16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…

ಹಾವೇರಿ ಜಿಲ್ಲಾಸತ್ರ ಕೋರ್ಟ್‌ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.

ಸಿಎಂ ಕುರ್ಚಿ ಗುದ್ದಾಟದ ವಿಚಾರ…! ಮತ್ತೆ ಗರಂ ಆದ ಸಿಎಂ ಸಿದ್ಧರಾಮಯ್ಯ.

ಸಾಯಿ ಆಸ್ಪತ್ರೆ ವೈದ್ಯನ ಮೇಲೆ ಹಲ್ಲೆ: 8 ಜನರ ವಿರುದ್ಧ ಪ್ರಕರಣ ದಾಖಲು.

ಹಾವೇರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ನಿಂಗರಾಜ ಕೋಡಿಹಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ಸಿದ್ದು ಚಿಕ್ಕಬಿದರಿ ನೇಮಕ.

ನ್ಯಾಯಬೆಲೆ ಅಂಗಡಿ ಪ್ರಾಧಿಕಾರವನ್ನು ವರ್ಗಾವಣೆ ಮಾಡಿಕೊಡಲು ಲಂಚ ಸ್ವೀಕಾರ, ರಾಣೆಬೆನ್ನೂರ ತಹಶೀಲ್ದಾರ ಕಛೇರಿಯ ಆಹಾರ ನಿರೀಕ್ಷಕ ಬಂಧನ.

ಉಚಿತ ಚಿಕನ್ ಬಿರಿಯಾನಿ ಬೇಕಾ,‌ ಆಗಾದ್ರೆ ಬಸ್ ನಿಲ್ದಾಣಕ್ಕೆ ಬನ್ನಿ.

ಅಂಬೇಡ್ಕರ್, ಗಾಂಧಿ ಹೆಸರು ಅಳಿಸಲು ಹೊರಟಿರುವ ವಿರುದ್ಧ ನನ್ನ ಹೋರಾಟ; ಸಚಿವ ಸತೀಶ ಜಾರಕಿಹೊಳಿ

ನಗರಸಭೆ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಜಿಲ್ಲಾಧಿಕಾರಿ.

ತವರ ಮನೆಗೆ ಹೆಂಡತಿ ಹೋದಾಗ ಎರಡನೇ ಮದುವೆಯಾದ ಭೂಪ ಜೈಲು ಪಾಲು…!

ದಾರಿ ತಪ್ಪಿ ಬಂದಿದಲ್ಲ, ದಾರಿ ಹುಡಕಿಕೊಂಡು ಬಂದೇನಿ; ಗಜರಾಜನ ಕೂಗಾಟ

ತಾಯಿ ಮೇಲೆ ಹಲ್ಲೆ ಮಾಡಿದ್ರೆ ಹುಷಾರ…! ಪುತ್ರ, ಸೊಸೆಗೆ ಜೈಲು ಪಾಲು

ನಿರ್ಮಾಣ ಹಂತದ ಟ್ಯಾಂಕನಿದ್ದು ಬಿದ್ದು ಕಾರ್ಮಿಕ ಸಾವು.

ಒಂಟಿ ಮನೆಯಲ್ಲಿದ್ದ ಮಹಿಳೆಯ ಕತ್ತು ಕೊಯ್ದು ಕೊಲೆ‌ಮಾಡಿದ ವ್ಯಕ್ತಿ ಬಂಧನ

ರಾಣೆಬೇನ್ನೂರ ನಗರದಲ್ಲಿ ಮಹಿಳೆಯ ಭೀಕರ ಕೊಲೆ, ಕಾರಣ ನಿಗೂಢ…!

ಹೊಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವ ರೈತ ಸಾವು

ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ಹಬ್ಬ ಹರಿದಿನಗಳು ಬಿಟ್ಟು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಕಾಗಿನಲೆ ಶ್ರೀಗಳು ಕಿವಿಮಾತು..

oplus_0

ರಾಣೆಬೇನ್ನೂರು: ಸಮಾಜದ ಬಂಧುಗಳು ಬೀರಪ್ಪ, ದ್ಯಾಮವ್ವ ಸೇರಿದಂತೆ ಇತರೆ ಜಾತ್ರೆ, ಹಬ್ಬ ಹರಿದಿನಗಳನ್ನು ಬಿಟ್ಟು ಮಕ್ಕಳಿಗೆ ಉತ್ತಮವಾದ ಶಿಕ್ಷಣವನ್ನು ನೀಡಿ ಎಂದು ಕುರುಬ ಸಮುದಾಯದ ಪಾಲಕರಿಗೆ ಕಾಗಿನಲೆ ಗುರುಪೀಠದ ಶ್ರೀ ನಿರಂಜನಾನಂದಪುರಿ ಮಹಾಸ್ವಾಮಿಗಳು ಕಿವಿಮಾತು ಹೇಳಿದರು.

