ತಾಪಂ ಕೆಡಿಪಿ ಸಭೆಯಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗೆ ತರಾಟೆ..!

ಹೆದ್ದಾರಿಯಲ್ಲಿ ದರೋಡೆ ಮಾಡಲು ಹೊಂಚು ಹಾಕಿದ್ದವರು ಕಂಬಿ ಹಿಂದೆ

ನಗರಸಭೆ ನೀರಿನ ತೆರಿಗೆಯನ್ನು ನಿಮ್ಮ ಮೊಬೈಲನಲ್ಲಿ ಪಾವತಿಸಿ.

ಕೋಡಿಯಾಲ ಹೊಸಪೇಟೆ ಗ್ರಾಮದಲ್ಲಿ ವಾಲ್ಮೀಕಿ ಪುತ್ಥಳಿ ಅನಾವರಣ ಮತ್ತು‌ ವೃತ್ತ ಲೋಕಾರ್ಪಣೆ ನಾಡಿದ್ದು

ರಾಣೆಬೇನ್ನೂರ ತಾಲೂಕ ಹಸಿರಿಕರಣಕ್ಕೆ “ಟ್ರೀ ಪಾರ್ಕ್” ಶಾಸಕ ಪ್ರಕಾಶ ಕೋಳಿವಾಡ

ನಗರಸಭೆ ನೂತನ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ರಮೇಶ ಕರಡೆಣ್ಣನವರ ಆಯ್ಕೆ.

ಅಗಡಿ ತೋಟಕ್ಕೆ ಹೊರಟ್ಟವರು ಕೈಲಾಸಕ್ಕೆ ಹೋದರು, ಮೃತಪಟ್ಟವರ ವಿವರ ಇಲ್ಲಿದೆ.

ಮೋಟೆಬೆನ್ನೂರು ಬಳಿ ಭೀಕರ ಅಪಘಾತ, ರಾಣೆಬೇನ್ನೂರು ನಗರದ ಆರು ಜನ ಸಾವು.

ಪರಮ ಭ್ರಷ್ಟ ಲಂಚಾವತಾರಿ ಸಂವಿಧಾನ ವಿರೋಧಿ ವೈದ್ಯ ಡಾ” ಪರಮೇಶ್ವರಪ್ಪ ಅಮಾನತಗೆ ಆಗ್ರಹ

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಹಾವೇರಿಯಲ್ಲಿ ಕಾಂಗ್ರೆಸ್ ಗೆದ್ದೇ ಗೆಲ್ಲತ್ತೆ: ಸಿ.ಎಂ ಭರವಸೆ

ರಾಹುತನಕಟ್ಟಿ ಗ್ರಾಪಂ ಮತ್ತೆ ಬಿಜೆಪಿ ಬೆಂಬಲಿತರ ತೆಕ್ಕೆಗೆ.

ಸ್ಮಶಾನ ಜಾಗಕ್ಕಾಗಿ ತಾಲೂಕಿನ ಕೃಷ್ಣಾಪುರ ಗ್ರಾಮಸ್ಥರಿಂದ ಸಿಎಂಗೆ ಕಪ್ಪು ಪಟ್ಟಿ‌ ಪ್ರದರ್ಶನಕ್ಕೆ ಸಜ್ಜು.

ತಂದೆ ಶವ ಮನೆಯಲ್ಲಿಟ್ಟು ಕಣ್ಣೀರಿಡುತ್ತ ಪರೀಕ್ಷೆ ಬರೆದ ಅಣ್ಣ-ತಂಗಿಗೆ ಉತ್ತಮ ಅಂಕ; ತಂಗಿಗೆ ಶೇ. 83 ಅಣ್ಣನಿಗೆ ಶೇ. 85ರಷ್ಟು ಅಂಕ

ಶಿವಾನಂದ ಪಾಟೀಲ ರಾಜೀನಾಮೆ ಪತ್ರದಲ್ಲಿ ಏನು ಹೇಳಿದ್ದಾರೆ.

ಮೆಡ್ಲೇರಿ ರಸ್ತೆಯಿಂದ ಹುಣಸಿಕಟ್ಟಿ ತನಕ ಇಂದು ರಾತ್ರಿ ವಿದ್ಯುತ್ ಸರಬರಾಜು ಡೌಟು..

