿ ಸಹಿಸದೆ ಈ ರೀತಿ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಅ.೨೯ರಂದು ಸಿದ್ದರಾಮಯ್ಯ ಪರವಾಗಿ ತೀರ್ಪು ಬರುವ ವಿಶ್ವಾಸವಿದೆ. ಈ ಹಿಂದೆ ಇದೇ ರೀತಿ ಹಿಂದುಳಿದ ವರ್ಗಗಳ ನಾಯಕರಾದ ದೇವರಾಜ ಅರಸು, ಎಸ್.ಬಂಗಾರಪ್ಪ, ವೀರಪ್ಪ ಮೊಯ್ಲಿ, ಧರ್ಮಸಿಂಗ್ ವಿರುದ್ಧ ಷಡ್ಯಂತ್ರ ರೂಪಿಸಲಾಗಿತ್ತು. ಆದರೆ ಈಗ ಶೋಷಿತ ಸಮುದಾಯಗಳು ಜಾಗೃತವಾಗಿದ್ದು ಸಮಾಜವಾದದ ಹಿನ್ನೆಲೆಯಿಂದ ಬಂದಿರುವ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಸರ್ಕಾರದ ಪರ ಬಂಡೆಯAತೆ ನಿಂತಿವೆ. ಸಿದ್ದರಾಮಯ್ಯ ವಿರುದ್ಧ ಷಡ್ಯಂತ್ರ ರೂಪಿಸುತ್ತಿರುವ ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೆ ತಕ್ಕ ಪಾಠವನ್ನು ಕಲಿಸಲು ಅಹಿಂದ ಸಮುದಾಯಗಳು ನಿರ್ಧರಿಸಿವೆ. ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರ ಅಸ್ಥಿರಗೊಳಿಸಲು ಅವಕಾಶ ನೀಡುವುದಿಲ್ಲ ಎಂದರು.
ಶಾಸಕ ಪ್ರಕಾಶ ಕೋಳಿವಾಡ ಮಾತನಾಡಿ, ಮಹಿಳೆಯರಿಗೆ ಅಗೌರವ ತೋರಿಸಿದ ಕುಟುಂಬದವರು ಬಂದು ಸಿದ್ದರಾಮಯ್ಯ ಕುರಿತು ನೀತಿ ಪಾಠ ಹೇಳುತ್ತಿದ್ದಾರೆ. ಇದು ಭೂತದ ಬಾಯಲ್ಲಿ ಭಗÀವದ್ಗೀತೆ, ಶಕುನಿ ಬಾಯಲ್ಲಿ ಮಹಾಭಾರತ, ರಾವಣನ ಬಾಯಲ್ಲಿ ರಾಮಾಯಣ ಕೇಳುವಂತಾಗಿದೆ. ಇನ್ನು ಬಿಜೆಪಿಗರು ಭ್ರಷ್ಟಾಚಾರ ಮಾಡಿ ನಮ್ಮ ರೀತಿ ಜಗತ್ತು ಇದೆ ಅಂತ ಅಂದುಕೊAಡಿದ್ದಾರೆ. ಅವರಿಂದ ಸಿದ್ದರಾಮಯ್ಯ ಕೂದಲು ಅಲುಗಾಡಿಸಲು ಆಗುವುದಿಲ್ಲ. ನಮಗೆ ನ್ಯಾಯ ಸಿಗುತ್ತದೆ. ಒಂದು ವೇಳಿ ನ್ಯಾಯ ಸಿಗದೇ ಹೋದಲ್ಲಿ ನಾನು ಶಂಕರಣ್ಣ ಜತೆಗೂಡಿ ರಾಣೇಬೆನ್ನೂರಿನಿಂದ ಬೆಂಗಳೂರುವರೆಗೆ ಪಾದಯಾತ್ರೆ ಹೋಗುತ್ತೇವೆ. ಲೋಕಸಭಾ ಚುನಾವಣೆಯಲ್ಲಿ ನಾವು ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರಬೇಕಿತ್ತು. ಅಹಿಂದ ವರ್ಗದವರಿಗೆ ಜಗಳ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ನಾವು ಒಗ್ಗಟ್ಟಾಗಿ ಅಹಿಂದ ವರ್ಗ ಕಾಪಾಡಬೇಕಾಗಿದೆ ಎಂದರು.
ರತ್ನಾಕರ ಕುಂದಾಪುರ, ಕೃಷ್ಣಮೂರ್ತಿ ಸುಣಗಾರ, ಪುಟ್ಟಪ್ಪ ಮರಿಯಮ್ಮನವರ, ಸಿದ್ದಣ್ಣ ಅಂಬಲಿ, ಮರಿಯಪ್ಪ ಪೂಜಾರ, ರವಿ ಹುಲಿಗೆಮ್ಮನವರ, ಆನಂದ ದೊಡ್ಡಮನಿ, ಜುಮ್ಮಣ್ಣಿ, ಬಿ.ಬಿ.ನಂದ್ಯಾಲ, ಮೃತ್ಯುಂಜಯ ಗುದಿದೇರ, ರೇಣುಕಾ ಲಮಾಣಿ, ಶೇರುಖಾನ ಕಾಬೂಲಿ, ರವೀಂದ್ರಗೌಡ ಪಾಟೀಲ, ಆನಂದ ಹುಲಬನ್ನಿ, ಷಣ್ಮುಖ ಕಂಬಳಿ, ಕಿರಣ ಗುಳೇದ, ಸುರೇಶ ಜಡಮಲಿ, ಡಾಕಪ್ಪ ಲಮಾಣಿ, ದೇವೇಂದ್ರಪ್ಪ ಕಾಟಿ, ಕೃಷ್ಣಪ್ಪ ಕಂಬಳಿ, ಹನುಮಂತಪ್ಪ ಕಬ್ಬಾರ ಸೇರಿದಂತೆ ಮತ್ತಿತರರಿದ್ದರು.
More Stories
ತಾಪಂ ಕೆಡಿಪಿ ಸಭೆಯಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗೆ ತರಾಟೆ..!
ಹೆದ್ದಾರಿಯಲ್ಲಿ ದರೋಡೆ ಮಾಡಲು ಹೊಂಚು ಹಾಕಿದ್ದವರು ಕಂಬಿ ಹಿಂದೆ
ನಗರಸಭೆ ನೀರಿನ ತೆರಿಗೆಯನ್ನು ನಿಮ್ಮ ಮೊಬೈಲನಲ್ಲಿ ಪಾವತಿಸಿ.