ಬಹಳಷ್ಟು ಲಾಭ ಕೊಡುವುದಾಗಿ ನಂಬಿಸಿ 75.42 ಲಕ್ಷ ರೂ. ವಂಚನೆ

ಕಾಕೋಳ ಗ್ರಾಮದಲ್ಲಿ ಸೊಸೈಟಿಗೆ ಕನ್ನ ಹಾಕಿದ ಕಳ್ಳರು.

ಅಧಿಕಾರ ಶಾಶ್ವತವಲ್ಲ, ಜನರ ಸೇವೆ ನಿಜಾವಾದ ಶಾಶ್ವತ ಮಾಜಿ ಶಾಸಕ ಅರುಣಕುಮಾರ ಪೂಜಾರ

ಅರುಣಕುಮಾರ ಪೂಜಾರ ಜನ್ಮದಿನದ ನಿಮಿತ್ತ ನಾಳೆ ವಿವಿಧ ಕಾರ್ಯಕ್ರಮ

ನಂದಿಹಳ್ಳಿ ಗ್ರಾಮದಲ್ಲಿ ಸಾವಿನಲ್ಲಿ ಒಂದಾದ ದಂಪತಿಗಳು.!

ಶಾಸಕರ ಆಪ್ತಸಹಾಯಕ ಮನೆಯಲ್ಲಿ 21.30 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

ಹೆಂಡತಿ ಕತ್ತು ಕೊಯ್ದು ಕೊಲೆಗೆ ಯತ್ನಿಸಿದ ಪತಿರಾಯ..

ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಯುದ್ಧ ಟ್ಯಾಂಕರ್ ಸ್ಥಾಪನೆ ರಾಣೆಬೇನ್ನೂರು ಹೆಮ್ಮೆ; ಸಭಾಧ್ಯಕ್ಷ ಯು.ಟಿ.ಖಾದರ

ಸದನದಲ್ಲಿ ಆಡಿದ ಮಾತಿಗೆ ಕ್ಷಮೆಯಾಚಿಸುವೆ, ಪಕ್ಷಾತೀತ ಕಾರ್ಯಕ್ರಮಕ್ಕೆ ಸಾಥ್ ನೀಡಿ; ಶಾಸಕ ಪ್ರಕಾಶ ಕೋಳಿವಾಡ.

ಯುದ್ಧ ಟ್ಯಾಂಕರ್ ಕಟ್ಟೆಗೆ ಹಾಕಿರುವ ಶಾಸಕರ ಪೋಟೋ ಹಾಗೂ ಪಿಕೆಕೆ ಹೆಸರಿಗೆ ಬಿಜೆಪಿ ಆಕ್ಷೇಪ. ಸರ್ಕಾರದ ಅನುದಾನದಲ್ಲಿ ಶಾಸಕರು ಶಿಷ್ಟಾಚಾರ ಪಾಲಿಸಲಿ.

ನಿಂತಿದ್ದ ಟಿಪ್ಪರಗೆ ಬೈಕ್ ಡಿಕ್ಕಿ ಜೋಯಿಸರಹರಳಹಳ್ಳಿ ಗ್ರಾಮದ ಎಂಟೆಕ್ ಪದವಿಧರ ಸಾವು

ಕುರುಬ ಸಮುದಾಯ ಹಾಗೂ ಸಿಎಂ ವಿರುದ್ಧ ಅವಾಚ್ಯವಾಗಿ ನಿಂದನೆ ಮಾಡಿದವರು ಮೇಲೆ‌ ಕಾನೂನು ಕ್ರಮಕ್ಕೆ ಒತ್ತಾಯ..

ಡೆಂಗ್ಯೂ ಜ್ವರ ಶಂಕೆ ಹಿನ್ನೆಲೆ ಯುವಕ ಸಾವು, ಕರೂರು ಗ್ರಾಮದಲ್ಲಿ ಘಟನೆ.

ಸತತ ಆರು ಗಂಟೆಗಳ ಕಾರ್ಯಚರಣೆ ನಂತರ ಸಿಕ್ಕ ಚಿರತೆ

ನಾಡಿಗೇರ ಓಣಿಯ ಕಾಕಿಯರ ಮನೆಯಲ್ಲಿ ಅವಿತಕೊಂಡ ಕುಂತ ಚಿರತೆ…!!