ಕಿತ್ತಾಟ, ಕಿರಚಾಟ ನಡುವೆ ನಗರಸಭೆ ಸ್ಥಾಯಿ ಸಮಿತಿಗೆ ಅನುಮೋದನೆ.

ಇಸ್ವತ್ತು ಉತಾರ ನೀಡಲು ಲಂಚ ಪಡೆಯುತ್ತಿದ್ದ ಪಿಡಿಓ, ಉಪಾಧ್ಯಕ್ಷ ಸೇರಿ ಮೂರ ಜನ ಗ್ರಾಪಂ ಸದಸ್ಯರ ಬಂಧನ.

ರಷ್ಯಾದಲ್ಲಿ ಡಾ.ನಾಗರಾಜ ಎಸ್.ಕೆ ಅವರಿಗೆ ಗ್ಲೋಬಲ್ ಅಚಿವರ್ಸ್ ಪ್ರಶಸ್ತಿ.

ಐಎಎಸ್‌ ಪಾಸ್ ಮಾಡಿದ ಸಚಿನ ಗುತ್ತೂರುಗೆ ಕೋಡಿಯಾಲ ಹೊಸಪೇಟೆ ಗ್ರಾಮದಲ್ಲಿ ಅದ್ದೂರಿ ಸ್ವಾಗತ..

ಟ್ರ್ಯಾ ಕ್ಟರ್‌ನಿಂದ ಬಿದ್ದು ಅಣ್ಣಾ-ತಮ್ಮಾ ಸಾವು, ನಾಲ್ವರಿಗೆ ಗಂಭೀರ ಗಾಯ

ಹಬ್ಬ ಹರಿದಿನಗಳು ಬಿಟ್ಟು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಕಾಗಿನಲೆ ಶ್ರೀಗಳು ಕಿವಿಮಾತು..

oplus_0

ರಾಣೆಬೇನ್ನೂರು: ಸಮಾಜದ ಬಂಧುಗಳು ಬೀರಪ್ಪ, ದ್ಯಾಮವ್ವ ಸೇರಿದಂತೆ ಇತರೆ ಜಾತ್ರೆ, ಹಬ್ಬ ಹರಿದಿನಗಳನ್ನು ಬಿಟ್ಟು ಮಕ್ಕಳಿಗೆ ಉತ್ತಮವಾದ ಶಿಕ್ಷಣವನ್ನು ನೀಡಿ ಎಂದು ಕುರುಬ ಸಮುದಾಯದ ಪಾಲಕರಿಗೆ ಕಾಗಿನಲೆ ಗುರುಪೀಠದ ಶ್ರೀ ನಿರಂಜನಾನಂದಪುರಿ ಮಹಾಸ್ವಾಮಿಗಳು ಕಿವಿಮಾತು ಹೇಳಿದರು.

ರಾಣೆಬೇನ್ನೂರು ನಗರದ ಹೊರಗುಡಿ ಬಿರೇಶ್ವರ‌ ದೇವಸ್ಥಾನದ ಆವರಣದಲ್ಲಿ ತಾಲೂಕು ಕುರುಬ ನೌಕರರ ಸಂಘ ಆಯೋಜನೆ ಮಾಡಿದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ರಾಜ್ಯದಲ್ಲಿ ಕುರುಬ ಸಮುದಾಯ ಮಕ್ಕಳು ಉತ್ತಮ ಸ್ಥಾನದಲ್ಲಿ ಉತ್ತಮ ನೌಕರಿಯಲ್ಲಿ ಇರಬೇಕು ಎಂದರೆ ಮೊದಲು ಸಮುದಾಯಕ್ಕೆ ಶಿಕ್ಷಣ ಅವಶ್ಯಕತೆ ಇದೆ. ಅದನ್ನು ನಾವುಗಳು ನಮ್ಮ ಪೀಳಿಗೆಗೆ ದಾರಿ ಮಾಡಿಕೊಡಲು ಸಮಾಜದ ಪ್ರತಿಯೊಬ್ಬ ವ್ಯಕ್ತಿಯೂ ಶಿಕ್ಷಣಕ್ಕೆ ಮಹತ್ವ ನೀಡಬೇಕು. ಜತೆಯಾಗಿ ಎಲ್ಲಾ ಸಮುದಾಯ ಜತೆ ಹೊಂದಿಕೊಂಡು ಹೋಗಬೇಕು ಎಂದು ಸಮಾಜದ ಬಂಧುಗಳಿಗೆ ಮಾಡಿದರು.

