16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…

ಹಾವೇರಿ ಜಿಲ್ಲಾಸತ್ರ ಕೋರ್ಟ್‌ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.

ಸಿಎಂ ಕುರ್ಚಿ ಗುದ್ದಾಟದ ವಿಚಾರ…! ಮತ್ತೆ ಗರಂ ಆದ ಸಿಎಂ ಸಿದ್ಧರಾಮಯ್ಯ.

ಸಾಯಿ ಆಸ್ಪತ್ರೆ ವೈದ್ಯನ ಮೇಲೆ ಹಲ್ಲೆ: 8 ಜನರ ವಿರುದ್ಧ ಪ್ರಕರಣ ದಾಖಲು.

ಹಾವೇರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ನಿಂಗರಾಜ ಕೋಡಿಹಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ಸಿದ್ದು ಚಿಕ್ಕಬಿದರಿ ನೇಮಕ.

ನ್ಯಾಯಬೆಲೆ ಅಂಗಡಿ ಪ್ರಾಧಿಕಾರವನ್ನು ವರ್ಗಾವಣೆ ಮಾಡಿಕೊಡಲು ಲಂಚ ಸ್ವೀಕಾರ, ರಾಣೆಬೆನ್ನೂರ ತಹಶೀಲ್ದಾರ ಕಛೇರಿಯ ಆಹಾರ ನಿರೀಕ್ಷಕ ಬಂಧನ.

ಉಚಿತ ಚಿಕನ್ ಬಿರಿಯಾನಿ ಬೇಕಾ,‌ ಆಗಾದ್ರೆ ಬಸ್ ನಿಲ್ದಾಣಕ್ಕೆ ಬನ್ನಿ.

ಅಂಬೇಡ್ಕರ್, ಗಾಂಧಿ ಹೆಸರು ಅಳಿಸಲು ಹೊರಟಿರುವ ವಿರುದ್ಧ ನನ್ನ ಹೋರಾಟ; ಸಚಿವ ಸತೀಶ ಜಾರಕಿಹೊಳಿ

ನಗರಸಭೆ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಜಿಲ್ಲಾಧಿಕಾರಿ.

ತವರ ಮನೆಗೆ ಹೆಂಡತಿ ಹೋದಾಗ ಎರಡನೇ ಮದುವೆಯಾದ ಭೂಪ ಜೈಲು ಪಾಲು…!

ದಾರಿ ತಪ್ಪಿ ಬಂದಿದಲ್ಲ, ದಾರಿ ಹುಡಕಿಕೊಂಡು ಬಂದೇನಿ; ಗಜರಾಜನ ಕೂಗಾಟ

ತಾಯಿ ಮೇಲೆ ಹಲ್ಲೆ ಮಾಡಿದ್ರೆ ಹುಷಾರ…! ಪುತ್ರ, ಸೊಸೆಗೆ ಜೈಲು ಪಾಲು

ನಿರ್ಮಾಣ ಹಂತದ ಟ್ಯಾಂಕನಿದ್ದು ಬಿದ್ದು ಕಾರ್ಮಿಕ ಸಾವು.

ಒಂಟಿ ಮನೆಯಲ್ಲಿದ್ದ ಮಹಿಳೆಯ ಕತ್ತು ಕೊಯ್ದು ಕೊಲೆ‌ಮಾಡಿದ ವ್ಯಕ್ತಿ ಬಂಧನ

ರಾಣೆಬೇನ್ನೂರ ನಗರದಲ್ಲಿ ಮಹಿಳೆಯ ಭೀಕರ ಕೊಲೆ, ಕಾರಣ ನಿಗೂಢ…!

ಹೊಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವ ರೈತ ಸಾವು

ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ನವದುರ್ಗಿಯರ ವೈಭವದಲ್ಲಿ ಎದ್ದು ಬಂದ “ರಾಣೆಬೇನ್ನೂರ ಕಾ ರಾಜಾ”

ರಾಣೆಬೇನ್ನೂರು: ಸಮಾಜದಲ್ಲಿ ಭಕ್ತಿಯ ಜತೆಗೆ ಮಹಿಳೆಯರ ಶಕ್ತಿಯು ಸಹ ತಿಳಿಯಬೇಕು ಎಂದು ವಿವೇಕಾನಂದ ಆಶ್ರಮದ ಸ್ವಾಮಿ ಪ್ರಕಾಶನಂದ ಮಹಾರಾಜರು ಹೇಳಿದರು.

ನಗರದ ನಗರಸಭಾ ಕ್ರೀಡಾಂಗಣದಲ್ಲಿ ಪ್ರತಿಷ್ಠಾಪನೆ ಮಾಡಿರುವ ರಾಣೆಬೇನ್ನೂರು ಕಾ ರಾಜಾ ಗಣಪತಿಯ “ನವದುರ್ಗಿಯರ ವೈಭವ” ಗಣೇಶ ಮಂಟಪ ಹಾಗೂ ಸಾಧಕಿಯ ಮಹಿಳೆಯರ ಕುರಿತು ರಚಿಸಿರುವ  “ಪ್ರಾ:ತ ಸ್ಮರಾಮಿ” ಎಂಬ  ಗ್ರಂಥ ಬಿಡುಗಡೆ ‌ಮಾಡಿ ಮಾತನಾಡಿದರು.

ಸದ್ಯ ರಾಜ್ಯ ಹಾಗೂ ದೇಶದಲ್ಲಿ ಗಣೇಶ ಉತ್ಸವನ್ನು ಡ್ಯಾನ್ಸ್, ಹಾಡುಗಳು, ಕುಣಿತದ ಮೂಲಕ ಅಂತ್ಯವಾಗುತ್ತಿದೆ. ಆದರೆ  ಗಣೇಶ ಹಬ್ಬವನ್ನು ಸಾಂಸ್ಕೃತಿಕವಾಗಿ, ಧಾರ್ಮಿಕವಾಗಿ, ಸಾಹಿತ್ಯಕವಾಗಿ ಮಾರ್ಪಾಡಿಸಿ ಅದನ್ನು ಹಬ್ಬವನ್ನಾಗಿ ಜನರಿಗೆ ತೋರಿಸಿದ ಮಂಡಳಿ ವಂದೇ ಮಾತರಂ ಸ್ವಯಂ ಸೇವಾ ಸಂಘ. ಇಂತಹ ಸಂಘ ಪ್ರತಿ ವರ್ಷವೂ ವಿಶೇಷವಾಗಿ, ವಿಭಿನ್ನವಾಗಿ ಜನರಿಗೆ ಅರಿವು ಮೂಡಿಸುವ ಕೆಲಸ ಮಾಡುತ್ತಿದೆ. ದೇಶದ ಜನರಿಗೆ ನಾವು ಅರಿವು, ಪ್ರಜ್ಞೆ ಮೂಡಿಸುವ ಕೆಲಸ ಮಾಡಬೇಕಾಗಿದೆ. ಅದಕ್ಕೆ ನಾವು ಎಲ್ಲರೂ ಸೇರಿ ಇಂತಹ ವಿನೂತನ ಕಾರ್ಯಕ್ರಮ ಮೂಲಕ ರಾಷ್ಟ್ರದ ಪ್ರಜ್ಞೆ ಬಗ್ಗೆ ತಿಳಿಸಬೇಕು ಎಂದರು.

