ತಾಪಂ ಕೆಡಿಪಿ ಸಭೆಯಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗೆ ತರಾಟೆ..!

ಹೆದ್ದಾರಿಯಲ್ಲಿ ದರೋಡೆ ಮಾಡಲು ಹೊಂಚು ಹಾಕಿದ್ದವರು ಕಂಬಿ ಹಿಂದೆ

ನಗರಸಭೆ ನೀರಿನ ತೆರಿಗೆಯನ್ನು ನಿಮ್ಮ ಮೊಬೈಲನಲ್ಲಿ ಪಾವತಿಸಿ.

ಕೋಡಿಯಾಲ ಹೊಸಪೇಟೆ ಗ್ರಾಮದಲ್ಲಿ ವಾಲ್ಮೀಕಿ ಪುತ್ಥಳಿ ಅನಾವರಣ ಮತ್ತು‌ ವೃತ್ತ ಲೋಕಾರ್ಪಣೆ ನಾಡಿದ್ದು

ರಾಣೆಬೇನ್ನೂರ ತಾಲೂಕ ಹಸಿರಿಕರಣಕ್ಕೆ “ಟ್ರೀ ಪಾರ್ಕ್” ಶಾಸಕ ಪ್ರಕಾಶ ಕೋಳಿವಾಡ

ನಗರಸಭೆ ನೂತನ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ರಮೇಶ ಕರಡೆಣ್ಣನವರ ಆಯ್ಕೆ.

ಅಗಡಿ ತೋಟಕ್ಕೆ ಹೊರಟ್ಟವರು ಕೈಲಾಸಕ್ಕೆ ಹೋದರು, ಮೃತಪಟ್ಟವರ ವಿವರ ಇಲ್ಲಿದೆ.

ಮೋಟೆಬೆನ್ನೂರು ಬಳಿ ಭೀಕರ ಅಪಘಾತ, ರಾಣೆಬೇನ್ನೂರು ನಗರದ ಆರು ಜನ ಸಾವು.

ಪರಮ ಭ್ರಷ್ಟ ಲಂಚಾವತಾರಿ ಸಂವಿಧಾನ ವಿರೋಧಿ ವೈದ್ಯ ಡಾ” ಪರಮೇಶ್ವರಪ್ಪ ಅಮಾನತಗೆ ಆಗ್ರಹ

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಹಾವೇರಿಯಲ್ಲಿ ಕಾಂಗ್ರೆಸ್ ಗೆದ್ದೇ ಗೆಲ್ಲತ್ತೆ: ಸಿ.ಎಂ ಭರವಸೆ

ರಾಹುತನಕಟ್ಟಿ ಗ್ರಾಪಂ ಮತ್ತೆ ಬಿಜೆಪಿ ಬೆಂಬಲಿತರ ತೆಕ್ಕೆಗೆ.

ಸ್ಮಶಾನ ಜಾಗಕ್ಕಾಗಿ ತಾಲೂಕಿನ ಕೃಷ್ಣಾಪುರ ಗ್ರಾಮಸ್ಥರಿಂದ ಸಿಎಂಗೆ ಕಪ್ಪು ಪಟ್ಟಿ‌ ಪ್ರದರ್ಶನಕ್ಕೆ ಸಜ್ಜು.

ತಂದೆ ಶವ ಮನೆಯಲ್ಲಿಟ್ಟು ಕಣ್ಣೀರಿಡುತ್ತ ಪರೀಕ್ಷೆ ಬರೆದ ಅಣ್ಣ-ತಂಗಿಗೆ ಉತ್ತಮ ಅಂಕ; ತಂಗಿಗೆ ಶೇ. 83 ಅಣ್ಣನಿಗೆ ಶೇ. 85ರಷ್ಟು ಅಂಕ

ಶಿವಾನಂದ ಪಾಟೀಲ ರಾಜೀನಾಮೆ ಪತ್ರದಲ್ಲಿ ಏನು ಹೇಳಿದ್ದಾರೆ.

ಮೆಡ್ಲೇರಿ ರಸ್ತೆಯಿಂದ ಹುಣಸಿಕಟ್ಟಿ ತನಕ ಇಂದು ರಾತ್ರಿ ವಿದ್ಯುತ್ ಸರಬರಾಜು ಡೌಟು..

ಕಿತ್ತಾಟ, ಕಿರಚಾಟ ನಡುವೆ ನಗರಸಭೆ ಸ್ಥಾಯಿ ಸಮಿತಿಗೆ ಅನುಮೋದನೆ.

ಇಸ್ವತ್ತು ಉತಾರ ನೀಡಲು ಲಂಚ ಪಡೆಯುತ್ತಿದ್ದ ಪಿಡಿಓ, ಉಪಾಧ್ಯಕ್ಷ ಸೇರಿ ಮೂರ ಜನ ಗ್ರಾಪಂ ಸದಸ್ಯರ ಬಂಧನ.