ಶಾಸಕ ಪ್ರಕಾ‌ಶ ಕೋಳಿವಾಡ ಮಾತನಾಡಿ, ಸರ್ಕಾರ ಯೋಜನೆಗಳನ್ನು ಕಟ್ಟಕಡೆಯ ವ್ಯಕ್ತಿಗೆ ಮುಟ್ಟಿಸುವ ಕಾರ್ಯ ಮಾಡುವುದು ಸರ್ಕಾರಿ ನೌಕರರು, ವಿದ್ಯಾರ್ಥಿಗಳಿಗೆ ಪೋತ್ಸಾಹ ಧನ ನೀಡಿ ಅವರನ್ನು ಪೋತ್ಸಾಹ ನಿಡುತ್ತಿರುವುದು ಶಾಘ್ಲನೀಯ, ಶಿಕ್ಷಣದಿಂದ ಮಾತ್ರ ಸಮಾಜ ಅಭಿವೃದ್ಧಿ ಯಾಗಲು ಸಾಧ್ಯವಾಗುತ್ತದೆ. ಸ್ವಾವಲಂಬಿ ಆಗಬೇಕಾದರೆ ಕಂಪ್ಯೂಟರ್ ಜ್ಞಾನದ ಜತೆಯಾಗಿ ಇತರೆ  ಕೌಶಲ್ಯ ಕಲೆಗಳನ್ನು ಬೆಳೆಸಿಕೊಳ್ಳಬೇಕು, ಆಗ ಮಾತ್ರ ಸಮಾಜದಲ್ಲಿ ಅಭಿವೃದ್ಧಿ ಗಳಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಡಾ.ಗಂಗಾಧರ ಕೊಡ್ಲಿಯವರು ಮಕ್ಕಳಿಗೆ ಇಂದಿನ ಸ್ಪರ್ಧಾತ್ಮಕ ವಿಷಯದ ಕುರಿತು ಉಪನ್ಯಾಸ ನೀಡಿದರು. ಎಸ್ಸೆಸ್ಸೆಲ್ಸಿ, ಪಿಯುಸಿ ಹಾಗೂ ಇತರೆ ಪದವಿಗಳಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು.

ತಾಲೂಕು ಕುರುಬ ನೌಕರರ ಸಂಘದ ಅಧ್ಯಕ್ಷ ಸುಭಾಸಚಂದ್ರ ಕುರುಬರ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದರು

ಕಾರ್ಯಕ್ರಮದಲ್ಲಿ ದಾವಣಗೆರೆ ವಿನಯಕುಮಾರ ಜೆ.ಬಿ. ಡಾ‌.ಪ್ರವೀಣಕುಮಾರ ಖನ್ನೂರ, ಅಬಕಾರಿ ನಿರೀಕ್ಷಕ ಹನುಮಂತ ಪಠಾತ್, ತಾಲೂಕ ಕುರುಬರ ಸಂಘದ ಅಧ್ಯಕ್ಷ ಷಣ್ಮುಖ ಕಂಬಳಿ, ನಿವೃತ್ತ ದೈಹಿಕ ಶಿಕ್ಷಣಾಧಿಕಾರಿ ಹನುಮಂತಪ್ಪ ಬಿ.ಎಸ್. ಕೃಷಿ ವಿಜ್ಞಾನಿ ರಾಜು ನೆಳ್ಳೂರು, ಚೋಳಪ್ಪ ಕಸವಾಳ, ಹೆಸ್ಕಾಂ ಎಇಇ ಲಕ್ಷಣಪ್ಪ ಕೆ., ನಿವೃತ್ತ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಆರ್.ಜಿ.ಮೇಟಿ, ಕೆಪಿಸಿಸಿ ಜಿಲ್ಲಾಧ್ಯಕ್ಷ ಸಂಜೀವ, ಉಪ ತಹಶಿಲ್ದಾರರ ಕುವಲಶ್ಯಾಮ ಗೊರವರ ಹಾಜರಿದ್ದರು.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!