ರಾಣೆಬೇನ್ನೂರು: ತಾಲೂಕಿನ ಗ್ರಾಮೀಣ ಪೋಲಿಸ ಠಾಣಾ ವ್ಯಾಪ್ತಿಯಲ್ಲಿ ಒಂದೇ ವಾರದಲ್ಲಿ ಒಬ್ಬ ಯುವತಿ ಹಾಗೂ ಇಬ್ಬರು ಯುವಕರು ನಾಪತ್ತೆಯಾಗಿರುವ ಪ್ರಕರಣಗಳು ದಾಖಲಾಗಿವೆ.

ತಾಲೂಕಿನ ಮೆಡ್ಲೇರಿ ಗ್ರಾಮದ ಕೀರ್ತಿ ಮಹೇಂದ್ರಪ್ಪ ಚಲವಾದಿ(22) ಎಂಬ ಯುವತಿ ಕಾಲೇಜಿಗೆ ಹೋಗಿ ಬರುತ್ತೇನೆ ಎಂದು ಹೋದವಳು ಈವರೆಗೆ ಬಂದಿಲ್ಲ ಎಂದು ತಂದೆ ಪ್ರಕರಣ ದಾಖಲಿಸಿದ್ದಾರೆ.
ಇನ್ನೂ ಆರೇಮಲ್ಲಾಪುರ ಗ್ರಾಮದ ಚಂದ್ರಪ್ಪ ಬೇವಿನಮರದ ಆಸ್ಪತ್ರೆಗೆ ಹೋಗಿ ಬರುತ್ತೇನೆ ಎಂದು ಹೋದವನು ನಾಪತ್ತೆಯಾದರೆ ಚಿಕ್ಕಹರಳಳ್ಳಿ ಗ್ರಾಮದ ಇನ್ನೊರ್ವ ಯುವಕ ವಸಂತಕುಮಾರ ಲಮಾಣಿ ಸಹ ಜೆಸಿಬಿ ಕೆಲಸಕ್ಕೆ ಹೋದವನು ಮನೆಗೆ ಬಂದಿಲ್ಲ ಎಂದು ಅವರ ಪಾಲಕರು ಪ್ರಕರಣ ದಾಖಲಿಸಿದ್ದಾರೆ.
ಈ ಮೂವರು ಎಲ್ಲಿಯಾದರೂ ಕಂಡು ಬಂದರೆ ಕೂಡಲೇ ರಾಣೆಬೇನ್ನೂರು ಗ್ರಾಮೀಣ ಪೋಲಿಸ ಠಾಣೆಗೆ ಮಾಹಿತಿ ನೀಡಬೇಕು ಎಂದು ಮನವಿ ಮಾಡಿದ್ದಾರೆ

More Stories
16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…
ಹಾವೇರಿ ಜಿಲ್ಲಾಸತ್ರ ಕೋರ್ಟ್ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.
ಸಾಯಿ ಆಸ್ಪತ್ರೆ ವೈದ್ಯನ ಮೇಲೆ ಹಲ್ಲೆ: 8 ಜನರ ವಿರುದ್ಧ ಪ್ರಕರಣ ದಾಖಲು.