ಬಹಳಷ್ಟು ಲಾಭ ಕೊಡುವುದಾಗಿ ನಂಬಿಸಿ 75.42 ಲಕ್ಷ ರೂ. ವಂಚನೆ

ಕಾಕೋಳ ಗ್ರಾಮದಲ್ಲಿ ಸೊಸೈಟಿಗೆ ಕನ್ನ ಹಾಕಿದ ಕಳ್ಳರು.

ಅಧಿಕಾರ ಶಾಶ್ವತವಲ್ಲ, ಜನರ ಸೇವೆ ನಿಜಾವಾದ ಶಾಶ್ವತ ಮಾಜಿ ಶಾಸಕ ಅರುಣಕುಮಾರ ಪೂಜಾರ

ಅರುಣಕುಮಾರ ಪೂಜಾರ ಜನ್ಮದಿನದ ನಿಮಿತ್ತ ನಾಳೆ ವಿವಿಧ ಕಾರ್ಯಕ್ರಮ

ನಂದಿಹಳ್ಳಿ ಗ್ರಾಮದಲ್ಲಿ ಸಾವಿನಲ್ಲಿ ಒಂದಾದ ದಂಪತಿಗಳು.!

ಶಾಸಕರ ಆಪ್ತಸಹಾಯಕ ಮನೆಯಲ್ಲಿ 21.30 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

ಹೆಂಡತಿ ಕತ್ತು ಕೊಯ್ದು ಕೊಲೆಗೆ ಯತ್ನಿಸಿದ ಪತಿರಾಯ..

ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಯುದ್ಧ ಟ್ಯಾಂಕರ್ ಸ್ಥಾಪನೆ ರಾಣೆಬೇನ್ನೂರು ಹೆಮ್ಮೆ; ಸಭಾಧ್ಯಕ್ಷ ಯು.ಟಿ.ಖಾದರ

ಸದನದಲ್ಲಿ ಆಡಿದ ಮಾತಿಗೆ ಕ್ಷಮೆಯಾಚಿಸುವೆ, ಪಕ್ಷಾತೀತ ಕಾರ್ಯಕ್ರಮಕ್ಕೆ ಸಾಥ್ ನೀಡಿ; ಶಾಸಕ ಪ್ರಕಾಶ ಕೋಳಿವಾಡ.

ಯುದ್ಧ ಟ್ಯಾಂಕರ್ ಕಟ್ಟೆಗೆ ಹಾಕಿರುವ ಶಾಸಕರ ಪೋಟೋ ಹಾಗೂ ಪಿಕೆಕೆ ಹೆಸರಿಗೆ ಬಿಜೆಪಿ ಆಕ್ಷೇಪ. ಸರ್ಕಾರದ ಅನುದಾನದಲ್ಲಿ ಶಾಸಕರು ಶಿಷ್ಟಾಚಾರ ಪಾಲಿಸಲಿ.

ನಿಂತಿದ್ದ ಟಿಪ್ಪರಗೆ ಬೈಕ್ ಡಿಕ್ಕಿ ಜೋಯಿಸರಹರಳಹಳ್ಳಿ ಗ್ರಾಮದ ಎಂಟೆಕ್ ಪದವಿಧರ ಸಾವು

ಕುರುಬ ಸಮುದಾಯ ಹಾಗೂ ಸಿಎಂ ವಿರುದ್ಧ ಅವಾಚ್ಯವಾಗಿ ನಿಂದನೆ ಮಾಡಿದವರು ಮೇಲೆ‌ ಕಾನೂನು ಕ್ರಮಕ್ಕೆ ಒತ್ತಾಯ..

ಡೆಂಗ್ಯೂ ಜ್ವರ ಶಂಕೆ ಹಿನ್ನೆಲೆ ಯುವಕ ಸಾವು, ಕರೂರು ಗ್ರಾಮದಲ್ಲಿ ಘಟನೆ.

