ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ಬಿಜೆಪಿ, ಜೆಡಿಎಸ್ ಹಾಗೂ ರೈತ ನಾಯಕ ರವಿಂದ್ರಗೌಡ ಪಾಟೀಲ ನೇತೃತ್ವದಲ್ಲಿ ಬೃಹತ್ ರೈತರ ಹೋರಾಟ.

ನಗರದಲ್ಲಿ NDA ವತಿಯಿಂದ ಕಾಂಗ್ರೆಸ್ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ.

ಬೆಂಬಲ ಬೆಲೆ ನೀಡಲು ಆಗ್ರಹಿಸಿ ಸರ್ಕಾರದ ವಿರುದ್ಧ ನಾಳೆ ಬಿಜೆಪಿ-ಜೆಡಿಎಸ್ ಜಂಟಿ ಪ್ರತಿಭಟನೆ

ಹೆಂಡತಿ ಹೊಡೆದು ಕೊಲೆ ಮಾಡಿದ ಪತಿರಾಯ..

ನಾವು ಯಾರನ್ನು ಟಾರ್ಗೆಟ್ ಮಾಡಲ್ಲ, ಮಾಡಿದ್ರೆ ಬೀಡಲ್ಲ ಎಸ್ಪಿ ಯಶೋಧ ವಂಟಗೋಡಿ.

ದೈಹಿಕ ಸಂಪರ್ಕ ಮಾಡಿ ಯುವತಿಗೆ ಕೈಕೊಟ್ಟ ಯುವಕ. ಯುವತಿ ಆತ್ಮಹತ್ಯೆ ಹುಡಗನ‌ ಮನೆ ಮುಂದೆ ಶವವಿಟ್ಟು ಪ್ರತಿಭಟನೆ..

ತಮ್ಮನ ಸಾವಿನಿಂದ ಮನನೊಂದ ಅಕ್ಕನು ನೇಣಿಗೆ ಶರಣು…!

ಸಚಿವ ಶಿವಾನಂದ ಪಾಟೀರನ್ನ BJP ಎಂದ ರೊಬೋಟ್

ರಾಣೆಬೇನ್ನೂರ ನಗರದಲ್ಲಿ ಭವ್ಯವಾಗಿ ನಡೆದ ಆರ್ ಎಸ್ ಎಸ್ ಪಥ ಸಂಚಲನ, ಒಂದು ಸಾವಿರ ಗಣವೇಷಧಾರಿಗಳು ಭಾಗಿ

ಎರಡು ವರ್ಷದಲ್ಲಿ ಎಷ್ಟು ಬಾರಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಗೆ ಹಾಜರಾಗದ ದಲಿತ ವಿರೋಧಿ ಶಾಸಕ; ಮಾಜಿ ಶಾಸಕ ಅರುಣಕುಮಾರ ಪೂಜಾರ.

ಕುದರಿಹಾಳ ಗ್ರಾಮದಲ್ಲಿ ಸಿಡಿಲು ಬಡಿದು ಯುವ ಕೃಷಿಕ ಸಾವು

ಕೈ-ಕಮಲ ನಡುವೆ ರಾಜಕೀಯ ಪ್ರತಿಷ್ಠೆ; ನಗರಸಭೆ ಸಾಮಾನ್ಯ ಸಭೆ ಮುಂದೂಡಿಕೆ.

ಹಾನಗಲ್ ತಹಸೀಲ್ದಾರ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ.

ಬಿಗರ ಊಟ ಮಾಡಿ ಬರುತ್ತಿದ್ದವರು ಮಸಣಕ್ಕೆ *ನಿಂತಿದ್ದ ಟ್ರ್ಯಾಕ್ಟರ್ ಟ್ರೈಲರ್ ಗೆ ಟಾಟಾ ಸುಪ್ರೋ ಡಿಕ್ಕಿ* *ಸ್ಥಳದಲ್ಲಿಯೆ ಮೂವರ ದುರ್ಮರಣ, 20ಕ್ಕೂ ಅಧಿಕರಿಗೆ ಗಂಭೀರ ಗಾಯ*

ತಾಪಂ ಪ್ರಭಾರ ಇಓ ಬಸವರಾಜ ಶಿಡೇನೂರ ಬಳಿ ಒಂದೂವರೆ ಕೋಟಿ ಆಸ್ತಿ..

ಕಂದಾಯ ನಿರೀಕ್ಷ ಅಶೋಕ‌ ಅರಳೇಶ್ವರ ಬಳಿ ಕೋಟ್ಯಾಂತರ ಆಸ್ತಿ ಪತ್ತೆ.

ಒಳ ಮೀಸಲಾತಿಗೆ ಆಗ್ರಹಿಸಿ ನಗರದಲ್ಲಿ ರಾಜ್ಯ ಮಾದಿಗರ ಸಂಘಟನೆ ಬೃಹತ್ ಪ್ರತಿಭಟನೆ.

