ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ಬಿಜೆಪಿ, ಜೆಡಿಎಸ್ ಹಾಗೂ ರೈತ ನಾಯಕ ರವಿಂದ್ರಗೌಡ ಪಾಟೀಲ ನೇತೃತ್ವದಲ್ಲಿ ಬೃಹತ್ ರೈತರ ಹೋರಾಟ.

ನಗರದಲ್ಲಿ NDA ವತಿಯಿಂದ ಕಾಂಗ್ರೆಸ್ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ.

ಬೆಂಬಲ ಬೆಲೆ ನೀಡಲು ಆಗ್ರಹಿಸಿ ಸರ್ಕಾರದ ವಿರುದ್ಧ ನಾಳೆ ಬಿಜೆಪಿ-ಜೆಡಿಎಸ್ ಜಂಟಿ ಪ್ರತಿಭಟನೆ

ಹೆಂಡತಿ ಹೊಡೆದು ಕೊಲೆ ಮಾಡಿದ ಪತಿರಾಯ..

ನಾವು ಯಾರನ್ನು ಟಾರ್ಗೆಟ್ ಮಾಡಲ್ಲ, ಮಾಡಿದ್ರೆ ಬೀಡಲ್ಲ ಎಸ್ಪಿ ಯಶೋಧ ವಂಟಗೋಡಿ.

ದೈಹಿಕ ಸಂಪರ್ಕ ಮಾಡಿ ಯುವತಿಗೆ ಕೈಕೊಟ್ಟ ಯುವಕ. ಯುವತಿ ಆತ್ಮಹತ್ಯೆ ಹುಡಗನ‌ ಮನೆ ಮುಂದೆ ಶವವಿಟ್ಟು ಪ್ರತಿಭಟನೆ..

ತಮ್ಮನ ಸಾವಿನಿಂದ ಮನನೊಂದ ಅಕ್ಕನು ನೇಣಿಗೆ ಶರಣು…!

ಸಚಿವ ಶಿವಾನಂದ ಪಾಟೀರನ್ನ BJP ಎಂದ ರೊಬೋಟ್

ರಾಣೆಬೇನ್ನೂರ ನಗರದಲ್ಲಿ ಭವ್ಯವಾಗಿ ನಡೆದ ಆರ್ ಎಸ್ ಎಸ್ ಪಥ ಸಂಚಲನ, ಒಂದು ಸಾವಿರ ಗಣವೇಷಧಾರಿಗಳು ಭಾಗಿ

ಎರಡು ವರ್ಷದಲ್ಲಿ ಎಷ್ಟು ಬಾರಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಗೆ ಹಾಜರಾಗದ ದಲಿತ ವಿರೋಧಿ ಶಾಸಕ; ಮಾಜಿ ಶಾಸಕ ಅರುಣಕುಮಾರ ಪೂಜಾರ.

ಕುದರಿಹಾಳ ಗ್ರಾಮದಲ್ಲಿ ಸಿಡಿಲು ಬಡಿದು ಯುವ ಕೃಷಿಕ ಸಾವು

ಕೈ-ಕಮಲ ನಡುವೆ ರಾಜಕೀಯ ಪ್ರತಿಷ್ಠೆ; ನಗರಸಭೆ ಸಾಮಾನ್ಯ ಸಭೆ ಮುಂದೂಡಿಕೆ.

ಹಾನಗಲ್ ತಹಸೀಲ್ದಾರ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ.

ಬಿಗರ ಊಟ ಮಾಡಿ ಬರುತ್ತಿದ್ದವರು ಮಸಣಕ್ಕೆ *ನಿಂತಿದ್ದ ಟ್ರ್ಯಾಕ್ಟರ್ ಟ್ರೈಲರ್ ಗೆ ಟಾಟಾ ಸುಪ್ರೋ ಡಿಕ್ಕಿ* *ಸ್ಥಳದಲ್ಲಿಯೆ ಮೂವರ ದುರ್ಮರಣ, 20ಕ್ಕೂ ಅಧಿಕರಿಗೆ ಗಂಭೀರ ಗಾಯ*

ತಾಪಂ ಪ್ರಭಾರ ಇಓ ಬಸವರಾಜ ಶಿಡೇನೂರ ಬಳಿ ಒಂದೂವರೆ ಕೋಟಿ ಆಸ್ತಿ..

