ರಾಣೆಬೇನ್ನೂರು: ನಮ್ಮದು ಮನೆಯೊಂದು ಮೂರು ಬಾಗಿಲಾಗಿದೆ, ಆದರೆ ಕಾಂಗ್ರೇಸ್ ಪಕ್ಷದ್ದು ಊರೆಲ್ಲಾ ಬಾಗಿಲಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಲೇವಡಿ ಮಾಡಿದರು.
ತಾಲೂಕಿನ ಚಳಗೇರಿ ಗ್ರಾಮದಲ್ಲಿ ವಕ್ಪ್ ಮೂಲಕ ಸರ್ಕಾರ ರೈತರ ಭೂಮಿಗೆ ನೋಟಿಸ್ ನೀಡಿದ ಹಿನ್ನೆಲೆ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದರು.
ಈಗಾಗಲೇ ಗೃಹ ಸಚಿವ ಡಾ. ಜಿ. ಪರಮೇಶ್ವರ, ಸಚಿವ ಕೆ.ಎಸ್.ಮುನಿಯಪ್ಪ ಅಧಿಕಾರ ಹಸ್ತಾಂತರವಾಗಬೇಕೆಂದು ಒತ್ತಾಯಗಳು ಆರಂಭವಾಗಿವೆ. ಮತ್ತು ಮುಖ್ಯಮಂತ್ರಿ ಸಿದ್ಧರಾಮಯ್ಯನವರು ನನ್ನ ರಾಜಕಾರಣ ಕೊನೆ ಎಂದು ಹೇಳಿದ್ದಾರೆ ಇದರಿಂದ ಅವರುದು ಬಾಗಿಲು ತೆರದಿವೆ ಎಂದರು.
ಇನ್ನೂ ಚಳಿಗಾಲದ ಅಧಿವೇಶನದಲ್ಲಿ ನಮ್ಮ ಪಕ್ಷ ಸರ್ಕಾರದ ವಿರುದ್ಧ ಹೋರಾಟ ಮಾಡಲಿದ್ದು, ಇದಕ್ಕೆ ಸರ್ವ ಬಿಜೆಪಿ ನಾಯಕರು ಸಾಥ್ ನೀಡಲಿದ್ದಾರೆ ಎಂದು ತಿಳಿಸಿದರು.

More Stories
16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…
ಹಾವೇರಿ ಜಿಲ್ಲಾಸತ್ರ ಕೋರ್ಟ್ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.
ಸಿಎಂ ಕುರ್ಚಿ ಗುದ್ದಾಟದ ವಿಚಾರ…! ಮತ್ತೆ ಗರಂ ಆದ ಸಿಎಂ ಸಿದ್ಧರಾಮಯ್ಯ.