16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…

ಹಾವೇರಿ ಜಿಲ್ಲಾಸತ್ರ ಕೋರ್ಟ್‌ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.

ಸಿಎಂ ಕುರ್ಚಿ ಗುದ್ದಾಟದ ವಿಚಾರ…! ಮತ್ತೆ ಗರಂ ಆದ ಸಿಎಂ ಸಿದ್ಧರಾಮಯ್ಯ.

ಸಾಯಿ ಆಸ್ಪತ್ರೆ ವೈದ್ಯನ ಮೇಲೆ ಹಲ್ಲೆ: 8 ಜನರ ವಿರುದ್ಧ ಪ್ರಕರಣ ದಾಖಲು.

ಹಾವೇರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ನಿಂಗರಾಜ ಕೋಡಿಹಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ಸಿದ್ದು ಚಿಕ್ಕಬಿದರಿ ನೇಮಕ.

ನ್ಯಾಯಬೆಲೆ ಅಂಗಡಿ ಪ್ರಾಧಿಕಾರವನ್ನು ವರ್ಗಾವಣೆ ಮಾಡಿಕೊಡಲು ಲಂಚ ಸ್ವೀಕಾರ, ರಾಣೆಬೆನ್ನೂರ ತಹಶೀಲ್ದಾರ ಕಛೇರಿಯ ಆಹಾರ ನಿರೀಕ್ಷಕ ಬಂಧನ.

ಉಚಿತ ಚಿಕನ್ ಬಿರಿಯಾನಿ ಬೇಕಾ,‌ ಆಗಾದ್ರೆ ಬಸ್ ನಿಲ್ದಾಣಕ್ಕೆ ಬನ್ನಿ.

ಅಂಬೇಡ್ಕರ್, ಗಾಂಧಿ ಹೆಸರು ಅಳಿಸಲು ಹೊರಟಿರುವ ವಿರುದ್ಧ ನನ್ನ ಹೋರಾಟ; ಸಚಿವ ಸತೀಶ ಜಾರಕಿಹೊಳಿ

ನಗರಸಭೆ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಜಿಲ್ಲಾಧಿಕಾರಿ.

ತವರ ಮನೆಗೆ ಹೆಂಡತಿ ಹೋದಾಗ ಎರಡನೇ ಮದುವೆಯಾದ ಭೂಪ ಜೈಲು ಪಾಲು…!

ದಾರಿ ತಪ್ಪಿ ಬಂದಿದಲ್ಲ, ದಾರಿ ಹುಡಕಿಕೊಂಡು ಬಂದೇನಿ; ಗಜರಾಜನ ಕೂಗಾಟ

ತಾಯಿ ಮೇಲೆ ಹಲ್ಲೆ ಮಾಡಿದ್ರೆ ಹುಷಾರ…! ಪುತ್ರ, ಸೊಸೆಗೆ ಜೈಲು ಪಾಲು

ನಿರ್ಮಾಣ ಹಂತದ ಟ್ಯಾಂಕನಿದ್ದು ಬಿದ್ದು ಕಾರ್ಮಿಕ ಸಾವು.

ಒಂಟಿ ಮನೆಯಲ್ಲಿದ್ದ ಮಹಿಳೆಯ ಕತ್ತು ಕೊಯ್ದು ಕೊಲೆ‌ಮಾಡಿದ ವ್ಯಕ್ತಿ ಬಂಧನ

ರಾಣೆಬೇನ್ನೂರ ನಗರದಲ್ಲಿ ಮಹಿಳೆಯ ಭೀಕರ ಕೊಲೆ, ಕಾರಣ ನಿಗೂಢ…!

ಹೊಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವ ರೈತ ಸಾವು

ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ಹೂಲಿಹಳ್ಳಿ ಬಳಿ ಲಾರಿ ಪಲ್ಟಿ, ಚಾಲಕನ ಎದೆಯಲ್ಲಿ ಸಿಲುಕಿದ ಕಬ್ಬಿಣದ ಪೈಪ್..!

