ರಾಣೇಬೆನ್ನೂರು : ಗೋವಾದ ಬಿಚ್ಚುಲಿಯ ಹಿರಬಾಯಿ ಸಭಾಂಗಣದಲ್ಲಿ ಅ.27ರಂದು ನಡೆಯಲಿರುವ 15ನೇ ಕನ್ನಡಿಗರ ಸಾಂಸ್ಕೃತಿಕ ಸಮ್ಮೇಳನದ ಅಂಗವಾಗಿ ಸಾಮಾಜಿಕ ಮತ್ತು ಧಾರ್ಮಿಕ ಸೇವೆಗೆ ನೀಡುವ ಕರುನಾಡ ಪದ್ಮಶ್ರೀ ಪ್ರಶಸ್ತಿಗೆ ತಾಲೂಕಿನ ಸಣ್ಣಸಂಗಾಪುರದ ಮಂಜಯ್ಯ ಚಾವಡಿ ಆಯ್ಕೆಯಾಗಿದ್ದಾರೆ.
ಗೋವಾದ ಬಿಚ್ಚುಲಿ ಕರ್ಮಭೂಮಿ ಕನ್ನಡ ಸಂಘ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಬೆಂಗಳೂರು ಕರ್ನಾಟಕ ಜಾಗೃತಿ ವೇದಿಕೆ ಸಂಯುಕ್ತ ಆಶ್ರಯದಲ್ಲಿ ನಡೆಯಲಿರುವ 15ನೇ ಕನ್ನಡಿಗರ ಸಾಂಸ್ಕೃತಿಕ ಸಮ್ಮೇಳನ ಕಾರ್ಯಕ್ರಮದಲ್ಲಿ ಗೋವಾದ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಪ್ರಶಸ್ತಿಯನ್ನು ಪ್ರಧಾನ ಮಾಡುವರು ಎಂದು ಕರ್ನಾಟಕ ಜಾಗೃತಿ ವೇದಿಕೆ ರಾಜ್ಯ ಸಂಚಾಲಕ ಮಹೇಶ್ ಬಾಬು ಸುರವೇ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
More Stories
ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.
ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.
ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.