ಹೆಂಡತಿ ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡ ಗಂಡ ತಡಸ ಗ್ರಾಮದಲ್ಲಿ ಘಟನೆ

ನದಿ ಹಾರಿದ ಮಹಿಳೆ 2ಕೋಟಿ ಸಾಲ ಮಾಡಿದ್ದಳು ಡಿಸಿ ಮಹಾಂತೇಶ ವಿಜಯದಾನಮ್ಮನವರ ಮಾಹಿತಿ.

ಆತ್ಮಹತ್ಯೆ ಮಾಡಿಕೊಳ್ಳಲು ಹೋದ ಮಹಿಳೆ ತುಂಗಭದ್ರಾ ನದಿಯಲ್ಲಿ ಈಜಿ ಜೀವ ಉಳಿಸಿಕೊಂಡ ಗಟ್ಟಿಗಿತ್ತಿ…!

ದೇವರಗುಡ್ಡ ಮಾಲತೇಶ ಸ್ವಾಮಿಯ ಆಡಳಿತ ತಹಸೀಲ್ದಾರ್ ಸುಪರ್ದಿಗೆ…

ರುದ್ರಪ್ಪ ಲಮಾಣಿ ಮೇಲೆ ಚಿರತೆ ದಾಳಿ, ಆಸ್ಪತ್ರೆಗೆ ದಾಖಲು..!

ನಗರದಲ್ಲಿ ಮುಸ್ಲಿಂ ಸಮುದಾಯದ ಬೃಹತ್ ಪ್ರತಿಭಟನೆ.. ಕಠಿಣ ಶಿಕ್ಷೆಗೆ ಆಗ್ರಹಿಸಿ ಸಾವಿರಾರು ಜನರು ಆಗ್ರಹ.

ರಾಣೆಬೇನ್ನೂರು: ಪ್ರವಾದಿ ಮುಹಮ್ಮದ್ ಪೈಗಂಬರ್ ಹಾಗೂ ಮುಸ್ಲಿಂ ಸಮುದಾಯದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಮಹಾರಾಷ್ಟ್ರ ಮೂಲದ ರಾಮಗಿರಿ ಮಹಾರಾಜ ಅವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಸಾವಿರಾರು ಮುಸ್ಲಿಂ ಸಮುದಾಯದ ಜನರು ನಗರದಲ್ಲಿ ಮೌನ ಮೆರವಣಿಗೆ ಮೂಲಕ ಪ್ರತಿಭಟನೆ ನಡೆಸಿದರು.

ನಗರದ ಆಂಗ್ಲೋ ಉರ್ದು ಮೈದಾನದಿಂದ ಪ್ರಾರಂಭವಾದ ಪ್ರತಿಭಟನೆ ಮೆಡ್ಲೇರಿ ರಸ್ತೆ, ಪಿ.ಬಿ.ರಸ್ತೆ ಮಾರ್ಗವಾಗಿ ತಹಸೀಲ್ದಾರ ಕಚೇರಿಗೆ ತೆರಳಿತು.

 

ನಂತರ ಮಾತನಾಡಿದ ಮುಸ್ಲಿಂ ಸಮಾಜದ ಅಲ್ತಾಪ್ ಹಿಮಾಮಿ ನಾಡಿನ ಮಹಾಕವಿಯಾದ ಕುವೆಂಪು ಅವರು ಸರ್ವಜನಾಂಗದ ಶಾಂತಿಯ ತೋಟ ಎಂದು ನಮ್ಮ ರಾಜ್ಯ ನಮ್ಮ ದೇಶದ ಬಗ್ಗೆ ಹಾಡಿ ಹೊಗಳಿದ್ದಾರೆ. ಆದರೆ ಸಮಾಜದಲ್ಲಿ ಶಾಂತಿ ಕದಡುವ ಸಲುವಾಗಿ ಕೆಲವರು ಮುಂದಾಗಿದ್ದಾರೆ. ದೇಶದಲ್ಲಿ ಒಂದು ಧರ್ಮ ಇನ್ನೊಂದು ಧರ್ಮಕ್ಕೆ ನಿಂದಿಸುವುದಾಗಲಿ ಅಥವಾ ಅವಹೇಳನಕಾರಿ ಹೇಳಿಕೆ ನೀಡುವುದನ್ನು ಸಹಿಸುವುದಿಲ್ಲ.

