ರಾಣೆಬೇನ್ನೂರು: ಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಹಂಚಲು ತಂದಿದ್ದ ಸುಮಾರು ಆರು ಲಕ್ಷ ಮೌಲ್ಯದ ಎಲೆಕ್ಟ್ರಾನಿಕ್ ವಸ್ತುಗಳನ್ನು ವಾಣಿಜ್ಯ ತೆರಿಗೆ ಇಲಾಖೆ ತಂಡ ದಾಳಿ ಮಾಡಿ ವಶಪಡಿಸಿಕೊಳ್ಳಲಾಗಿದೆ.
ನಗರದ ಎಂ. ಜಿ ರಸ್ತೆಯಲ್ಲಿ ಸುರೇಶಕುಮಾರ್ ದೇವಸಾಯಿಗರ ಸೇರಿದ ಅನಧಿಕೃತ ಗೋದಾಮಿನ ಮೇಲೆ ವಾಣಿಜ್ಯ ತೆರಿಗೆ ಇಲಾಖೆಯ ಶಿವಕುಮಾರ್ ನೇತೃತ್ವದ ತಂಡ ಹಾಗೂ ಎಂ. ಜಿ ನಾಯಕ್ ನೇತೃತ್ವದ ಸಂಚಾರ ಕಣ್ಗಾವಲು ತಂಡ ದಾಳಿ ನಡೆಸಿ ದಾಸ್ತಾನು ಮಾಡಿದ್ದ 5.5 ಲಕ್ಷ ಮೌಲ್ಯದ 528 ಕುಕ್ಕರಗಳು,316ಫ್ಯಾನ್ ಗಳು,126 ಮಿಕ್ಸಿ ಹಾಗೂ 8 ಗ್ಯಾಸ್ ಸ್ಟವ್ ಗಳನ್ನು ವಶಕ್ಕೆ ಪಡೆದು ಜಪ್ತಿ ಮಾಡಿದ್ದಾರೆ.
ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
More Stories
ಸ್ವಚ್ಛ ಕೈಯಿಂದ ಕೆಲಸ ಮಾಡಿ ಇಲ್ಲ ರಾಜೀನಾಮೆ ಕೊಟ್ಟು ಹೊರಗೆ ಹೋಗಿ; ಲೋಕಾಯುಕ್ತ ಅಧಿಕಾರಿಗಳು.
ಗುಡಗೂರು ಗ್ರಾಮದಲ್ಲಿ ವೃದ್ಧನ ಮೇಲೆ ಹರಿದ ಖಾಸಗಿ ಶಾಲೆಯ ಬಸ್.
ಇಸ್ವತ್ತು ಉತಾರ ನೀಡಲು ಲಂಚ ಪಡೆಯುತ್ತಿದ್ದ ಪಿಡಿಓ, ಉಪಾಧ್ಯಕ್ಷ ಸೇರಿ ಮೂರ ಜನ ಗ್ರಾಪಂ ಸದಸ್ಯರ ಬಂಧನ.