ಕಂದಾಯ ನಿರೀಕ್ಷ ಅಶೋಕ‌ ಅರಳೇಶ್ವರ ಬಳಿ ಕೋಟ್ಯಾಂತರ ಆಸ್ತಿ ಪತ್ತೆ.

ಯಾರ ಪಾಲಿಗೆ ವಾಣಿಜ್ಯ ನಗರಿ ಗದ್ದುಗೆ…? ಶಂಕರ ಸದಸ್ಯರ ನಿರ್ಣಾಯಕ, ಅರುಣಕುಮಾರಗೆ ಪ್ರತಿಷ್ಠೆ, ಪ್ರಕಾಶ ಕೋಳಿವಾಡಗೆ ಅನಿವಾರ್ಯ

ರಾಣೆಬೆನ್ನೂರ: ಇಲ್ಲಿಯ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಆಕಾಂಕ್ಷಿಗಳಲ್ಲಿ ಅಧ್ಯಕ್ಷ ಸ್ಥಾನ ಗಿಟ್ಟಿಸಿಕೊಳ್ಳಲು ಪೈಪೋಟಿ ಜೋರಾಗಿದೆ.

ನಗರಸಭೆಯು ಒಟ್ಟು 35 ಸದಸ್ಯರ ಬಲಾಬಲ ಹೊಂದಿದ್ದು, ಎರಡನೇ ಅವಧಿಗೆ ಮತ್ತೆ ಅಧ್ಯಕ್ಷ ಸ್ಥಾನ ‘ಹಿಂದುಳಿದ ಅ ವರ್ಗ ಮಹಿಳೆ’ ಹಾಗೂ ಉಪಾಧ್ಯಕ್ಷ ಸ್ಥಾನ ‘ಸಾಮಾನ್ಯ’ ವರ್ಗಕ್ಕೆ ಮೀಸಲಾಗಿದೆ.

 

ಯಾರ‌್ಯಾರಿಗೆ ಅವಕಾಶ…?

ಬಿಜೆಪಿಯಲ್ಲಿ ಹಿಂದುಳಿದ ಅ (ಮಹಿಳಾ) ವರ್ಗಕ್ಕೆ ಸೇರಿದ 1ನೇ ವಾರ್ಡ್‌ನ ಸದಸ್ಯೆ ರೂಪಾ ಚಿನ್ನಿಕಟ್ಟಿ, 17ನೇ ವಾರ್ಡ್‌ನ ಕವಿತಾ ಹೆದ್ದೇರಿ, 22ನೇ ವಾರ್ಡ್‌ನ ತ್ರಿವೇಣಿ ಪವಾರ , 29ನೇ ವಾರ್ಡ್‌ನ ಹೊನ್ನವ್ವ ಕಾಟಿ, 15ನೇ ವಾರ್ಡ್‌ನ ರತ್ನವ್ವ ಪೂಜಾರ ಸೇರಿ 5 ಸದಸ್ಯೆಯರು ಇದ್ದಾರೆ. ಕಾಂಗ್ರೆಸ್‌ನಲ್ಲಿ 3ನೇ ವಾರ್ಡ್‌ನ ಚಂಪಕ ಬಿಸಲಹಳ್ಳಿ, ಜಯಶ್ರೀ ಪಿಸೆ ಸೇರಿ ಇಬ್ಬರು ಹಾಗೂ ಕೆಪಿಜೆಪಿಯಲ್ಲಿ 14ನೇ ವಾರ್ಡ್‌ನ ಸದಸ್ಯೆ ಅರೀಫಾಖಾನಂ ಸೌದಾಗಾರಗೆ ಅವಕಾಶವಿದೆ.

ಕೆಪಿಜೆಪಿ, ಪಕ್ಷೇತರರಿಗೆ ಗಾಳ…

ನಗರಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ 15, ಕಾಂಗ್ರೆಸ್‌ನಿಂದ 9, ಕೆಪಿಜೆಪಿಯಿಂದ 9 ಹಾಗೂ ಇಬ್ಬರು ಪಕ್ಷೇತರ ಸದಸ್ಯರು ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಲು 18 ಸದಸ್ಯರ ಬೆಂಬಲ ಬೇಕು. 15 ಸದಸ್ಯರ ಬಲ ಹೊಂದಿದ ಬಿಜೆಪಿಗೆ ಅಧಿಕಾರದ ಗದ್ದುಗೆ ಏರಲು ಇನ್ನೂ 3 ಸದಸ್ಯರ ಬೆಂಬಲ ಬೇಕು. ಸಂಸದ  ಮತ ಬಂದರೂ ಇನ್ನೂ 2 ಸದಸ್ಯರ ಬೆಂಬಲ ಬೇಕಾಗುತ್ತದೆ. ಹೀಗಾಗಿ ಕೆಪಿಜೆಪಿ ಅಥವಾ ಪಕ್ಷೇತರ ಸದಸ್ಯರಿಗೆ ಗಾಳ ಹಾಕುವುದು ಬಿಜೆಪಿಗೆ ಅನಿವಾರ್ಯವಾಗಿದೆ.

