ತಾಪಂ ಕೆಡಿಪಿ ಸಭೆಯಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗೆ ತರಾಟೆ..!

ಹೆದ್ದಾರಿಯಲ್ಲಿ ದರೋಡೆ ಮಾಡಲು ಹೊಂಚು ಹಾಕಿದ್ದವರು ಕಂಬಿ ಹಿಂದೆ

ನಗರಸಭೆ ನೀರಿನ ತೆರಿಗೆಯನ್ನು ನಿಮ್ಮ ಮೊಬೈಲನಲ್ಲಿ ಪಾವತಿಸಿ.

ಕೋಡಿಯಾಲ ಹೊಸಪೇಟೆ ಗ್ರಾಮದಲ್ಲಿ ವಾಲ್ಮೀಕಿ ಪುತ್ಥಳಿ ಅನಾವರಣ ಮತ್ತು‌ ವೃತ್ತ ಲೋಕಾರ್ಪಣೆ ನಾಡಿದ್ದು

ರಾಣೆಬೇನ್ನೂರ ತಾಲೂಕ ಹಸಿರಿಕರಣಕ್ಕೆ “ಟ್ರೀ ಪಾರ್ಕ್” ಶಾಸಕ ಪ್ರಕಾಶ ಕೋಳಿವಾಡ

ನಗರಸಭೆ ನೂತನ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ರಮೇಶ ಕರಡೆಣ್ಣನವರ ಆಯ್ಕೆ.

ಅಗಡಿ ತೋಟಕ್ಕೆ ಹೊರಟ್ಟವರು ಕೈಲಾಸಕ್ಕೆ ಹೋದರು, ಮೃತಪಟ್ಟವರ ವಿವರ ಇಲ್ಲಿದೆ.

ಮೋಟೆಬೆನ್ನೂರು ಬಳಿ ಭೀಕರ ಅಪಘಾತ, ರಾಣೆಬೇನ್ನೂರು ನಗರದ ಆರು ಜನ ಸಾವು.

ಪರಮ ಭ್ರಷ್ಟ ಲಂಚಾವತಾರಿ ಸಂವಿಧಾನ ವಿರೋಧಿ ವೈದ್ಯ ಡಾ” ಪರಮೇಶ್ವರಪ್ಪ ಅಮಾನತಗೆ ಆಗ್ರಹ

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಹಾವೇರಿಯಲ್ಲಿ ಕಾಂಗ್ರೆಸ್ ಗೆದ್ದೇ ಗೆಲ್ಲತ್ತೆ: ಸಿ.ಎಂ ಭರವಸೆ

ರಾಹುತನಕಟ್ಟಿ ಗ್ರಾಪಂ ಮತ್ತೆ ಬಿಜೆಪಿ ಬೆಂಬಲಿತರ ತೆಕ್ಕೆಗೆ.

ಸ್ಮಶಾನ ಜಾಗಕ್ಕಾಗಿ ತಾಲೂಕಿನ ಕೃಷ್ಣಾಪುರ ಗ್ರಾಮಸ್ಥರಿಂದ ಸಿಎಂಗೆ ಕಪ್ಪು ಪಟ್ಟಿ‌ ಪ್ರದರ್ಶನಕ್ಕೆ ಸಜ್ಜು.

ತಂದೆ ಶವ ಮನೆಯಲ್ಲಿಟ್ಟು ಕಣ್ಣೀರಿಡುತ್ತ ಪರೀಕ್ಷೆ ಬರೆದ ಅಣ್ಣ-ತಂಗಿಗೆ ಉತ್ತಮ ಅಂಕ; ತಂಗಿಗೆ ಶೇ. 83 ಅಣ್ಣನಿಗೆ ಶೇ. 85ರಷ್ಟು ಅಂಕ

ಶಿವಾನಂದ ಪಾಟೀಲ ರಾಜೀನಾಮೆ ಪತ್ರದಲ್ಲಿ ಏನು ಹೇಳಿದ್ದಾರೆ.