ಸತತ ಆರು ಗಂಟೆಗಳ ಕಾರ್ಯಚರಣೆ ನಂತರ ಸಿಕ್ಕ ಚಿರತೆ

ನಾಡಿಗೇರ ಓಣಿಯ ಕಾಕಿಯರ ಮನೆಯಲ್ಲಿ ಅವಿತಕೊಂಡ ಕುಂತ ಚಿರತೆ…!!

ಹೆಂಡತಿ ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡ ಗಂಡ ತಡಸ ಗ್ರಾಮದಲ್ಲಿ ಘಟನೆ

ನದಿ ಹಾರಿದ ಮಹಿಳೆ 2ಕೋಟಿ ಸಾಲ ಮಾಡಿದ್ದಳು ಡಿಸಿ ಮಹಾಂತೇಶ ವಿಜಯದಾನಮ್ಮನವರ ಮಾಹಿತಿ.

ಆತ್ಮಹತ್ಯೆ ಮಾಡಿಕೊಳ್ಳಲು ಹೋದ ಮಹಿಳೆ ತುಂಗಭದ್ರಾ ನದಿಯಲ್ಲಿ ಈಜಿ ಜೀವ ಉಳಿಸಿಕೊಂಡ ಗಟ್ಟಿಗಿತ್ತಿ…!

ದೇವರಗುಡ್ಡ ಮಾಲತೇಶ ಸ್ವಾಮಿಯ ಆಡಳಿತ ತಹಸೀಲ್ದಾರ್ ಸುಪರ್ದಿಗೆ…

ರುದ್ರಪ್ಪ ಲಮಾಣಿ ಮೇಲೆ ಚಿರತೆ ದಾಳಿ, ಆಸ್ಪತ್ರೆಗೆ ದಾಖಲು..!

ಗೃಹಲಕ್ಷ್ಮಿ ಹಣವನ್ನು ಶಾಲೆಗೆ ನೀಡಿದ ಆಶಾ ಕಾರ್ಯಕರ್ತೆ ಗಂಗಮ್ಮಗೆ ನಮಗೆ ಪ್ರೇರಣೆ ಶಾಸಕ ಪ್ರಕಾಶ ಕೋಳಿವಾಡ.

ರಾಣೆಬೇನ್ನೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಗೃಹಲಕ್ಷ್ಮಿ ಹಣವನ್ನು ಸರ್ಕಾರಿ ಶಾಲೆಗೆ ನೀಡಿದ ಆಶಾ ಕಾರ್ಯಕರ್ತೆ ಗಂಗಮ್ಮ ಅವರು ಈಡಿ ನಾಡಿಗೆ ಪ್ರೇರಣೆಯಾಗಿದ್ದಾರೆ ಎಂದು ಶಾಸಕರಾದ ಪ್ರಕಾಶ್ ಕೋಳಿವಾಡ ಹೇಳಿದರು.

ತಾಲೂಕಿನ ಐರಣಿ ಗ್ರಾಮದಲ್ಲಿ ಗಂಗಮ್ಮ ಲಗುಬಗಿ ಅವರಿಗೆ ರಾಜ್ಯ ಗ್ಯಾರಂಟಿ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರು ಹಾಗೂ ತಾಲ್ಲೂಕು ಗ್ಯಾರಂಟಿ ಅಧ್ಯಕ್ಷರ ಸಮ್ಮುಖದಲ್ಲಿ ಆಯೋಜಿಸಿದ ಸನ್ಮಾನ ಸಮಾರಂಭ‌ ಉದ್ದೇಶಿಸಿ ಮಾತನಾಡಿದರು.