ಎಂ.ಎಸ್.ರಾಘವೇಂದ್ರ ಮಾತನಾಡಿ, ಕರ್ನಾಟಕದಲ್ಲಿ ಗಣೇಶ ಉತ್ಸವ ಪ್ರಾರಂಭವಾಗಿದ್ದು ಉತ್ತರ ಕರ್ನಾಟಕದ ರಾಣೆಬೇನ್ನೂರು ನಗರದಿಂದ ಎಂಬುದು ವಿಶೇಷ. ಅಂದು ರಾಣೆಬೇನ್ನೂರು ನಗರದಲ್ಲಿ 1925-31 ರಲ್ಲಿ ನಗರದ ಮಾರ್ಕೆಟ್ ಗಲ್ಲಿಯಲ್ಲಿ ಮುದವೀಡು ಕೃಷ್ಣರಾಯರು ಪ್ರತಿಷ್ಠಾಪನೆ ಮಾಡಿದರು.  ಅದರಂತೆ ರಾಣೆಬೇನ್ನೂರು ನಗರದಲ್ಲಿ ವಂದೇ ಮಾತರಂ ಸ್ವಯಂ ಸೇವಾ ಸಂಘ ಸದಸ್ಯರು ಪ್ರತಿ ವರ್ಷವೂ ವಿನೂತನ ಗಣೇಶ ಪ್ರತಿಷ್ಠಾಪನೆ ಮಾಡುವ ಮೂಲಕ ರಾಜ್ಯದಲ್ಲಿ ಹೆಸರು ಮಾಡಿದೆ ಎಂದರು.

ಈ ಬಾರಿ ರಾಣೆಬೇನ್ನೂರು ನಗರದಲ್ಲಿ ವಿಶೇಷವಾಗಿ “ಪ್ರಾ:ತ ಸ್ಮರಾಮಿ” ಎಂಬ ಗ್ರಂಥ ರಚನೆ ಮಾಡುವ ರಾಜ್ಯ ಸೇರಿದಂತೆ ಜಿಲ್ಲೆಯ 37 ಮಹಿಳೆಯರ ಅವರ  ಸಾಧನೆ ಬಗ್ಗೆ ಚಿತ್ರಿಸಿ ಅವರ ಜೀವನ  ವಿವರಿಸಲಾಗಿದೆ.

ಇದನ್ನು ಯಾಕೆ ಮಾಡಲಾಗಿದೆ ಎಂದರೆ ಭಾರತದಲ್ಲಿ ಮಹಿಳೆಯರಿಗೆ ‌ಪ್ರಮುಖ ಸ್ಥಾನವನ್ನು ನೀಡಲಾಗಿದೆ. ಅಂತಹ ಮಹಿಳೆಯರ ಮೇಲೆ ದಿನ ನಿತ್ಯ ಅತ್ಯಾಚಾರ, ಶೋಷಣೆ ನಡೆಯುತ್ತಿರುವದು ನೋಡಿದರೆ ಸಮಾಜದಲ್ಲಿ ತೆಲೆ ತಗ್ಗಿಸುವ ಕೆಲಸವಾಗಿದೆ. ಇಂತಹ ಸಮಯದಲ್ಲಿ ನಾವು ಮಹಿಳೆಯರಿಗೆ ಧೈರ್ಯ, ಸ್ಥೈರ್ಯ ತುಂಬಬೇಕು ಎಂಬ ಉದ್ದೇಶದಿಂದ ನವದುರ್ಗಿಯರ ವೈಭವದ ಮ‌ೂಲಕ ಮಹಿಳೆಯರ ಸಬಲತೆ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತದೆ ಎಂದು ಅವರು ತಿಳಿಸಿದರು.

 

ನಗರದ ವಿವೇಕಾನಂದ ಆಶ್ರಮದ ಪ್ರಕಾಶನಂದ ಮಹಾರಾಜ ಸಾನ್ನಿಧ್ಯ ವಹಿಸಿದ್ದರು.

ಕಾರ್ಯಕ್ರಮದಲ್ಲಿ ನಗರಸಭೆ ಸದಸ್ಯರಾದ ರೂಪಾ ಚಿನ್ನಿಕಟ್ಟಿ, ಕವಿತಾ ಹೆದ್ದೇರಿ, ಪ್ರಕಾಶ ಬುರಡಿಕಟ್ಟಿ, ಲೇಖಕರಾದ ಪ್ರಮೋದ್ ನಲವಾಗಲ, ಪ್ರೇಮಕುಮಾರ ಬಿದರಕಟ್ಟಿ, ಅಜಯ್ ಮಠದ ಸೇರಿದಂತೆ ಇತರರು ಹಾಜರಿದ್ದರು.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!