ರಷ್ಯಾದಲ್ಲಿ ಡಾ.ನಾಗರಾಜ ಎಸ್.ಕೆ ಅವರಿಗೆ ಗ್ಲೋಬಲ್ ಅಚಿವರ್ಸ್ ಪ್ರಶಸ್ತಿ.

ಐಎಎಸ್‌ ಪಾಸ್ ಮಾಡಿದ ಸಚಿನ ಗುತ್ತೂರುಗೆ ಕೋಡಿಯಾಲ ಹೊಸಪೇಟೆ ಗ್ರಾಮದಲ್ಲಿ ಅದ್ದೂರಿ ಸ್ವಾಗತ..

ಟ್ರ್ಯಾ ಕ್ಟರ್‌ನಿಂದ ಬಿದ್ದು ಅಣ್ಣಾ-ತಮ್ಮಾ ಸಾವು, ನಾಲ್ವರಿಗೆ ಗಂಭೀರ ಗಾಯ

ನವದುರ್ಗಿಯರ ವೈಭವದಲ್ಲಿ ಎದ್ದು ಬಂದ “ರಾಣೆಬೇನ್ನೂರ ಕಾ ರಾಜಾ”

ರಾಣೆಬೇನ್ನೂರು: ಸಮಾಜದಲ್ಲಿ ಭಕ್ತಿಯ ಜತೆಗೆ ಮಹಿಳೆಯರ ಶಕ್ತಿಯು ಸಹ ತಿಳಿಯಬೇಕು ಎಂದು ವಿವೇಕಾನಂದ ಆಶ್ರಮದ ಸ್ವಾಮಿ ಪ್ರಕಾಶನಂದ ಮಹಾರಾಜರು ಹೇಳಿದರು.

ನಗರದ ನಗರಸಭಾ ಕ್ರೀಡಾಂಗಣದಲ್ಲಿ ಪ್ರತಿಷ್ಠಾಪನೆ ಮಾಡಿರುವ ರಾಣೆಬೇನ್ನೂರು ಕಾ ರಾಜಾ ಗಣಪತಿಯ “ನವದುರ್ಗಿಯರ ವೈಭವ” ಗಣೇಶ ಮಂಟಪ ಹಾಗೂ ಸಾಧಕಿಯ ಮಹಿಳೆಯರ ಕುರಿತು ರಚಿಸಿರುವ  “ಪ್ರಾ:ತ ಸ್ಮರಾಮಿ” ಎಂಬ  ಗ್ರಂಥ ಬಿಡುಗಡೆ ‌ಮಾಡಿ ಮಾತನಾಡಿದರು.

ಸದ್ಯ ರಾಜ್ಯ ಹಾಗೂ ದೇಶದಲ್ಲಿ ಗಣೇಶ ಉತ್ಸವನ್ನು ಡ್ಯಾನ್ಸ್, ಹಾಡುಗಳು, ಕುಣಿತದ ಮೂಲಕ ಅಂತ್ಯವಾಗುತ್ತಿದೆ. ಆದರೆ  ಗಣೇಶ ಹಬ್ಬವನ್ನು ಸಾಂಸ್ಕೃತಿಕವಾಗಿ, ಧಾರ್ಮಿಕವಾಗಿ, ಸಾಹಿತ್ಯಕವಾಗಿ ಮಾರ್ಪಾಡಿಸಿ ಅದನ್ನು ಹಬ್ಬವನ್ನಾಗಿ ಜನರಿಗೆ ತೋರಿಸಿದ ಮಂಡಳಿ ವಂದೇ ಮಾತರಂ ಸ್ವಯಂ ಸೇವಾ ಸಂಘ. ಇಂತಹ ಸಂಘ ಪ್ರತಿ ವರ್ಷವೂ ವಿಶೇಷವಾಗಿ, ವಿಭಿನ್ನವಾಗಿ ಜನರಿಗೆ ಅರಿವು ಮೂಡಿಸುವ ಕೆಲಸ ಮಾಡುತ್ತಿದೆ. ದೇಶದ ಜನರಿಗೆ ನಾವು ಅರಿವು, ಪ್ರಜ್ಞೆ ಮೂಡಿಸುವ ಕೆಲಸ ಮಾಡಬೇಕಾಗಿದೆ. ಅದಕ್ಕೆ ನಾವು ಎಲ್ಲರೂ ಸೇರಿ ಇಂತಹ ವಿನೂತನ ಕಾರ್ಯಕ್ರಮ ಮೂಲಕ ರಾಷ್ಟ್ರದ ಪ್ರಜ್ಞೆ ಬಗ್ಗೆ ತಿಳಿಸಬೇಕು ಎಂದರು.