ಮೆಡ್ಲೇರಿ ರಸ್ತೆಯಿಂದ ಹುಣಸಿಕಟ್ಟಿ ತನಕ ಇಂದು ರಾತ್ರಿ ವಿದ್ಯುತ್ ಸರಬರಾಜು ಡೌಟು..

ಕಿತ್ತಾಟ, ಕಿರಚಾಟ ನಡುವೆ ನಗರಸಭೆ ಸ್ಥಾಯಿ ಸಮಿತಿಗೆ ಅನುಮೋದನೆ.

ಇಸ್ವತ್ತು ಉತಾರ ನೀಡಲು ಲಂಚ ಪಡೆಯುತ್ತಿದ್ದ ಪಿಡಿಓ, ಉಪಾಧ್ಯಕ್ಷ ಸೇರಿ ಮೂರ ಜನ ಗ್ರಾಪಂ ಸದಸ್ಯರ ಬಂಧನ.

ರಷ್ಯಾದಲ್ಲಿ ಡಾ.ನಾಗರಾಜ ಎಸ್.ಕೆ ಅವರಿಗೆ ಗ್ಲೋಬಲ್ ಅಚಿವರ್ಸ್ ಪ್ರಶಸ್ತಿ.

ಐಎಎಸ್‌ ಪಾಸ್ ಮಾಡಿದ ಸಚಿನ ಗುತ್ತೂರುಗೆ ಕೋಡಿಯಾಲ ಹೊಸಪೇಟೆ ಗ್ರಾಮದಲ್ಲಿ ಅದ್ದೂರಿ ಸ್ವಾಗತ..

ಟ್ರ್ಯಾ ಕ್ಟರ್‌ನಿಂದ ಬಿದ್ದು ಅಣ್ಣಾ-ತಮ್ಮಾ ಸಾವು, ನಾಲ್ವರಿಗೆ ಗಂಭೀರ ಗಾಯ

ಗೃಹಲಕ್ಷ್ಮಿ ಹಣವನ್ನು ಶಾಲೆಗೆ ನೀಡಿದ ಆಶಾ ಕಾರ್ಯಕರ್ತೆ ಗಂಗಮ್ಮಗೆ ನಮಗೆ ಪ್ರೇರಣೆ ಶಾಸಕ ಪ್ರಕಾಶ ಕೋಳಿವಾಡ.

ರಾಣೆಬೇನ್ನೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಗೃಹಲಕ್ಷ್ಮಿ ಹಣವನ್ನು ಸರ್ಕಾರಿ ಶಾಲೆಗೆ ನೀಡಿದ ಆಶಾ ಕಾರ್ಯಕರ್ತೆ ಗಂಗಮ್ಮ ಅವರು ಈಡಿ ನಾಡಿಗೆ ಪ್ರೇರಣೆಯಾಗಿದ್ದಾರೆ ಎಂದು ಶಾಸಕರಾದ ಪ್ರಕಾಶ್ ಕೋಳಿವಾಡ ಹೇಳಿದರು.

ತಾಲೂಕಿನ ಐರಣಿ ಗ್ರಾಮದಲ್ಲಿ ಗಂಗಮ್ಮ ಲಗುಬಗಿ ಅವರಿಗೆ ರಾಜ್ಯ ಗ್ಯಾರಂಟಿ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರು ಹಾಗೂ ತಾಲ್ಲೂಕು ಗ್ಯಾರಂಟಿ ಅಧ್ಯಕ್ಷರ ಸಮ್ಮುಖದಲ್ಲಿ ಆಯೋಜಿಸಿದ ಸನ್ಮಾನ ಸಮಾರಂಭ‌ ಉದ್ದೇಶಿಸಿ ಮಾತನಾಡಿದರು.