ರಾಣೆಬೇನ್ನೂರು: ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿಗೊಳಿಸುವ ಅಧಿಕಾರವನ್ನು ಸುಪ್ರೀಂಕೋರ್ಟ್‌ ರಾಜ್ಯ ಸರ್ಕಾರಗಳಿಗೆ ನೀಡಿದೆ. ಈ ತೀರ್ಪನ್ನು ರಾಜ್ಯ ಸರ್ಕಾರ ಕೂಡಲೇ ಅನುಷ್ಠಾನಗೊಳಿಸಬೇಕು ಎಂದು ರಾಣೆಬೇನ್ನೂರು ನಗರದಲ್ಲಿ ರಾಜ್ಯ ಮಾದಿಗ ಸಂಘಟನೆ ಒಕ್ಕೂಟ ಬೃಹತ್ ಪ್ರತಿಭಟನೆ ನಡೆಸಿದರು.

ನಗರದ ಸಂಗಮ ವೃತ್ತದಿಂದ ಆರಂಭವಾದ ಪ್ರತಿಭಟನೆ ಎಂ.ಜಿ.ರಸ್ತೆ, ಕುರಬಗೇರಿ ರಸ್ತೆ, ಪಿಬಿ ರಸ್ತೆ ಮೂಲಕ ತಹಸೀಲ್ದಾರ ಕಚೇರಿಗೆ ತೆರಳಿ ಸರ್ಕಾರಕ್ಕೆ ಆಗ್ರಹಿಸಿದರು.

ಮುಖಂಡರಾದ ಪುಟ್ಟಪ್ಪ ಮರಿಯಮ್ಮನವರ ಮಾತನಾಡಿ, ಪರಿಶಿಷ್ಟ ಜಾತಿಗಳಲ್ಲಿ ಮನೆ ಮಾಡಿರುವ ಅಸಮಾನತೆ ಆತಂಕಕ್ಕೆ ಸುಪ್ರೀಂ ಕೋರ್ಟ್‌ ನೀಡಿರುವ ತೀರ್ಪು ತೆರೆ ಎಳೆದಿದೆ. ರಾಜ್ಯ ಸರ್ಕಾರ ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿಯಂತೆ ಪರಿಶಿಷ್ಟ ಜಾತಿಗಳ ಒಳಮೀಸಲಾತಿಯನ್ನು ಜನಸಂಖ್ಯೆ ಆಧಾರದ ಮೇಲೆ ಹಂಚಿಕೆ ಮಾಡಬೇಕು.

ಹಿಂದುಳಿದ ಜಾತಿಗಳಿಗೆ ಅನ್ವಯಿಸಿದ ಕೆನೆಪದರ ಮಾನದಂಡಗಳನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಅನ್ವಯಿಸುವ ಮಾನದಂಡಗಳು ಭಿನ್ನವಾಗಿರಬೇಕೆಂದು ಸುಪ್ರೀಂ ಕೋರ್ಟ್‌ ತೀರ್ಪಿನಲ್ಲಿ ಸ್ಪಷ್ಟಪಡಿಸಿದೆ. ಪರಿಶಿಷ್ಟ ಜಾತಿಗಳ ಒಳಮೀಸಲಾತಿಯ ಜೊತೆಗೆ ಕೆನೆಪದರ ತಳಕು ಹಾಕಿ ವಿಷಯಾಂತರ ಮಾಡುವ ಅಗತ್ಯವಿಲ್ಲ. ರಾಜ್ಯ ಸರ್ಕಾರ ಪರಿಶಿಷ್ಟ ಜಾತಿಗಳ ಒಳಮೀಸಲಾತಿಯನ್ನು ಜಾರಿಗೊಳಿಸಿಬೇಕು ಎಂದು ಆಗ್ರಹ ಮಾಡಿದರು.

ನಂತರ ತಹಸೀಲ್ದಾರ ಮೂಲಕ ಸರ್ಕಾರಕ್ಕೆ ‌ಮನವಿ ಸಲ್ಲಿಸಿದರು.

 

ಪ್ರತಿಭಟನೆ ಸಮಯದಲ್ಲಿ ಮುಖಂಡರಾದ ನೀಲಕಂಠಪ್ಪ ಕುಸಗೂರ, ಪ್ರಕಾಶ ಪೂಜಾರ, ಮೈಲಪ್ಪ ದಾಸಪ್ಪನವರ, ಹೊನ್ನಪ್ಪ ಹೊನ್ನಾಪುರ, ವಿಜಯ ಕೆಳಗಿಮನಿಗ, ಬಿ.ಡಿ. ಸಾವಕ್ಕಳವರ, ಮಲ್ಲೇಶಪ್ಪ ಮದ್ಲೇರ, ಮಂಜುಳಾ ಮಾದರ, ಪಾರವ್ವ ಹರಿಜನ, ಶೇಖವ್ವ ಚಳಗೇರಿ, ಹೊನ್ನಪ್ಪ ಸಿದ್ದಪ್ಪನವರ, ಶೇಖಪ್ಪ ಕಲ್ಲೇಜರ, ಕೆ.ಆರ್.ಉಮೇಶ, ಶಶಿಧರ ಚಲವಾದಿ, ರಮೇಶ ಐರಣಿ, ಮಲ್ಲೇಶ ಕಜ್ಜರಿ, ಧರ್ಮಣ್ಣ ಅಂತರ ಹಳ್ಳಿ, ಮಂಜಣ್ಣ ಗಂಗಾಪುರ, ದುರ್ಗಪ್ಪ ಹಿಲದಹಳ್ಳಿ, ನೀಲಕಂಠಪ್ಪ ಕರೂರ ಹಾಜರಿದ್ದರು.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!