ಇನ್ನೂ ಕಾಂಗ್ರೆಸ್ ಹಾಗೂ ಕೆಪಿಜೆಪಿ ಎರಡೂ ಪಕ್ಷದವರು ತಲಾ 9 ಸದಸ್ಯರನ್ನು ಹೊಂದಿದ್ದಾರೆ. ಎರಡು ಪಕ್ಷದವರೂ ಹೊಂದಾಣಿಕೆ ಮಾಡಿಕೊಂಡರೆ ಪಕ್ಷೇತರ ಸದಸ್ಯರ ಅಗತ್ಯ ಕೂಡ ಇವರಿಗೆ ಬೀಳಲ್ಲ. ಈ ನಿಟ್ಟಿನಲ್ಲಿ ಕಾಂಗ್ರೆಸ್‌ನವರು ಕೆಪಿಜೆಪಿ ಪಕ್ಷದ ಆಯ್ಕೆಯಾದ ಆರು ಜನ ಸದಸ್ಯರಿಗೆ ಗಾಳ ಹಾಕಿದ್ದಾರೆ ಎನ್ನಲಾಗುತ್ತಿದೆ.

 

ಬಿಜೆಪಿಯಿಂದ  ಕವಿತಾ ಹೆದ್ದೇರಿ, ಹೊನ್ನವ್ವ ಕಾಟಿ ಮತ್ತು ಕಾಂಗ್ರೆಸ್‌ನಿಂದ ಚಂಪಕ ಬಿಸಲಹಳ್ಳಿ ಹೆಸರು ಅಧ್ಯಕ್ಷ ಸ್ಥಾನದ ಚುನಾವಣೆಗೆ ಮಂಚೂಣಿಯಲ್ಲಿವೆ. ಕಾಂಗ್ರೆಸ್‌ನ ಚಂಪಕ ಬಿಸಲಹಳ್ಳಿ ಪಕ್ಷದಲ್ಲಿ ಗುರುತಿಸಿಕೊಂಡವರು. ಹೀಗಾಗಿ ಮೂವರಲ್ಲಿ ಭಾರಿ ಪೈಪೋಟಿ ನಡೆದಿದೆ.

ಯಾರ ಪಾಲಿಗೆ ವಾಣಿಜ್ಯ ನಗರಿ ಗದ್ದುಗೆ…?

ನಗರಸಭೆ ಅಧ್ಯಕ್ಷರ ಆಯ್ಕೆಗೆ ಜಿಲ್ಲಾಧ್ಯಕ್ಷ ಅರುಣಕುಮಾರ ಪೂಜಾರಗೆ ಪ್ರತಿಷ್ಠೆಯಾಗಿದ್ದರೆ ಶಾಸಕ ಪ್ರಕಾಶ ಕೋಳಿವಾಡಗೆ ಅನಿವಾರ್ಯವಾಗಿದೆ. ಆರ್. ಶಂಕರ ಬೆಂಬಲಿತ ಕೆಪಿಜೆಪಿಯ ನಾಲ್ಕು ಸದಸ್ಯರು ಬಿಜೆಪಿಗೆ ಬೆಂಬಲ ನೀಡಿದ್ದರೆ, 5 ಸದಸ್ಯರು ಕಾಂಗ್ರೆಸ್‌ಗೆ ಬೆಂಬಲ ನೀಡಬಹುದು.

ಒಟ್ಟಾರೆಯಾಗಿ ಬಿಜೆಪಿ ಒಳಜಗಳ ನಡೆದರೆ ಕಾಂಗ್ರೆಸ್ ಪಕ್ಷದಿಂದ ಚಂಪಕಾ ಬೀಸಲಹಳ್ಳಿ ಅಥವಾ ಜಯಶ್ರೀ ಪೀಸೆ ಆಯ್ಕೆಯಾಗಬಹದು.

*

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!