ರಾಣೆಬೇನ್ನೂರು ನಗರದ ಹೊರಗುಡಿ ಬಿರೇಶ್ವರ‌ ದೇವಸ್ಥಾನದ ಆವರಣದಲ್ಲಿ ತಾಲೂಕು ಕುರುಬ ನೌಕರರ ಸಂಘ ಆಯೋಜನೆ ಮಾಡಿದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ರಾಜ್ಯದಲ್ಲಿ ಕುರುಬ ಸಮುದಾಯ ಮಕ್ಕಳು ಉತ್ತಮ ಸ್ಥಾನದಲ್ಲಿ ಉತ್ತಮ ನೌಕರಿಯಲ್ಲಿ ಇರಬೇಕು ಎಂದರೆ ಮೊದಲು ಸಮುದಾಯಕ್ಕೆ ಶಿಕ್ಷಣ ಅವಶ್ಯಕತೆ ಇದೆ. ಅದನ್ನು ನಾವುಗಳು ನಮ್ಮ ಪೀಳಿಗೆಗೆ ದಾರಿ ಮಾಡಿಕೊಡಲು ಸಮಾಜದ ಪ್ರತಿಯೊಬ್ಬ ವ್ಯಕ್ತಿಯೂ ಶಿಕ್ಷಣಕ್ಕೆ ಮಹತ್ವ ನೀಡಬೇಕು. ಜತೆಯಾಗಿ ಎಲ್ಲಾ ಸಮುದಾಯ ಜತೆ ಹೊಂದಿಕೊಂಡು ಹೋಗಬೇಕು ಎಂದು ಸಮಾಜದ ಬಂಧುಗಳಿಗೆ ಮಾಡಿದರು.

ಶಾಸಕ ಪ್ರಕಾ‌ಶ ಕೋಳಿವಾಡ ಮಾತನಾಡಿ, ಸರ್ಕಾರ ಯೋಜನೆಗಳನ್ನು ಕಟ್ಟಕಡೆಯ ವ್ಯಕ್ತಿಗೆ ಮುಟ್ಟಿಸುವ ಕಾರ್ಯ ಮಾಡುವುದು ಸರ್ಕಾರಿ ನೌಕರರು, ವಿದ್ಯಾರ್ಥಿಗಳಿಗೆ ಪೋತ್ಸಾಹ ಧನ ನೀಡಿ ಅವರನ್ನು ಪೋತ್ಸಾಹ ನಿಡುತ್ತಿರುವುದು ಶಾಘ್ಲನೀಯ, ಶಿಕ್ಷಣದಿಂದ ಮಾತ್ರ ಸಮಾಜ ಅಭಿವೃದ್ಧಿ ಯಾಗಲು ಸಾಧ್ಯವಾಗುತ್ತದೆ. ಸ್ವಾವಲಂಬಿ ಆಗಬೇಕಾದರೆ ಕಂಪ್ಯೂಟರ್ ಜ್ಞಾನದ ಜತೆಯಾಗಿ ಇತರೆ  ಕೌಶಲ್ಯ ಕಲೆಗಳನ್ನು ಬೆಳೆಸಿಕೊಳ್ಳಬೇಕು, ಆಗ ಮಾತ್ರ ಸಮಾಜದಲ್ಲಿ ಅಭಿವೃದ್ಧಿ ಗಳಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಡಾ.ಗಂಗಾಧರ ಕೊಡ್ಲಿಯವರು ಮಕ್ಕಳಿಗೆ ಇಂದಿನ ಸ್ಪರ್ಧಾತ್ಮಕ ವಿಷಯದ ಕುರಿತು ಉಪನ್ಯಾಸ ನೀಡಿದರು. ಎಸ್ಸೆಸ್ಸೆಲ್ಸಿ, ಪಿಯುಸಿ ಹಾಗೂ ಇತರೆ ಪದವಿಗಳಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು.

ತಾಲೂಕು ಕುರುಬ ನೌಕರರ ಸಂಘದ ಅಧ್ಯಕ್ಷ ಸುಭಾಸಚಂದ್ರ ಕುರುಬರ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದರು

ಕಾರ್ಯಕ್ರಮದಲ್ಲಿ ದಾವಣಗೆರೆ ವಿನಯಕುಮಾರ ಜೆ.ಬಿ. ಡಾ‌.ಪ್ರವೀಣಕುಮಾರ ಖನ್ನೂರ, ಅಬಕಾರಿ ನಿರೀಕ್ಷಕ ಹನುಮಂತ ಪಠಾತ್, ತಾಲೂಕ ಕುರುಬರ ಸಂಘದ ಅಧ್ಯಕ್ಷ ಷಣ್ಮುಖ ಕಂಬಳಿ, ನಿವೃತ್ತ ದೈಹಿಕ ಶಿಕ್ಷಣಾಧಿಕಾರಿ ಹನುಮಂತಪ್ಪ ಬಿ.ಎಸ್. ಕೃಷಿ ವಿಜ್ಞಾನಿ ರಾಜು ನೆಳ್ಳೂರು, ಚೋಳಪ್ಪ ಕಸವಾಳ, ಹೆಸ್ಕಾಂ ಎಇಇ ಲಕ್ಷಣಪ್ಪ ಕೆ., ನಿವೃತ್ತ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಆರ್.ಜಿ.ಮೇಟಿ, ಕೆಪಿಸಿಸಿ ಜಿಲ್ಲಾಧ್ಯಕ್ಷ ಸಂಜೀವ, ಉಪ ತಹಶಿಲ್ದಾರರ ಕುವಲಶ್ಯಾಮ ಗೊರವರ ಹಾಜರಿದ್ದರು.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!