ರಾಣೆಬೇನ್ನೂರು: ಸರ್ವೀಸ್ ರಸ್ತೆಯ ಜಾಲರಿಗೆ ಹಾಕಿದ್ದ ಕಬ್ಬಿಣದ ಪೈಪ್ ಲಾರಿ ಚಾಲಕನ ಎದೆಯಲ್ಲಿ ಸಿಕ್ಕಿಕೊಂಡು ಲಾರಿ ಚಾಲಕ ಪರದಾಟ ನಡೆದಿರುವ ಘಟನೆ  ರಾಣೇಬೆನ್ನೂರು ತಾಲೂಕಿನ ಹೂಲಿಹಳ್ಳಿ ಗ್ರಾಮದ ಬಳಿ ನಡೆದಿದೆ.

 

ಶಿವಾನಂದ ಬಡಗಿ ಎಂಬ ಲಾರಿ ಚಾಲಕನ ಎದೆಯಲ್ಲಿ ಕಬ್ಬಿಣದ ಪೈಪ್ ಸಿಕ್ಕಿಹಾಕಿಕೊಂಡು ಪರದಾಟ ನಡೆಸಿದ್ದಾನೆ.

ಹುಬ್ಬಳ್ಳಿಯಿಂದ ದಾವಣಗೆರೆ ಕಡೆಗೆ ಹೊರಟಿದ್ದ ವೇಳೆ ಹೂಲಿಹಳ್ಳಿ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ ಹೊಡೆದಿದೆ. ಚಾಲಕ ಸರ್ವೀಸ್ ರಸ್ತೆಗೆ ಲಾರಿ ಸಮೇತ ಬಿದ್ದಾಗ ಸರ್ವೀಸ್ ರಸ್ತೆಯ ಜಾಲರಿಗೆ ಹಾಕಿದ್ದ ಕಬ್ಬಿಣದ ಪೈಪ್ ಚಾಲಕನ ಎದೆಗೆ ಹೊಕ್ಕಿದೆ. ವಿಷಯ ತಿಳಿದು ಹೈವೇ ಅಂಬ್ಯುಲೆನ್ಸ್ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಪೈಪ್ ಹೊರತೆಗೆಯುವ ಕಾರ್ಯಾಚರಣೆ ನಡೆಸಿದ್ದಾರೆ. ಚಾಲಕ ಎದೆಗೆ ಹೊಕ್ಕ ಕಬ್ಬಿಣದ ಪೈಪ್ ನಿಂದ ರಕ್ತ ಸುರಿಯುತ್ತಿದ್ದರೂ ದಿಕ್ಕು ತೋಚದಂತೆ ಕುಳಿತಿದ್ದಾನೆ. ನಂತರ ಅಗ್ನಿಶಾಮಕ ದಳದ ಸಿಬ್ಬಂದಿ ಚಾಲಕನ ಎದೆಗೆ ಹೊಕ್ಕಿದ್ದ ಸರ್ವೀಸ್ ರಸ್ತೆಯ ಕಬ್ಬಿಣದ ಸ್ವಲ್ಪ ಪ್ರಮಾಣದ ಪೈಪ್‌ನ್ನು ಕತ್ತರಿಸಿ, ಎದೆಯಲ್ಲಿ ಸಿಕ್ಕಿಕೊಂಡ ಪೈಪ್‌ನೊಂದಿಗೆ ಚಿಕಿತ್ಸೆಗೆ ರವಾನಿಸಿದ್ದಾರೆ. ಹೈವೇ ಅಂಬ್ಯುಲೆನ್ಸ್ ವಾಹನದ ಮೂಲಕ ಲಾರಿ ಚಾಲಕನನ್ನು ದಾವಣಗೆರೆ ಆಸ್ಪತ್ರೆಗೆ ಚಿಕಿತ್ಸೆಗಾಗಿ ರವಾನಿಸಲಾಗಿದೆ. ಎದೆಯಲ್ಲಿ ಕಬ್ಬಿಣದ ಪೈಪ್ ಹೊಕ್ಕು ರಕ್ತ ಸುರಿಯುತ್ತಿದ್ದರೂ ಧೈರ್ಯದಿಂದ ಕುಳಿತಿರುವ ಲಾರಿ ಚಾಲಕನ ಧೈರ್ಯವನ್ನು ಕಂಡು ಸ್ಥಳೀಯರು ಚಾಲಕ‌ನ ಧೈರ್ಯವನ್ನು ಮೆಚ್ಚಿಕೊಂಡಿದ್ದಾರೆ. ರಾಣೇಬೆನ್ನೂರು ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!