ಎಂ.ಎಸ್.ರಾಘವೇಂದ್ರ ಮಾತನಾಡಿ, ಕರ್ನಾಟಕದಲ್ಲಿ ಗಣೇಶ ಉತ್ಸವ ಪ್ರಾರಂಭವಾಗಿದ್ದು ಉತ್ತರ ಕರ್ನಾಟಕದ ರಾಣೆಬೇನ್ನೂರು ನಗರದಿಂದ ಎಂಬುದು ವಿಶೇಷ. ಅಂದು ರಾಣೆಬೇನ್ನೂರು ನಗರದಲ್ಲಿ 1925-31 ರಲ್ಲಿ ನಗರದ ಮಾರ್ಕೆಟ್ ಗಲ್ಲಿಯಲ್ಲಿ ಮುದವೀಡು ಕೃಷ್ಣರಾಯರು ಪ್ರತಿಷ್ಠಾಪನೆ ಮಾಡಿದರು.  ಅದರಂತೆ ರಾಣೆಬೇನ್ನೂರು ನಗರದಲ್ಲಿ ವಂದೇ ಮಾತರಂ ಸ್ವಯಂ ಸೇವಾ ಸಂಘ ಸದಸ್ಯರು ಪ್ರತಿ ವರ್ಷವೂ ವಿನೂತನ ಗಣೇಶ ಪ್ರತಿಷ್ಠಾಪನೆ ಮಾಡುವ ಮೂಲಕ ರಾಜ್ಯದಲ್ಲಿ ಹೆಸರು ಮಾಡಿದೆ ಎಂದರು.

ಈ ಬಾರಿ ರಾಣೆಬೇನ್ನೂರು ನಗರದಲ್ಲಿ ವಿಶೇಷವಾಗಿ “ಪ್ರಾ:ತ ಸ್ಮರಾಮಿ” ಎಂಬ ಗ್ರಂಥ ರಚನೆ ಮಾಡುವ ರಾಜ್ಯ ಸೇರಿದಂತೆ ಜಿಲ್ಲೆಯ 37 ಮಹಿಳೆಯರ ಅವರ  ಸಾಧನೆ ಬಗ್ಗೆ ಚಿತ್ರಿಸಿ ಅವರ ಜೀವನ  ವಿವರಿಸಲಾಗಿದೆ.

ಇದನ್ನು ಯಾಕೆ ಮಾಡಲಾಗಿದೆ ಎಂದರೆ ಭಾರತದಲ್ಲಿ ಮಹಿಳೆಯರಿಗೆ ‌ಪ್ರಮುಖ ಸ್ಥಾನವನ್ನು ನೀಡಲಾಗಿದೆ. ಅಂತಹ ಮಹಿಳೆಯರ ಮೇಲೆ ದಿನ ನಿತ್ಯ ಅತ್ಯಾಚಾರ, ಶೋಷಣೆ ನಡೆಯುತ್ತಿರುವದು ನೋಡಿದರೆ ಸಮಾಜದಲ್ಲಿ ತೆಲೆ ತಗ್ಗಿಸುವ ಕೆಲಸವಾಗಿದೆ. ಇಂತಹ ಸಮಯದಲ್ಲಿ ನಾವು ಮಹಿಳೆಯರಿಗೆ ಧೈರ್ಯ, ಸ್ಥೈರ್ಯ ತುಂಬಬೇಕು ಎಂಬ ಉದ್ದೇಶದಿಂದ ನವದುರ್ಗಿಯರ ವೈಭವದ ಮ‌ೂಲಕ ಮಹಿಳೆಯರ ಸಬಲತೆ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತದೆ ಎಂದು ಅವರು ತಿಳಿಸಿದರು.

 

ನಗರದ ವಿವೇಕಾನಂದ ಆಶ್ರಮದ ಪ್ರಕಾಶನಂದ ಮಹಾರಾಜ ಸಾನ್ನಿಧ್ಯ ವಹಿಸಿದ್ದರು.

ಕಾರ್ಯಕ್ರಮದಲ್ಲಿ ನಗರಸಭೆ ಸದಸ್ಯರಾದ ರೂಪಾ ಚಿನ್ನಿಕಟ್ಟಿ, ಕವಿತಾ ಹೆದ್ದೇರಿ, ಪ್ರಕಾಶ ಬುರಡಿಕಟ್ಟಿ, ಲೇಖಕರಾದ ಪ್ರಮೋದ್ ನಲವಾಗಲ, ಪ್ರೇಮಕುಮಾರ ಬಿದರಕಟ್ಟಿ, ಅಜಯ್ ಮಠದ ಸೇರಿದಂತೆ ಇತರರು ಹಾಜರಿದ್ದರು.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!