ಅದರಂತೆ ಮಹಾರಾಷ್ಟ್ರ ಮೂಲದ ಮುಂಬ್ರಾ ಗ್ರಾಮದ ರಾಮಗಿರಿ ಮಹಾರಾಜ ಅವರು ಧಾರ್ಮಿಕ ಸಭೆಯಲ್ಲಿ ಮಹಮ್ಮದ್ ಪೈಗಂಬರ್ ಹಾಗೂ ಮುಸ್ಲಿಂ ಸಮುದಾಯದ ಕುರಿತು ಅವಹೇಳನಕಾರಿ ಭಾಷಣ ಮಾಡುವ ಮೂಲಕ ಸಮಾಜದಲ್ಲಿ ಶಾಂತಿ ಕದಡುವ ಕೆಲಸ ಮಾಡಿದ್ದಾರೆ. ಅಂತವರ ಮೇಲೆ ಕೇಂದ್ರ ಹಾಗೂ‌ ಮಹಾರಾಷ್ಟ್ರ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ರಾಷ್ಟ್ರಪತಿ ಮೂಲಕ ಆಗ್ರಹ ಮಾಡಿದರು.

 

ಅಂಜುಮನ್ ಸಂಸ್ಥೆ ಅಧ್ಯಕ್ಷರಾದ ಏಜಾಜ್ ಖಾಬ ಸೌದಾಗರ ಮಾತನಾಡಿ, ದೇಶದಲ್ಲಿ ಮುಸ್ಲಿಂ ಸಮುದಾಯದ ವಿರುದ್ಧ ನಿರಂತರವಾಗಿ ಅವಹೇಳನಕಾರಿ ಹೇಳಿಕೆ, ದೌರ್ಜನ್ಯ ಕಂಡು ಬರುತ್ತಿದ್ದ ಅವುಗಳನ್ನು ತಡೆಯಲು ಕೇಂದ್ರ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಮಹಮ್ಮದ್ ಪೈಗಂಬರ್ ಅವರು ಬಗ್ಗೆ ಇಂತಹ ನೀಚ ಹೇಳಿಕೆ ನೀಡಿದರು ಅವರ ಮೇಲೆ ಯಾವುದೇ ಕಾನೂನು ಕ್ರಮವನ್ನು ಈವರೆಗೂ ಜರುಗಿಸಿಲ್ಲ. ಕೂಡಲೇ ಅವರ ಮೇಲೆ ಕಾನೂನು ‌ಕ್ರಮ ಕೈಗೊಂಡು ಕಠಿಣ ಶಿಕ್ಷೆ ನೀಡಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

 

ಗ್ರೇಡ್-1 ತಹಸೀಲ್ದಾರ ಅರುಣಕುಮಾರ ಕಾರಗಿ ಮೂಲಕ ‌ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರಿಗೆ ಮನವಿ ಸಲ್ಲಿಸಿದರು.

 

ಪ್ರತಿಭಟನೆ ಸಮಯದಲ್ಲಿ ಅಂಜುಮನ್ ಸಂಸ್ಥೆಯ ಇಮ್ರಾನಖಾನ್ ಶಿರೇದ್, ರಫಿಕ್ ಮೆಣಸಿನಕಾಯಿ, ರಿಯಾಜ್ ಅಹ್ಮದ್ ಕುಪ್ಪೆಲೂರು,ಹುಸೇನಸಾಬ ಬಿದರಿ, ನೂರುಲ್ಲಾ ಖಾಜಿ, ಹಬೀಬವುಲ್ಲಾ ಕಂಬಳಿ, ಖಾಲಿದ್ ಬಾಶಾ ಭಾವಿಕಟ್ಟಿ, ನಜುರುಲ್ಲಾ ಕಿಲ್ಲೇದಾರ, ಭಾಷಾಸಾಬ್ ನೀಲಗಾರ ,ಅತಾವುಲ್ಲ ಉದಗಟ್ಟಿ ಸೇರಿದಂತೆ ಎಸ್ಡಿಪಿಐ ಪಕ್ಷದ ಮುಖಂಡರು ಹಾಜರಿದ್ದರು.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!