ಗಂಗಮ್ಮ ಲಗುಬಗೆ ಅವರು ಅತ್ಯಂತ ಕಡುಬಡತನದ ಕುಟುಂಬದವರಾಗಿದ್ದು, ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ₹1,50,000 ರೂ ಸಾಲ ಮಾಡಿ ಒಬ್ಬ ಮಗನನ್ನು ಎಂ.ಎ ಹಾಗೂ ಮತ್ತೊಬ್ಬ ಮಗನನ್ನು ಬಿ.ಎಸ್.ಸಿ ನರ್ಸಿಂಗ್ ಓದಿಸುತಿದ್ದು, ಇಂತಹ ಕಷ್ಟದ ಸಂದರ್ಭದಲ್ಲಿಯೂ ತನ್ನ ಗೃಹಲಕ್ಷ್ಮಿ ಕಂತಿನ ₹24,000 ರೂ ಗಳನ್ನು ತನ್ನೂರಿನ ಸರ್ಕಾರಿ ಶಾಲೆಗೆ ದೇಣಿಗೆ ನೀಡಿರುವುದು ಪದಗಳಲ್ಲಿ ವರ್ಣಿಸಲಾಗದ ಪ್ರಶಂನೀಯ ಕಾರ್ಯವಾಗಿದೆ. ಬಿ.ಎಸ್.ಸಿ ಓದುತ್ತಿರುವ ದಾನಿ ಗಂಗಮ್ಮ ಅವರ ಮಗನ ಶಿಕ್ಷಣ ಮುಗಿಯುತ್ತಿದ್ದಂತೆಯೇ ಅವರಿಗೆ ನೌಕರಿ ಕೊಡಿಸುವುದಾಗಿ ತಿಳಿಸಿದರು.

 

ಗಂಗಮ್ಮ ಅವರ ಈ ನಡೆಯಿಂದ ಪ್ರೇರಣೆ ಪಡೆದ ಶಾಸಕರು ಹಾಗೂ ಗ್ಯಾರಂಟಿ ಯೋಜನೆಯ ಸದಸ್ಯರು ಒಂದು ತಿಂಗಳ ವೇತನ ಶಿಕ್ಷಣ ಇಲಾಖೆಗೆ ದೇಣಿಗೆ ನೀಡುವುದಾಗಿ ಘೋಷಣೆ ಮಾಡಿದರು.

ಇದೆ ಸಮಯದಲ್ಲಿ ಐರಣಿ ಗ್ರಾಮದ ಗಜಾನನ ಸಮಿತಿಯವರು ಸದರಿ ಶಾಲೆಗೆ ₹1,00,000 ರೂ ದೇಣಿಗೆ ನೀಡಿದರು, ಇದೇ ರೀತಿ ಗ್ರಾಮದ ಬುಳ್ಳಜ್ಜನವರು ಶಾಲೆಗೆ ವೈ ಫೈ ವ್ಯವಸ್ಥೆ ಮಾಡಿದ್ದು ಮತ್ತೊಬ್ಬ ಗ್ರಾಮದ ಶಿಕ್ಷಣ ಪ್ರೇಮಿ ಶಾಲೆಗೆ ಸೌಂಡ್ ಸಿಸ್ಟಮ್ ಸೇರಿದಂತೆ ಅನೇಕ ದಾನಿಗಳು ಶಾಲೆಗೆ ಮೂಲಭೂತ ಸೌಕರ್ಯ ಒದಗಿಸಲು ಮುಂದಾಗಿದ್ದಾರೆ. ಐರಣಿ ಗ್ರಾಮದ ಪ್ರಬುದ್ಧ ಮನಸ್ಸುಗಳ ಈ ನಡೆ ರಾಣೆಬೆನ್ನೂರು ತಾಲ್ಲೂಕಿನ ಇತರರಿಗೂ ಮಾದರಿಯಾಗಿದ್ದು, ಸರ್ಕಾರಿ ಶಾಲೆಗಳ ಸಬಲೀಕರಣಕ್ಕಾಗಿ ಸಹಕಾರ ನೀಡುವ ಮತ್ತಷ್ಟು ಮನಸ್ಸುಗಳು ರಾಣೇಬೆನ್ನೂರು ಮತಕ್ಷೇತ್ರದಲ್ಲಿ ಮುಂದೆ ಬರಲಿ ಎಂದು ಕರೆ ನೀಡಿದ ಶಾಸಕರು, ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳು ನಮ್ಮ ಮಕ್ಕಳಿಗೆ ಬೆಳಕಾಗಲಿ ಎಂದು ಆಶಯ ವ್ಯಕ್ತಪಡಿಸಿದರು.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!