*ರಾಣೆಬೇನ್ನೂರು ಸುದ್ದಿ.ಕಾಂ
ಮುಂದಿನ ಫೆಬ್ರವರಿ ವೇಳೆಗೆ ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ತಯಾರಿಗಳಾಗುತ್ತಿವೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.
ಕೆಪಿಸಿಸಿ ಕಚೇರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗಿದೆ. ಮತದಾರರ ಪಟ್ಟಿ ಕೂಡ ಸಿದ್ಧಗೊಳ್ಳುತ್ತಿದೆ. ಚುನಾವಣೆಯನ್ನಂತು ನಿಲ್ಲಿಸಲು ಸಾಧ್ಯವಿಲ್ಲ. ಫೆಬ್ರವರಿಯಲ್ಲಿ ಮತದಾನದ ಸಾಧ್ಯತೆ ಇದೆ ಎಂದರು.
ಸಚಿವ ಸಂಪುಟ ಪುನರ್ ರಚನೆ ಚರ್ಚೆಯೇ ಇಲ್ಲ. ಅದರ ಅವಶ್ಯಕತೆಯೂ ಇಲ್ಲ. ಸಂಪುಟದಲ್ಲಿ ಒಂದು ಸ್ಥಾನ ಮಾತ್ರ ಖಾಲಿ ಇದೆ. ಬೆಳಗಾವಿಯ ಅಧಿವೇಶನದ ಬಳಿಕ ಅದನ್ನು ಭರ್ತಿ ಮಾಡುವ ಬಗ್ಗೆ ಪರಿಶೀಲಿಸಲಾಗುತ್ತಿದೆ.ಸಂಪುಟ ಪುನರ್ ರಚನೆಯಂತೂ ಸದ್ಯಕ್ಕಿಲ್ಲ ಎಂದು ಹೇಳಿದರು..
More Stories
ತುಂಗಭದ್ರಾ ನದಿಯಲ್ಲಿ 15 ಕಿ.ಮೀ. ಈಜಿ ಪ್ರಾಣ ಉಳಿಸಿಕೊಂಡ ಮೈಸೂರಿನ ವೃದ್ಧ…!
ಮೂರು ಬೈಕಗಳ ನಡುವೆ ಭೀಕರ ಅಪಘಾತ ಒರ್ವ ಯುವಕ ಸಾವು, ಮೂವರು ಗಂಭೀರ.
ಆಟೋ ಚಾಲಕರಿಗೆ ಸನ್ಮಾನ ಸಮಾರಂಭ ಮಾಡಲಿರುವ “ಪರಮೇಶಣ್ಣ ಗೂಳಣ್ಣನವರ”