ಗಂಗಮ್ಮ ಲಗುಬಗೆ ಅವರು ಅತ್ಯಂತ ಕಡುಬಡತನದ ಕುಟುಂಬದವರಾಗಿದ್ದು, ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ₹1,50,000 ರೂ ಸಾಲ ಮಾಡಿ ಒಬ್ಬ ಮಗನನ್ನು ಎಂ.ಎ ಹಾಗೂ ಮತ್ತೊಬ್ಬ ಮಗನನ್ನು ಬಿ.ಎಸ್.ಸಿ ನರ್ಸಿಂಗ್ ಓದಿಸುತಿದ್ದು, ಇಂತಹ ಕಷ್ಟದ ಸಂದರ್ಭದಲ್ಲಿಯೂ ತನ್ನ ಗೃಹಲಕ್ಷ್ಮಿ ಕಂತಿನ ₹24,000 ರೂ ಗಳನ್ನು ತನ್ನೂರಿನ ಸರ್ಕಾರಿ ಶಾಲೆಗೆ ದೇಣಿಗೆ ನೀಡಿರುವುದು ಪದಗಳಲ್ಲಿ ವರ್ಣಿಸಲಾಗದ ಪ್ರಶಂನೀಯ ಕಾರ್ಯವಾಗಿದೆ. ಬಿ.ಎಸ್.ಸಿ ಓದುತ್ತಿರುವ ದಾನಿ ಗಂಗಮ್ಮ ಅವರ ಮಗನ ಶಿಕ್ಷಣ ಮುಗಿಯುತ್ತಿದ್ದಂತೆಯೇ ಅವರಿಗೆ ನೌಕರಿ ಕೊಡಿಸುವುದಾಗಿ ತಿಳಿಸಿದರು.

 

ಗಂಗಮ್ಮ ಅವರ ಈ ನಡೆಯಿಂದ ಪ್ರೇರಣೆ ಪಡೆದ ಶಾಸಕರು ಹಾಗೂ ಗ್ಯಾರಂಟಿ ಯೋಜನೆಯ ಸದಸ್ಯರು ಒಂದು ತಿಂಗಳ ವೇತನ ಶಿಕ್ಷಣ ಇಲಾಖೆಗೆ ದೇಣಿಗೆ ನೀಡುವುದಾಗಿ ಘೋಷಣೆ ಮಾಡಿದರು.

ಇದೆ ಸಮಯದಲ್ಲಿ ಐರಣಿ ಗ್ರಾಮದ ಗಜಾನನ ಸಮಿತಿಯವರು ಸದರಿ ಶಾಲೆಗೆ ₹1,00,000 ರೂ ದೇಣಿಗೆ ನೀಡಿದರು, ಇದೇ ರೀತಿ ಗ್ರಾಮದ ಬುಳ್ಳಜ್ಜನವರು ಶಾಲೆಗೆ ವೈ ಫೈ ವ್ಯವಸ್ಥೆ ಮಾಡಿದ್ದು ಮತ್ತೊಬ್ಬ ಗ್ರಾಮದ ಶಿಕ್ಷಣ ಪ್ರೇಮಿ ಶಾಲೆಗೆ ಸೌಂಡ್ ಸಿಸ್ಟಮ್ ಸೇರಿದಂತೆ ಅನೇಕ ದಾನಿಗಳು ಶಾಲೆಗೆ ಮೂಲಭೂತ ಸೌಕರ್ಯ ಒದಗಿಸಲು ಮುಂದಾಗಿದ್ದಾರೆ. ಐರಣಿ ಗ್ರಾಮದ ಪ್ರಬುದ್ಧ ಮನಸ್ಸುಗಳ ಈ ನಡೆ ರಾಣೆಬೆನ್ನೂರು ತಾಲ್ಲೂಕಿನ ಇತರರಿಗೂ ಮಾದರಿಯಾಗಿದ್ದು, ಸರ್ಕಾರಿ ಶಾಲೆಗಳ ಸಬಲೀಕರಣಕ್ಕಾಗಿ ಸಹಕಾರ ನೀಡುವ ಮತ್ತಷ್ಟು ಮನಸ್ಸುಗಳು ರಾಣೇಬೆನ್ನೂರು ಮತಕ್ಷೇತ್ರದಲ್ಲಿ ಮುಂದೆ ಬರಲಿ ಎಂದು ಕರೆ ನೀಡಿದ ಶಾಸಕರು, ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳು ನಮ್ಮ ಮಕ್ಕಳಿಗೆ ಬೆಳಕಾಗಲಿ ಎಂದು ಆಶಯ ವ್ಯಕ್ತಪಡಿಸಿದರು.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!